Homeಕರ್ನಾಟಕಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ; ನಟ-ರಂಗಕರ್ಮಿ ಜಹಾಂಗೀರ್ ಹೆಸರು ಮುನ್ನೆಲೆಗೆ

ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ; ನಟ-ರಂಗಕರ್ಮಿ ಜಹಾಂಗೀರ್ ಹೆಸರು ಮುನ್ನೆಲೆಗೆ

- Advertisement -
- Advertisement -

ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ಕಳೆದ ನಿಧನರಾಗಿದ್ದು, ಇದೀಗ ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ ಖಾಲಿ ಉಳಿಸಿದೆ. ಆ ಜಾಗಕ್ಕೆ ಹಿರಿಯ ನಟ, ರಂಗಕರ್ಮಿ ಜಹಾಂಗೀರ್ ಎಂಎಸ್‌ ಅವರ ಹೆಸರು ಕೇಳಿಬರುತ್ತಿದೆ.

ನೀನಾಸಂ ರಂಗಶಿಕ್ಷಣಕೇಂದ್ರದಲ್ಲಿ ನಟನಾ ಡಿಪ್ಲೊಮ ಪದವಿ ಪಡೆದಿರುವ ಅವರು, ಹಲವು ಕನ್ನಡ ಧಾರಾವಾಹಿ, ಚಲನಚಿತ್ರ ಮತ್ತು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ನೀನಾಸಂ ತಿರುಗಾಟದಲ್ಲಿ ಅವರು ಚೋರಚರಣದಾಸ, ಸಂಸಾರದಲ್ಲಿಸನಿದಪ, ಜುಜಬಿ ದೇವರ ಜುಗಾರಿ ಆಟ, ಮಹಾತ್ಮ, ಚೂರಿಕಟ್ಟೆ, ಧರ್ಮ ದುರಂತ, ಜತೆಗಿರುವನು ಚಂದಿರ, ಸಹ್ಯಾದ್ರಿಕಾಂಡ, ಕೆಂಪುಕಣಗಿಲೆ ಸೇರಿದಂತೆ ಹಲವು ನಾಟಕಗಳಲ್ಲಿ ಅಭಿನಯಿಸಿದ್ದಾರೆ.

ಮೈಸೂರು ರಂಗಾಯಣಕ್ಕಾಗಿ ದೊರೆ ಈಡೀಪಸ್, ರಂಗಶಂಕರದ ಸಂಕೇತ್ ಗಾಗಿ
ನೀನಾನಾದ್ರೆ ನಾ ನೀನೇನ ನಾಟಕಗಳನ್ನು ನಿರ್ದೇಶನ ಮಾಡಿದ್ದಾರೆ.

ಅಮೇರಿಕದ ‘ಬ್ರೆಡ್ ಆಂಡ್ ಪೋಪೆಟ್’ ಥಿಯಟರ್ ನಲ್ಲಿ ಕೆಲಸ ಮಾಡಿದ ಅನುಭವ ಇದ್ದು, ಕರ್ನಾಟಕದ ಹಲವಾರು ಜಿಲ್ಲೆಯಾದ್ಯಂತ ಹವ್ಯಾಸಿ ರಂಗಭೂಮಿ ತಂಡಗಳೂಂದಿಗೆ ನಟ ತಂತ್ರಜ್ಞನಾಗಿ ಕೆಲಸ ಮಾಡಿದ್ದಾರೆ.

ಕನ್ನಡ ದೂರದರ್ಶನದ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದಾರೆ. ಪಾಪಾ ಪಾಂಡು, ಪಾಂಡುರಂಗ ವಿಠಲ, ಪಾತು ಸಾತು ಹಲವಾರು ಧಾರವಾಹಿಗಳಲ್ಲಿ ನಟನೆ ಮಾಡಿದ್ದಾರೆ.

ಕಾನ್ಸ್ ಪ್ರಶಸ್ತಿ ವಿಜೇತ, ಆಸ್ಕರ್ ನಾಮನಿದೇ೯ಶಿತವಾದ ಸೂರ್ಯ ಕಾಂತಿ ಹೊಗಳಿಗೆ ಮದಲೇಗೊತ್ತಿತ್ತು ಸೇರಿದಂತೆ ಪೋಟೋ, ಯಜಮಾನ, ಬಹದ್ದೂರ್, ವಾಘಚಿಪಾಣಿ, ಸದ್ದು ವಿಚಾರಣೆ ನೆಡೆಯುತ್ತಿದೆ, ಅಭಿಮನ್ಯೂ ಸೇರಿದಂತೆ ಇನ್ನೂ ಹಲವಾರು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಅಮೇರಿಕಾದ ಬೆಡ್ಅಂಡ್ ಪಪೆಟ್ ಥಿಯೇಟರ್, ಕರ್ನಾಟಕದ ನೀನಾಸಮ್, ಪುಣೆಯ ಎಫ್‌ಟಿಐಐ, ರಂಗಾಯಣ, ರಂಗಶಂಕರ ಸಂಕೇತ್ ಸೇರಿದಂತೆ ಹಲವಾರು ತಂಡಗಳ ಜೊತೆಗೆ ನಟನೆ, ನಿರ್ದೇಶನದ ಜೊತೆಗೆ ತಂತ್ರಜ್ಞರಾಗಿಯೂ ಕೆಲಸ ಮಾಡಿದ ಅನುಭವ ಇದೆ. ಕಳೆದ 15 ವರ್ಷ ದಿಂದ ಹುಬ್ಬಳಿಯಲ್ಲಿ ವಾಸ ಮಾಡುತ್ತಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನಟ ಎಂ.ಎಸ್‌. ಜಹಾಂಗೀರ್, “ಜಾತ್ಯತೀತ ಸರ್ಕಾರಗಳು ಅಧಿಕಾರಕ್ಕೆ ಬಂದಾಗ ಅವಕಾಶ ವಂಚಿತ ಸಮುದಾಯಗಳಿಗೆ ಆದ್ಯತೆ ನೀಡುವ ಪದ್ಧತಿ ಹಿಂದಿನಿಂದಲೂ ಚಾಲ್ತಿಯಲ್ಲಿದೆ. ನಾವು ಇಂಥ ಸರ್ಕಾರಗಳಿಂದ ಮಾತ್ರವೇ ಸಾಮಾಜಿಕ ನ್ಯಾಯ ನಿರೀಕ್ಷೆ ಮಾಡಬಹುದು. ಈ ಹಿಂದೆ ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಅವರು, ಅಲ್ಪಸಂಖ್ಯಾತ ಸಮುದಾಯದಲ್ಲೇ ಸಣ್ಣ ಗುಂಪಾದ ಪಿಂಜಾರ ಸಮುದಾಯಕ್ಕೆ ಸೇರಿದ್ದವರಾಗಿದ್ದರು. ಈವರೆಗೆ ಆ ಸಮುದಾಯಗಳಿಗೆ ಸಿಕ್ಕ ಅವಕಾಶ ಬಹಳ ಕಡಿಮೆ. ಈ ರೀತಿಯ ಅತಿ ಸೂಕ್ಷ್ಮ ಸಮುದಾಯದ ವ್ಯಕ್ತಿಗೆ ಸರ್ಕಾರ ಅವಕಾಶ ನೀಡಿತ್ತು. ಆದರೆ, ದುರಾದೃಷ್ಟವಶಾತ್ ರಾಜು ತಾಳಿಕೋಟೆ ನಮ್ಮನ್ನು ಅಗಲಿದ್ದಾರೆ. ಅಪರೂಪಕ್ಕೆ ಈ ಸಮುದಾಯಕ್ಕೆ ಅವಕಾಶ ಸಿಕ್ಕಿದ್ದು, ಸರ್ಕಾರ ಪ್ರಾದೇಶಿಕ ಮತ್ತು ಪ್ರಾತಿನಿಧ್ಯ ಆಧಾರದಲ್ಲಿ ಇದೇ ಸಮುದಾಕ್ಕೆ ಮತ್ತೊಮ್ಮೆ ಅವಕಾಶ ನೀಡಿದರೆ ಉತ್ತಮವಾಗಿರುತ್ತದೆ” ಎಂದರು.

“ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನಕ್ಕೆ ನನ್ನ ಹೆಸರು ಮಾತ್ರವಲ್ಲ, ಇದೇ ಸಮುದಾಯದ ಸಹನಾ ಪಿಂಜಾರ ಅವರು ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಪದವಿ ಪಡೆದಿದ್ದಾರೆ. ಶಕೀಲ್‌ ಅಹಮದ್‌ ಎನ್ನುವವರು ಹಲವು ರಂಗ ತಂಡಗಳೊಂದಿಗೆ ಕೆಲಸ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯದವರನ್ನೇ ನಿರ್ದೇಶಕರನ್ನಾಗಿ ಮಾಡುತ್ತೇವೆ ಎಂದು ಬೇರೆ ಯಾರನ್ನೋ ಆಯ್ಕೆ ಮಾಡುವ ಬದಲಿಗೆ ಸೂಕ್ಷ್ಮ ಗುಂಪುಗಳಾದ ನದಾಫ್‌ ಮತ್ತು ಪಿಂಜಾರ ಸಮುದಾಯದ ಕಲಾವಿದರಿಗೆ ಅವಕಾಶ ನಿಡಬೇಕು. ಕಳೆದ ಮೂವತ್ತು ವರ್ಷಗಳಿಂದ ನಾನು ರಂಗಭೂಮಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದೇನೆ. ಅವಕಾಶ ಸಿಕ್ಕರೆ ಉತ್ತಮವಾಗಿ ಕೆಲಸ ಮಾಡಿಕೊಂಡು ಹೋಗಬಹುದು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...