Homeಕರ್ನಾಟಕಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ; ನಟ-ರಂಗಕರ್ಮಿ ಜಹಾಂಗೀರ್ ಹೆಸರು ಮುನ್ನೆಲೆಗೆ

ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ; ನಟ-ರಂಗಕರ್ಮಿ ಜಹಾಂಗೀರ್ ಹೆಸರು ಮುನ್ನೆಲೆಗೆ

- Advertisement -
- Advertisement -

ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ಕಳೆದ ನಿಧನರಾಗಿದ್ದು, ಇದೀಗ ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ ಖಾಲಿ ಉಳಿಸಿದೆ. ಆ ಜಾಗಕ್ಕೆ ಹಿರಿಯ ನಟ, ರಂಗಕರ್ಮಿ ಜಹಾಂಗೀರ್ ಎಂಎಸ್‌ ಅವರ ಹೆಸರು ಕೇಳಿಬರುತ್ತಿದೆ.

ನೀನಾಸಂ ರಂಗಶಿಕ್ಷಣಕೇಂದ್ರದಲ್ಲಿ ನಟನಾ ಡಿಪ್ಲೊಮ ಪದವಿ ಪಡೆದಿರುವ ಅವರು, ಹಲವು ಕನ್ನಡ ಧಾರಾವಾಹಿ, ಚಲನಚಿತ್ರ ಮತ್ತು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ನೀನಾಸಂ ತಿರುಗಾಟದಲ್ಲಿ ಅವರು ಚೋರಚರಣದಾಸ, ಸಂಸಾರದಲ್ಲಿಸನಿದಪ, ಜುಜಬಿ ದೇವರ ಜುಗಾರಿ ಆಟ, ಮಹಾತ್ಮ, ಚೂರಿಕಟ್ಟೆ, ಧರ್ಮ ದುರಂತ, ಜತೆಗಿರುವನು ಚಂದಿರ, ಸಹ್ಯಾದ್ರಿಕಾಂಡ, ಕೆಂಪುಕಣಗಿಲೆ ಸೇರಿದಂತೆ ಹಲವು ನಾಟಕಗಳಲ್ಲಿ ಅಭಿನಯಿಸಿದ್ದಾರೆ.

ಮೈಸೂರು ರಂಗಾಯಣಕ್ಕಾಗಿ ದೊರೆ ಈಡೀಪಸ್, ರಂಗಶಂಕರದ ಸಂಕೇತ್ ಗಾಗಿ
ನೀನಾನಾದ್ರೆ ನಾ ನೀನೇನ ನಾಟಕಗಳನ್ನು ನಿರ್ದೇಶನ ಮಾಡಿದ್ದಾರೆ.

ಅಮೇರಿಕದ ‘ಬ್ರೆಡ್ ಆಂಡ್ ಪೋಪೆಟ್’ ಥಿಯಟರ್ ನಲ್ಲಿ ಕೆಲಸ ಮಾಡಿದ ಅನುಭವ ಇದ್ದು, ಕರ್ನಾಟಕದ ಹಲವಾರು ಜಿಲ್ಲೆಯಾದ್ಯಂತ ಹವ್ಯಾಸಿ ರಂಗಭೂಮಿ ತಂಡಗಳೂಂದಿಗೆ ನಟ ತಂತ್ರಜ್ಞನಾಗಿ ಕೆಲಸ ಮಾಡಿದ್ದಾರೆ.

ಕನ್ನಡ ದೂರದರ್ಶನದ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದಾರೆ. ಪಾಪಾ ಪಾಂಡು, ಪಾಂಡುರಂಗ ವಿಠಲ, ಪಾತು ಸಾತು ಹಲವಾರು ಧಾರವಾಹಿಗಳಲ್ಲಿ ನಟನೆ ಮಾಡಿದ್ದಾರೆ.

ಕಾನ್ಸ್ ಪ್ರಶಸ್ತಿ ವಿಜೇತ, ಆಸ್ಕರ್ ನಾಮನಿದೇ೯ಶಿತವಾದ ಸೂರ್ಯ ಕಾಂತಿ ಹೊಗಳಿಗೆ ಮದಲೇಗೊತ್ತಿತ್ತು ಸೇರಿದಂತೆ ಪೋಟೋ, ಯಜಮಾನ, ಬಹದ್ದೂರ್, ವಾಘಚಿಪಾಣಿ, ಸದ್ದು ವಿಚಾರಣೆ ನೆಡೆಯುತ್ತಿದೆ, ಅಭಿಮನ್ಯೂ ಸೇರಿದಂತೆ ಇನ್ನೂ ಹಲವಾರು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಅಮೇರಿಕಾದ ಬೆಡ್ಅಂಡ್ ಪಪೆಟ್ ಥಿಯೇಟರ್, ಕರ್ನಾಟಕದ ನೀನಾಸಮ್, ಪುಣೆಯ ಎಫ್‌ಟಿಐಐ, ರಂಗಾಯಣ, ರಂಗಶಂಕರ ಸಂಕೇತ್ ಸೇರಿದಂತೆ ಹಲವಾರು ತಂಡಗಳ ಜೊತೆಗೆ ನಟನೆ, ನಿರ್ದೇಶನದ ಜೊತೆಗೆ ತಂತ್ರಜ್ಞರಾಗಿಯೂ ಕೆಲಸ ಮಾಡಿದ ಅನುಭವ ಇದೆ. ಕಳೆದ 15 ವರ್ಷ ದಿಂದ ಹುಬ್ಬಳಿಯಲ್ಲಿ ವಾಸ ಮಾಡುತ್ತಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನಟ ಎಂ.ಎಸ್‌. ಜಹಾಂಗೀರ್, “ಜಾತ್ಯತೀತ ಸರ್ಕಾರಗಳು ಅಧಿಕಾರಕ್ಕೆ ಬಂದಾಗ ಅವಕಾಶ ವಂಚಿತ ಸಮುದಾಯಗಳಿಗೆ ಆದ್ಯತೆ ನೀಡುವ ಪದ್ಧತಿ ಹಿಂದಿನಿಂದಲೂ ಚಾಲ್ತಿಯಲ್ಲಿದೆ. ನಾವು ಇಂಥ ಸರ್ಕಾರಗಳಿಂದ ಮಾತ್ರವೇ ಸಾಮಾಜಿಕ ನ್ಯಾಯ ನಿರೀಕ್ಷೆ ಮಾಡಬಹುದು. ಈ ಹಿಂದೆ ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಅವರು, ಅಲ್ಪಸಂಖ್ಯಾತ ಸಮುದಾಯದಲ್ಲೇ ಸಣ್ಣ ಗುಂಪಾದ ಪಿಂಜಾರ ಸಮುದಾಯಕ್ಕೆ ಸೇರಿದ್ದವರಾಗಿದ್ದರು. ಈವರೆಗೆ ಆ ಸಮುದಾಯಗಳಿಗೆ ಸಿಕ್ಕ ಅವಕಾಶ ಬಹಳ ಕಡಿಮೆ. ಈ ರೀತಿಯ ಅತಿ ಸೂಕ್ಷ್ಮ ಸಮುದಾಯದ ವ್ಯಕ್ತಿಗೆ ಸರ್ಕಾರ ಅವಕಾಶ ನೀಡಿತ್ತು. ಆದರೆ, ದುರಾದೃಷ್ಟವಶಾತ್ ರಾಜು ತಾಳಿಕೋಟೆ ನಮ್ಮನ್ನು ಅಗಲಿದ್ದಾರೆ. ಅಪರೂಪಕ್ಕೆ ಈ ಸಮುದಾಯಕ್ಕೆ ಅವಕಾಶ ಸಿಕ್ಕಿದ್ದು, ಸರ್ಕಾರ ಪ್ರಾದೇಶಿಕ ಮತ್ತು ಪ್ರಾತಿನಿಧ್ಯ ಆಧಾರದಲ್ಲಿ ಇದೇ ಸಮುದಾಕ್ಕೆ ಮತ್ತೊಮ್ಮೆ ಅವಕಾಶ ನೀಡಿದರೆ ಉತ್ತಮವಾಗಿರುತ್ತದೆ” ಎಂದರು.

“ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನಕ್ಕೆ ನನ್ನ ಹೆಸರು ಮಾತ್ರವಲ್ಲ, ಇದೇ ಸಮುದಾಯದ ಸಹನಾ ಪಿಂಜಾರ ಅವರು ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಪದವಿ ಪಡೆದಿದ್ದಾರೆ. ಶಕೀಲ್‌ ಅಹಮದ್‌ ಎನ್ನುವವರು ಹಲವು ರಂಗ ತಂಡಗಳೊಂದಿಗೆ ಕೆಲಸ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯದವರನ್ನೇ ನಿರ್ದೇಶಕರನ್ನಾಗಿ ಮಾಡುತ್ತೇವೆ ಎಂದು ಬೇರೆ ಯಾರನ್ನೋ ಆಯ್ಕೆ ಮಾಡುವ ಬದಲಿಗೆ ಸೂಕ್ಷ್ಮ ಗುಂಪುಗಳಾದ ನದಾಫ್‌ ಮತ್ತು ಪಿಂಜಾರ ಸಮುದಾಯದ ಕಲಾವಿದರಿಗೆ ಅವಕಾಶ ನಿಡಬೇಕು. ಕಳೆದ ಮೂವತ್ತು ವರ್ಷಗಳಿಂದ ನಾನು ರಂಗಭೂಮಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದೇನೆ. ಅವಕಾಶ ಸಿಕ್ಕರೆ ಉತ್ತಮವಾಗಿ ಕೆಲಸ ಮಾಡಿಕೊಂಡು ಹೋಗಬಹುದು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...