Homeಕರ್ನಾಟಕಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ; ನಟ-ರಂಗಕರ್ಮಿ ಜಹಾಂಗೀರ್ ಹೆಸರು ಮುನ್ನೆಲೆಗೆ

ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ; ನಟ-ರಂಗಕರ್ಮಿ ಜಹಾಂಗೀರ್ ಹೆಸರು ಮುನ್ನೆಲೆಗೆ

- Advertisement -
- Advertisement -

ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ಕಳೆದ ನಿಧನರಾಗಿದ್ದು, ಇದೀಗ ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ ಖಾಲಿ ಉಳಿಸಿದೆ. ಆ ಜಾಗಕ್ಕೆ ಹಿರಿಯ ನಟ, ರಂಗಕರ್ಮಿ ಜಹಾಂಗೀರ್ ಎಂಎಸ್‌ ಅವರ ಹೆಸರು ಕೇಳಿಬರುತ್ತಿದೆ.

ನೀನಾಸಂ ರಂಗಶಿಕ್ಷಣಕೇಂದ್ರದಲ್ಲಿ ನಟನಾ ಡಿಪ್ಲೊಮ ಪದವಿ ಪಡೆದಿರುವ ಅವರು, ಹಲವು ಕನ್ನಡ ಧಾರಾವಾಹಿ, ಚಲನಚಿತ್ರ ಮತ್ತು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ನೀನಾಸಂ ತಿರುಗಾಟದಲ್ಲಿ ಅವರು ಚೋರಚರಣದಾಸ, ಸಂಸಾರದಲ್ಲಿಸನಿದಪ, ಜುಜಬಿ ದೇವರ ಜುಗಾರಿ ಆಟ, ಮಹಾತ್ಮ, ಚೂರಿಕಟ್ಟೆ, ಧರ್ಮ ದುರಂತ, ಜತೆಗಿರುವನು ಚಂದಿರ, ಸಹ್ಯಾದ್ರಿಕಾಂಡ, ಕೆಂಪುಕಣಗಿಲೆ ಸೇರಿದಂತೆ ಹಲವು ನಾಟಕಗಳಲ್ಲಿ ಅಭಿನಯಿಸಿದ್ದಾರೆ.

ಮೈಸೂರು ರಂಗಾಯಣಕ್ಕಾಗಿ ದೊರೆ ಈಡೀಪಸ್, ರಂಗಶಂಕರದ ಸಂಕೇತ್ ಗಾಗಿ
ನೀನಾನಾದ್ರೆ ನಾ ನೀನೇನ ನಾಟಕಗಳನ್ನು ನಿರ್ದೇಶನ ಮಾಡಿದ್ದಾರೆ.

ಅಮೇರಿಕದ ‘ಬ್ರೆಡ್ ಆಂಡ್ ಪೋಪೆಟ್’ ಥಿಯಟರ್ ನಲ್ಲಿ ಕೆಲಸ ಮಾಡಿದ ಅನುಭವ ಇದ್ದು, ಕರ್ನಾಟಕದ ಹಲವಾರು ಜಿಲ್ಲೆಯಾದ್ಯಂತ ಹವ್ಯಾಸಿ ರಂಗಭೂಮಿ ತಂಡಗಳೂಂದಿಗೆ ನಟ ತಂತ್ರಜ್ಞನಾಗಿ ಕೆಲಸ ಮಾಡಿದ್ದಾರೆ.

ಕನ್ನಡ ದೂರದರ್ಶನದ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದಾರೆ. ಪಾಪಾ ಪಾಂಡು, ಪಾಂಡುರಂಗ ವಿಠಲ, ಪಾತು ಸಾತು ಹಲವಾರು ಧಾರವಾಹಿಗಳಲ್ಲಿ ನಟನೆ ಮಾಡಿದ್ದಾರೆ.

ಕಾನ್ಸ್ ಪ್ರಶಸ್ತಿ ವಿಜೇತ, ಆಸ್ಕರ್ ನಾಮನಿದೇ೯ಶಿತವಾದ ಸೂರ್ಯ ಕಾಂತಿ ಹೊಗಳಿಗೆ ಮದಲೇಗೊತ್ತಿತ್ತು ಸೇರಿದಂತೆ ಪೋಟೋ, ಯಜಮಾನ, ಬಹದ್ದೂರ್, ವಾಘಚಿಪಾಣಿ, ಸದ್ದು ವಿಚಾರಣೆ ನೆಡೆಯುತ್ತಿದೆ, ಅಭಿಮನ್ಯೂ ಸೇರಿದಂತೆ ಇನ್ನೂ ಹಲವಾರು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಅಮೇರಿಕಾದ ಬೆಡ್ಅಂಡ್ ಪಪೆಟ್ ಥಿಯೇಟರ್, ಕರ್ನಾಟಕದ ನೀನಾಸಮ್, ಪುಣೆಯ ಎಫ್‌ಟಿಐಐ, ರಂಗಾಯಣ, ರಂಗಶಂಕರ ಸಂಕೇತ್ ಸೇರಿದಂತೆ ಹಲವಾರು ತಂಡಗಳ ಜೊತೆಗೆ ನಟನೆ, ನಿರ್ದೇಶನದ ಜೊತೆಗೆ ತಂತ್ರಜ್ಞರಾಗಿಯೂ ಕೆಲಸ ಮಾಡಿದ ಅನುಭವ ಇದೆ. ಕಳೆದ 15 ವರ್ಷ ದಿಂದ ಹುಬ್ಬಳಿಯಲ್ಲಿ ವಾಸ ಮಾಡುತ್ತಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನಟ ಎಂ.ಎಸ್‌. ಜಹಾಂಗೀರ್, “ಜಾತ್ಯತೀತ ಸರ್ಕಾರಗಳು ಅಧಿಕಾರಕ್ಕೆ ಬಂದಾಗ ಅವಕಾಶ ವಂಚಿತ ಸಮುದಾಯಗಳಿಗೆ ಆದ್ಯತೆ ನೀಡುವ ಪದ್ಧತಿ ಹಿಂದಿನಿಂದಲೂ ಚಾಲ್ತಿಯಲ್ಲಿದೆ. ನಾವು ಇಂಥ ಸರ್ಕಾರಗಳಿಂದ ಮಾತ್ರವೇ ಸಾಮಾಜಿಕ ನ್ಯಾಯ ನಿರೀಕ್ಷೆ ಮಾಡಬಹುದು. ಈ ಹಿಂದೆ ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಅವರು, ಅಲ್ಪಸಂಖ್ಯಾತ ಸಮುದಾಯದಲ್ಲೇ ಸಣ್ಣ ಗುಂಪಾದ ಪಿಂಜಾರ ಸಮುದಾಯಕ್ಕೆ ಸೇರಿದ್ದವರಾಗಿದ್ದರು. ಈವರೆಗೆ ಆ ಸಮುದಾಯಗಳಿಗೆ ಸಿಕ್ಕ ಅವಕಾಶ ಬಹಳ ಕಡಿಮೆ. ಈ ರೀತಿಯ ಅತಿ ಸೂಕ್ಷ್ಮ ಸಮುದಾಯದ ವ್ಯಕ್ತಿಗೆ ಸರ್ಕಾರ ಅವಕಾಶ ನೀಡಿತ್ತು. ಆದರೆ, ದುರಾದೃಷ್ಟವಶಾತ್ ರಾಜು ತಾಳಿಕೋಟೆ ನಮ್ಮನ್ನು ಅಗಲಿದ್ದಾರೆ. ಅಪರೂಪಕ್ಕೆ ಈ ಸಮುದಾಯಕ್ಕೆ ಅವಕಾಶ ಸಿಕ್ಕಿದ್ದು, ಸರ್ಕಾರ ಪ್ರಾದೇಶಿಕ ಮತ್ತು ಪ್ರಾತಿನಿಧ್ಯ ಆಧಾರದಲ್ಲಿ ಇದೇ ಸಮುದಾಕ್ಕೆ ಮತ್ತೊಮ್ಮೆ ಅವಕಾಶ ನೀಡಿದರೆ ಉತ್ತಮವಾಗಿರುತ್ತದೆ” ಎಂದರು.

“ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನಕ್ಕೆ ನನ್ನ ಹೆಸರು ಮಾತ್ರವಲ್ಲ, ಇದೇ ಸಮುದಾಯದ ಸಹನಾ ಪಿಂಜಾರ ಅವರು ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಪದವಿ ಪಡೆದಿದ್ದಾರೆ. ಶಕೀಲ್‌ ಅಹಮದ್‌ ಎನ್ನುವವರು ಹಲವು ರಂಗ ತಂಡಗಳೊಂದಿಗೆ ಕೆಲಸ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯದವರನ್ನೇ ನಿರ್ದೇಶಕರನ್ನಾಗಿ ಮಾಡುತ್ತೇವೆ ಎಂದು ಬೇರೆ ಯಾರನ್ನೋ ಆಯ್ಕೆ ಮಾಡುವ ಬದಲಿಗೆ ಸೂಕ್ಷ್ಮ ಗುಂಪುಗಳಾದ ನದಾಫ್‌ ಮತ್ತು ಪಿಂಜಾರ ಸಮುದಾಯದ ಕಲಾವಿದರಿಗೆ ಅವಕಾಶ ನಿಡಬೇಕು. ಕಳೆದ ಮೂವತ್ತು ವರ್ಷಗಳಿಂದ ನಾನು ರಂಗಭೂಮಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದೇನೆ. ಅವಕಾಶ ಸಿಕ್ಕರೆ ಉತ್ತಮವಾಗಿ ಕೆಲಸ ಮಾಡಿಕೊಂಡು ಹೋಗಬಹುದು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...