Homeಕರ್ನಾಟಕಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ; ನಟ-ರಂಗಕರ್ಮಿ ಜಹಾಂಗೀರ್ ಹೆಸರು ಮುನ್ನೆಲೆಗೆ

ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ; ನಟ-ರಂಗಕರ್ಮಿ ಜಹಾಂಗೀರ್ ಹೆಸರು ಮುನ್ನೆಲೆಗೆ

- Advertisement -
- Advertisement -

ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ಕಳೆದ ನಿಧನರಾಗಿದ್ದು, ಇದೀಗ ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ ಖಾಲಿ ಉಳಿಸಿದೆ. ಆ ಜಾಗಕ್ಕೆ ಹಿರಿಯ ನಟ, ರಂಗಕರ್ಮಿ ಜಹಾಂಗೀರ್ ಎಂಎಸ್‌ ಅವರ ಹೆಸರು ಕೇಳಿಬರುತ್ತಿದೆ.

ನೀನಾಸಂ ರಂಗಶಿಕ್ಷಣಕೇಂದ್ರದಲ್ಲಿ ನಟನಾ ಡಿಪ್ಲೊಮ ಪದವಿ ಪಡೆದಿರುವ ಅವರು, ಹಲವು ಕನ್ನಡ ಧಾರಾವಾಹಿ, ಚಲನಚಿತ್ರ ಮತ್ತು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ನೀನಾಸಂ ತಿರುಗಾಟದಲ್ಲಿ ಅವರು ಚೋರಚರಣದಾಸ, ಸಂಸಾರದಲ್ಲಿಸನಿದಪ, ಜುಜಬಿ ದೇವರ ಜುಗಾರಿ ಆಟ, ಮಹಾತ್ಮ, ಚೂರಿಕಟ್ಟೆ, ಧರ್ಮ ದುರಂತ, ಜತೆಗಿರುವನು ಚಂದಿರ, ಸಹ್ಯಾದ್ರಿಕಾಂಡ, ಕೆಂಪುಕಣಗಿಲೆ ಸೇರಿದಂತೆ ಹಲವು ನಾಟಕಗಳಲ್ಲಿ ಅಭಿನಯಿಸಿದ್ದಾರೆ.

ಮೈಸೂರು ರಂಗಾಯಣಕ್ಕಾಗಿ ದೊರೆ ಈಡೀಪಸ್, ರಂಗಶಂಕರದ ಸಂಕೇತ್ ಗಾಗಿ
ನೀನಾನಾದ್ರೆ ನಾ ನೀನೇನ ನಾಟಕಗಳನ್ನು ನಿರ್ದೇಶನ ಮಾಡಿದ್ದಾರೆ.

ಅಮೇರಿಕದ ‘ಬ್ರೆಡ್ ಆಂಡ್ ಪೋಪೆಟ್’ ಥಿಯಟರ್ ನಲ್ಲಿ ಕೆಲಸ ಮಾಡಿದ ಅನುಭವ ಇದ್ದು, ಕರ್ನಾಟಕದ ಹಲವಾರು ಜಿಲ್ಲೆಯಾದ್ಯಂತ ಹವ್ಯಾಸಿ ರಂಗಭೂಮಿ ತಂಡಗಳೂಂದಿಗೆ ನಟ ತಂತ್ರಜ್ಞನಾಗಿ ಕೆಲಸ ಮಾಡಿದ್ದಾರೆ.

ಕನ್ನಡ ದೂರದರ್ಶನದ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದಾರೆ. ಪಾಪಾ ಪಾಂಡು, ಪಾಂಡುರಂಗ ವಿಠಲ, ಪಾತು ಸಾತು ಹಲವಾರು ಧಾರವಾಹಿಗಳಲ್ಲಿ ನಟನೆ ಮಾಡಿದ್ದಾರೆ.

ಕಾನ್ಸ್ ಪ್ರಶಸ್ತಿ ವಿಜೇತ, ಆಸ್ಕರ್ ನಾಮನಿದೇ೯ಶಿತವಾದ ಸೂರ್ಯ ಕಾಂತಿ ಹೊಗಳಿಗೆ ಮದಲೇಗೊತ್ತಿತ್ತು ಸೇರಿದಂತೆ ಪೋಟೋ, ಯಜಮಾನ, ಬಹದ್ದೂರ್, ವಾಘಚಿಪಾಣಿ, ಸದ್ದು ವಿಚಾರಣೆ ನೆಡೆಯುತ್ತಿದೆ, ಅಭಿಮನ್ಯೂ ಸೇರಿದಂತೆ ಇನ್ನೂ ಹಲವಾರು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಅಮೇರಿಕಾದ ಬೆಡ್ಅಂಡ್ ಪಪೆಟ್ ಥಿಯೇಟರ್, ಕರ್ನಾಟಕದ ನೀನಾಸಮ್, ಪುಣೆಯ ಎಫ್‌ಟಿಐಐ, ರಂಗಾಯಣ, ರಂಗಶಂಕರ ಸಂಕೇತ್ ಸೇರಿದಂತೆ ಹಲವಾರು ತಂಡಗಳ ಜೊತೆಗೆ ನಟನೆ, ನಿರ್ದೇಶನದ ಜೊತೆಗೆ ತಂತ್ರಜ್ಞರಾಗಿಯೂ ಕೆಲಸ ಮಾಡಿದ ಅನುಭವ ಇದೆ. ಕಳೆದ 15 ವರ್ಷ ದಿಂದ ಹುಬ್ಬಳಿಯಲ್ಲಿ ವಾಸ ಮಾಡುತ್ತಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನಟ ಎಂ.ಎಸ್‌. ಜಹಾಂಗೀರ್, “ಜಾತ್ಯತೀತ ಸರ್ಕಾರಗಳು ಅಧಿಕಾರಕ್ಕೆ ಬಂದಾಗ ಅವಕಾಶ ವಂಚಿತ ಸಮುದಾಯಗಳಿಗೆ ಆದ್ಯತೆ ನೀಡುವ ಪದ್ಧತಿ ಹಿಂದಿನಿಂದಲೂ ಚಾಲ್ತಿಯಲ್ಲಿದೆ. ನಾವು ಇಂಥ ಸರ್ಕಾರಗಳಿಂದ ಮಾತ್ರವೇ ಸಾಮಾಜಿಕ ನ್ಯಾಯ ನಿರೀಕ್ಷೆ ಮಾಡಬಹುದು. ಈ ಹಿಂದೆ ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಅವರು, ಅಲ್ಪಸಂಖ್ಯಾತ ಸಮುದಾಯದಲ್ಲೇ ಸಣ್ಣ ಗುಂಪಾದ ಪಿಂಜಾರ ಸಮುದಾಯಕ್ಕೆ ಸೇರಿದ್ದವರಾಗಿದ್ದರು. ಈವರೆಗೆ ಆ ಸಮುದಾಯಗಳಿಗೆ ಸಿಕ್ಕ ಅವಕಾಶ ಬಹಳ ಕಡಿಮೆ. ಈ ರೀತಿಯ ಅತಿ ಸೂಕ್ಷ್ಮ ಸಮುದಾಯದ ವ್ಯಕ್ತಿಗೆ ಸರ್ಕಾರ ಅವಕಾಶ ನೀಡಿತ್ತು. ಆದರೆ, ದುರಾದೃಷ್ಟವಶಾತ್ ರಾಜು ತಾಳಿಕೋಟೆ ನಮ್ಮನ್ನು ಅಗಲಿದ್ದಾರೆ. ಅಪರೂಪಕ್ಕೆ ಈ ಸಮುದಾಯಕ್ಕೆ ಅವಕಾಶ ಸಿಕ್ಕಿದ್ದು, ಸರ್ಕಾರ ಪ್ರಾದೇಶಿಕ ಮತ್ತು ಪ್ರಾತಿನಿಧ್ಯ ಆಧಾರದಲ್ಲಿ ಇದೇ ಸಮುದಾಕ್ಕೆ ಮತ್ತೊಮ್ಮೆ ಅವಕಾಶ ನೀಡಿದರೆ ಉತ್ತಮವಾಗಿರುತ್ತದೆ” ಎಂದರು.

“ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನಕ್ಕೆ ನನ್ನ ಹೆಸರು ಮಾತ್ರವಲ್ಲ, ಇದೇ ಸಮುದಾಯದ ಸಹನಾ ಪಿಂಜಾರ ಅವರು ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಪದವಿ ಪಡೆದಿದ್ದಾರೆ. ಶಕೀಲ್‌ ಅಹಮದ್‌ ಎನ್ನುವವರು ಹಲವು ರಂಗ ತಂಡಗಳೊಂದಿಗೆ ಕೆಲಸ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯದವರನ್ನೇ ನಿರ್ದೇಶಕರನ್ನಾಗಿ ಮಾಡುತ್ತೇವೆ ಎಂದು ಬೇರೆ ಯಾರನ್ನೋ ಆಯ್ಕೆ ಮಾಡುವ ಬದಲಿಗೆ ಸೂಕ್ಷ್ಮ ಗುಂಪುಗಳಾದ ನದಾಫ್‌ ಮತ್ತು ಪಿಂಜಾರ ಸಮುದಾಯದ ಕಲಾವಿದರಿಗೆ ಅವಕಾಶ ನಿಡಬೇಕು. ಕಳೆದ ಮೂವತ್ತು ವರ್ಷಗಳಿಂದ ನಾನು ರಂಗಭೂಮಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದೇನೆ. ಅವಕಾಶ ಸಿಕ್ಕರೆ ಉತ್ತಮವಾಗಿ ಕೆಲಸ ಮಾಡಿಕೊಂಡು ಹೋಗಬಹುದು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...