Homeಮುಖಪುಟಮೀಸಲು ಕ್ಷೇತ್ರದ ತಲ್ಲಣ ಹೇಳುವ 'ಧೀರ ಭಗತ್ ರಾಯ್‌' ಚಿತ್ರದ ಟೀಸರ್ ಬಿಡುಗಡೆ

ಮೀಸಲು ಕ್ಷೇತ್ರದ ತಲ್ಲಣ ಹೇಳುವ ‘ಧೀರ ಭಗತ್ ರಾಯ್‌’ ಚಿತ್ರದ ಟೀಸರ್ ಬಿಡುಗಡೆ

"ಇಷ್ಟು ದಿನ ನಾವು ತಿಂದು ಬಿಟ್ಟಿದ್ದನ್ನು ತಿನ್ನುತ್ತಿದ್ದ ನಿಮಗೆ, ನಮ್ಮ ವಿರುದ್ಧವೇ ಮಾತಾಡುವಷ್ಟು ಧೈರ್ಯ ಬಂದಿದ್ದು ಹೇಗೆ" ಎಂಬ ಸಂಭಾಷಣೆಯು ಇದು ಜಾತಿ ದೌರ್ಜನ್ಯದ ಕಥೆ ಹೇಳುತ್ತಿದೆ ಎಂದು ಸೂಚಿಸುತ್ತದೆ.

- Advertisement -
- Advertisement -

ಜಾತೀಯತೆ, ಜಾತಿ ತಾರತಮ್ಯ ಭಾರತದ ವಾಸ್ತವ. ಇಂತಹ ರಾಷ್ಟ್ರದಲ್ಲಿ ಸಾಮಾಜಿಕ ನ್ಯಾಯ ಜಾರಿಗೊಳಿಸುವುದಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸಂವಿಧಾನದ ಮೂಲಕ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯದಲ್ಲಿ ಮೀಸಲಾತಿ ಜಾರಿಗೊಳಿಸಿದರು. ಆ ಸಂದರ್ಭದಲ್ಲಿ ದಲಿತರಿಗೆ ಪ್ರತ್ಯೇಕ ಮತ ಕ್ಷೇತ್ರ ಮತ್ತು ದ್ವಿಮತಕ್ಕಾಗಿ ಹೋರಾಡಿದ್ದರು. ಆದರೆ ಗಾಂಧೀಜಿ ಸೇರಿದಂತೆ ಹಲವರ ವಿರೋಧದಿಂದಾಗಿ ಅದು ಜಾರಿಯಾಗಲಿಲ್ಲ. ಆನಂತರ ದೇಶಾದ್ಯಂತ ಮೀಸಲು ಕ್ಷೇತ್ರಗಳು ಅಸ್ತಿತ್ವಕ್ಕೆ ಬಂದವು. ಮೀಸಲಾತಿ ಜಾರಿಯಾದಾಗಿನಿಂದ ಆ ಕ್ಷೇತ್ರಗಳಲ್ಲಿ ಆದ ಬದಲಾವಣೆಗಳೇನು? ಇಂದಿನ ಪರಿಸ್ಥಿತಿ ಹೇಗಿದೆ? ಈ ಎಲ್ಲಾ ವಿಷಯಗಳನ್ನು ಸಿನಿಮಾ ಮೂಲಕ ಹೇಳಲು ಹೊರಟಿದ್ದಾರೆ ಯುವ ನಿರ್ದೇಶಕ ಕರ್ಣನ್.

ಅವರು ತಮ್ಮ ಬಹುನಿರೀಕ್ಷಿತ ಚಿತ್ರ ‘ಧೀರ ಭಗತ್ ರಾಯ್‌’ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದು ಎಲ್ಲೆಡೆ ಪ್ರಸಂಶೆಯ ಜೊತೆಗೆ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಹುಟ್ಟಿಸಿದೆ. “ಇಷ್ಟು ದಿನ ನಾವು ತಿಂದು ಬಿಟ್ಟಿದ್ದನ್ನು ತಿನ್ನುತ್ತಿದ್ದ ನಿಮಗೆ, ನಮ್ಮ ವಿರುದ್ಧವೇ ಮಾತಾಡುವಷ್ಟು ಧೈರ್ಯ ಬಂದಿದ್ದು ಹೇಗೆ” ಎಂಬ ಟೀಸರ್‌ನಲ್ಲಿನ ಸಂಭಾಷಣೆಯು ಇದು ಜಾತಿ ದೌರ್ಜನ್ಯದ ಕಥೆ ಹೇಳುತ್ತಿದೆ ಎಂದು ಸೂಚಿಸುತ್ತದೆ.

ನಿರ್ದೇಶಕ ಕರ್ಣನ್

ತಮಿಳು, ತೆಲುಗು ಭಾಷೆಗಳಲ್ಲಿ ಜಾತಿ ದೌರ್ಜನ್ಯದ ಹಲವಾರು ಚಿತ್ರಗಳು ಬಂದು ಸಾಕಷ್ಟು ಗಮನ ಸೆಳೆದಿವೆ. ಅಸುರನ್, ಪಲಾಸ, ಕರ್ಣನ್, ಸರ್ಪಟ್ಟ ಪರಂಬರೈ, ಲವ್ ಸ್ಟೋರಿ, ಪರಿಯೆರುಮ್ ಪೆರುಮಾಳ್, ಜೈಭೀಮ್ ಥರದ ಸಿನಿಮಾಗಳು ಇಡೀ ದೇಶಾದ್ಯಂತ ಚರ್ಚೆಗೆ ಒಳಪಟ್ಟಿವೆ. ಕನ್ನಡದಲ್ಲಿ ಇಂತಹ ಸಿನಿಮಾಗಳು ಬರುತ್ತಿಲ್ಲ ಎಂಬ ಕೊರಗು ನೀಗಿಸಲು ಮುಂದಾಗಿದ್ದಾರೆ ನಿರ್ದೇಶಕ ಕರ್ಣನ್.

ನೆಲಮಂಗಲದ ಅರುಣ್‌ರವರು ಒಂದು ದಶಕದಿಂದ ಚಿತ್ರರಂಗದಲ್ಲಿದ್ದಾರೆ. ತಮಿಳುನಲ್ಲಿ ಮಾರಿ ಸೆಲ್ವರಾಜ್ ನಿರ್ದೇಶನದ, ಧನುಶ್ ಅಭಿನಯದ ಕರ್ಣನ್ ಚಿತ್ರ ಬಿಡುಗಡೆಯಾದ ಮೇಲೆ ಆ ಚಿತ್ರದ ಪ್ರಭಾವಕ್ಕೆ ಒಳಗಾಗಿ ಅವರು ತಮ್ಮ ಹೆಸರನ್ನು ಕರ್ಣನ್ ಎಂದು ಬದಲಿಸಿಕೊಂಡಿದ್ದಾರೆ!. ಅವರ ಚೊಚ್ಚಲ ಚಿತ್ರವೇ ‘ಧೀರ ಭಗತ್ ರಾಯ್‌’ ಆಗಿದೆ.

’ಕಥಾ ನಾಯಕ ಭಗತ್ ಎಂಬುವವ ಒಬ್ಬ ವಕೀಲ. ಆತ ತನ್ನ ಜನರಿಗಾಗಿ ಹೇಗೆ ಗ್ಯಾಂಗ್‌ಸ್ಟರ್‌ ಆಗಿ ಬಳಿಕ ರಾಜಕೀಯ ನಾಯಕನಾಗುತ್ತಾನೆ ಎಂಬುದು ಕಥೆ. ರಾಜಕೀಯ ಶಕ್ತಿ ಇದ್ದರೇ ಸಮಾಜದಲ್ಲಿ ಬದಲಾವಣೆ ಸಾಧ್ಯ. ಜಾತಿಮುಕ್ತ ಸಮಾಜ ನಿರ್ಮಾಣಕ್ಕೆ ರಾಜಕೀಯ ಅಧಿಕಾರ ಬೇಕು. ಆ ಅಧಿಕಾರದಿಂದ ವಂಚಿತರಾದವರ ಕಥೆ ಹೇಳಲು ಹೊರಟಿದ್ದೇನೆ’ ಎನ್ನುತ್ತಾರೆ ಕರ್ಣನ್.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ““ಒಂದು ಮೀಸಲು ಕ್ಷೇತ್ರದಲ್ಲಿ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ. ನಾವು ಆಯ್ಕೆ ಮಾಡಿ ಕಳುಹಿಸುವವರು ನಮಗಾಗಿ ಕೆಲಸ ಮಾಡುತ್ತಾರೆಯೇ…? ಗೆದ್ದ ಶಾಸಕನನ್ನು ಕಂಟ್ರೋಲ್ ಮಾಡುವ ಕೈಗಳು ಯಾವುವು…? ಮೀಸಲು ಕ್ಷೇತ್ರದಲ್ಲಿ ಹೇಗೆ ತಮಗೆ ಬೇಕಾದವರನ್ನು ಗೆಲ್ಲಿಸಿಕೊಳ್ಳುತ್ತಾರೆ. ಆ ಕ್ಷೇತ್ರದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸುಧಾರಣೆಗಳಗಿವೆಯೇ ಎಂಬುದು ಮುಖ್ಯ. ನಾನು ಕೂಡ ಒಬ್ಬ ಮೀಸಲು ಕ್ಷೇತ್ರದಲ್ಲಿ ಬೆಳೆದವನಾದ್ದರಿಂದ, ಅಲ್ಲಿನ ಸಮಸ್ಯೆಗಳ ಜೊತೆಯಲ್ಲಿಯೇ ಬದುಕು ಸಾಗಿಸುತ್ತಿರುವ ಕಾರಣ ಇದರ ಕುರಿತು ಏಕೆ ಸಿನಿಮಾ ಮಾಡಬಾರದು ಎಂಬ ಆಯೋಚನೆ ಬಂತು. 2 ವರ್ಷ ಒಂದು ಕಥೆಯ ಮೇಲೆ ಕೆಲಸ ಮಾಡಿ ಸಿನಿಮಾ ನಿರ್ದೇಶಿಸಿದ್ದೇನೆ” ಎನ್ನುತ್ತಾರೆ.

ರಾಕೇಶ್ ದಳವಾಯಿ ಮತ್ತು ಸುಚರಿತ

ರಂಗಭೂಮಿ ಕಲಾವಿದ ರಾಕೇಶ್ ದಳವಾಯಿ, ನಟ ಶರತ್ ಲೋಹಿತಾಶ್ವ, ನಟಿ ಸುಚರಿತ, ಚೈತ್ರಾ ಕೊಟ್ಟೂರು ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರಕ್ಕೆ ಲೂಸಿಯಾ, ಯೂಟರ್ನ್ ಖ್ಯಾತಿಯ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ.


ಇದನ್ನು ಓದಿ: ವಿಶ್ಲೇಷಣೆ; ದಲಿತ ರಾಜಕಾರಣ ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...