Homeಮುಖಪುಟಮೀಸಲು ಕ್ಷೇತ್ರದ ತಲ್ಲಣ ಹೇಳುವ 'ಧೀರ ಭಗತ್ ರಾಯ್‌' ಚಿತ್ರದ ಟೀಸರ್ ಬಿಡುಗಡೆ

ಮೀಸಲು ಕ್ಷೇತ್ರದ ತಲ್ಲಣ ಹೇಳುವ ‘ಧೀರ ಭಗತ್ ರಾಯ್‌’ ಚಿತ್ರದ ಟೀಸರ್ ಬಿಡುಗಡೆ

"ಇಷ್ಟು ದಿನ ನಾವು ತಿಂದು ಬಿಟ್ಟಿದ್ದನ್ನು ತಿನ್ನುತ್ತಿದ್ದ ನಿಮಗೆ, ನಮ್ಮ ವಿರುದ್ಧವೇ ಮಾತಾಡುವಷ್ಟು ಧೈರ್ಯ ಬಂದಿದ್ದು ಹೇಗೆ" ಎಂಬ ಸಂಭಾಷಣೆಯು ಇದು ಜಾತಿ ದೌರ್ಜನ್ಯದ ಕಥೆ ಹೇಳುತ್ತಿದೆ ಎಂದು ಸೂಚಿಸುತ್ತದೆ.

- Advertisement -
- Advertisement -

ಜಾತೀಯತೆ, ಜಾತಿ ತಾರತಮ್ಯ ಭಾರತದ ವಾಸ್ತವ. ಇಂತಹ ರಾಷ್ಟ್ರದಲ್ಲಿ ಸಾಮಾಜಿಕ ನ್ಯಾಯ ಜಾರಿಗೊಳಿಸುವುದಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸಂವಿಧಾನದ ಮೂಲಕ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯದಲ್ಲಿ ಮೀಸಲಾತಿ ಜಾರಿಗೊಳಿಸಿದರು. ಆ ಸಂದರ್ಭದಲ್ಲಿ ದಲಿತರಿಗೆ ಪ್ರತ್ಯೇಕ ಮತ ಕ್ಷೇತ್ರ ಮತ್ತು ದ್ವಿಮತಕ್ಕಾಗಿ ಹೋರಾಡಿದ್ದರು. ಆದರೆ ಗಾಂಧೀಜಿ ಸೇರಿದಂತೆ ಹಲವರ ವಿರೋಧದಿಂದಾಗಿ ಅದು ಜಾರಿಯಾಗಲಿಲ್ಲ. ಆನಂತರ ದೇಶಾದ್ಯಂತ ಮೀಸಲು ಕ್ಷೇತ್ರಗಳು ಅಸ್ತಿತ್ವಕ್ಕೆ ಬಂದವು. ಮೀಸಲಾತಿ ಜಾರಿಯಾದಾಗಿನಿಂದ ಆ ಕ್ಷೇತ್ರಗಳಲ್ಲಿ ಆದ ಬದಲಾವಣೆಗಳೇನು? ಇಂದಿನ ಪರಿಸ್ಥಿತಿ ಹೇಗಿದೆ? ಈ ಎಲ್ಲಾ ವಿಷಯಗಳನ್ನು ಸಿನಿಮಾ ಮೂಲಕ ಹೇಳಲು ಹೊರಟಿದ್ದಾರೆ ಯುವ ನಿರ್ದೇಶಕ ಕರ್ಣನ್.

ಅವರು ತಮ್ಮ ಬಹುನಿರೀಕ್ಷಿತ ಚಿತ್ರ ‘ಧೀರ ಭಗತ್ ರಾಯ್‌’ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದು ಎಲ್ಲೆಡೆ ಪ್ರಸಂಶೆಯ ಜೊತೆಗೆ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಹುಟ್ಟಿಸಿದೆ. “ಇಷ್ಟು ದಿನ ನಾವು ತಿಂದು ಬಿಟ್ಟಿದ್ದನ್ನು ತಿನ್ನುತ್ತಿದ್ದ ನಿಮಗೆ, ನಮ್ಮ ವಿರುದ್ಧವೇ ಮಾತಾಡುವಷ್ಟು ಧೈರ್ಯ ಬಂದಿದ್ದು ಹೇಗೆ” ಎಂಬ ಟೀಸರ್‌ನಲ್ಲಿನ ಸಂಭಾಷಣೆಯು ಇದು ಜಾತಿ ದೌರ್ಜನ್ಯದ ಕಥೆ ಹೇಳುತ್ತಿದೆ ಎಂದು ಸೂಚಿಸುತ್ತದೆ.

ನಿರ್ದೇಶಕ ಕರ್ಣನ್

ತಮಿಳು, ತೆಲುಗು ಭಾಷೆಗಳಲ್ಲಿ ಜಾತಿ ದೌರ್ಜನ್ಯದ ಹಲವಾರು ಚಿತ್ರಗಳು ಬಂದು ಸಾಕಷ್ಟು ಗಮನ ಸೆಳೆದಿವೆ. ಅಸುರನ್, ಪಲಾಸ, ಕರ್ಣನ್, ಸರ್ಪಟ್ಟ ಪರಂಬರೈ, ಲವ್ ಸ್ಟೋರಿ, ಪರಿಯೆರುಮ್ ಪೆರುಮಾಳ್, ಜೈಭೀಮ್ ಥರದ ಸಿನಿಮಾಗಳು ಇಡೀ ದೇಶಾದ್ಯಂತ ಚರ್ಚೆಗೆ ಒಳಪಟ್ಟಿವೆ. ಕನ್ನಡದಲ್ಲಿ ಇಂತಹ ಸಿನಿಮಾಗಳು ಬರುತ್ತಿಲ್ಲ ಎಂಬ ಕೊರಗು ನೀಗಿಸಲು ಮುಂದಾಗಿದ್ದಾರೆ ನಿರ್ದೇಶಕ ಕರ್ಣನ್.

ನೆಲಮಂಗಲದ ಅರುಣ್‌ರವರು ಒಂದು ದಶಕದಿಂದ ಚಿತ್ರರಂಗದಲ್ಲಿದ್ದಾರೆ. ತಮಿಳುನಲ್ಲಿ ಮಾರಿ ಸೆಲ್ವರಾಜ್ ನಿರ್ದೇಶನದ, ಧನುಶ್ ಅಭಿನಯದ ಕರ್ಣನ್ ಚಿತ್ರ ಬಿಡುಗಡೆಯಾದ ಮೇಲೆ ಆ ಚಿತ್ರದ ಪ್ರಭಾವಕ್ಕೆ ಒಳಗಾಗಿ ಅವರು ತಮ್ಮ ಹೆಸರನ್ನು ಕರ್ಣನ್ ಎಂದು ಬದಲಿಸಿಕೊಂಡಿದ್ದಾರೆ!. ಅವರ ಚೊಚ್ಚಲ ಚಿತ್ರವೇ ‘ಧೀರ ಭಗತ್ ರಾಯ್‌’ ಆಗಿದೆ.

’ಕಥಾ ನಾಯಕ ಭಗತ್ ಎಂಬುವವ ಒಬ್ಬ ವಕೀಲ. ಆತ ತನ್ನ ಜನರಿಗಾಗಿ ಹೇಗೆ ಗ್ಯಾಂಗ್‌ಸ್ಟರ್‌ ಆಗಿ ಬಳಿಕ ರಾಜಕೀಯ ನಾಯಕನಾಗುತ್ತಾನೆ ಎಂಬುದು ಕಥೆ. ರಾಜಕೀಯ ಶಕ್ತಿ ಇದ್ದರೇ ಸಮಾಜದಲ್ಲಿ ಬದಲಾವಣೆ ಸಾಧ್ಯ. ಜಾತಿಮುಕ್ತ ಸಮಾಜ ನಿರ್ಮಾಣಕ್ಕೆ ರಾಜಕೀಯ ಅಧಿಕಾರ ಬೇಕು. ಆ ಅಧಿಕಾರದಿಂದ ವಂಚಿತರಾದವರ ಕಥೆ ಹೇಳಲು ಹೊರಟಿದ್ದೇನೆ’ ಎನ್ನುತ್ತಾರೆ ಕರ್ಣನ್.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ““ಒಂದು ಮೀಸಲು ಕ್ಷೇತ್ರದಲ್ಲಿ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ. ನಾವು ಆಯ್ಕೆ ಮಾಡಿ ಕಳುಹಿಸುವವರು ನಮಗಾಗಿ ಕೆಲಸ ಮಾಡುತ್ತಾರೆಯೇ…? ಗೆದ್ದ ಶಾಸಕನನ್ನು ಕಂಟ್ರೋಲ್ ಮಾಡುವ ಕೈಗಳು ಯಾವುವು…? ಮೀಸಲು ಕ್ಷೇತ್ರದಲ್ಲಿ ಹೇಗೆ ತಮಗೆ ಬೇಕಾದವರನ್ನು ಗೆಲ್ಲಿಸಿಕೊಳ್ಳುತ್ತಾರೆ. ಆ ಕ್ಷೇತ್ರದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸುಧಾರಣೆಗಳಗಿವೆಯೇ ಎಂಬುದು ಮುಖ್ಯ. ನಾನು ಕೂಡ ಒಬ್ಬ ಮೀಸಲು ಕ್ಷೇತ್ರದಲ್ಲಿ ಬೆಳೆದವನಾದ್ದರಿಂದ, ಅಲ್ಲಿನ ಸಮಸ್ಯೆಗಳ ಜೊತೆಯಲ್ಲಿಯೇ ಬದುಕು ಸಾಗಿಸುತ್ತಿರುವ ಕಾರಣ ಇದರ ಕುರಿತು ಏಕೆ ಸಿನಿಮಾ ಮಾಡಬಾರದು ಎಂಬ ಆಯೋಚನೆ ಬಂತು. 2 ವರ್ಷ ಒಂದು ಕಥೆಯ ಮೇಲೆ ಕೆಲಸ ಮಾಡಿ ಸಿನಿಮಾ ನಿರ್ದೇಶಿಸಿದ್ದೇನೆ” ಎನ್ನುತ್ತಾರೆ.

ರಾಕೇಶ್ ದಳವಾಯಿ ಮತ್ತು ಸುಚರಿತ

ರಂಗಭೂಮಿ ಕಲಾವಿದ ರಾಕೇಶ್ ದಳವಾಯಿ, ನಟ ಶರತ್ ಲೋಹಿತಾಶ್ವ, ನಟಿ ಸುಚರಿತ, ಚೈತ್ರಾ ಕೊಟ್ಟೂರು ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರಕ್ಕೆ ಲೂಸಿಯಾ, ಯೂಟರ್ನ್ ಖ್ಯಾತಿಯ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ.


ಇದನ್ನು ಓದಿ: ವಿಶ್ಲೇಷಣೆ; ದಲಿತ ರಾಜಕಾರಣ ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...