Homeಮುಖಪುಟಮೀಸಲು ಕ್ಷೇತ್ರದ ತಲ್ಲಣ ಹೇಳುವ 'ಧೀರ ಭಗತ್ ರಾಯ್‌' ಚಿತ್ರದ ಟೀಸರ್ ಬಿಡುಗಡೆ

ಮೀಸಲು ಕ್ಷೇತ್ರದ ತಲ್ಲಣ ಹೇಳುವ ‘ಧೀರ ಭಗತ್ ರಾಯ್‌’ ಚಿತ್ರದ ಟೀಸರ್ ಬಿಡುಗಡೆ

"ಇಷ್ಟು ದಿನ ನಾವು ತಿಂದು ಬಿಟ್ಟಿದ್ದನ್ನು ತಿನ್ನುತ್ತಿದ್ದ ನಿಮಗೆ, ನಮ್ಮ ವಿರುದ್ಧವೇ ಮಾತಾಡುವಷ್ಟು ಧೈರ್ಯ ಬಂದಿದ್ದು ಹೇಗೆ" ಎಂಬ ಸಂಭಾಷಣೆಯು ಇದು ಜಾತಿ ದೌರ್ಜನ್ಯದ ಕಥೆ ಹೇಳುತ್ತಿದೆ ಎಂದು ಸೂಚಿಸುತ್ತದೆ.

- Advertisement -
- Advertisement -

ಜಾತೀಯತೆ, ಜಾತಿ ತಾರತಮ್ಯ ಭಾರತದ ವಾಸ್ತವ. ಇಂತಹ ರಾಷ್ಟ್ರದಲ್ಲಿ ಸಾಮಾಜಿಕ ನ್ಯಾಯ ಜಾರಿಗೊಳಿಸುವುದಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸಂವಿಧಾನದ ಮೂಲಕ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯದಲ್ಲಿ ಮೀಸಲಾತಿ ಜಾರಿಗೊಳಿಸಿದರು. ಆ ಸಂದರ್ಭದಲ್ಲಿ ದಲಿತರಿಗೆ ಪ್ರತ್ಯೇಕ ಮತ ಕ್ಷೇತ್ರ ಮತ್ತು ದ್ವಿಮತಕ್ಕಾಗಿ ಹೋರಾಡಿದ್ದರು. ಆದರೆ ಗಾಂಧೀಜಿ ಸೇರಿದಂತೆ ಹಲವರ ವಿರೋಧದಿಂದಾಗಿ ಅದು ಜಾರಿಯಾಗಲಿಲ್ಲ. ಆನಂತರ ದೇಶಾದ್ಯಂತ ಮೀಸಲು ಕ್ಷೇತ್ರಗಳು ಅಸ್ತಿತ್ವಕ್ಕೆ ಬಂದವು. ಮೀಸಲಾತಿ ಜಾರಿಯಾದಾಗಿನಿಂದ ಆ ಕ್ಷೇತ್ರಗಳಲ್ಲಿ ಆದ ಬದಲಾವಣೆಗಳೇನು? ಇಂದಿನ ಪರಿಸ್ಥಿತಿ ಹೇಗಿದೆ? ಈ ಎಲ್ಲಾ ವಿಷಯಗಳನ್ನು ಸಿನಿಮಾ ಮೂಲಕ ಹೇಳಲು ಹೊರಟಿದ್ದಾರೆ ಯುವ ನಿರ್ದೇಶಕ ಕರ್ಣನ್.

ಅವರು ತಮ್ಮ ಬಹುನಿರೀಕ್ಷಿತ ಚಿತ್ರ ‘ಧೀರ ಭಗತ್ ರಾಯ್‌’ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದು ಎಲ್ಲೆಡೆ ಪ್ರಸಂಶೆಯ ಜೊತೆಗೆ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಹುಟ್ಟಿಸಿದೆ. “ಇಷ್ಟು ದಿನ ನಾವು ತಿಂದು ಬಿಟ್ಟಿದ್ದನ್ನು ತಿನ್ನುತ್ತಿದ್ದ ನಿಮಗೆ, ನಮ್ಮ ವಿರುದ್ಧವೇ ಮಾತಾಡುವಷ್ಟು ಧೈರ್ಯ ಬಂದಿದ್ದು ಹೇಗೆ” ಎಂಬ ಟೀಸರ್‌ನಲ್ಲಿನ ಸಂಭಾಷಣೆಯು ಇದು ಜಾತಿ ದೌರ್ಜನ್ಯದ ಕಥೆ ಹೇಳುತ್ತಿದೆ ಎಂದು ಸೂಚಿಸುತ್ತದೆ.

ನಿರ್ದೇಶಕ ಕರ್ಣನ್

ತಮಿಳು, ತೆಲುಗು ಭಾಷೆಗಳಲ್ಲಿ ಜಾತಿ ದೌರ್ಜನ್ಯದ ಹಲವಾರು ಚಿತ್ರಗಳು ಬಂದು ಸಾಕಷ್ಟು ಗಮನ ಸೆಳೆದಿವೆ. ಅಸುರನ್, ಪಲಾಸ, ಕರ್ಣನ್, ಸರ್ಪಟ್ಟ ಪರಂಬರೈ, ಲವ್ ಸ್ಟೋರಿ, ಪರಿಯೆರುಮ್ ಪೆರುಮಾಳ್, ಜೈಭೀಮ್ ಥರದ ಸಿನಿಮಾಗಳು ಇಡೀ ದೇಶಾದ್ಯಂತ ಚರ್ಚೆಗೆ ಒಳಪಟ್ಟಿವೆ. ಕನ್ನಡದಲ್ಲಿ ಇಂತಹ ಸಿನಿಮಾಗಳು ಬರುತ್ತಿಲ್ಲ ಎಂಬ ಕೊರಗು ನೀಗಿಸಲು ಮುಂದಾಗಿದ್ದಾರೆ ನಿರ್ದೇಶಕ ಕರ್ಣನ್.

ನೆಲಮಂಗಲದ ಅರುಣ್‌ರವರು ಒಂದು ದಶಕದಿಂದ ಚಿತ್ರರಂಗದಲ್ಲಿದ್ದಾರೆ. ತಮಿಳುನಲ್ಲಿ ಮಾರಿ ಸೆಲ್ವರಾಜ್ ನಿರ್ದೇಶನದ, ಧನುಶ್ ಅಭಿನಯದ ಕರ್ಣನ್ ಚಿತ್ರ ಬಿಡುಗಡೆಯಾದ ಮೇಲೆ ಆ ಚಿತ್ರದ ಪ್ರಭಾವಕ್ಕೆ ಒಳಗಾಗಿ ಅವರು ತಮ್ಮ ಹೆಸರನ್ನು ಕರ್ಣನ್ ಎಂದು ಬದಲಿಸಿಕೊಂಡಿದ್ದಾರೆ!. ಅವರ ಚೊಚ್ಚಲ ಚಿತ್ರವೇ ‘ಧೀರ ಭಗತ್ ರಾಯ್‌’ ಆಗಿದೆ.

’ಕಥಾ ನಾಯಕ ಭಗತ್ ಎಂಬುವವ ಒಬ್ಬ ವಕೀಲ. ಆತ ತನ್ನ ಜನರಿಗಾಗಿ ಹೇಗೆ ಗ್ಯಾಂಗ್‌ಸ್ಟರ್‌ ಆಗಿ ಬಳಿಕ ರಾಜಕೀಯ ನಾಯಕನಾಗುತ್ತಾನೆ ಎಂಬುದು ಕಥೆ. ರಾಜಕೀಯ ಶಕ್ತಿ ಇದ್ದರೇ ಸಮಾಜದಲ್ಲಿ ಬದಲಾವಣೆ ಸಾಧ್ಯ. ಜಾತಿಮುಕ್ತ ಸಮಾಜ ನಿರ್ಮಾಣಕ್ಕೆ ರಾಜಕೀಯ ಅಧಿಕಾರ ಬೇಕು. ಆ ಅಧಿಕಾರದಿಂದ ವಂಚಿತರಾದವರ ಕಥೆ ಹೇಳಲು ಹೊರಟಿದ್ದೇನೆ’ ಎನ್ನುತ್ತಾರೆ ಕರ್ಣನ್.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ““ಒಂದು ಮೀಸಲು ಕ್ಷೇತ್ರದಲ್ಲಿ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ. ನಾವು ಆಯ್ಕೆ ಮಾಡಿ ಕಳುಹಿಸುವವರು ನಮಗಾಗಿ ಕೆಲಸ ಮಾಡುತ್ತಾರೆಯೇ…? ಗೆದ್ದ ಶಾಸಕನನ್ನು ಕಂಟ್ರೋಲ್ ಮಾಡುವ ಕೈಗಳು ಯಾವುವು…? ಮೀಸಲು ಕ್ಷೇತ್ರದಲ್ಲಿ ಹೇಗೆ ತಮಗೆ ಬೇಕಾದವರನ್ನು ಗೆಲ್ಲಿಸಿಕೊಳ್ಳುತ್ತಾರೆ. ಆ ಕ್ಷೇತ್ರದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸುಧಾರಣೆಗಳಗಿವೆಯೇ ಎಂಬುದು ಮುಖ್ಯ. ನಾನು ಕೂಡ ಒಬ್ಬ ಮೀಸಲು ಕ್ಷೇತ್ರದಲ್ಲಿ ಬೆಳೆದವನಾದ್ದರಿಂದ, ಅಲ್ಲಿನ ಸಮಸ್ಯೆಗಳ ಜೊತೆಯಲ್ಲಿಯೇ ಬದುಕು ಸಾಗಿಸುತ್ತಿರುವ ಕಾರಣ ಇದರ ಕುರಿತು ಏಕೆ ಸಿನಿಮಾ ಮಾಡಬಾರದು ಎಂಬ ಆಯೋಚನೆ ಬಂತು. 2 ವರ್ಷ ಒಂದು ಕಥೆಯ ಮೇಲೆ ಕೆಲಸ ಮಾಡಿ ಸಿನಿಮಾ ನಿರ್ದೇಶಿಸಿದ್ದೇನೆ” ಎನ್ನುತ್ತಾರೆ.

ರಾಕೇಶ್ ದಳವಾಯಿ ಮತ್ತು ಸುಚರಿತ

ರಂಗಭೂಮಿ ಕಲಾವಿದ ರಾಕೇಶ್ ದಳವಾಯಿ, ನಟ ಶರತ್ ಲೋಹಿತಾಶ್ವ, ನಟಿ ಸುಚರಿತ, ಚೈತ್ರಾ ಕೊಟ್ಟೂರು ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರಕ್ಕೆ ಲೂಸಿಯಾ, ಯೂಟರ್ನ್ ಖ್ಯಾತಿಯ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ.


ಇದನ್ನು ಓದಿ: ವಿಶ್ಲೇಷಣೆ; ದಲಿತ ರಾಜಕಾರಣ ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...