Homeಮುಖಪುಟಗೋಮೂತ್ರದಿಂದ ಕ್ಯಾನ್ಸರ್ ಗುಣವಾಗುತ್ತದೆ ಎಂದಿದ್ದ ಧೀರೇಂದ್ರ ಶಾಸ್ತ್ರಿಯಿಂದ ₹200 ಕೋಟಿ ವೆಚ್ಚದ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ!

ಗೋಮೂತ್ರದಿಂದ ಕ್ಯಾನ್ಸರ್ ಗುಣವಾಗುತ್ತದೆ ಎಂದಿದ್ದ ಧೀರೇಂದ್ರ ಶಾಸ್ತ್ರಿಯಿಂದ ₹200 ಕೋಟಿ ವೆಚ್ಚದ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ!

- Advertisement -
- Advertisement -

ಎರಡು ವರ್ಷಗಳ ಹಿಂದೆ ತನ್ನ ತಾಯಿಗೆ ಕ್ಯಾನ್ಸರ್ ರೋಗವಿದೆ ಎಂದು ಹೇಳಿಕೊಂಡಿದ್ದ ಯುವಕನಿಗೆ ಗೋಮೂತ್ರದ ಮದ್ದು ಹೇಳಿಕೊಟ್ಟಿದ್ದ ಸ್ವಘೋಷಿತ ದೇವಮಾನವ ಧೀರೇಂದ್ರ ಶಾಸ್ತ್ರಿ, ಫೆಬ್ರವರಿ 23ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ 200 ಕೋಟಿ ರೂಪಾಯಿ ವೆಚ್ಚದ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ ಮಾಡಿಸಿದ್ದಾರೆ.

2022ರಲ್ಲಿ ಧೀರೇಂದ್ರ ಶಾಸ್ತ್ರಿ ಕ್ಯಾನ್ಸರ್‌ಗೆ ಮದ್ದು ಹೇಳಿಕೊಟ್ಟಿದ್ದ ವಿಡಿಯೋ ವೈರಲ್ ಆಗಿತ್ತು.
ಅದರಲ್ಲಿ “ನಿಮ್ಮ ತಾಯಿ ಆನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರು ಮೂರು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ. ಅವರು ಕ್ಯಾನ್ಸರ್‌ ನಾಲ್ಕನೇ ಹಂತಕ್ಕೆ ತಲುಪಿದ್ದಾರೆ ಮತ್ತು ಗಂಭೀರ ಸ್ಥಿತಿಯಲ್ಲಿದ್ದಾರೆ. ನಿರಂತರವಾಗಿ ನೋವು ಅನುಭವಿಸುತ್ತಿದ್ದಾರೆ. ಅವರು ಔಷಧಿಗಳನ್ನು ತೆಗೆದುಕೊಂಡಿದ್ದಾರೆ, ಆದರೆ ಅವು ಪರಿಣಾಮ ಬೀರಿಲ್ಲ. ವಿಶೇಷ ಪ್ರಾರ್ಥನೆ ಮಾಡಿ, ನಿಮ್ಮ ಮನೆಯಲ್ಲಿ 11 ದಿನಗಳ ಕಾಲ ನಿರಂತರವಾಗಿ ದೀಪ ಬೆಳಗಿ (ಅಖಂಡ ಜ್ಯೋತಿ) ಸ್ಥಳೀಯ ಹಸುವಿನಿಂದ 50 ಗ್ರಾಂ ಗೋಮೂತ್ರವನ್ನು ತೆಗೆದುಕೊಂಡು ಬಂದು, ಅದನ್ನು ಎರಡು ಅರಿಶಿನ ಬೇರುಗಳೊಂದಿಗೆ ಬೆರೆಸಿ ಪೇಸ್ಟ್ ಮಾಡಿ. ರೋಗಿಯಾದ ನಿಮ್ಮ ತಾಯಿಗೆ ಕುಡಿಯಲು ಕೊಡಿ. ಶೇ.100ರಷ್ಟು ಫಲಿತಾಂಶ ಸಿಗಲಿದೆ..ಭಾಗೇಶ್ವರ ಧಾಮ್ ಕಿ ಜೈ!” ಎಂದಿದ್ದರು.

ಮಧ್ಯಪ್ರದೇಶದ ಛತ್ತರ್‌ಪುರ್‌ನಲ್ಲಿರುವ ಬಾಗೇಶ್ವರ ಧಾಮ ದೇವಾಲಯದ ಮುಖಸ್ಥರಾಗಿರುವ ಧೀರೇಂದ್ರ ಶಾಸ್ತ್ರಿ, ಫೆಬ್ರವರಿ 23, 2025ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ ಮಾಡಿಸಿದ್ದಾರೆ.

ವರದಿಗಳ ಪ್ರಕಾರ, 200 ಕೋಟಿ ರೂಪಾಯಿ ವೆಚ್ಚದ ಈ ಕ್ಯಾನ್ಸರ್ ಆಸ್ಪತ್ರೆಯು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರಲಿದ್ದು, ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಿದೆ. ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲಿದೆ.

ಶಿಲಾನ್ಯಾಸ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ,”ನನ್ನ ಕಿರಿಯ ಸಹೋದರ ಧೀರೇಂದ್ರ ಶಾಸ್ತ್ರಿ ಹಿಂದೂಗಳನ್ನು ಒಗ್ಗೂಡಿಸುತ್ತಿದ್ದಾರೆ ಎಂದು ಶ್ಲಾಘಿಸಿದ್ದರು. ಹಿಂದೂಗಳ ನಂಬಿಕೆಯನ್ನು ಅಪಹಾಸ್ಯ ಮತ್ತು ‘ಸ್ವಭಾವತಃ ಪ್ರಗತಿಪರವಾದ ಧರ್ಮದ ಮೇಲೆ ದಾಳಿ ಮಾಡಲಾಗುತ್ತಿದೆ ಎಂದು ಖಂಡಿಸಿದ್ದರು. ಧೀರೇಂದ್ರ ಶಾಸ್ತ್ರಿ ಕ್ಯಾನ್ಸರ್ ಆಸ್ಪತ್ರೆಯನ್ನು ನಿರ್ಮಿಸಲು ಮುಂದಾಗಿರುವುದು ಸಮಾಜ ಮತ್ತು ಜನರ ಹಿತಾಸಕ್ತಿಗಾಗಿ ತೆಗೆದುಕೊಂಡ ಮತ್ತೊಂದು ನಿರ್ಣಯವಾಗಿದೆ. ನೀವು ಈಗಾಗಲೇ ಬಾಗೇಶ್ವರ ಧಾಮದಲ್ಲಿ, ಭಜನೆ, ಆಹಾರ ಮತ್ತು ಆರೋಗ್ಯಕರ ಜೀವನದ ಆಶೀರ್ವಾದವನ್ನು ಪಡೆಯುತ್ತೀರಿ” ಎಂದು ಹೇಳಿದ್ದರು.

ಸಂಸ್ಥೆಯ ವೆಬ್‌ಸೈಟ್ ಪ್ರಕಾರ, ಬಾಗೇಶ್ವರ ಧಾಮವು 300 ವರ್ಷಗಳ ಹಿಂದೆ ಮಧ್ಯ ಪ್ರದೇಶದ ಚತ್ತರ್‌ಪುರದ ಗಧಾ ಗ್ರಾಮದಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸಿತು. ಹಿಂದಿ ಪದ ‘ಧಾಮ’ವು ತೀರ್ಥಯಾತ್ರೆಯ ಸ್ಥಳವನ್ನು ಸೂಚಿಸುತ್ತದೆ. ಇಂದಿನ ದೇವಾಲಯದ ಹಿಂದೆ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರ ಅಜ್ಜ ಸೇತುಲಾಲ್ ಗರ್ಗ್ ಸನ್ಯಾಸಿ ಬಾಬಾ ಅವರ ಸಮಾಧಿ ಇದೆ. ಅವರು ಧಾಮವನ್ನು ಪ್ರಾರಂಭಿಸಿದವರು. ಈ ದೇವಾಲಯವು ಹಿಂದೂ ದೇವರುಗಳಾದ ಬಾಲಾಜಿ ಮತ್ತು ಹನುಮನಿಗೆ ಸಮರ್ಪಿತವಾಗಿದೆ. ವೆಬ್‌ಸೈಟ್ ಪ್ರಕಾರ, ಜನರು ತಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ಕೋರಿ ಬಾಗೇಶ್ವರ ಧಾಮಕ್ಕೆ ಬರುತ್ತಾರೆ. “ಬಾಲಾಜಿ ಮಹಾರಾಜರು ಅರ್ಜಿ ಮೂಲಕ ನಿಮ್ಮ ಸಮಸ್ಯೆಯನ್ನು ಆಲಿಸುತ್ತಾರೆ ಮತ್ತು ಧಾಮದ ಪೀಠಾಧೀಶ್ವರ ಮೂಲಕ ಪರಿಹಾರವನ್ನು ಸೂಚಿಸುತ್ತಾರೆ” ಎಂದು ವೆಬ್‌ಸೈಟ್‌ ಹೇಳುತ್ತದೆ. ಅನ್ನಪೂರ್ಣ ರಸೋಯಿ (ಸಮುದಾಯ ಅಡುಗೆಮನೆ), ಬಡ ಹುಡುಗಿಯರಿಗೆ ವಾರ್ಷಿಕ ಸಾಮೂಹಿಕ ವಿವಾಹಗಳು, ವೈದಿಕ ಶಿಕ್ಷಣಕ್ಕಾಗಿ ಗುರುಕುಲ ಮತ್ತು ಪರಿಸರ ಸಂರಕ್ಷಣೆಗಾಗಿ ಬಾಗೇಶ್ವರ ಉದ್ಯಾನಗಳು ಸೇರಿದಂತೆ ಹಲವಾರು ಸಾಮಾಜಿಕ ಕಲ್ಯಾಣ ಉಪಕ್ರಮಗಳನ್ನು ಧಾಮ ನಡೆಸುತ್ತಿದೆ. ಇದು ಗೋ ರಕ್ಷಣೆಯನ್ನು ಉತ್ತೇಜಿಸುತ್ತದೆ ಮತ್ತು ನಿರ್ಗತಿಕ ಮಕ್ಕಳಿಗೆ ಆಹಾರ ಮತ್ತು ಶಿಕ್ಷಣವನ್ನು ಒದಗಿಸುತ್ತದೆ” ಎಂದು ಹೇಳಲಾಗಿದೆ.

ಗಾಂಧಿ ಹಂತಕ ಗೋಡ್ಸೆಯನ್ನು ಹೊಗಳಿದ್ದ ಪ್ರಾಧ್ಯಾಪಕಿಗೆ ಎನ್‌ಐಟಿ ಡೀನ್‌ ಆಗಿ ಭಡ್ತಿ : ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...