Homeಮುಖಪುಟಗೋಮೂತ್ರದಿಂದ ಕ್ಯಾನ್ಸರ್ ಗುಣವಾಗುತ್ತದೆ ಎಂದಿದ್ದ ಧೀರೇಂದ್ರ ಶಾಸ್ತ್ರಿಯಿಂದ ₹200 ಕೋಟಿ ವೆಚ್ಚದ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ!

ಗೋಮೂತ್ರದಿಂದ ಕ್ಯಾನ್ಸರ್ ಗುಣವಾಗುತ್ತದೆ ಎಂದಿದ್ದ ಧೀರೇಂದ್ರ ಶಾಸ್ತ್ರಿಯಿಂದ ₹200 ಕೋಟಿ ವೆಚ್ಚದ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ!

- Advertisement -
- Advertisement -

ಎರಡು ವರ್ಷಗಳ ಹಿಂದೆ ತನ್ನ ತಾಯಿಗೆ ಕ್ಯಾನ್ಸರ್ ರೋಗವಿದೆ ಎಂದು ಹೇಳಿಕೊಂಡಿದ್ದ ಯುವಕನಿಗೆ ಗೋಮೂತ್ರದ ಮದ್ದು ಹೇಳಿಕೊಟ್ಟಿದ್ದ ಸ್ವಘೋಷಿತ ದೇವಮಾನವ ಧೀರೇಂದ್ರ ಶಾಸ್ತ್ರಿ, ಫೆಬ್ರವರಿ 23ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ 200 ಕೋಟಿ ರೂಪಾಯಿ ವೆಚ್ಚದ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ ಮಾಡಿಸಿದ್ದಾರೆ.

2022ರಲ್ಲಿ ಧೀರೇಂದ್ರ ಶಾಸ್ತ್ರಿ ಕ್ಯಾನ್ಸರ್‌ಗೆ ಮದ್ದು ಹೇಳಿಕೊಟ್ಟಿದ್ದ ವಿಡಿಯೋ ವೈರಲ್ ಆಗಿತ್ತು.
ಅದರಲ್ಲಿ “ನಿಮ್ಮ ತಾಯಿ ಆನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರು ಮೂರು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ. ಅವರು ಕ್ಯಾನ್ಸರ್‌ ನಾಲ್ಕನೇ ಹಂತಕ್ಕೆ ತಲುಪಿದ್ದಾರೆ ಮತ್ತು ಗಂಭೀರ ಸ್ಥಿತಿಯಲ್ಲಿದ್ದಾರೆ. ನಿರಂತರವಾಗಿ ನೋವು ಅನುಭವಿಸುತ್ತಿದ್ದಾರೆ. ಅವರು ಔಷಧಿಗಳನ್ನು ತೆಗೆದುಕೊಂಡಿದ್ದಾರೆ, ಆದರೆ ಅವು ಪರಿಣಾಮ ಬೀರಿಲ್ಲ. ವಿಶೇಷ ಪ್ರಾರ್ಥನೆ ಮಾಡಿ, ನಿಮ್ಮ ಮನೆಯಲ್ಲಿ 11 ದಿನಗಳ ಕಾಲ ನಿರಂತರವಾಗಿ ದೀಪ ಬೆಳಗಿ (ಅಖಂಡ ಜ್ಯೋತಿ) ಸ್ಥಳೀಯ ಹಸುವಿನಿಂದ 50 ಗ್ರಾಂ ಗೋಮೂತ್ರವನ್ನು ತೆಗೆದುಕೊಂಡು ಬಂದು, ಅದನ್ನು ಎರಡು ಅರಿಶಿನ ಬೇರುಗಳೊಂದಿಗೆ ಬೆರೆಸಿ ಪೇಸ್ಟ್ ಮಾಡಿ. ರೋಗಿಯಾದ ನಿಮ್ಮ ತಾಯಿಗೆ ಕುಡಿಯಲು ಕೊಡಿ. ಶೇ.100ರಷ್ಟು ಫಲಿತಾಂಶ ಸಿಗಲಿದೆ..ಭಾಗೇಶ್ವರ ಧಾಮ್ ಕಿ ಜೈ!” ಎಂದಿದ್ದರು.

ಮಧ್ಯಪ್ರದೇಶದ ಛತ್ತರ್‌ಪುರ್‌ನಲ್ಲಿರುವ ಬಾಗೇಶ್ವರ ಧಾಮ ದೇವಾಲಯದ ಮುಖಸ್ಥರಾಗಿರುವ ಧೀರೇಂದ್ರ ಶಾಸ್ತ್ರಿ, ಫೆಬ್ರವರಿ 23, 2025ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ ಮಾಡಿಸಿದ್ದಾರೆ.

ವರದಿಗಳ ಪ್ರಕಾರ, 200 ಕೋಟಿ ರೂಪಾಯಿ ವೆಚ್ಚದ ಈ ಕ್ಯಾನ್ಸರ್ ಆಸ್ಪತ್ರೆಯು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರಲಿದ್ದು, ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಿದೆ. ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲಿದೆ.

ಶಿಲಾನ್ಯಾಸ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ,”ನನ್ನ ಕಿರಿಯ ಸಹೋದರ ಧೀರೇಂದ್ರ ಶಾಸ್ತ್ರಿ ಹಿಂದೂಗಳನ್ನು ಒಗ್ಗೂಡಿಸುತ್ತಿದ್ದಾರೆ ಎಂದು ಶ್ಲಾಘಿಸಿದ್ದರು. ಹಿಂದೂಗಳ ನಂಬಿಕೆಯನ್ನು ಅಪಹಾಸ್ಯ ಮತ್ತು ‘ಸ್ವಭಾವತಃ ಪ್ರಗತಿಪರವಾದ ಧರ್ಮದ ಮೇಲೆ ದಾಳಿ ಮಾಡಲಾಗುತ್ತಿದೆ ಎಂದು ಖಂಡಿಸಿದ್ದರು. ಧೀರೇಂದ್ರ ಶಾಸ್ತ್ರಿ ಕ್ಯಾನ್ಸರ್ ಆಸ್ಪತ್ರೆಯನ್ನು ನಿರ್ಮಿಸಲು ಮುಂದಾಗಿರುವುದು ಸಮಾಜ ಮತ್ತು ಜನರ ಹಿತಾಸಕ್ತಿಗಾಗಿ ತೆಗೆದುಕೊಂಡ ಮತ್ತೊಂದು ನಿರ್ಣಯವಾಗಿದೆ. ನೀವು ಈಗಾಗಲೇ ಬಾಗೇಶ್ವರ ಧಾಮದಲ್ಲಿ, ಭಜನೆ, ಆಹಾರ ಮತ್ತು ಆರೋಗ್ಯಕರ ಜೀವನದ ಆಶೀರ್ವಾದವನ್ನು ಪಡೆಯುತ್ತೀರಿ” ಎಂದು ಹೇಳಿದ್ದರು.

ಸಂಸ್ಥೆಯ ವೆಬ್‌ಸೈಟ್ ಪ್ರಕಾರ, ಬಾಗೇಶ್ವರ ಧಾಮವು 300 ವರ್ಷಗಳ ಹಿಂದೆ ಮಧ್ಯ ಪ್ರದೇಶದ ಚತ್ತರ್‌ಪುರದ ಗಧಾ ಗ್ರಾಮದಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸಿತು. ಹಿಂದಿ ಪದ ‘ಧಾಮ’ವು ತೀರ್ಥಯಾತ್ರೆಯ ಸ್ಥಳವನ್ನು ಸೂಚಿಸುತ್ತದೆ. ಇಂದಿನ ದೇವಾಲಯದ ಹಿಂದೆ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರ ಅಜ್ಜ ಸೇತುಲಾಲ್ ಗರ್ಗ್ ಸನ್ಯಾಸಿ ಬಾಬಾ ಅವರ ಸಮಾಧಿ ಇದೆ. ಅವರು ಧಾಮವನ್ನು ಪ್ರಾರಂಭಿಸಿದವರು. ಈ ದೇವಾಲಯವು ಹಿಂದೂ ದೇವರುಗಳಾದ ಬಾಲಾಜಿ ಮತ್ತು ಹನುಮನಿಗೆ ಸಮರ್ಪಿತವಾಗಿದೆ. ವೆಬ್‌ಸೈಟ್ ಪ್ರಕಾರ, ಜನರು ತಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ಕೋರಿ ಬಾಗೇಶ್ವರ ಧಾಮಕ್ಕೆ ಬರುತ್ತಾರೆ. “ಬಾಲಾಜಿ ಮಹಾರಾಜರು ಅರ್ಜಿ ಮೂಲಕ ನಿಮ್ಮ ಸಮಸ್ಯೆಯನ್ನು ಆಲಿಸುತ್ತಾರೆ ಮತ್ತು ಧಾಮದ ಪೀಠಾಧೀಶ್ವರ ಮೂಲಕ ಪರಿಹಾರವನ್ನು ಸೂಚಿಸುತ್ತಾರೆ” ಎಂದು ವೆಬ್‌ಸೈಟ್‌ ಹೇಳುತ್ತದೆ. ಅನ್ನಪೂರ್ಣ ರಸೋಯಿ (ಸಮುದಾಯ ಅಡುಗೆಮನೆ), ಬಡ ಹುಡುಗಿಯರಿಗೆ ವಾರ್ಷಿಕ ಸಾಮೂಹಿಕ ವಿವಾಹಗಳು, ವೈದಿಕ ಶಿಕ್ಷಣಕ್ಕಾಗಿ ಗುರುಕುಲ ಮತ್ತು ಪರಿಸರ ಸಂರಕ್ಷಣೆಗಾಗಿ ಬಾಗೇಶ್ವರ ಉದ್ಯಾನಗಳು ಸೇರಿದಂತೆ ಹಲವಾರು ಸಾಮಾಜಿಕ ಕಲ್ಯಾಣ ಉಪಕ್ರಮಗಳನ್ನು ಧಾಮ ನಡೆಸುತ್ತಿದೆ. ಇದು ಗೋ ರಕ್ಷಣೆಯನ್ನು ಉತ್ತೇಜಿಸುತ್ತದೆ ಮತ್ತು ನಿರ್ಗತಿಕ ಮಕ್ಕಳಿಗೆ ಆಹಾರ ಮತ್ತು ಶಿಕ್ಷಣವನ್ನು ಒದಗಿಸುತ್ತದೆ” ಎಂದು ಹೇಳಲಾಗಿದೆ.

ಗಾಂಧಿ ಹಂತಕ ಗೋಡ್ಸೆಯನ್ನು ಹೊಗಳಿದ್ದ ಪ್ರಾಧ್ಯಾಪಕಿಗೆ ಎನ್‌ಐಟಿ ಡೀನ್‌ ಆಗಿ ಭಡ್ತಿ : ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...