Homeಮುಖಪುಟಗೋಮೂತ್ರದಿಂದ ಕ್ಯಾನ್ಸರ್ ಗುಣವಾಗುತ್ತದೆ ಎಂದಿದ್ದ ಧೀರೇಂದ್ರ ಶಾಸ್ತ್ರಿಯಿಂದ ₹200 ಕೋಟಿ ವೆಚ್ಚದ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ!

ಗೋಮೂತ್ರದಿಂದ ಕ್ಯಾನ್ಸರ್ ಗುಣವಾಗುತ್ತದೆ ಎಂದಿದ್ದ ಧೀರೇಂದ್ರ ಶಾಸ್ತ್ರಿಯಿಂದ ₹200 ಕೋಟಿ ವೆಚ್ಚದ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ!

- Advertisement -
- Advertisement -

ಎರಡು ವರ್ಷಗಳ ಹಿಂದೆ ತನ್ನ ತಾಯಿಗೆ ಕ್ಯಾನ್ಸರ್ ರೋಗವಿದೆ ಎಂದು ಹೇಳಿಕೊಂಡಿದ್ದ ಯುವಕನಿಗೆ ಗೋಮೂತ್ರದ ಮದ್ದು ಹೇಳಿಕೊಟ್ಟಿದ್ದ ಸ್ವಘೋಷಿತ ದೇವಮಾನವ ಧೀರೇಂದ್ರ ಶಾಸ್ತ್ರಿ, ಫೆಬ್ರವರಿ 23ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ 200 ಕೋಟಿ ರೂಪಾಯಿ ವೆಚ್ಚದ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ ಮಾಡಿಸಿದ್ದಾರೆ.

2022ರಲ್ಲಿ ಧೀರೇಂದ್ರ ಶಾಸ್ತ್ರಿ ಕ್ಯಾನ್ಸರ್‌ಗೆ ಮದ್ದು ಹೇಳಿಕೊಟ್ಟಿದ್ದ ವಿಡಿಯೋ ವೈರಲ್ ಆಗಿತ್ತು.
ಅದರಲ್ಲಿ “ನಿಮ್ಮ ತಾಯಿ ಆನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರು ಮೂರು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ. ಅವರು ಕ್ಯಾನ್ಸರ್‌ ನಾಲ್ಕನೇ ಹಂತಕ್ಕೆ ತಲುಪಿದ್ದಾರೆ ಮತ್ತು ಗಂಭೀರ ಸ್ಥಿತಿಯಲ್ಲಿದ್ದಾರೆ. ನಿರಂತರವಾಗಿ ನೋವು ಅನುಭವಿಸುತ್ತಿದ್ದಾರೆ. ಅವರು ಔಷಧಿಗಳನ್ನು ತೆಗೆದುಕೊಂಡಿದ್ದಾರೆ, ಆದರೆ ಅವು ಪರಿಣಾಮ ಬೀರಿಲ್ಲ. ವಿಶೇಷ ಪ್ರಾರ್ಥನೆ ಮಾಡಿ, ನಿಮ್ಮ ಮನೆಯಲ್ಲಿ 11 ದಿನಗಳ ಕಾಲ ನಿರಂತರವಾಗಿ ದೀಪ ಬೆಳಗಿ (ಅಖಂಡ ಜ್ಯೋತಿ) ಸ್ಥಳೀಯ ಹಸುವಿನಿಂದ 50 ಗ್ರಾಂ ಗೋಮೂತ್ರವನ್ನು ತೆಗೆದುಕೊಂಡು ಬಂದು, ಅದನ್ನು ಎರಡು ಅರಿಶಿನ ಬೇರುಗಳೊಂದಿಗೆ ಬೆರೆಸಿ ಪೇಸ್ಟ್ ಮಾಡಿ. ರೋಗಿಯಾದ ನಿಮ್ಮ ತಾಯಿಗೆ ಕುಡಿಯಲು ಕೊಡಿ. ಶೇ.100ರಷ್ಟು ಫಲಿತಾಂಶ ಸಿಗಲಿದೆ..ಭಾಗೇಶ್ವರ ಧಾಮ್ ಕಿ ಜೈ!” ಎಂದಿದ್ದರು.

ಮಧ್ಯಪ್ರದೇಶದ ಛತ್ತರ್‌ಪುರ್‌ನಲ್ಲಿರುವ ಬಾಗೇಶ್ವರ ಧಾಮ ದೇವಾಲಯದ ಮುಖಸ್ಥರಾಗಿರುವ ಧೀರೇಂದ್ರ ಶಾಸ್ತ್ರಿ, ಫೆಬ್ರವರಿ 23, 2025ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ ಮಾಡಿಸಿದ್ದಾರೆ.

ವರದಿಗಳ ಪ್ರಕಾರ, 200 ಕೋಟಿ ರೂಪಾಯಿ ವೆಚ್ಚದ ಈ ಕ್ಯಾನ್ಸರ್ ಆಸ್ಪತ್ರೆಯು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರಲಿದ್ದು, ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಿದೆ. ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲಿದೆ.

ಶಿಲಾನ್ಯಾಸ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ,”ನನ್ನ ಕಿರಿಯ ಸಹೋದರ ಧೀರೇಂದ್ರ ಶಾಸ್ತ್ರಿ ಹಿಂದೂಗಳನ್ನು ಒಗ್ಗೂಡಿಸುತ್ತಿದ್ದಾರೆ ಎಂದು ಶ್ಲಾಘಿಸಿದ್ದರು. ಹಿಂದೂಗಳ ನಂಬಿಕೆಯನ್ನು ಅಪಹಾಸ್ಯ ಮತ್ತು ‘ಸ್ವಭಾವತಃ ಪ್ರಗತಿಪರವಾದ ಧರ್ಮದ ಮೇಲೆ ದಾಳಿ ಮಾಡಲಾಗುತ್ತಿದೆ ಎಂದು ಖಂಡಿಸಿದ್ದರು. ಧೀರೇಂದ್ರ ಶಾಸ್ತ್ರಿ ಕ್ಯಾನ್ಸರ್ ಆಸ್ಪತ್ರೆಯನ್ನು ನಿರ್ಮಿಸಲು ಮುಂದಾಗಿರುವುದು ಸಮಾಜ ಮತ್ತು ಜನರ ಹಿತಾಸಕ್ತಿಗಾಗಿ ತೆಗೆದುಕೊಂಡ ಮತ್ತೊಂದು ನಿರ್ಣಯವಾಗಿದೆ. ನೀವು ಈಗಾಗಲೇ ಬಾಗೇಶ್ವರ ಧಾಮದಲ್ಲಿ, ಭಜನೆ, ಆಹಾರ ಮತ್ತು ಆರೋಗ್ಯಕರ ಜೀವನದ ಆಶೀರ್ವಾದವನ್ನು ಪಡೆಯುತ್ತೀರಿ” ಎಂದು ಹೇಳಿದ್ದರು.

ಸಂಸ್ಥೆಯ ವೆಬ್‌ಸೈಟ್ ಪ್ರಕಾರ, ಬಾಗೇಶ್ವರ ಧಾಮವು 300 ವರ್ಷಗಳ ಹಿಂದೆ ಮಧ್ಯ ಪ್ರದೇಶದ ಚತ್ತರ್‌ಪುರದ ಗಧಾ ಗ್ರಾಮದಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸಿತು. ಹಿಂದಿ ಪದ ‘ಧಾಮ’ವು ತೀರ್ಥಯಾತ್ರೆಯ ಸ್ಥಳವನ್ನು ಸೂಚಿಸುತ್ತದೆ. ಇಂದಿನ ದೇವಾಲಯದ ಹಿಂದೆ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರ ಅಜ್ಜ ಸೇತುಲಾಲ್ ಗರ್ಗ್ ಸನ್ಯಾಸಿ ಬಾಬಾ ಅವರ ಸಮಾಧಿ ಇದೆ. ಅವರು ಧಾಮವನ್ನು ಪ್ರಾರಂಭಿಸಿದವರು. ಈ ದೇವಾಲಯವು ಹಿಂದೂ ದೇವರುಗಳಾದ ಬಾಲಾಜಿ ಮತ್ತು ಹನುಮನಿಗೆ ಸಮರ್ಪಿತವಾಗಿದೆ. ವೆಬ್‌ಸೈಟ್ ಪ್ರಕಾರ, ಜನರು ತಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ಕೋರಿ ಬಾಗೇಶ್ವರ ಧಾಮಕ್ಕೆ ಬರುತ್ತಾರೆ. “ಬಾಲಾಜಿ ಮಹಾರಾಜರು ಅರ್ಜಿ ಮೂಲಕ ನಿಮ್ಮ ಸಮಸ್ಯೆಯನ್ನು ಆಲಿಸುತ್ತಾರೆ ಮತ್ತು ಧಾಮದ ಪೀಠಾಧೀಶ್ವರ ಮೂಲಕ ಪರಿಹಾರವನ್ನು ಸೂಚಿಸುತ್ತಾರೆ” ಎಂದು ವೆಬ್‌ಸೈಟ್‌ ಹೇಳುತ್ತದೆ. ಅನ್ನಪೂರ್ಣ ರಸೋಯಿ (ಸಮುದಾಯ ಅಡುಗೆಮನೆ), ಬಡ ಹುಡುಗಿಯರಿಗೆ ವಾರ್ಷಿಕ ಸಾಮೂಹಿಕ ವಿವಾಹಗಳು, ವೈದಿಕ ಶಿಕ್ಷಣಕ್ಕಾಗಿ ಗುರುಕುಲ ಮತ್ತು ಪರಿಸರ ಸಂರಕ್ಷಣೆಗಾಗಿ ಬಾಗೇಶ್ವರ ಉದ್ಯಾನಗಳು ಸೇರಿದಂತೆ ಹಲವಾರು ಸಾಮಾಜಿಕ ಕಲ್ಯಾಣ ಉಪಕ್ರಮಗಳನ್ನು ಧಾಮ ನಡೆಸುತ್ತಿದೆ. ಇದು ಗೋ ರಕ್ಷಣೆಯನ್ನು ಉತ್ತೇಜಿಸುತ್ತದೆ ಮತ್ತು ನಿರ್ಗತಿಕ ಮಕ್ಕಳಿಗೆ ಆಹಾರ ಮತ್ತು ಶಿಕ್ಷಣವನ್ನು ಒದಗಿಸುತ್ತದೆ” ಎಂದು ಹೇಳಲಾಗಿದೆ.

ಗಾಂಧಿ ಹಂತಕ ಗೋಡ್ಸೆಯನ್ನು ಹೊಗಳಿದ್ದ ಪ್ರಾಧ್ಯಾಪಕಿಗೆ ಎನ್‌ಐಟಿ ಡೀನ್‌ ಆಗಿ ಭಡ್ತಿ : ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...