Homeಮುಖಪುಟಗೋಮೂತ್ರದಿಂದ ಕ್ಯಾನ್ಸರ್ ಗುಣವಾಗುತ್ತದೆ ಎಂದಿದ್ದ ಧೀರೇಂದ್ರ ಶಾಸ್ತ್ರಿಯಿಂದ ₹200 ಕೋಟಿ ವೆಚ್ಚದ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ!

ಗೋಮೂತ್ರದಿಂದ ಕ್ಯಾನ್ಸರ್ ಗುಣವಾಗುತ್ತದೆ ಎಂದಿದ್ದ ಧೀರೇಂದ್ರ ಶಾಸ್ತ್ರಿಯಿಂದ ₹200 ಕೋಟಿ ವೆಚ್ಚದ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ!

- Advertisement -
- Advertisement -

ಎರಡು ವರ್ಷಗಳ ಹಿಂದೆ ತನ್ನ ತಾಯಿಗೆ ಕ್ಯಾನ್ಸರ್ ರೋಗವಿದೆ ಎಂದು ಹೇಳಿಕೊಂಡಿದ್ದ ಯುವಕನಿಗೆ ಗೋಮೂತ್ರದ ಮದ್ದು ಹೇಳಿಕೊಟ್ಟಿದ್ದ ಸ್ವಘೋಷಿತ ದೇವಮಾನವ ಧೀರೇಂದ್ರ ಶಾಸ್ತ್ರಿ, ಫೆಬ್ರವರಿ 23ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ 200 ಕೋಟಿ ರೂಪಾಯಿ ವೆಚ್ಚದ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ ಮಾಡಿಸಿದ್ದಾರೆ.

2022ರಲ್ಲಿ ಧೀರೇಂದ್ರ ಶಾಸ್ತ್ರಿ ಕ್ಯಾನ್ಸರ್‌ಗೆ ಮದ್ದು ಹೇಳಿಕೊಟ್ಟಿದ್ದ ವಿಡಿಯೋ ವೈರಲ್ ಆಗಿತ್ತು.
ಅದರಲ್ಲಿ “ನಿಮ್ಮ ತಾಯಿ ಆನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರು ಮೂರು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ. ಅವರು ಕ್ಯಾನ್ಸರ್‌ ನಾಲ್ಕನೇ ಹಂತಕ್ಕೆ ತಲುಪಿದ್ದಾರೆ ಮತ್ತು ಗಂಭೀರ ಸ್ಥಿತಿಯಲ್ಲಿದ್ದಾರೆ. ನಿರಂತರವಾಗಿ ನೋವು ಅನುಭವಿಸುತ್ತಿದ್ದಾರೆ. ಅವರು ಔಷಧಿಗಳನ್ನು ತೆಗೆದುಕೊಂಡಿದ್ದಾರೆ, ಆದರೆ ಅವು ಪರಿಣಾಮ ಬೀರಿಲ್ಲ. ವಿಶೇಷ ಪ್ರಾರ್ಥನೆ ಮಾಡಿ, ನಿಮ್ಮ ಮನೆಯಲ್ಲಿ 11 ದಿನಗಳ ಕಾಲ ನಿರಂತರವಾಗಿ ದೀಪ ಬೆಳಗಿ (ಅಖಂಡ ಜ್ಯೋತಿ) ಸ್ಥಳೀಯ ಹಸುವಿನಿಂದ 50 ಗ್ರಾಂ ಗೋಮೂತ್ರವನ್ನು ತೆಗೆದುಕೊಂಡು ಬಂದು, ಅದನ್ನು ಎರಡು ಅರಿಶಿನ ಬೇರುಗಳೊಂದಿಗೆ ಬೆರೆಸಿ ಪೇಸ್ಟ್ ಮಾಡಿ. ರೋಗಿಯಾದ ನಿಮ್ಮ ತಾಯಿಗೆ ಕುಡಿಯಲು ಕೊಡಿ. ಶೇ.100ರಷ್ಟು ಫಲಿತಾಂಶ ಸಿಗಲಿದೆ..ಭಾಗೇಶ್ವರ ಧಾಮ್ ಕಿ ಜೈ!” ಎಂದಿದ್ದರು.

ಮಧ್ಯಪ್ರದೇಶದ ಛತ್ತರ್‌ಪುರ್‌ನಲ್ಲಿರುವ ಬಾಗೇಶ್ವರ ಧಾಮ ದೇವಾಲಯದ ಮುಖಸ್ಥರಾಗಿರುವ ಧೀರೇಂದ್ರ ಶಾಸ್ತ್ರಿ, ಫೆಬ್ರವರಿ 23, 2025ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ ಮಾಡಿಸಿದ್ದಾರೆ.

ವರದಿಗಳ ಪ್ರಕಾರ, 200 ಕೋಟಿ ರೂಪಾಯಿ ವೆಚ್ಚದ ಈ ಕ್ಯಾನ್ಸರ್ ಆಸ್ಪತ್ರೆಯು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರಲಿದ್ದು, ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಿದೆ. ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲಿದೆ.

ಶಿಲಾನ್ಯಾಸ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ,”ನನ್ನ ಕಿರಿಯ ಸಹೋದರ ಧೀರೇಂದ್ರ ಶಾಸ್ತ್ರಿ ಹಿಂದೂಗಳನ್ನು ಒಗ್ಗೂಡಿಸುತ್ತಿದ್ದಾರೆ ಎಂದು ಶ್ಲಾಘಿಸಿದ್ದರು. ಹಿಂದೂಗಳ ನಂಬಿಕೆಯನ್ನು ಅಪಹಾಸ್ಯ ಮತ್ತು ‘ಸ್ವಭಾವತಃ ಪ್ರಗತಿಪರವಾದ ಧರ್ಮದ ಮೇಲೆ ದಾಳಿ ಮಾಡಲಾಗುತ್ತಿದೆ ಎಂದು ಖಂಡಿಸಿದ್ದರು. ಧೀರೇಂದ್ರ ಶಾಸ್ತ್ರಿ ಕ್ಯಾನ್ಸರ್ ಆಸ್ಪತ್ರೆಯನ್ನು ನಿರ್ಮಿಸಲು ಮುಂದಾಗಿರುವುದು ಸಮಾಜ ಮತ್ತು ಜನರ ಹಿತಾಸಕ್ತಿಗಾಗಿ ತೆಗೆದುಕೊಂಡ ಮತ್ತೊಂದು ನಿರ್ಣಯವಾಗಿದೆ. ನೀವು ಈಗಾಗಲೇ ಬಾಗೇಶ್ವರ ಧಾಮದಲ್ಲಿ, ಭಜನೆ, ಆಹಾರ ಮತ್ತು ಆರೋಗ್ಯಕರ ಜೀವನದ ಆಶೀರ್ವಾದವನ್ನು ಪಡೆಯುತ್ತೀರಿ” ಎಂದು ಹೇಳಿದ್ದರು.

ಸಂಸ್ಥೆಯ ವೆಬ್‌ಸೈಟ್ ಪ್ರಕಾರ, ಬಾಗೇಶ್ವರ ಧಾಮವು 300 ವರ್ಷಗಳ ಹಿಂದೆ ಮಧ್ಯ ಪ್ರದೇಶದ ಚತ್ತರ್‌ಪುರದ ಗಧಾ ಗ್ರಾಮದಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸಿತು. ಹಿಂದಿ ಪದ ‘ಧಾಮ’ವು ತೀರ್ಥಯಾತ್ರೆಯ ಸ್ಥಳವನ್ನು ಸೂಚಿಸುತ್ತದೆ. ಇಂದಿನ ದೇವಾಲಯದ ಹಿಂದೆ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರ ಅಜ್ಜ ಸೇತುಲಾಲ್ ಗರ್ಗ್ ಸನ್ಯಾಸಿ ಬಾಬಾ ಅವರ ಸಮಾಧಿ ಇದೆ. ಅವರು ಧಾಮವನ್ನು ಪ್ರಾರಂಭಿಸಿದವರು. ಈ ದೇವಾಲಯವು ಹಿಂದೂ ದೇವರುಗಳಾದ ಬಾಲಾಜಿ ಮತ್ತು ಹನುಮನಿಗೆ ಸಮರ್ಪಿತವಾಗಿದೆ. ವೆಬ್‌ಸೈಟ್ ಪ್ರಕಾರ, ಜನರು ತಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ಕೋರಿ ಬಾಗೇಶ್ವರ ಧಾಮಕ್ಕೆ ಬರುತ್ತಾರೆ. “ಬಾಲಾಜಿ ಮಹಾರಾಜರು ಅರ್ಜಿ ಮೂಲಕ ನಿಮ್ಮ ಸಮಸ್ಯೆಯನ್ನು ಆಲಿಸುತ್ತಾರೆ ಮತ್ತು ಧಾಮದ ಪೀಠಾಧೀಶ್ವರ ಮೂಲಕ ಪರಿಹಾರವನ್ನು ಸೂಚಿಸುತ್ತಾರೆ” ಎಂದು ವೆಬ್‌ಸೈಟ್‌ ಹೇಳುತ್ತದೆ. ಅನ್ನಪೂರ್ಣ ರಸೋಯಿ (ಸಮುದಾಯ ಅಡುಗೆಮನೆ), ಬಡ ಹುಡುಗಿಯರಿಗೆ ವಾರ್ಷಿಕ ಸಾಮೂಹಿಕ ವಿವಾಹಗಳು, ವೈದಿಕ ಶಿಕ್ಷಣಕ್ಕಾಗಿ ಗುರುಕುಲ ಮತ್ತು ಪರಿಸರ ಸಂರಕ್ಷಣೆಗಾಗಿ ಬಾಗೇಶ್ವರ ಉದ್ಯಾನಗಳು ಸೇರಿದಂತೆ ಹಲವಾರು ಸಾಮಾಜಿಕ ಕಲ್ಯಾಣ ಉಪಕ್ರಮಗಳನ್ನು ಧಾಮ ನಡೆಸುತ್ತಿದೆ. ಇದು ಗೋ ರಕ್ಷಣೆಯನ್ನು ಉತ್ತೇಜಿಸುತ್ತದೆ ಮತ್ತು ನಿರ್ಗತಿಕ ಮಕ್ಕಳಿಗೆ ಆಹಾರ ಮತ್ತು ಶಿಕ್ಷಣವನ್ನು ಒದಗಿಸುತ್ತದೆ” ಎಂದು ಹೇಳಲಾಗಿದೆ.

ಗಾಂಧಿ ಹಂತಕ ಗೋಡ್ಸೆಯನ್ನು ಹೊಗಳಿದ್ದ ಪ್ರಾಧ್ಯಾಪಕಿಗೆ ಎನ್‌ಐಟಿ ಡೀನ್‌ ಆಗಿ ಭಡ್ತಿ : ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...