Homeಕರೋನಾ ತಲ್ಲಣಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

ಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

- Advertisement -
- Advertisement -

ಕೊರೊನ ವಾರಿಯರ್‌ಗಳಿಗೆ ಕೊವಾಕ್ಸಿನ್ ಚುಚ್ಚುಮದ್ದು ನೀಡುವ ಅಭಿಯಾನ ದೇಶಾದ್ಯಂತ ನಡೆಯುತ್ತಿದೆ. ಅದರಂತೆ ತುಮಕೂರು ನಗರದಲ್ಲೂ ವಾಕ್ಸಿನ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲಾ ವೈದ್ಯಾಧಿಕಾರಿ(ಡಿಎಚ್ಒ) ನಾಗೇಂದ್ರಪ್ಪ ಮತ್ತು ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ರಜನಿ ಅವರು ಫೋಟೋ ಸೆಷನ್‌ಗೆ ಫೋಜು ನೀಡಿ ಕೊವಾಕ್ಸಿನ್ ತೆಗೆದುಕೊಂಡಂತೆ ನಾಟಕ ಮಾಡಿದರು. ಈ ದೃಶ್ಯವು ವೀಡಿಯೋದಲ್ಲಿ ದಾಖಲಾಗಿದೆ.

ಕೊವಾಕ್ಸಿನ್ ಚುಚ್ಚುಮದ್ದು ತೆಗೆದುಕೊಂಡು ಇತರೆ ಕೊರೊನಾ ವಾರಿಯರ್‌ಗಳಿಗೆ ಸ್ಪೂರ್ತಿ, ಉತ್ಸಾಹ ತುಂಬ ಬೇಕಾಗಿದ್ದ ಡಿಎಚ್ಒ ನಾಗೇಂದ್ರಪ್ಪ ವಾಕ್ಸಿನ್ ತೆಗೆದುಕೊಳ್ಳುತ್ತಿರುವಂತೆ ಪೋಸ್ ನೀಡಿದರೇ ಹೊರತು ಸೂಜಿ ಸುಚ್ಚಿಸಿಕೊಳ್ಳಲೇ ಇಲ್ಲ. ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ರಜನಿಗೂ ಕೂಡ ವಾಕ್ಸಿನ್ ಕೊಡುತ್ತಿರುವಂತೆ ನಟಿಸಲಾಗಿದೆ. ಈ ವಿಡಿಯೋ ನಾನುಗೌರಿ.ಕಾಮ್‌ಗೆ ಲಭ್ಯವಿದ್ದು ಚುಚ್ಚುಮದ್ದು ಕೊಟ್ಟಂತೆ ಮಾಡಿದ ಮೇಲೆ ಚಪ್ಪಾಳೆ ತಟ್ಟಲಾಗಿದೆ.

ವಿಡಿಯೋ ನೋಡಿ►►

ಇದನ್ನೂ ಓದಿ: ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ಅವರು ವಾಕ್ಸಿನ್ ತೆಗೆದುಕೊಂಡು ಇತರರಿಗೂ ವಾಕ್ಸಿನ್ ಪಡೆಯಬಹುದೆಂಬ ಮಾಹಿತಿ ರವಾನಿಸಿದ್ದಾರೆ. ಇವರ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ಆದರೆ ಡಿಎಚ್‌ಒ ನಾಗೇಂದ್ರಪ್ಪ ಮತ್ತು ಪ್ರಾಂಶುಪಾಲೆ ವಾಕ್ಸಿನ್ ಪಡೆದಂತೆ ನಾಟಕ ಮಾಡಿರುವ ವಿಡಿಯೋ ಹರಿದಾಡುತ್ತಿದೆ. ಉನ್ನತ ಅಧಿಕಾರಿಗಳೇ ಹೀಗೆ ನಾಟಕ ಮಾಡಿ, ವಾಕ್ಸಿನ್ ತೆಗೆದುಕೊಳ್ಳಲು ಹಿಂಜರಿಕೆ ಮಾಡಿದರೆ ಕೆಳಹಂತದ ಕೊರೊನ ವಾರಿಯರ್ ಸಿಬ್ಬಂದಿಗಳು ತೆಗೆದುಕೊಳ್ಳುವುದಾದರೂ ಹೇಗೆ ಎಂಬ ಪ್ರಶ್ನೆ ಉದ್ಭವವಾಗಿದೆ.

ನಗರದಲ್ಲಿ ಪೌರಕಾರ್ಮಿಕರು ಕೊರೊನ ವ್ಯಾಪಿಸಿರುವ ಪ್ರದೇಶಗಳಲ್ಲಿ ನಿತ್ಯವೂ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ವಾಕ್ಸಿನ್ ಪ್ರಯೋಗ ಮಾಡಲಾಗುತ್ತಿದೆಯೇ ಹೊರತು ಆರೋಗ್ಯ ಅಧಿಕಾರಿಗಳಿಗೆ ವಾಕ್ಸಿನ್ ನೀಡಿಲ್ಲ. ಇದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಧಿಕಾರಿಗಳು ತಾವು ಮೊದಲು ತೆಗೆದುಕೊಂಡು ಇತರರಲ್ಲಿ ಧೈರ್ಯ ತುಂಬಬೇಕಾಗಿತ್ತು. ಆದರೆ ಆ ಕೆಲಸವನ್ನು ಮಾಡಿಲ್ಲ. ಕೊವಾಕ್ಸಿನ್ ಬಗ್ಗೆ ವೈದ್ಯಲೋಕದಲ್ಲೇ ಅಭಿಪ್ರಾಯ ಬೇಧಗಳು ಇದೆ. ಅಂತಹ ಸಂದರ್ಭದಲ್ಲಿ ಕೊರೊನ ವಾರಿಯರ್‌ಗಳ ಮೇಲೆ ಅದೂ ಕೆಳಹಂತದಲ್ಲಿ ಕೆಲಸ ಮಾಡುವವ ಮೇಲೆ ವಾಕ್ಸಿನ್ ಪ್ರಯೋಗ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಅಧಿಕಾರಿ ವರ್ಗ ಉತ್ತರ ನೀಡಿಲ್ಲ.

ಆರೋಗ್ಯ ಅಧಿಕಾರಿಗಳು ವಾಕ್ಸಿನ್ ತೆಗೆದುಕೊಂಡು ಇತರರಿಗೂ ಮಾದರಿಯಾಗಬೇಕಿತ್ತು. ಕೊವಾಕ್ಸಿನ್ ವಾಕ್ಸಿನ್ ತೆಗೆದುಕೊಂಡರೆ ಯಾವುದೇ ಅಡ್ಡಪರಿಣಾಮಗಳು ಬೀರುವುದಿಲ್ಲವೆಂಬ ಬಗ್ಗೆ ಮಾನಸಿಕ ಸ್ಥೈರ್ಯ ತುಂಬುವಂತಹ ಕೆಲಸ ಮಾಡಬೇಕಿತ್ತು. ಅದು ಮಾಡದೇ ಪೋಟೋಗಳಿಗೆ ಪೋಸ್ ನೀಡಿದರೆ ಅದು ಸೂಕ್ತ ಪರಿಹಾರವಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿವೆ.

ಆದರೆ ಈ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, “ಈ ಹಿಂದೆ ಖುದ್ದಾಗಿ ಲಸಿಕೆ ಹಾಕಿಸಿಕೊಳ್ಳಲಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ದಾಖಲಾತಿಯು ತಾಂತ್ರಿಕ ಅಂಶಗಳಿಂದ ಅಪ್‌ಲೋಡ್ ಆಗಿರುವುದಿಲ್ಲ. ಹಾಗಾಗಿ ಈ ರೀತಿ ಮಾಡಬೆಕಾಯಿತು” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...

ಉತ್ತರ ಪ್ರದೇಶ| ಕನ್ವಾರಿ ಯಾತ್ರಿಕರ ಹಲ್ಲೆಯಿಂದ ಮುಸ್ಲಿಂ ಯುವಕ ಸಾವು; ಐವರ ಬಂಧನ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಕನ್ವಾರಿ ಯಾತ್ರಿಕರ ಗುಂಪಿನಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕನ್ವಾರಿಗಳನ್ನು ಬಂಧಿಸಲಾಗಿದೆ. ಬ್ರಿಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದ ರಸ್ತೆ ಅಪಘಾತದ ನಂತರ ಮೊರಾದಾಬಾದ್...

ಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್...

“NTA ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ”: UGC-NET ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ಪತ್ರಿಕೆಗಳ ಮರುಪರೀಕ್ಷೆ ನಿರ್ಧಾರಕ್ಕೆ ದೇಶಾದ್ಯಂತ ಆಕ್ರೋಶ

ನವದೆಹಲಿ: ಕಳೆದ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ಯುಜಿಸಿ-ನೆಟ್ (UGC-NET) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಲು ಸಾಲು ಗಂಭೀರ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ...

ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ...

ಎಲ್ಲಾ ಯೋಜನೆಗಳೂ ಗುಜರಾತ್‌ಗೇ ಏಕೆ?: ಬಿಜೆಪಿ ಕೇಂದ್ರ ನಾಯಕತ್ವ ವಿರುದ್ಧವೇ ಬಹಿರಂಗವಾಗಿ ತಿರುಗಿಬಿದ್ದ ಅಣ್ಣಾಮಲೈ!

BJP ನಾಯಕತ್ವದ ನಿರ್ಧಾರಗಳು ‘ದೆಹಲಿ ಕೇಂದ್ರಿತ’ ಹಾಗೂ ದೇಶದ ಅಭಿವೃದ್ಧಿ ಮಾದರಿಯು ‘ಗುಜರಾತ್‌ ಕೇಂದ್ರಿತ’ವಾಗುತ್ತಿದೆ ಎಂದು ತಮಿಳುನಾಡು ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಸಂಘಟನೆಯ ಸಂಸ್ಥಾಪಕ ಕೆ. ಅಣ್ಣಾಮಲೈ...

ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟ; ಹೇಮಂತ್ ಸೊರೇನ್ – ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು

ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 16 ರಂದು (ಭಾನುವಾರ) ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ...

BJP ರಾಷ್ಟ್ರೀಯ ವಕ್ತಾರ ಹುದ್ದೆಗೆ ಮತ್ತೆ ರಾಜೀನಾಮೆ! ಕಾರಣ ಬಿಚ್ಚಿಟ್ಟ ಶೆಹಝಾದ್ ಪೂನಾವಾಲಾ

BJP ರಾಷ್ಟ್ರೀಯ ವಕ್ತಾರ ಶೆಹಝಾದ್ ಪೂನಾವಾಲಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ತಮ್ಮ ಹುದ್ದೆಗೆ ಮತ್ತೊಮ್ಮೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ತಕ್ಷಣವೇ ಅಂಗೀಕರಿಸುವಂತೆ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...