Homeಕರೋನಾ ತಲ್ಲಣಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

ಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

- Advertisement -
- Advertisement -

ಕೊರೊನ ವಾರಿಯರ್‌ಗಳಿಗೆ ಕೊವಾಕ್ಸಿನ್ ಚುಚ್ಚುಮದ್ದು ನೀಡುವ ಅಭಿಯಾನ ದೇಶಾದ್ಯಂತ ನಡೆಯುತ್ತಿದೆ. ಅದರಂತೆ ತುಮಕೂರು ನಗರದಲ್ಲೂ ವಾಕ್ಸಿನ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲಾ ವೈದ್ಯಾಧಿಕಾರಿ(ಡಿಎಚ್ಒ) ನಾಗೇಂದ್ರಪ್ಪ ಮತ್ತು ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ರಜನಿ ಅವರು ಫೋಟೋ ಸೆಷನ್‌ಗೆ ಫೋಜು ನೀಡಿ ಕೊವಾಕ್ಸಿನ್ ತೆಗೆದುಕೊಂಡಂತೆ ನಾಟಕ ಮಾಡಿದರು. ಈ ದೃಶ್ಯವು ವೀಡಿಯೋದಲ್ಲಿ ದಾಖಲಾಗಿದೆ.

ಕೊವಾಕ್ಸಿನ್ ಚುಚ್ಚುಮದ್ದು ತೆಗೆದುಕೊಂಡು ಇತರೆ ಕೊರೊನಾ ವಾರಿಯರ್‌ಗಳಿಗೆ ಸ್ಪೂರ್ತಿ, ಉತ್ಸಾಹ ತುಂಬ ಬೇಕಾಗಿದ್ದ ಡಿಎಚ್ಒ ನಾಗೇಂದ್ರಪ್ಪ ವಾಕ್ಸಿನ್ ತೆಗೆದುಕೊಳ್ಳುತ್ತಿರುವಂತೆ ಪೋಸ್ ನೀಡಿದರೇ ಹೊರತು ಸೂಜಿ ಸುಚ್ಚಿಸಿಕೊಳ್ಳಲೇ ಇಲ್ಲ. ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ರಜನಿಗೂ ಕೂಡ ವಾಕ್ಸಿನ್ ಕೊಡುತ್ತಿರುವಂತೆ ನಟಿಸಲಾಗಿದೆ. ಈ ವಿಡಿಯೋ ನಾನುಗೌರಿ.ಕಾಮ್‌ಗೆ ಲಭ್ಯವಿದ್ದು ಚುಚ್ಚುಮದ್ದು ಕೊಟ್ಟಂತೆ ಮಾಡಿದ ಮೇಲೆ ಚಪ್ಪಾಳೆ ತಟ್ಟಲಾಗಿದೆ.

ವಿಡಿಯೋ ನೋಡಿ►►

ಇದನ್ನೂ ಓದಿ: ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ಅವರು ವಾಕ್ಸಿನ್ ತೆಗೆದುಕೊಂಡು ಇತರರಿಗೂ ವಾಕ್ಸಿನ್ ಪಡೆಯಬಹುದೆಂಬ ಮಾಹಿತಿ ರವಾನಿಸಿದ್ದಾರೆ. ಇವರ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ಆದರೆ ಡಿಎಚ್‌ಒ ನಾಗೇಂದ್ರಪ್ಪ ಮತ್ತು ಪ್ರಾಂಶುಪಾಲೆ ವಾಕ್ಸಿನ್ ಪಡೆದಂತೆ ನಾಟಕ ಮಾಡಿರುವ ವಿಡಿಯೋ ಹರಿದಾಡುತ್ತಿದೆ. ಉನ್ನತ ಅಧಿಕಾರಿಗಳೇ ಹೀಗೆ ನಾಟಕ ಮಾಡಿ, ವಾಕ್ಸಿನ್ ತೆಗೆದುಕೊಳ್ಳಲು ಹಿಂಜರಿಕೆ ಮಾಡಿದರೆ ಕೆಳಹಂತದ ಕೊರೊನ ವಾರಿಯರ್ ಸಿಬ್ಬಂದಿಗಳು ತೆಗೆದುಕೊಳ್ಳುವುದಾದರೂ ಹೇಗೆ ಎಂಬ ಪ್ರಶ್ನೆ ಉದ್ಭವವಾಗಿದೆ.

ನಗರದಲ್ಲಿ ಪೌರಕಾರ್ಮಿಕರು ಕೊರೊನ ವ್ಯಾಪಿಸಿರುವ ಪ್ರದೇಶಗಳಲ್ಲಿ ನಿತ್ಯವೂ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ವಾಕ್ಸಿನ್ ಪ್ರಯೋಗ ಮಾಡಲಾಗುತ್ತಿದೆಯೇ ಹೊರತು ಆರೋಗ್ಯ ಅಧಿಕಾರಿಗಳಿಗೆ ವಾಕ್ಸಿನ್ ನೀಡಿಲ್ಲ. ಇದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಧಿಕಾರಿಗಳು ತಾವು ಮೊದಲು ತೆಗೆದುಕೊಂಡು ಇತರರಲ್ಲಿ ಧೈರ್ಯ ತುಂಬಬೇಕಾಗಿತ್ತು. ಆದರೆ ಆ ಕೆಲಸವನ್ನು ಮಾಡಿಲ್ಲ. ಕೊವಾಕ್ಸಿನ್ ಬಗ್ಗೆ ವೈದ್ಯಲೋಕದಲ್ಲೇ ಅಭಿಪ್ರಾಯ ಬೇಧಗಳು ಇದೆ. ಅಂತಹ ಸಂದರ್ಭದಲ್ಲಿ ಕೊರೊನ ವಾರಿಯರ್‌ಗಳ ಮೇಲೆ ಅದೂ ಕೆಳಹಂತದಲ್ಲಿ ಕೆಲಸ ಮಾಡುವವ ಮೇಲೆ ವಾಕ್ಸಿನ್ ಪ್ರಯೋಗ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಅಧಿಕಾರಿ ವರ್ಗ ಉತ್ತರ ನೀಡಿಲ್ಲ.

ಆರೋಗ್ಯ ಅಧಿಕಾರಿಗಳು ವಾಕ್ಸಿನ್ ತೆಗೆದುಕೊಂಡು ಇತರರಿಗೂ ಮಾದರಿಯಾಗಬೇಕಿತ್ತು. ಕೊವಾಕ್ಸಿನ್ ವಾಕ್ಸಿನ್ ತೆಗೆದುಕೊಂಡರೆ ಯಾವುದೇ ಅಡ್ಡಪರಿಣಾಮಗಳು ಬೀರುವುದಿಲ್ಲವೆಂಬ ಬಗ್ಗೆ ಮಾನಸಿಕ ಸ್ಥೈರ್ಯ ತುಂಬುವಂತಹ ಕೆಲಸ ಮಾಡಬೇಕಿತ್ತು. ಅದು ಮಾಡದೇ ಪೋಟೋಗಳಿಗೆ ಪೋಸ್ ನೀಡಿದರೆ ಅದು ಸೂಕ್ತ ಪರಿಹಾರವಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿವೆ.

ಆದರೆ ಈ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, “ಈ ಹಿಂದೆ ಖುದ್ದಾಗಿ ಲಸಿಕೆ ಹಾಕಿಸಿಕೊಳ್ಳಲಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ದಾಖಲಾತಿಯು ತಾಂತ್ರಿಕ ಅಂಶಗಳಿಂದ ಅಪ್‌ಲೋಡ್ ಆಗಿರುವುದಿಲ್ಲ. ಹಾಗಾಗಿ ಈ ರೀತಿ ಮಾಡಬೆಕಾಯಿತು” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...