Homeಕರೋನಾ ತಲ್ಲಣಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

ಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

- Advertisement -
- Advertisement -

ಕೊರೊನ ವಾರಿಯರ್‌ಗಳಿಗೆ ಕೊವಾಕ್ಸಿನ್ ಚುಚ್ಚುಮದ್ದು ನೀಡುವ ಅಭಿಯಾನ ದೇಶಾದ್ಯಂತ ನಡೆಯುತ್ತಿದೆ. ಅದರಂತೆ ತುಮಕೂರು ನಗರದಲ್ಲೂ ವಾಕ್ಸಿನ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲಾ ವೈದ್ಯಾಧಿಕಾರಿ(ಡಿಎಚ್ಒ) ನಾಗೇಂದ್ರಪ್ಪ ಮತ್ತು ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ರಜನಿ ಅವರು ಫೋಟೋ ಸೆಷನ್‌ಗೆ ಫೋಜು ನೀಡಿ ಕೊವಾಕ್ಸಿನ್ ತೆಗೆದುಕೊಂಡಂತೆ ನಾಟಕ ಮಾಡಿದರು. ಈ ದೃಶ್ಯವು ವೀಡಿಯೋದಲ್ಲಿ ದಾಖಲಾಗಿದೆ.

ಕೊವಾಕ್ಸಿನ್ ಚುಚ್ಚುಮದ್ದು ತೆಗೆದುಕೊಂಡು ಇತರೆ ಕೊರೊನಾ ವಾರಿಯರ್‌ಗಳಿಗೆ ಸ್ಪೂರ್ತಿ, ಉತ್ಸಾಹ ತುಂಬ ಬೇಕಾಗಿದ್ದ ಡಿಎಚ್ಒ ನಾಗೇಂದ್ರಪ್ಪ ವಾಕ್ಸಿನ್ ತೆಗೆದುಕೊಳ್ಳುತ್ತಿರುವಂತೆ ಪೋಸ್ ನೀಡಿದರೇ ಹೊರತು ಸೂಜಿ ಸುಚ್ಚಿಸಿಕೊಳ್ಳಲೇ ಇಲ್ಲ. ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ರಜನಿಗೂ ಕೂಡ ವಾಕ್ಸಿನ್ ಕೊಡುತ್ತಿರುವಂತೆ ನಟಿಸಲಾಗಿದೆ. ಈ ವಿಡಿಯೋ ನಾನುಗೌರಿ.ಕಾಮ್‌ಗೆ ಲಭ್ಯವಿದ್ದು ಚುಚ್ಚುಮದ್ದು ಕೊಟ್ಟಂತೆ ಮಾಡಿದ ಮೇಲೆ ಚಪ್ಪಾಳೆ ತಟ್ಟಲಾಗಿದೆ.

ವಿಡಿಯೋ ನೋಡಿ►►

ಇದನ್ನೂ ಓದಿ: ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ಅವರು ವಾಕ್ಸಿನ್ ತೆಗೆದುಕೊಂಡು ಇತರರಿಗೂ ವಾಕ್ಸಿನ್ ಪಡೆಯಬಹುದೆಂಬ ಮಾಹಿತಿ ರವಾನಿಸಿದ್ದಾರೆ. ಇವರ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ಆದರೆ ಡಿಎಚ್‌ಒ ನಾಗೇಂದ್ರಪ್ಪ ಮತ್ತು ಪ್ರಾಂಶುಪಾಲೆ ವಾಕ್ಸಿನ್ ಪಡೆದಂತೆ ನಾಟಕ ಮಾಡಿರುವ ವಿಡಿಯೋ ಹರಿದಾಡುತ್ತಿದೆ. ಉನ್ನತ ಅಧಿಕಾರಿಗಳೇ ಹೀಗೆ ನಾಟಕ ಮಾಡಿ, ವಾಕ್ಸಿನ್ ತೆಗೆದುಕೊಳ್ಳಲು ಹಿಂಜರಿಕೆ ಮಾಡಿದರೆ ಕೆಳಹಂತದ ಕೊರೊನ ವಾರಿಯರ್ ಸಿಬ್ಬಂದಿಗಳು ತೆಗೆದುಕೊಳ್ಳುವುದಾದರೂ ಹೇಗೆ ಎಂಬ ಪ್ರಶ್ನೆ ಉದ್ಭವವಾಗಿದೆ.

ನಗರದಲ್ಲಿ ಪೌರಕಾರ್ಮಿಕರು ಕೊರೊನ ವ್ಯಾಪಿಸಿರುವ ಪ್ರದೇಶಗಳಲ್ಲಿ ನಿತ್ಯವೂ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ವಾಕ್ಸಿನ್ ಪ್ರಯೋಗ ಮಾಡಲಾಗುತ್ತಿದೆಯೇ ಹೊರತು ಆರೋಗ್ಯ ಅಧಿಕಾರಿಗಳಿಗೆ ವಾಕ್ಸಿನ್ ನೀಡಿಲ್ಲ. ಇದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಧಿಕಾರಿಗಳು ತಾವು ಮೊದಲು ತೆಗೆದುಕೊಂಡು ಇತರರಲ್ಲಿ ಧೈರ್ಯ ತುಂಬಬೇಕಾಗಿತ್ತು. ಆದರೆ ಆ ಕೆಲಸವನ್ನು ಮಾಡಿಲ್ಲ. ಕೊವಾಕ್ಸಿನ್ ಬಗ್ಗೆ ವೈದ್ಯಲೋಕದಲ್ಲೇ ಅಭಿಪ್ರಾಯ ಬೇಧಗಳು ಇದೆ. ಅಂತಹ ಸಂದರ್ಭದಲ್ಲಿ ಕೊರೊನ ವಾರಿಯರ್‌ಗಳ ಮೇಲೆ ಅದೂ ಕೆಳಹಂತದಲ್ಲಿ ಕೆಲಸ ಮಾಡುವವ ಮೇಲೆ ವಾಕ್ಸಿನ್ ಪ್ರಯೋಗ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಅಧಿಕಾರಿ ವರ್ಗ ಉತ್ತರ ನೀಡಿಲ್ಲ.

ಆರೋಗ್ಯ ಅಧಿಕಾರಿಗಳು ವಾಕ್ಸಿನ್ ತೆಗೆದುಕೊಂಡು ಇತರರಿಗೂ ಮಾದರಿಯಾಗಬೇಕಿತ್ತು. ಕೊವಾಕ್ಸಿನ್ ವಾಕ್ಸಿನ್ ತೆಗೆದುಕೊಂಡರೆ ಯಾವುದೇ ಅಡ್ಡಪರಿಣಾಮಗಳು ಬೀರುವುದಿಲ್ಲವೆಂಬ ಬಗ್ಗೆ ಮಾನಸಿಕ ಸ್ಥೈರ್ಯ ತುಂಬುವಂತಹ ಕೆಲಸ ಮಾಡಬೇಕಿತ್ತು. ಅದು ಮಾಡದೇ ಪೋಟೋಗಳಿಗೆ ಪೋಸ್ ನೀಡಿದರೆ ಅದು ಸೂಕ್ತ ಪರಿಹಾರವಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿವೆ.

ಆದರೆ ಈ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, “ಈ ಹಿಂದೆ ಖುದ್ದಾಗಿ ಲಸಿಕೆ ಹಾಕಿಸಿಕೊಳ್ಳಲಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ದಾಖಲಾತಿಯು ತಾಂತ್ರಿಕ ಅಂಶಗಳಿಂದ ಅಪ್‌ಲೋಡ್ ಆಗಿರುವುದಿಲ್ಲ. ಹಾಗಾಗಿ ಈ ರೀತಿ ಮಾಡಬೆಕಾಯಿತು” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR

ಎನ್ಯುಮರೇಷನ್ ಫಾರಂ (ಗಣತಿ ನಮೂನೆ) ಸಲ್ಲಿಕೆ ಹಂತ ಮುಗಿದ ಬಳಿಕ (ಆ.18-19ರ ಪ್ರಕಾರ) ದೊರೆತ ಮಾಹಿತಿ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದ ಸುಮಾರು ಒಂದೂವರೆ ಕೋಟಿ (...