Homeಕರೋನಾ ತಲ್ಲಣಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

ಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

- Advertisement -
- Advertisement -

ಕೊರೊನ ವಾರಿಯರ್‌ಗಳಿಗೆ ಕೊವಾಕ್ಸಿನ್ ಚುಚ್ಚುಮದ್ದು ನೀಡುವ ಅಭಿಯಾನ ದೇಶಾದ್ಯಂತ ನಡೆಯುತ್ತಿದೆ. ಅದರಂತೆ ತುಮಕೂರು ನಗರದಲ್ಲೂ ವಾಕ್ಸಿನ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲಾ ವೈದ್ಯಾಧಿಕಾರಿ(ಡಿಎಚ್ಒ) ನಾಗೇಂದ್ರಪ್ಪ ಮತ್ತು ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ರಜನಿ ಅವರು ಫೋಟೋ ಸೆಷನ್‌ಗೆ ಫೋಜು ನೀಡಿ ಕೊವಾಕ್ಸಿನ್ ತೆಗೆದುಕೊಂಡಂತೆ ನಾಟಕ ಮಾಡಿದರು. ಈ ದೃಶ್ಯವು ವೀಡಿಯೋದಲ್ಲಿ ದಾಖಲಾಗಿದೆ.

ಕೊವಾಕ್ಸಿನ್ ಚುಚ್ಚುಮದ್ದು ತೆಗೆದುಕೊಂಡು ಇತರೆ ಕೊರೊನಾ ವಾರಿಯರ್‌ಗಳಿಗೆ ಸ್ಪೂರ್ತಿ, ಉತ್ಸಾಹ ತುಂಬ ಬೇಕಾಗಿದ್ದ ಡಿಎಚ್ಒ ನಾಗೇಂದ್ರಪ್ಪ ವಾಕ್ಸಿನ್ ತೆಗೆದುಕೊಳ್ಳುತ್ತಿರುವಂತೆ ಪೋಸ್ ನೀಡಿದರೇ ಹೊರತು ಸೂಜಿ ಸುಚ್ಚಿಸಿಕೊಳ್ಳಲೇ ಇಲ್ಲ. ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ರಜನಿಗೂ ಕೂಡ ವಾಕ್ಸಿನ್ ಕೊಡುತ್ತಿರುವಂತೆ ನಟಿಸಲಾಗಿದೆ. ಈ ವಿಡಿಯೋ ನಾನುಗೌರಿ.ಕಾಮ್‌ಗೆ ಲಭ್ಯವಿದ್ದು ಚುಚ್ಚುಮದ್ದು ಕೊಟ್ಟಂತೆ ಮಾಡಿದ ಮೇಲೆ ಚಪ್ಪಾಳೆ ತಟ್ಟಲಾಗಿದೆ.

ವಿಡಿಯೋ ನೋಡಿ►►

ಇದನ್ನೂ ಓದಿ: ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ಅವರು ವಾಕ್ಸಿನ್ ತೆಗೆದುಕೊಂಡು ಇತರರಿಗೂ ವಾಕ್ಸಿನ್ ಪಡೆಯಬಹುದೆಂಬ ಮಾಹಿತಿ ರವಾನಿಸಿದ್ದಾರೆ. ಇವರ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ಆದರೆ ಡಿಎಚ್‌ಒ ನಾಗೇಂದ್ರಪ್ಪ ಮತ್ತು ಪ್ರಾಂಶುಪಾಲೆ ವಾಕ್ಸಿನ್ ಪಡೆದಂತೆ ನಾಟಕ ಮಾಡಿರುವ ವಿಡಿಯೋ ಹರಿದಾಡುತ್ತಿದೆ. ಉನ್ನತ ಅಧಿಕಾರಿಗಳೇ ಹೀಗೆ ನಾಟಕ ಮಾಡಿ, ವಾಕ್ಸಿನ್ ತೆಗೆದುಕೊಳ್ಳಲು ಹಿಂಜರಿಕೆ ಮಾಡಿದರೆ ಕೆಳಹಂತದ ಕೊರೊನ ವಾರಿಯರ್ ಸಿಬ್ಬಂದಿಗಳು ತೆಗೆದುಕೊಳ್ಳುವುದಾದರೂ ಹೇಗೆ ಎಂಬ ಪ್ರಶ್ನೆ ಉದ್ಭವವಾಗಿದೆ.

ನಗರದಲ್ಲಿ ಪೌರಕಾರ್ಮಿಕರು ಕೊರೊನ ವ್ಯಾಪಿಸಿರುವ ಪ್ರದೇಶಗಳಲ್ಲಿ ನಿತ್ಯವೂ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ವಾಕ್ಸಿನ್ ಪ್ರಯೋಗ ಮಾಡಲಾಗುತ್ತಿದೆಯೇ ಹೊರತು ಆರೋಗ್ಯ ಅಧಿಕಾರಿಗಳಿಗೆ ವಾಕ್ಸಿನ್ ನೀಡಿಲ್ಲ. ಇದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಧಿಕಾರಿಗಳು ತಾವು ಮೊದಲು ತೆಗೆದುಕೊಂಡು ಇತರರಲ್ಲಿ ಧೈರ್ಯ ತುಂಬಬೇಕಾಗಿತ್ತು. ಆದರೆ ಆ ಕೆಲಸವನ್ನು ಮಾಡಿಲ್ಲ. ಕೊವಾಕ್ಸಿನ್ ಬಗ್ಗೆ ವೈದ್ಯಲೋಕದಲ್ಲೇ ಅಭಿಪ್ರಾಯ ಬೇಧಗಳು ಇದೆ. ಅಂತಹ ಸಂದರ್ಭದಲ್ಲಿ ಕೊರೊನ ವಾರಿಯರ್‌ಗಳ ಮೇಲೆ ಅದೂ ಕೆಳಹಂತದಲ್ಲಿ ಕೆಲಸ ಮಾಡುವವ ಮೇಲೆ ವಾಕ್ಸಿನ್ ಪ್ರಯೋಗ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಅಧಿಕಾರಿ ವರ್ಗ ಉತ್ತರ ನೀಡಿಲ್ಲ.

ಆರೋಗ್ಯ ಅಧಿಕಾರಿಗಳು ವಾಕ್ಸಿನ್ ತೆಗೆದುಕೊಂಡು ಇತರರಿಗೂ ಮಾದರಿಯಾಗಬೇಕಿತ್ತು. ಕೊವಾಕ್ಸಿನ್ ವಾಕ್ಸಿನ್ ತೆಗೆದುಕೊಂಡರೆ ಯಾವುದೇ ಅಡ್ಡಪರಿಣಾಮಗಳು ಬೀರುವುದಿಲ್ಲವೆಂಬ ಬಗ್ಗೆ ಮಾನಸಿಕ ಸ್ಥೈರ್ಯ ತುಂಬುವಂತಹ ಕೆಲಸ ಮಾಡಬೇಕಿತ್ತು. ಅದು ಮಾಡದೇ ಪೋಟೋಗಳಿಗೆ ಪೋಸ್ ನೀಡಿದರೆ ಅದು ಸೂಕ್ತ ಪರಿಹಾರವಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿವೆ.

ಆದರೆ ಈ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, “ಈ ಹಿಂದೆ ಖುದ್ದಾಗಿ ಲಸಿಕೆ ಹಾಕಿಸಿಕೊಳ್ಳಲಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ದಾಖಲಾತಿಯು ತಾಂತ್ರಿಕ ಅಂಶಗಳಿಂದ ಅಪ್‌ಲೋಡ್ ಆಗಿರುವುದಿಲ್ಲ. ಹಾಗಾಗಿ ಈ ರೀತಿ ಮಾಡಬೆಕಾಯಿತು” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...