Homeಕರೋನಾ ತಲ್ಲಣಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

ಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

- Advertisement -
- Advertisement -

ಕೊರೊನ ವಾರಿಯರ್‌ಗಳಿಗೆ ಕೊವಾಕ್ಸಿನ್ ಚುಚ್ಚುಮದ್ದು ನೀಡುವ ಅಭಿಯಾನ ದೇಶಾದ್ಯಂತ ನಡೆಯುತ್ತಿದೆ. ಅದರಂತೆ ತುಮಕೂರು ನಗರದಲ್ಲೂ ವಾಕ್ಸಿನ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲಾ ವೈದ್ಯಾಧಿಕಾರಿ(ಡಿಎಚ್ಒ) ನಾಗೇಂದ್ರಪ್ಪ ಮತ್ತು ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ರಜನಿ ಅವರು ಫೋಟೋ ಸೆಷನ್‌ಗೆ ಫೋಜು ನೀಡಿ ಕೊವಾಕ್ಸಿನ್ ತೆಗೆದುಕೊಂಡಂತೆ ನಾಟಕ ಮಾಡಿದರು. ಈ ದೃಶ್ಯವು ವೀಡಿಯೋದಲ್ಲಿ ದಾಖಲಾಗಿದೆ.

ಕೊವಾಕ್ಸಿನ್ ಚುಚ್ಚುಮದ್ದು ತೆಗೆದುಕೊಂಡು ಇತರೆ ಕೊರೊನಾ ವಾರಿಯರ್‌ಗಳಿಗೆ ಸ್ಪೂರ್ತಿ, ಉತ್ಸಾಹ ತುಂಬ ಬೇಕಾಗಿದ್ದ ಡಿಎಚ್ಒ ನಾಗೇಂದ್ರಪ್ಪ ವಾಕ್ಸಿನ್ ತೆಗೆದುಕೊಳ್ಳುತ್ತಿರುವಂತೆ ಪೋಸ್ ನೀಡಿದರೇ ಹೊರತು ಸೂಜಿ ಸುಚ್ಚಿಸಿಕೊಳ್ಳಲೇ ಇಲ್ಲ. ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ರಜನಿಗೂ ಕೂಡ ವಾಕ್ಸಿನ್ ಕೊಡುತ್ತಿರುವಂತೆ ನಟಿಸಲಾಗಿದೆ. ಈ ವಿಡಿಯೋ ನಾನುಗೌರಿ.ಕಾಮ್‌ಗೆ ಲಭ್ಯವಿದ್ದು ಚುಚ್ಚುಮದ್ದು ಕೊಟ್ಟಂತೆ ಮಾಡಿದ ಮೇಲೆ ಚಪ್ಪಾಳೆ ತಟ್ಟಲಾಗಿದೆ.

ವಿಡಿಯೋ ನೋಡಿ►►

ಇದನ್ನೂ ಓದಿ: ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ಅವರು ವಾಕ್ಸಿನ್ ತೆಗೆದುಕೊಂಡು ಇತರರಿಗೂ ವಾಕ್ಸಿನ್ ಪಡೆಯಬಹುದೆಂಬ ಮಾಹಿತಿ ರವಾನಿಸಿದ್ದಾರೆ. ಇವರ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ಆದರೆ ಡಿಎಚ್‌ಒ ನಾಗೇಂದ್ರಪ್ಪ ಮತ್ತು ಪ್ರಾಂಶುಪಾಲೆ ವಾಕ್ಸಿನ್ ಪಡೆದಂತೆ ನಾಟಕ ಮಾಡಿರುವ ವಿಡಿಯೋ ಹರಿದಾಡುತ್ತಿದೆ. ಉನ್ನತ ಅಧಿಕಾರಿಗಳೇ ಹೀಗೆ ನಾಟಕ ಮಾಡಿ, ವಾಕ್ಸಿನ್ ತೆಗೆದುಕೊಳ್ಳಲು ಹಿಂಜರಿಕೆ ಮಾಡಿದರೆ ಕೆಳಹಂತದ ಕೊರೊನ ವಾರಿಯರ್ ಸಿಬ್ಬಂದಿಗಳು ತೆಗೆದುಕೊಳ್ಳುವುದಾದರೂ ಹೇಗೆ ಎಂಬ ಪ್ರಶ್ನೆ ಉದ್ಭವವಾಗಿದೆ.

ನಗರದಲ್ಲಿ ಪೌರಕಾರ್ಮಿಕರು ಕೊರೊನ ವ್ಯಾಪಿಸಿರುವ ಪ್ರದೇಶಗಳಲ್ಲಿ ನಿತ್ಯವೂ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ವಾಕ್ಸಿನ್ ಪ್ರಯೋಗ ಮಾಡಲಾಗುತ್ತಿದೆಯೇ ಹೊರತು ಆರೋಗ್ಯ ಅಧಿಕಾರಿಗಳಿಗೆ ವಾಕ್ಸಿನ್ ನೀಡಿಲ್ಲ. ಇದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಧಿಕಾರಿಗಳು ತಾವು ಮೊದಲು ತೆಗೆದುಕೊಂಡು ಇತರರಲ್ಲಿ ಧೈರ್ಯ ತುಂಬಬೇಕಾಗಿತ್ತು. ಆದರೆ ಆ ಕೆಲಸವನ್ನು ಮಾಡಿಲ್ಲ. ಕೊವಾಕ್ಸಿನ್ ಬಗ್ಗೆ ವೈದ್ಯಲೋಕದಲ್ಲೇ ಅಭಿಪ್ರಾಯ ಬೇಧಗಳು ಇದೆ. ಅಂತಹ ಸಂದರ್ಭದಲ್ಲಿ ಕೊರೊನ ವಾರಿಯರ್‌ಗಳ ಮೇಲೆ ಅದೂ ಕೆಳಹಂತದಲ್ಲಿ ಕೆಲಸ ಮಾಡುವವ ಮೇಲೆ ವಾಕ್ಸಿನ್ ಪ್ರಯೋಗ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಅಧಿಕಾರಿ ವರ್ಗ ಉತ್ತರ ನೀಡಿಲ್ಲ.

ಆರೋಗ್ಯ ಅಧಿಕಾರಿಗಳು ವಾಕ್ಸಿನ್ ತೆಗೆದುಕೊಂಡು ಇತರರಿಗೂ ಮಾದರಿಯಾಗಬೇಕಿತ್ತು. ಕೊವಾಕ್ಸಿನ್ ವಾಕ್ಸಿನ್ ತೆಗೆದುಕೊಂಡರೆ ಯಾವುದೇ ಅಡ್ಡಪರಿಣಾಮಗಳು ಬೀರುವುದಿಲ್ಲವೆಂಬ ಬಗ್ಗೆ ಮಾನಸಿಕ ಸ್ಥೈರ್ಯ ತುಂಬುವಂತಹ ಕೆಲಸ ಮಾಡಬೇಕಿತ್ತು. ಅದು ಮಾಡದೇ ಪೋಟೋಗಳಿಗೆ ಪೋಸ್ ನೀಡಿದರೆ ಅದು ಸೂಕ್ತ ಪರಿಹಾರವಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿವೆ.

ಆದರೆ ಈ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, “ಈ ಹಿಂದೆ ಖುದ್ದಾಗಿ ಲಸಿಕೆ ಹಾಕಿಸಿಕೊಳ್ಳಲಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ದಾಖಲಾತಿಯು ತಾಂತ್ರಿಕ ಅಂಶಗಳಿಂದ ಅಪ್‌ಲೋಡ್ ಆಗಿರುವುದಿಲ್ಲ. ಹಾಗಾಗಿ ಈ ರೀತಿ ಮಾಡಬೆಕಾಯಿತು” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...