Homeಕರೋನಾ ತಲ್ಲಣಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

ಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

- Advertisement -
- Advertisement -

ಕೊರೊನ ವಾರಿಯರ್‌ಗಳಿಗೆ ಕೊವಾಕ್ಸಿನ್ ಚುಚ್ಚುಮದ್ದು ನೀಡುವ ಅಭಿಯಾನ ದೇಶಾದ್ಯಂತ ನಡೆಯುತ್ತಿದೆ. ಅದರಂತೆ ತುಮಕೂರು ನಗರದಲ್ಲೂ ವಾಕ್ಸಿನ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲಾ ವೈದ್ಯಾಧಿಕಾರಿ(ಡಿಎಚ್ಒ) ನಾಗೇಂದ್ರಪ್ಪ ಮತ್ತು ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ರಜನಿ ಅವರು ಫೋಟೋ ಸೆಷನ್‌ಗೆ ಫೋಜು ನೀಡಿ ಕೊವಾಕ್ಸಿನ್ ತೆಗೆದುಕೊಂಡಂತೆ ನಾಟಕ ಮಾಡಿದರು. ಈ ದೃಶ್ಯವು ವೀಡಿಯೋದಲ್ಲಿ ದಾಖಲಾಗಿದೆ.

ಕೊವಾಕ್ಸಿನ್ ಚುಚ್ಚುಮದ್ದು ತೆಗೆದುಕೊಂಡು ಇತರೆ ಕೊರೊನಾ ವಾರಿಯರ್‌ಗಳಿಗೆ ಸ್ಪೂರ್ತಿ, ಉತ್ಸಾಹ ತುಂಬ ಬೇಕಾಗಿದ್ದ ಡಿಎಚ್ಒ ನಾಗೇಂದ್ರಪ್ಪ ವಾಕ್ಸಿನ್ ತೆಗೆದುಕೊಳ್ಳುತ್ತಿರುವಂತೆ ಪೋಸ್ ನೀಡಿದರೇ ಹೊರತು ಸೂಜಿ ಸುಚ್ಚಿಸಿಕೊಳ್ಳಲೇ ಇಲ್ಲ. ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ರಜನಿಗೂ ಕೂಡ ವಾಕ್ಸಿನ್ ಕೊಡುತ್ತಿರುವಂತೆ ನಟಿಸಲಾಗಿದೆ. ಈ ವಿಡಿಯೋ ನಾನುಗೌರಿ.ಕಾಮ್‌ಗೆ ಲಭ್ಯವಿದ್ದು ಚುಚ್ಚುಮದ್ದು ಕೊಟ್ಟಂತೆ ಮಾಡಿದ ಮೇಲೆ ಚಪ್ಪಾಳೆ ತಟ್ಟಲಾಗಿದೆ.

ವಿಡಿಯೋ ನೋಡಿ►►

ಇದನ್ನೂ ಓದಿ: ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ಅವರು ವಾಕ್ಸಿನ್ ತೆಗೆದುಕೊಂಡು ಇತರರಿಗೂ ವಾಕ್ಸಿನ್ ಪಡೆಯಬಹುದೆಂಬ ಮಾಹಿತಿ ರವಾನಿಸಿದ್ದಾರೆ. ಇವರ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ಆದರೆ ಡಿಎಚ್‌ಒ ನಾಗೇಂದ್ರಪ್ಪ ಮತ್ತು ಪ್ರಾಂಶುಪಾಲೆ ವಾಕ್ಸಿನ್ ಪಡೆದಂತೆ ನಾಟಕ ಮಾಡಿರುವ ವಿಡಿಯೋ ಹರಿದಾಡುತ್ತಿದೆ. ಉನ್ನತ ಅಧಿಕಾರಿಗಳೇ ಹೀಗೆ ನಾಟಕ ಮಾಡಿ, ವಾಕ್ಸಿನ್ ತೆಗೆದುಕೊಳ್ಳಲು ಹಿಂಜರಿಕೆ ಮಾಡಿದರೆ ಕೆಳಹಂತದ ಕೊರೊನ ವಾರಿಯರ್ ಸಿಬ್ಬಂದಿಗಳು ತೆಗೆದುಕೊಳ್ಳುವುದಾದರೂ ಹೇಗೆ ಎಂಬ ಪ್ರಶ್ನೆ ಉದ್ಭವವಾಗಿದೆ.

ನಗರದಲ್ಲಿ ಪೌರಕಾರ್ಮಿಕರು ಕೊರೊನ ವ್ಯಾಪಿಸಿರುವ ಪ್ರದೇಶಗಳಲ್ಲಿ ನಿತ್ಯವೂ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ವಾಕ್ಸಿನ್ ಪ್ರಯೋಗ ಮಾಡಲಾಗುತ್ತಿದೆಯೇ ಹೊರತು ಆರೋಗ್ಯ ಅಧಿಕಾರಿಗಳಿಗೆ ವಾಕ್ಸಿನ್ ನೀಡಿಲ್ಲ. ಇದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಧಿಕಾರಿಗಳು ತಾವು ಮೊದಲು ತೆಗೆದುಕೊಂಡು ಇತರರಲ್ಲಿ ಧೈರ್ಯ ತುಂಬಬೇಕಾಗಿತ್ತು. ಆದರೆ ಆ ಕೆಲಸವನ್ನು ಮಾಡಿಲ್ಲ. ಕೊವಾಕ್ಸಿನ್ ಬಗ್ಗೆ ವೈದ್ಯಲೋಕದಲ್ಲೇ ಅಭಿಪ್ರಾಯ ಬೇಧಗಳು ಇದೆ. ಅಂತಹ ಸಂದರ್ಭದಲ್ಲಿ ಕೊರೊನ ವಾರಿಯರ್‌ಗಳ ಮೇಲೆ ಅದೂ ಕೆಳಹಂತದಲ್ಲಿ ಕೆಲಸ ಮಾಡುವವ ಮೇಲೆ ವಾಕ್ಸಿನ್ ಪ್ರಯೋಗ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಅಧಿಕಾರಿ ವರ್ಗ ಉತ್ತರ ನೀಡಿಲ್ಲ.

ಆರೋಗ್ಯ ಅಧಿಕಾರಿಗಳು ವಾಕ್ಸಿನ್ ತೆಗೆದುಕೊಂಡು ಇತರರಿಗೂ ಮಾದರಿಯಾಗಬೇಕಿತ್ತು. ಕೊವಾಕ್ಸಿನ್ ವಾಕ್ಸಿನ್ ತೆಗೆದುಕೊಂಡರೆ ಯಾವುದೇ ಅಡ್ಡಪರಿಣಾಮಗಳು ಬೀರುವುದಿಲ್ಲವೆಂಬ ಬಗ್ಗೆ ಮಾನಸಿಕ ಸ್ಥೈರ್ಯ ತುಂಬುವಂತಹ ಕೆಲಸ ಮಾಡಬೇಕಿತ್ತು. ಅದು ಮಾಡದೇ ಪೋಟೋಗಳಿಗೆ ಪೋಸ್ ನೀಡಿದರೆ ಅದು ಸೂಕ್ತ ಪರಿಹಾರವಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿವೆ.

ಆದರೆ ಈ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, “ಈ ಹಿಂದೆ ಖುದ್ದಾಗಿ ಲಸಿಕೆ ಹಾಕಿಸಿಕೊಳ್ಳಲಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ದಾಖಲಾತಿಯು ತಾಂತ್ರಿಕ ಅಂಶಗಳಿಂದ ಅಪ್‌ಲೋಡ್ ಆಗಿರುವುದಿಲ್ಲ. ಹಾಗಾಗಿ ಈ ರೀತಿ ಮಾಡಬೆಕಾಯಿತು” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...