Homeಕರೋನಾ ತಲ್ಲಣಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

ಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

- Advertisement -
- Advertisement -

ಕೊರೊನ ವಾರಿಯರ್‌ಗಳಿಗೆ ಕೊವಾಕ್ಸಿನ್ ಚುಚ್ಚುಮದ್ದು ನೀಡುವ ಅಭಿಯಾನ ದೇಶಾದ್ಯಂತ ನಡೆಯುತ್ತಿದೆ. ಅದರಂತೆ ತುಮಕೂರು ನಗರದಲ್ಲೂ ವಾಕ್ಸಿನ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲಾ ವೈದ್ಯಾಧಿಕಾರಿ(ಡಿಎಚ್ಒ) ನಾಗೇಂದ್ರಪ್ಪ ಮತ್ತು ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ರಜನಿ ಅವರು ಫೋಟೋ ಸೆಷನ್‌ಗೆ ಫೋಜು ನೀಡಿ ಕೊವಾಕ್ಸಿನ್ ತೆಗೆದುಕೊಂಡಂತೆ ನಾಟಕ ಮಾಡಿದರು. ಈ ದೃಶ್ಯವು ವೀಡಿಯೋದಲ್ಲಿ ದಾಖಲಾಗಿದೆ.

ಕೊವಾಕ್ಸಿನ್ ಚುಚ್ಚುಮದ್ದು ತೆಗೆದುಕೊಂಡು ಇತರೆ ಕೊರೊನಾ ವಾರಿಯರ್‌ಗಳಿಗೆ ಸ್ಪೂರ್ತಿ, ಉತ್ಸಾಹ ತುಂಬ ಬೇಕಾಗಿದ್ದ ಡಿಎಚ್ಒ ನಾಗೇಂದ್ರಪ್ಪ ವಾಕ್ಸಿನ್ ತೆಗೆದುಕೊಳ್ಳುತ್ತಿರುವಂತೆ ಪೋಸ್ ನೀಡಿದರೇ ಹೊರತು ಸೂಜಿ ಸುಚ್ಚಿಸಿಕೊಳ್ಳಲೇ ಇಲ್ಲ. ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ರಜನಿಗೂ ಕೂಡ ವಾಕ್ಸಿನ್ ಕೊಡುತ್ತಿರುವಂತೆ ನಟಿಸಲಾಗಿದೆ. ಈ ವಿಡಿಯೋ ನಾನುಗೌರಿ.ಕಾಮ್‌ಗೆ ಲಭ್ಯವಿದ್ದು ಚುಚ್ಚುಮದ್ದು ಕೊಟ್ಟಂತೆ ಮಾಡಿದ ಮೇಲೆ ಚಪ್ಪಾಳೆ ತಟ್ಟಲಾಗಿದೆ.

ವಿಡಿಯೋ ನೋಡಿ►►

ಇದನ್ನೂ ಓದಿ: ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ಅವರು ವಾಕ್ಸಿನ್ ತೆಗೆದುಕೊಂಡು ಇತರರಿಗೂ ವಾಕ್ಸಿನ್ ಪಡೆಯಬಹುದೆಂಬ ಮಾಹಿತಿ ರವಾನಿಸಿದ್ದಾರೆ. ಇವರ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ಆದರೆ ಡಿಎಚ್‌ಒ ನಾಗೇಂದ್ರಪ್ಪ ಮತ್ತು ಪ್ರಾಂಶುಪಾಲೆ ವಾಕ್ಸಿನ್ ಪಡೆದಂತೆ ನಾಟಕ ಮಾಡಿರುವ ವಿಡಿಯೋ ಹರಿದಾಡುತ್ತಿದೆ. ಉನ್ನತ ಅಧಿಕಾರಿಗಳೇ ಹೀಗೆ ನಾಟಕ ಮಾಡಿ, ವಾಕ್ಸಿನ್ ತೆಗೆದುಕೊಳ್ಳಲು ಹಿಂಜರಿಕೆ ಮಾಡಿದರೆ ಕೆಳಹಂತದ ಕೊರೊನ ವಾರಿಯರ್ ಸಿಬ್ಬಂದಿಗಳು ತೆಗೆದುಕೊಳ್ಳುವುದಾದರೂ ಹೇಗೆ ಎಂಬ ಪ್ರಶ್ನೆ ಉದ್ಭವವಾಗಿದೆ.

ನಗರದಲ್ಲಿ ಪೌರಕಾರ್ಮಿಕರು ಕೊರೊನ ವ್ಯಾಪಿಸಿರುವ ಪ್ರದೇಶಗಳಲ್ಲಿ ನಿತ್ಯವೂ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ವಾಕ್ಸಿನ್ ಪ್ರಯೋಗ ಮಾಡಲಾಗುತ್ತಿದೆಯೇ ಹೊರತು ಆರೋಗ್ಯ ಅಧಿಕಾರಿಗಳಿಗೆ ವಾಕ್ಸಿನ್ ನೀಡಿಲ್ಲ. ಇದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಧಿಕಾರಿಗಳು ತಾವು ಮೊದಲು ತೆಗೆದುಕೊಂಡು ಇತರರಲ್ಲಿ ಧೈರ್ಯ ತುಂಬಬೇಕಾಗಿತ್ತು. ಆದರೆ ಆ ಕೆಲಸವನ್ನು ಮಾಡಿಲ್ಲ. ಕೊವಾಕ್ಸಿನ್ ಬಗ್ಗೆ ವೈದ್ಯಲೋಕದಲ್ಲೇ ಅಭಿಪ್ರಾಯ ಬೇಧಗಳು ಇದೆ. ಅಂತಹ ಸಂದರ್ಭದಲ್ಲಿ ಕೊರೊನ ವಾರಿಯರ್‌ಗಳ ಮೇಲೆ ಅದೂ ಕೆಳಹಂತದಲ್ಲಿ ಕೆಲಸ ಮಾಡುವವ ಮೇಲೆ ವಾಕ್ಸಿನ್ ಪ್ರಯೋಗ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಅಧಿಕಾರಿ ವರ್ಗ ಉತ್ತರ ನೀಡಿಲ್ಲ.

ಆರೋಗ್ಯ ಅಧಿಕಾರಿಗಳು ವಾಕ್ಸಿನ್ ತೆಗೆದುಕೊಂಡು ಇತರರಿಗೂ ಮಾದರಿಯಾಗಬೇಕಿತ್ತು. ಕೊವಾಕ್ಸಿನ್ ವಾಕ್ಸಿನ್ ತೆಗೆದುಕೊಂಡರೆ ಯಾವುದೇ ಅಡ್ಡಪರಿಣಾಮಗಳು ಬೀರುವುದಿಲ್ಲವೆಂಬ ಬಗ್ಗೆ ಮಾನಸಿಕ ಸ್ಥೈರ್ಯ ತುಂಬುವಂತಹ ಕೆಲಸ ಮಾಡಬೇಕಿತ್ತು. ಅದು ಮಾಡದೇ ಪೋಟೋಗಳಿಗೆ ಪೋಸ್ ನೀಡಿದರೆ ಅದು ಸೂಕ್ತ ಪರಿಹಾರವಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿವೆ.

ಆದರೆ ಈ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, “ಈ ಹಿಂದೆ ಖುದ್ದಾಗಿ ಲಸಿಕೆ ಹಾಕಿಸಿಕೊಳ್ಳಲಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ದಾಖಲಾತಿಯು ತಾಂತ್ರಿಕ ಅಂಶಗಳಿಂದ ಅಪ್‌ಲೋಡ್ ಆಗಿರುವುದಿಲ್ಲ. ಹಾಗಾಗಿ ಈ ರೀತಿ ಮಾಡಬೆಕಾಯಿತು” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...