Homeಕರೋನಾ ತಲ್ಲಣಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

ಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

- Advertisement -
- Advertisement -

ಕೊರೊನ ವಾರಿಯರ್‌ಗಳಿಗೆ ಕೊವಾಕ್ಸಿನ್ ಚುಚ್ಚುಮದ್ದು ನೀಡುವ ಅಭಿಯಾನ ದೇಶಾದ್ಯಂತ ನಡೆಯುತ್ತಿದೆ. ಅದರಂತೆ ತುಮಕೂರು ನಗರದಲ್ಲೂ ವಾಕ್ಸಿನ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲಾ ವೈದ್ಯಾಧಿಕಾರಿ(ಡಿಎಚ್ಒ) ನಾಗೇಂದ್ರಪ್ಪ ಮತ್ತು ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ರಜನಿ ಅವರು ಫೋಟೋ ಸೆಷನ್‌ಗೆ ಫೋಜು ನೀಡಿ ಕೊವಾಕ್ಸಿನ್ ತೆಗೆದುಕೊಂಡಂತೆ ನಾಟಕ ಮಾಡಿದರು. ಈ ದೃಶ್ಯವು ವೀಡಿಯೋದಲ್ಲಿ ದಾಖಲಾಗಿದೆ.

ಕೊವಾಕ್ಸಿನ್ ಚುಚ್ಚುಮದ್ದು ತೆಗೆದುಕೊಂಡು ಇತರೆ ಕೊರೊನಾ ವಾರಿಯರ್‌ಗಳಿಗೆ ಸ್ಪೂರ್ತಿ, ಉತ್ಸಾಹ ತುಂಬ ಬೇಕಾಗಿದ್ದ ಡಿಎಚ್ಒ ನಾಗೇಂದ್ರಪ್ಪ ವಾಕ್ಸಿನ್ ತೆಗೆದುಕೊಳ್ಳುತ್ತಿರುವಂತೆ ಪೋಸ್ ನೀಡಿದರೇ ಹೊರತು ಸೂಜಿ ಸುಚ್ಚಿಸಿಕೊಳ್ಳಲೇ ಇಲ್ಲ. ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ರಜನಿಗೂ ಕೂಡ ವಾಕ್ಸಿನ್ ಕೊಡುತ್ತಿರುವಂತೆ ನಟಿಸಲಾಗಿದೆ. ಈ ವಿಡಿಯೋ ನಾನುಗೌರಿ.ಕಾಮ್‌ಗೆ ಲಭ್ಯವಿದ್ದು ಚುಚ್ಚುಮದ್ದು ಕೊಟ್ಟಂತೆ ಮಾಡಿದ ಮೇಲೆ ಚಪ್ಪಾಳೆ ತಟ್ಟಲಾಗಿದೆ.

ವಿಡಿಯೋ ನೋಡಿ►►

ಇದನ್ನೂ ಓದಿ: ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ಅವರು ವಾಕ್ಸಿನ್ ತೆಗೆದುಕೊಂಡು ಇತರರಿಗೂ ವಾಕ್ಸಿನ್ ಪಡೆಯಬಹುದೆಂಬ ಮಾಹಿತಿ ರವಾನಿಸಿದ್ದಾರೆ. ಇವರ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ಆದರೆ ಡಿಎಚ್‌ಒ ನಾಗೇಂದ್ರಪ್ಪ ಮತ್ತು ಪ್ರಾಂಶುಪಾಲೆ ವಾಕ್ಸಿನ್ ಪಡೆದಂತೆ ನಾಟಕ ಮಾಡಿರುವ ವಿಡಿಯೋ ಹರಿದಾಡುತ್ತಿದೆ. ಉನ್ನತ ಅಧಿಕಾರಿಗಳೇ ಹೀಗೆ ನಾಟಕ ಮಾಡಿ, ವಾಕ್ಸಿನ್ ತೆಗೆದುಕೊಳ್ಳಲು ಹಿಂಜರಿಕೆ ಮಾಡಿದರೆ ಕೆಳಹಂತದ ಕೊರೊನ ವಾರಿಯರ್ ಸಿಬ್ಬಂದಿಗಳು ತೆಗೆದುಕೊಳ್ಳುವುದಾದರೂ ಹೇಗೆ ಎಂಬ ಪ್ರಶ್ನೆ ಉದ್ಭವವಾಗಿದೆ.

ನಗರದಲ್ಲಿ ಪೌರಕಾರ್ಮಿಕರು ಕೊರೊನ ವ್ಯಾಪಿಸಿರುವ ಪ್ರದೇಶಗಳಲ್ಲಿ ನಿತ್ಯವೂ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ವಾಕ್ಸಿನ್ ಪ್ರಯೋಗ ಮಾಡಲಾಗುತ್ತಿದೆಯೇ ಹೊರತು ಆರೋಗ್ಯ ಅಧಿಕಾರಿಗಳಿಗೆ ವಾಕ್ಸಿನ್ ನೀಡಿಲ್ಲ. ಇದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಧಿಕಾರಿಗಳು ತಾವು ಮೊದಲು ತೆಗೆದುಕೊಂಡು ಇತರರಲ್ಲಿ ಧೈರ್ಯ ತುಂಬಬೇಕಾಗಿತ್ತು. ಆದರೆ ಆ ಕೆಲಸವನ್ನು ಮಾಡಿಲ್ಲ. ಕೊವಾಕ್ಸಿನ್ ಬಗ್ಗೆ ವೈದ್ಯಲೋಕದಲ್ಲೇ ಅಭಿಪ್ರಾಯ ಬೇಧಗಳು ಇದೆ. ಅಂತಹ ಸಂದರ್ಭದಲ್ಲಿ ಕೊರೊನ ವಾರಿಯರ್‌ಗಳ ಮೇಲೆ ಅದೂ ಕೆಳಹಂತದಲ್ಲಿ ಕೆಲಸ ಮಾಡುವವ ಮೇಲೆ ವಾಕ್ಸಿನ್ ಪ್ರಯೋಗ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಅಧಿಕಾರಿ ವರ್ಗ ಉತ್ತರ ನೀಡಿಲ್ಲ.

ಆರೋಗ್ಯ ಅಧಿಕಾರಿಗಳು ವಾಕ್ಸಿನ್ ತೆಗೆದುಕೊಂಡು ಇತರರಿಗೂ ಮಾದರಿಯಾಗಬೇಕಿತ್ತು. ಕೊವಾಕ್ಸಿನ್ ವಾಕ್ಸಿನ್ ತೆಗೆದುಕೊಂಡರೆ ಯಾವುದೇ ಅಡ್ಡಪರಿಣಾಮಗಳು ಬೀರುವುದಿಲ್ಲವೆಂಬ ಬಗ್ಗೆ ಮಾನಸಿಕ ಸ್ಥೈರ್ಯ ತುಂಬುವಂತಹ ಕೆಲಸ ಮಾಡಬೇಕಿತ್ತು. ಅದು ಮಾಡದೇ ಪೋಟೋಗಳಿಗೆ ಪೋಸ್ ನೀಡಿದರೆ ಅದು ಸೂಕ್ತ ಪರಿಹಾರವಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿವೆ.

ಆದರೆ ಈ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, “ಈ ಹಿಂದೆ ಖುದ್ದಾಗಿ ಲಸಿಕೆ ಹಾಕಿಸಿಕೊಳ್ಳಲಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ದಾಖಲಾತಿಯು ತಾಂತ್ರಿಕ ಅಂಶಗಳಿಂದ ಅಪ್‌ಲೋಡ್ ಆಗಿರುವುದಿಲ್ಲ. ಹಾಗಾಗಿ ಈ ರೀತಿ ಮಾಡಬೆಕಾಯಿತು” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...