Homeಕರೋನಾ ತಲ್ಲಣಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

ಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?

- Advertisement -
- Advertisement -

ಕೊರೊನ ವಾರಿಯರ್‌ಗಳಿಗೆ ಕೊವಾಕ್ಸಿನ್ ಚುಚ್ಚುಮದ್ದು ನೀಡುವ ಅಭಿಯಾನ ದೇಶಾದ್ಯಂತ ನಡೆಯುತ್ತಿದೆ. ಅದರಂತೆ ತುಮಕೂರು ನಗರದಲ್ಲೂ ವಾಕ್ಸಿನ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲಾ ವೈದ್ಯಾಧಿಕಾರಿ(ಡಿಎಚ್ಒ) ನಾಗೇಂದ್ರಪ್ಪ ಮತ್ತು ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ರಜನಿ ಅವರು ಫೋಟೋ ಸೆಷನ್‌ಗೆ ಫೋಜು ನೀಡಿ ಕೊವಾಕ್ಸಿನ್ ತೆಗೆದುಕೊಂಡಂತೆ ನಾಟಕ ಮಾಡಿದರು. ಈ ದೃಶ್ಯವು ವೀಡಿಯೋದಲ್ಲಿ ದಾಖಲಾಗಿದೆ.

ಕೊವಾಕ್ಸಿನ್ ಚುಚ್ಚುಮದ್ದು ತೆಗೆದುಕೊಂಡು ಇತರೆ ಕೊರೊನಾ ವಾರಿಯರ್‌ಗಳಿಗೆ ಸ್ಪೂರ್ತಿ, ಉತ್ಸಾಹ ತುಂಬ ಬೇಕಾಗಿದ್ದ ಡಿಎಚ್ಒ ನಾಗೇಂದ್ರಪ್ಪ ವಾಕ್ಸಿನ್ ತೆಗೆದುಕೊಳ್ಳುತ್ತಿರುವಂತೆ ಪೋಸ್ ನೀಡಿದರೇ ಹೊರತು ಸೂಜಿ ಸುಚ್ಚಿಸಿಕೊಳ್ಳಲೇ ಇಲ್ಲ. ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ರಜನಿಗೂ ಕೂಡ ವಾಕ್ಸಿನ್ ಕೊಡುತ್ತಿರುವಂತೆ ನಟಿಸಲಾಗಿದೆ. ಈ ವಿಡಿಯೋ ನಾನುಗೌರಿ.ಕಾಮ್‌ಗೆ ಲಭ್ಯವಿದ್ದು ಚುಚ್ಚುಮದ್ದು ಕೊಟ್ಟಂತೆ ಮಾಡಿದ ಮೇಲೆ ಚಪ್ಪಾಳೆ ತಟ್ಟಲಾಗಿದೆ.

ವಿಡಿಯೋ ನೋಡಿ►►

ಇದನ್ನೂ ಓದಿ: ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ಅವರು ವಾಕ್ಸಿನ್ ತೆಗೆದುಕೊಂಡು ಇತರರಿಗೂ ವಾಕ್ಸಿನ್ ಪಡೆಯಬಹುದೆಂಬ ಮಾಹಿತಿ ರವಾನಿಸಿದ್ದಾರೆ. ಇವರ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ಆದರೆ ಡಿಎಚ್‌ಒ ನಾಗೇಂದ್ರಪ್ಪ ಮತ್ತು ಪ್ರಾಂಶುಪಾಲೆ ವಾಕ್ಸಿನ್ ಪಡೆದಂತೆ ನಾಟಕ ಮಾಡಿರುವ ವಿಡಿಯೋ ಹರಿದಾಡುತ್ತಿದೆ. ಉನ್ನತ ಅಧಿಕಾರಿಗಳೇ ಹೀಗೆ ನಾಟಕ ಮಾಡಿ, ವಾಕ್ಸಿನ್ ತೆಗೆದುಕೊಳ್ಳಲು ಹಿಂಜರಿಕೆ ಮಾಡಿದರೆ ಕೆಳಹಂತದ ಕೊರೊನ ವಾರಿಯರ್ ಸಿಬ್ಬಂದಿಗಳು ತೆಗೆದುಕೊಳ್ಳುವುದಾದರೂ ಹೇಗೆ ಎಂಬ ಪ್ರಶ್ನೆ ಉದ್ಭವವಾಗಿದೆ.

ನಗರದಲ್ಲಿ ಪೌರಕಾರ್ಮಿಕರು ಕೊರೊನ ವ್ಯಾಪಿಸಿರುವ ಪ್ರದೇಶಗಳಲ್ಲಿ ನಿತ್ಯವೂ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ವಾಕ್ಸಿನ್ ಪ್ರಯೋಗ ಮಾಡಲಾಗುತ್ತಿದೆಯೇ ಹೊರತು ಆರೋಗ್ಯ ಅಧಿಕಾರಿಗಳಿಗೆ ವಾಕ್ಸಿನ್ ನೀಡಿಲ್ಲ. ಇದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಧಿಕಾರಿಗಳು ತಾವು ಮೊದಲು ತೆಗೆದುಕೊಂಡು ಇತರರಲ್ಲಿ ಧೈರ್ಯ ತುಂಬಬೇಕಾಗಿತ್ತು. ಆದರೆ ಆ ಕೆಲಸವನ್ನು ಮಾಡಿಲ್ಲ. ಕೊವಾಕ್ಸಿನ್ ಬಗ್ಗೆ ವೈದ್ಯಲೋಕದಲ್ಲೇ ಅಭಿಪ್ರಾಯ ಬೇಧಗಳು ಇದೆ. ಅಂತಹ ಸಂದರ್ಭದಲ್ಲಿ ಕೊರೊನ ವಾರಿಯರ್‌ಗಳ ಮೇಲೆ ಅದೂ ಕೆಳಹಂತದಲ್ಲಿ ಕೆಲಸ ಮಾಡುವವ ಮೇಲೆ ವಾಕ್ಸಿನ್ ಪ್ರಯೋಗ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಅಧಿಕಾರಿ ವರ್ಗ ಉತ್ತರ ನೀಡಿಲ್ಲ.

ಆರೋಗ್ಯ ಅಧಿಕಾರಿಗಳು ವಾಕ್ಸಿನ್ ತೆಗೆದುಕೊಂಡು ಇತರರಿಗೂ ಮಾದರಿಯಾಗಬೇಕಿತ್ತು. ಕೊವಾಕ್ಸಿನ್ ವಾಕ್ಸಿನ್ ತೆಗೆದುಕೊಂಡರೆ ಯಾವುದೇ ಅಡ್ಡಪರಿಣಾಮಗಳು ಬೀರುವುದಿಲ್ಲವೆಂಬ ಬಗ್ಗೆ ಮಾನಸಿಕ ಸ್ಥೈರ್ಯ ತುಂಬುವಂತಹ ಕೆಲಸ ಮಾಡಬೇಕಿತ್ತು. ಅದು ಮಾಡದೇ ಪೋಟೋಗಳಿಗೆ ಪೋಸ್ ನೀಡಿದರೆ ಅದು ಸೂಕ್ತ ಪರಿಹಾರವಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿವೆ.

ಆದರೆ ಈ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, “ಈ ಹಿಂದೆ ಖುದ್ದಾಗಿ ಲಸಿಕೆ ಹಾಕಿಸಿಕೊಳ್ಳಲಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ದಾಖಲಾತಿಯು ತಾಂತ್ರಿಕ ಅಂಶಗಳಿಂದ ಅಪ್‌ಲೋಡ್ ಆಗಿರುವುದಿಲ್ಲ. ಹಾಗಾಗಿ ಈ ರೀತಿ ಮಾಡಬೆಕಾಯಿತು” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...