Homeಸಿನಿಮಾಕ್ರೀಡೆಐಪಿಎಸ್ ಅಧಿಕಾರಿ ವಿರುದ್ಧ ಧೋನಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ

ಐಪಿಎಸ್ ಅಧಿಕಾರಿ ವಿರುದ್ಧ ಧೋನಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ

- Advertisement -
- Advertisement -

2013ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದ ತನಿಖೆ ನಡೆಸಿದ್ದ ಭಾರತೀಯ ಪೊಲೀಸ್ ಸೇವಾ ಅಧಿಕಾರಿ ಜಿ.ಸಂಪತ್ ಕುಮಾರ್ ವಿರುದ್ಧ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿಯವರು ಮದ್ರಾಸ್ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ ಎಂದು ‘ಬಾರ್ ಮತ್ತು ಬೆಂಚ್’ ಶುಕ್ರವಾರ ವರದಿ ಮಾಡಿದೆ.

ಸಂಪತ್ ಅವರು ಸುಪ್ರೀಂ ಕೋರ್ಟ್ ಮತ್ತು ಮದ್ರಾಸ್ ಹೈಕೋರ್ಟ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಧೋನಿ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಧೋನಿಯವರು ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ ಕಾರಣ, ಧೋನಿಯವರು 2014ರಲ್ಲಿ ಸಂಪತ್‌ ಕುಮಾರ್ ಮತ್ತು ಟೆಲಿವಿಷನ್‌‌ ಚಾನೆಲ್‌ವೊಂದರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಸಂಪತ್‌ ಅವರು 2021ರಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಲಿಖಿತ ಪ್ರತಿಕ್ರಿಯೆಯನ್ನು ಸಲ್ಲಿಸಿದರು.

ಗುರುವಾರ ಸಲ್ಲಿಸಿದ ಮನವಿಯಲ್ಲಿ ಧೋನಿ, “ಸಂಪತ್ ಅವರು ತಮ್ಮ ಪ್ರತಿಕ್ರಿಯೆಯಲ್ಲಿ ನ್ಯಾಯಾಂಗದ ವಿರುದ್ಧ ಹಗರಣವನ್ನು ಆರೋಪಿಸಿದ್ದಾರೆ ಮತ್ತು ಅವಮಾನಕರ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

“ಮ್ಯಾಚ್ ಫಿಕ್ಸಿಂಗ್ ಆರೋಪಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುದ್ಗಲ್ ಸಮಿತಿಯು ಸಿದ್ಧಪಡಿಸಿದ ವರದಿಯ ಕೆಲವು ಭಾಗಗಳನ್ನು ಸುಪ್ರೀಂ ಕೋರ್ಟ್ ಮುಚ್ಚಿದ ಲಕೋಟೆಯಲ್ಲಿ ಇರಿಸಿದೆ. ಅದನ್ನು ವಿಶೇಷ ತನಿಖಾ ತಂಡಕ್ಕೆ ನೀಡಿಲ್ಲ ಎಂದು ಸಂಪತ್‌ ದೂರಿದ್ದಾರೆ ಎಂದು ಧೋನಿ ಹೇಳಿದ್ದಾರೆ” ಎಂದು ‘ಲೈವ್ ಲಾ’ ವರದಿ ತಿಳಿಸಿದೆ.

ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಇಡುವ ನಿರ್ಧಾರವು ಉದ್ದೇಶಪೂರ್ವಕವಾದದ್ದು ಎಂಬ ಪ್ರತಿಪಾದನೆಯನ್ನು ಸಂಪತ್‌ ಹೇಳಿಕೆ ಸೂಚಿಸುತ್ತಿದೆ ಎಂದು ಧೋನಿ ವಾದಿಸಿದ್ದಾರೆ. ಮದ್ರಾಸ್ ಹೈಕೋರ್ಟ್‌ನ ಅಡ್ವೊಕೇಟ್ ಜನರಲ್ ಮತ್ತು ನಿಯೋಜಿತ ಹಿರಿಯ ವಕೀಲರ ಕಚೇರಿಯ ವಿರುದ್ಧ ಸಂಪತ್‌ ಆರೋಪ ಮಾಡಿದ್ದಾರೆ ಎಂದು ಧೋನಿ ದೂರಿದ್ದಾರೆ.

ಇದನ್ನೂ ಓದಿರಿ: ವಿರಾಟ್ ಕೊಹ್ಲಿ ‘ನಕಲಿ ಫೀಲ್ಡಿಂಗ್’ ಆರೋಪ: ಬಾಂಗ್ಲಾ ಕ್ರಿಕೆಟ್ ಮಂಡಳಿ ಆಕ್ಷೇಪ

“ಅವರು [ಸಂಪತ್‌] ತಮ್ಮ ಹೆಚ್ಚುವರಿ ಲಿಖಿತ ಹೇಳಿಕೆಯಲ್ಲಿ ನೀಡಿರುವ ಅಭಿಪ್ರಾಯಗಳು ನ್ಯಾಯಾಲಯದ ಅಧಿಕಾರವನ್ನು ಕಡಿಮೆ ಮಾಡುತ್ತದೆ. ನ್ಯಾಯಾಂಗದ ಆಡಳಿತದಲ್ಲಿ ಮಧ್ಯಪ್ರವೇಶಿಸುವ ಮತ್ತು ಅಡ್ಡಿಪಡಿಸುವ ಪರಿಣಾಮವನ್ನು ಆ ಹೇಳಿಕೆಗಳು ಹೊಂದಿದೆ” ಎಂದು ಧೋನಿ ತಮ್ಮ ಮನವಿಯಲ್ಲಿ ತಿಳಿಸಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಧೋನಿಯವರ ಮನವಿಯನ್ನು ನ್ಯಾಯಮೂರ್ತಿ ಪಿ.ಎನ್.ಪ್ರಕಾಶ್ ಮತ್ತು ನ್ಯಾಯಮೂರ್ತಿ ಆರ್‌ಎಂಟಿ ಟೀಕಾ ರಾಮನ್ ಅವರ ಪೀಠದ ಮುಂದೆ ಪಟ್ಟಿ ಮಾಡಲಾಯಿತು. ಆದರೆ ವಿಚಾರಣೆ ಕೈಗೆತ್ತಿಕೊಳ್ಳಲು ಸಾಧ್ಯವಾಗಿಲ್ಲ. ಮುಂದಿನ ವಾರ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...