Homeಮುಖಪುಟಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ಟ್ವಿಟ್ಟರ್‌ನಲ್ಲಿಯೂ ಸಹ ಹಲವಾರು ಜನ ಮೋದಿ ಭೇಟಿಯನ್ನು ವಿರೋಧಿಸಿದ್ದಾರೆ. ಕಾನ್ಫರೆನ್ಸ್ ಹಾಲ್‌ ಅನ್ನು ಮೋದಿಯವರು ತಮ್ಮ ಫೋಟೊ ಶೂಟ್‌ಗಾಗಿ ಆಸ್ಪತ್ರೆಯನ್ನಾಗಿ ಬದಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಲೇಹ್‌ಗೆ ಭೇಟಿ ನೀಡಿ, ಜೂನ್ 15 ರಂದು ಚೀನಿ ಸೈನಿಕರೊಂದಿಗಿನ ಮುಖಾಮುಖಿಯಲ್ಲಿ ಗಾಯಗೊಂಡ ಭಾರತೀಯ ಗಾಯಾಳು ಸೈನಿಕರನ್ನು ಭೇಟಿಯಾಗಿದ್ದಾರೆ. ಆದರೆ ಅವರ ಈ ಭೇಟಿಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಜೂನ್ 19 ರಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮೋದಿಯವರು ಯಾರೂ ನಮ್ಮ ದೇಶದ ಗಡಿಯೊಳಗೆ ಕಾಲಿಟ್ಟಿಲ್ಲ ಎಂದಿದ್ದರು. ಅಂದ ಮೇಲೆ ಇಷ್ಟೊಂದು ಸೈನಿಕರು ಗಾಯಾಳುಗಳಾಗಲು ಕಾರಣವೇನೆಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಅಲ್ಲದೇ ಮೋದಿಯವರು ಸೈನಿಕರನ್ನು 17 ದಿನಗಳ ನಂತರ ಭೇಟಿ ಮಾಡಿದ್ದಾರೆ. ಇದು ಒಳ್ಳೇಯದು. ಆದರೆ ಆ ಫೋಟೊಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕಾದ ಅಗತ್ಯವೇನಿದೆ ಎಂಬ ಪ್ರಶ್ನೆ ಎದ್ದಿದೆ.

ಚೇತರಿಸುತ್ತಿದ್ದ ಸೈನಿಕರ ವಾರ್ಡಿಗೆ ಹೋಗಿ, ಅವರ ಬಳಿ ನಿಂತು, ಅವರ ಫೊಟೋ ತೆಗೆದು ಇಡೀ ಜಗತ್ತಿಗೆ ತೋರಿಸುತ್ತಿದ್ದೀರಲ್ಲಾ, ಗಡಿ ರಕ್ಷಣೆ ಮಾಡುತ್ತಾ ಚೀನೀ ಸೈನಿಕರ ವಿರುದ್ಧ ಹೋರಾಡಿದ ಈ ಸೈನಿಕರ ಮುಖಚರ್ಯೆಯನ್ನು ವಿರೋಧಿ ದೇಶದ ಸೈನಿಕರು ನೋಡುತ್ತಾರೆ. ಭದ್ರತೆಯ ದೃಷ್ಟಿಯಿಂದ ಇದು ತೀರಾ ಅಪಾಯಕಾರಿ ಎನ್ನುವ ಕನಿಷ್ಟ ಪ್ರಜ್ಞೆಯೂ ಈ ದೇಶದ ಪ್ರಧಾನಿಯವರಿಗಿಲ್ವಾ? ಎಂದು ಕನ್ನಡದ ಯುವ ಬರಹಗಾರ ಅಲ್ಮೆಡಾ ಗ್ಲಾಡ್‌ಸನ್‌ ಪ್ರಶ್ನಿಸಿದ್ದಾರೆ.

ಇನ್ನು ಕೆಲವರು ಮೋದಿಯವರು ರಾಜಕೀಯ ಪ್ರಚಾರಕ್ಕಾಗಿ ಸೈನಿಕರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸೈನಿಕರನ್ನು ಮೋದಿ ಭೇಟಿ ಮಾಡಿದ್ದು ಆಸ್ಪತ್ರೆಯಲ್ಲಲ್ಲ, ಅದು ಪಾರ್ಟಿ ಹಾಲ್. ಹಾಗಾಗಿ ಮೋದಿ ನಡೆಸಿದ್ದು ಇವೆಂಟ್ ಮ್ಯಾನೆಜ್ಮೆಂಟ್ ಎಂಬ ಟೀಕೆ ಕೇಳಿಬಂದಿದೆ.

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿಯವರು ಲೇಹ್ ಗೆ ಭೇಟಿ ನೀಡಿದಾಗ ಅದೇ ಹಾಲ್‌ನಲ್ಲಿ ಸೈನಿಕರು ಅವರಿಗೆ ಔತಣ ನೀಡಿದ್ದರು. ಈಗ ಅದೇ ಹಾಲ್‌ನಲ್ಲಿ ಸೈನಿಕರನ್ನು ಕೂರಿಸಲಾಗಿದೆ ಎಂದು ಎರಡೂ ಫೋಟೊಗಳನ್ನು ಪೋಸ್ಟ್‌ ಮಾಡಿ ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಆರೋಪಿಸಿದ್ದಾರೆ.

#ಜಗವೇ_ನಾಟಕರಂಗ_ಅದರಲ್ಲಿ_ಮೋದಿಯವರು_ಒಬ್ಬ_ಮಹಾನ್_ಪಾತ್ರಧಾರಿ ದೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ.

Posted by ನಾಗೇಗೌಡ ಕೀಲಾರ ಶಿವಲಿಂಗಯ್ಯ on Friday, July 3, 2020

ಇದು ಆಸ್ಪತ್ರೆಯೇ? ಇದು ಕಾನ್ಫರೆನ್ಸ್ ಹಾಲ್‌ನಂತಿದೆ. ವೈಟ್‌ಬೋರ್ಡ್, ಪ್ರೊಜೆಕ್ಟರ್ ಎಲ್ಲಾ ಇವೆ! ಗಾಯಗೊಂಡ ಸೈನಿಕರಿಗೆ ಪಾಠ ಮಾಡುತ್ತಾರೆಯೆ? ಯಾವುದೇ ಆಸ್ಪತ್ರೆಯ ಬೆಡ್‌ಗಳ ಪಕ್ಕ ಔಷಧಿ ಇಡುವ ಚಿಕ್ಕ ಟೇಬಲ್ ಇರುತ್ತದೆ. ಇಲ್ಲಿ ಎಲ್ಲಿದೆ? ಬೆಡ್‌ಶೀಟ್ ಇಲ್ಲ, ಯಾರೂ ಮಲಗಿರದಂತೆ ಒಂದು ಸುಕ್ಕು ಕೂಡಾ ಇಲ್ಲದಂತೆ ನೀಟಾಗಿದೆ. “ಗಾಯ ಗೊಂಡ” ಸೈನಿಕರು ಮಲಗಿರದೆ ಒಂದೇ ಪೋಸಿನಲ್ಲಿ ಯೋಗ ಮಾಡುವ ಗೊಂಬೆಗಳಂತೆ ಕುಳಿತಿದ್ದಾರೆ. ಇದು ಮೋದಿಯವರ ಮಾರ್ಕೆಂಟಿಗ್ ತಂತ್ರವೇ ಎಂದು ಹಲವಾರು ಜನ ಪ್ರಶ್ನಿಸಿದ್ದಾರೆ.

ಟ್ವಿಟ್ಟರ್‌ನಲ್ಲಿಯೂ ಸಹ ಹಲವಾರು ಜನ ಮೋದಿ ಭೇಟಿಯನ್ನು ವಿರೋಧಿಸಿದ್ದಾರೆ. ಕಾನ್ಫರೆನ್ಸ್ ಹಾಲ್‌ ಅನ್ನು ಮೋದಿಯವರು ತಮ್ಮ ಫೋಟೊ ಶೂಟ್‌ಗಾಗಿ ಆಸ್ಪತ್ರೆಯನ್ನಾಗಿ ಬದಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿಂದೆಯು ಹಲವಾರು ಪ್ರಧಾನಿಗಳು ಗಡಿಗೆ ಭೇಟಿ ಕೊಟ್ಟು ನಮ್ಮ ಸೈನಿಕರನ್ನು ಮಾತನಾಡಿಸಿ ಧೈರ್ಯ ತುಂಬಿದ್ದರು. ಆದರೆ ಅವರ್ಯಾರು ಈ ರೀತಿ ಫೋಟೊ ತೆಗೆಸಿಕೊಂಡು ಸಾರ್ವಜನಿಕವಾಗಿ ಪ್ರದರ್ಶನ ಮಾಡಿರಲಿಲ್ಲ ಎಂದು ಹಲವಾರು ನೆಟ್ಟಿಗರು ಟೀಕಿಸಿದ್ದರೆ.


ಇದನ್ನೂ ಓದಿ: ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...