Homeಮುಖಪುಟಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ಟ್ವಿಟ್ಟರ್‌ನಲ್ಲಿಯೂ ಸಹ ಹಲವಾರು ಜನ ಮೋದಿ ಭೇಟಿಯನ್ನು ವಿರೋಧಿಸಿದ್ದಾರೆ. ಕಾನ್ಫರೆನ್ಸ್ ಹಾಲ್‌ ಅನ್ನು ಮೋದಿಯವರು ತಮ್ಮ ಫೋಟೊ ಶೂಟ್‌ಗಾಗಿ ಆಸ್ಪತ್ರೆಯನ್ನಾಗಿ ಬದಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಲೇಹ್‌ಗೆ ಭೇಟಿ ನೀಡಿ, ಜೂನ್ 15 ರಂದು ಚೀನಿ ಸೈನಿಕರೊಂದಿಗಿನ ಮುಖಾಮುಖಿಯಲ್ಲಿ ಗಾಯಗೊಂಡ ಭಾರತೀಯ ಗಾಯಾಳು ಸೈನಿಕರನ್ನು ಭೇಟಿಯಾಗಿದ್ದಾರೆ. ಆದರೆ ಅವರ ಈ ಭೇಟಿಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಜೂನ್ 19 ರಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮೋದಿಯವರು ಯಾರೂ ನಮ್ಮ ದೇಶದ ಗಡಿಯೊಳಗೆ ಕಾಲಿಟ್ಟಿಲ್ಲ ಎಂದಿದ್ದರು. ಅಂದ ಮೇಲೆ ಇಷ್ಟೊಂದು ಸೈನಿಕರು ಗಾಯಾಳುಗಳಾಗಲು ಕಾರಣವೇನೆಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಅಲ್ಲದೇ ಮೋದಿಯವರು ಸೈನಿಕರನ್ನು 17 ದಿನಗಳ ನಂತರ ಭೇಟಿ ಮಾಡಿದ್ದಾರೆ. ಇದು ಒಳ್ಳೇಯದು. ಆದರೆ ಆ ಫೋಟೊಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕಾದ ಅಗತ್ಯವೇನಿದೆ ಎಂಬ ಪ್ರಶ್ನೆ ಎದ್ದಿದೆ.

ಚೇತರಿಸುತ್ತಿದ್ದ ಸೈನಿಕರ ವಾರ್ಡಿಗೆ ಹೋಗಿ, ಅವರ ಬಳಿ ನಿಂತು, ಅವರ ಫೊಟೋ ತೆಗೆದು ಇಡೀ ಜಗತ್ತಿಗೆ ತೋರಿಸುತ್ತಿದ್ದೀರಲ್ಲಾ, ಗಡಿ ರಕ್ಷಣೆ ಮಾಡುತ್ತಾ ಚೀನೀ ಸೈನಿಕರ ವಿರುದ್ಧ ಹೋರಾಡಿದ ಈ ಸೈನಿಕರ ಮುಖಚರ್ಯೆಯನ್ನು ವಿರೋಧಿ ದೇಶದ ಸೈನಿಕರು ನೋಡುತ್ತಾರೆ. ಭದ್ರತೆಯ ದೃಷ್ಟಿಯಿಂದ ಇದು ತೀರಾ ಅಪಾಯಕಾರಿ ಎನ್ನುವ ಕನಿಷ್ಟ ಪ್ರಜ್ಞೆಯೂ ಈ ದೇಶದ ಪ್ರಧಾನಿಯವರಿಗಿಲ್ವಾ? ಎಂದು ಕನ್ನಡದ ಯುವ ಬರಹಗಾರ ಅಲ್ಮೆಡಾ ಗ್ಲಾಡ್‌ಸನ್‌ ಪ್ರಶ್ನಿಸಿದ್ದಾರೆ.

ಇನ್ನು ಕೆಲವರು ಮೋದಿಯವರು ರಾಜಕೀಯ ಪ್ರಚಾರಕ್ಕಾಗಿ ಸೈನಿಕರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸೈನಿಕರನ್ನು ಮೋದಿ ಭೇಟಿ ಮಾಡಿದ್ದು ಆಸ್ಪತ್ರೆಯಲ್ಲಲ್ಲ, ಅದು ಪಾರ್ಟಿ ಹಾಲ್. ಹಾಗಾಗಿ ಮೋದಿ ನಡೆಸಿದ್ದು ಇವೆಂಟ್ ಮ್ಯಾನೆಜ್ಮೆಂಟ್ ಎಂಬ ಟೀಕೆ ಕೇಳಿಬಂದಿದೆ.

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿಯವರು ಲೇಹ್ ಗೆ ಭೇಟಿ ನೀಡಿದಾಗ ಅದೇ ಹಾಲ್‌ನಲ್ಲಿ ಸೈನಿಕರು ಅವರಿಗೆ ಔತಣ ನೀಡಿದ್ದರು. ಈಗ ಅದೇ ಹಾಲ್‌ನಲ್ಲಿ ಸೈನಿಕರನ್ನು ಕೂರಿಸಲಾಗಿದೆ ಎಂದು ಎರಡೂ ಫೋಟೊಗಳನ್ನು ಪೋಸ್ಟ್‌ ಮಾಡಿ ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಆರೋಪಿಸಿದ್ದಾರೆ.

#ಜಗವೇ_ನಾಟಕರಂಗ_ಅದರಲ್ಲಿ_ಮೋದಿಯವರು_ಒಬ್ಬ_ಮಹಾನ್_ಪಾತ್ರಧಾರಿ ದೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ.

Posted by ನಾಗೇಗೌಡ ಕೀಲಾರ ಶಿವಲಿಂಗಯ್ಯ on Friday, July 3, 2020

ಇದು ಆಸ್ಪತ್ರೆಯೇ? ಇದು ಕಾನ್ಫರೆನ್ಸ್ ಹಾಲ್‌ನಂತಿದೆ. ವೈಟ್‌ಬೋರ್ಡ್, ಪ್ರೊಜೆಕ್ಟರ್ ಎಲ್ಲಾ ಇವೆ! ಗಾಯಗೊಂಡ ಸೈನಿಕರಿಗೆ ಪಾಠ ಮಾಡುತ್ತಾರೆಯೆ? ಯಾವುದೇ ಆಸ್ಪತ್ರೆಯ ಬೆಡ್‌ಗಳ ಪಕ್ಕ ಔಷಧಿ ಇಡುವ ಚಿಕ್ಕ ಟೇಬಲ್ ಇರುತ್ತದೆ. ಇಲ್ಲಿ ಎಲ್ಲಿದೆ? ಬೆಡ್‌ಶೀಟ್ ಇಲ್ಲ, ಯಾರೂ ಮಲಗಿರದಂತೆ ಒಂದು ಸುಕ್ಕು ಕೂಡಾ ಇಲ್ಲದಂತೆ ನೀಟಾಗಿದೆ. “ಗಾಯ ಗೊಂಡ” ಸೈನಿಕರು ಮಲಗಿರದೆ ಒಂದೇ ಪೋಸಿನಲ್ಲಿ ಯೋಗ ಮಾಡುವ ಗೊಂಬೆಗಳಂತೆ ಕುಳಿತಿದ್ದಾರೆ. ಇದು ಮೋದಿಯವರ ಮಾರ್ಕೆಂಟಿಗ್ ತಂತ್ರವೇ ಎಂದು ಹಲವಾರು ಜನ ಪ್ರಶ್ನಿಸಿದ್ದಾರೆ.

ಟ್ವಿಟ್ಟರ್‌ನಲ್ಲಿಯೂ ಸಹ ಹಲವಾರು ಜನ ಮೋದಿ ಭೇಟಿಯನ್ನು ವಿರೋಧಿಸಿದ್ದಾರೆ. ಕಾನ್ಫರೆನ್ಸ್ ಹಾಲ್‌ ಅನ್ನು ಮೋದಿಯವರು ತಮ್ಮ ಫೋಟೊ ಶೂಟ್‌ಗಾಗಿ ಆಸ್ಪತ್ರೆಯನ್ನಾಗಿ ಬದಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿಂದೆಯು ಹಲವಾರು ಪ್ರಧಾನಿಗಳು ಗಡಿಗೆ ಭೇಟಿ ಕೊಟ್ಟು ನಮ್ಮ ಸೈನಿಕರನ್ನು ಮಾತನಾಡಿಸಿ ಧೈರ್ಯ ತುಂಬಿದ್ದರು. ಆದರೆ ಅವರ್ಯಾರು ಈ ರೀತಿ ಫೋಟೊ ತೆಗೆಸಿಕೊಂಡು ಸಾರ್ವಜನಿಕವಾಗಿ ಪ್ರದರ್ಶನ ಮಾಡಿರಲಿಲ್ಲ ಎಂದು ಹಲವಾರು ನೆಟ್ಟಿಗರು ಟೀಕಿಸಿದ್ದರೆ.


ಇದನ್ನೂ ಓದಿ: ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...