Homeಮುಖಪುಟಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ಟ್ವಿಟ್ಟರ್‌ನಲ್ಲಿಯೂ ಸಹ ಹಲವಾರು ಜನ ಮೋದಿ ಭೇಟಿಯನ್ನು ವಿರೋಧಿಸಿದ್ದಾರೆ. ಕಾನ್ಫರೆನ್ಸ್ ಹಾಲ್‌ ಅನ್ನು ಮೋದಿಯವರು ತಮ್ಮ ಫೋಟೊ ಶೂಟ್‌ಗಾಗಿ ಆಸ್ಪತ್ರೆಯನ್ನಾಗಿ ಬದಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಲೇಹ್‌ಗೆ ಭೇಟಿ ನೀಡಿ, ಜೂನ್ 15 ರಂದು ಚೀನಿ ಸೈನಿಕರೊಂದಿಗಿನ ಮುಖಾಮುಖಿಯಲ್ಲಿ ಗಾಯಗೊಂಡ ಭಾರತೀಯ ಗಾಯಾಳು ಸೈನಿಕರನ್ನು ಭೇಟಿಯಾಗಿದ್ದಾರೆ. ಆದರೆ ಅವರ ಈ ಭೇಟಿಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಜೂನ್ 19 ರಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮೋದಿಯವರು ಯಾರೂ ನಮ್ಮ ದೇಶದ ಗಡಿಯೊಳಗೆ ಕಾಲಿಟ್ಟಿಲ್ಲ ಎಂದಿದ್ದರು. ಅಂದ ಮೇಲೆ ಇಷ್ಟೊಂದು ಸೈನಿಕರು ಗಾಯಾಳುಗಳಾಗಲು ಕಾರಣವೇನೆಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಅಲ್ಲದೇ ಮೋದಿಯವರು ಸೈನಿಕರನ್ನು 17 ದಿನಗಳ ನಂತರ ಭೇಟಿ ಮಾಡಿದ್ದಾರೆ. ಇದು ಒಳ್ಳೇಯದು. ಆದರೆ ಆ ಫೋಟೊಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕಾದ ಅಗತ್ಯವೇನಿದೆ ಎಂಬ ಪ್ರಶ್ನೆ ಎದ್ದಿದೆ.

ಚೇತರಿಸುತ್ತಿದ್ದ ಸೈನಿಕರ ವಾರ್ಡಿಗೆ ಹೋಗಿ, ಅವರ ಬಳಿ ನಿಂತು, ಅವರ ಫೊಟೋ ತೆಗೆದು ಇಡೀ ಜಗತ್ತಿಗೆ ತೋರಿಸುತ್ತಿದ್ದೀರಲ್ಲಾ, ಗಡಿ ರಕ್ಷಣೆ ಮಾಡುತ್ತಾ ಚೀನೀ ಸೈನಿಕರ ವಿರುದ್ಧ ಹೋರಾಡಿದ ಈ ಸೈನಿಕರ ಮುಖಚರ್ಯೆಯನ್ನು ವಿರೋಧಿ ದೇಶದ ಸೈನಿಕರು ನೋಡುತ್ತಾರೆ. ಭದ್ರತೆಯ ದೃಷ್ಟಿಯಿಂದ ಇದು ತೀರಾ ಅಪಾಯಕಾರಿ ಎನ್ನುವ ಕನಿಷ್ಟ ಪ್ರಜ್ಞೆಯೂ ಈ ದೇಶದ ಪ್ರಧಾನಿಯವರಿಗಿಲ್ವಾ? ಎಂದು ಕನ್ನಡದ ಯುವ ಬರಹಗಾರ ಅಲ್ಮೆಡಾ ಗ್ಲಾಡ್‌ಸನ್‌ ಪ್ರಶ್ನಿಸಿದ್ದಾರೆ.

ಇನ್ನು ಕೆಲವರು ಮೋದಿಯವರು ರಾಜಕೀಯ ಪ್ರಚಾರಕ್ಕಾಗಿ ಸೈನಿಕರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸೈನಿಕರನ್ನು ಮೋದಿ ಭೇಟಿ ಮಾಡಿದ್ದು ಆಸ್ಪತ್ರೆಯಲ್ಲಲ್ಲ, ಅದು ಪಾರ್ಟಿ ಹಾಲ್. ಹಾಗಾಗಿ ಮೋದಿ ನಡೆಸಿದ್ದು ಇವೆಂಟ್ ಮ್ಯಾನೆಜ್ಮೆಂಟ್ ಎಂಬ ಟೀಕೆ ಕೇಳಿಬಂದಿದೆ.

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿಯವರು ಲೇಹ್ ಗೆ ಭೇಟಿ ನೀಡಿದಾಗ ಅದೇ ಹಾಲ್‌ನಲ್ಲಿ ಸೈನಿಕರು ಅವರಿಗೆ ಔತಣ ನೀಡಿದ್ದರು. ಈಗ ಅದೇ ಹಾಲ್‌ನಲ್ಲಿ ಸೈನಿಕರನ್ನು ಕೂರಿಸಲಾಗಿದೆ ಎಂದು ಎರಡೂ ಫೋಟೊಗಳನ್ನು ಪೋಸ್ಟ್‌ ಮಾಡಿ ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಆರೋಪಿಸಿದ್ದಾರೆ.

#ಜಗವೇ_ನಾಟಕರಂಗ_ಅದರಲ್ಲಿ_ಮೋದಿಯವರು_ಒಬ್ಬ_ಮಹಾನ್_ಪಾತ್ರಧಾರಿ ದೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ.

Posted by ನಾಗೇಗೌಡ ಕೀಲಾರ ಶಿವಲಿಂಗಯ್ಯ on Friday, July 3, 2020

ಇದು ಆಸ್ಪತ್ರೆಯೇ? ಇದು ಕಾನ್ಫರೆನ್ಸ್ ಹಾಲ್‌ನಂತಿದೆ. ವೈಟ್‌ಬೋರ್ಡ್, ಪ್ರೊಜೆಕ್ಟರ್ ಎಲ್ಲಾ ಇವೆ! ಗಾಯಗೊಂಡ ಸೈನಿಕರಿಗೆ ಪಾಠ ಮಾಡುತ್ತಾರೆಯೆ? ಯಾವುದೇ ಆಸ್ಪತ್ರೆಯ ಬೆಡ್‌ಗಳ ಪಕ್ಕ ಔಷಧಿ ಇಡುವ ಚಿಕ್ಕ ಟೇಬಲ್ ಇರುತ್ತದೆ. ಇಲ್ಲಿ ಎಲ್ಲಿದೆ? ಬೆಡ್‌ಶೀಟ್ ಇಲ್ಲ, ಯಾರೂ ಮಲಗಿರದಂತೆ ಒಂದು ಸುಕ್ಕು ಕೂಡಾ ಇಲ್ಲದಂತೆ ನೀಟಾಗಿದೆ. “ಗಾಯ ಗೊಂಡ” ಸೈನಿಕರು ಮಲಗಿರದೆ ಒಂದೇ ಪೋಸಿನಲ್ಲಿ ಯೋಗ ಮಾಡುವ ಗೊಂಬೆಗಳಂತೆ ಕುಳಿತಿದ್ದಾರೆ. ಇದು ಮೋದಿಯವರ ಮಾರ್ಕೆಂಟಿಗ್ ತಂತ್ರವೇ ಎಂದು ಹಲವಾರು ಜನ ಪ್ರಶ್ನಿಸಿದ್ದಾರೆ.

ಟ್ವಿಟ್ಟರ್‌ನಲ್ಲಿಯೂ ಸಹ ಹಲವಾರು ಜನ ಮೋದಿ ಭೇಟಿಯನ್ನು ವಿರೋಧಿಸಿದ್ದಾರೆ. ಕಾನ್ಫರೆನ್ಸ್ ಹಾಲ್‌ ಅನ್ನು ಮೋದಿಯವರು ತಮ್ಮ ಫೋಟೊ ಶೂಟ್‌ಗಾಗಿ ಆಸ್ಪತ್ರೆಯನ್ನಾಗಿ ಬದಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿಂದೆಯು ಹಲವಾರು ಪ್ರಧಾನಿಗಳು ಗಡಿಗೆ ಭೇಟಿ ಕೊಟ್ಟು ನಮ್ಮ ಸೈನಿಕರನ್ನು ಮಾತನಾಡಿಸಿ ಧೈರ್ಯ ತುಂಬಿದ್ದರು. ಆದರೆ ಅವರ್ಯಾರು ಈ ರೀತಿ ಫೋಟೊ ತೆಗೆಸಿಕೊಂಡು ಸಾರ್ವಜನಿಕವಾಗಿ ಪ್ರದರ್ಶನ ಮಾಡಿರಲಿಲ್ಲ ಎಂದು ಹಲವಾರು ನೆಟ್ಟಿಗರು ಟೀಕಿಸಿದ್ದರೆ.


ಇದನ್ನೂ ಓದಿ: ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...