Homeಮುಖಪುಟಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ಟ್ವಿಟ್ಟರ್‌ನಲ್ಲಿಯೂ ಸಹ ಹಲವಾರು ಜನ ಮೋದಿ ಭೇಟಿಯನ್ನು ವಿರೋಧಿಸಿದ್ದಾರೆ. ಕಾನ್ಫರೆನ್ಸ್ ಹಾಲ್‌ ಅನ್ನು ಮೋದಿಯವರು ತಮ್ಮ ಫೋಟೊ ಶೂಟ್‌ಗಾಗಿ ಆಸ್ಪತ್ರೆಯನ್ನಾಗಿ ಬದಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಲೇಹ್‌ಗೆ ಭೇಟಿ ನೀಡಿ, ಜೂನ್ 15 ರಂದು ಚೀನಿ ಸೈನಿಕರೊಂದಿಗಿನ ಮುಖಾಮುಖಿಯಲ್ಲಿ ಗಾಯಗೊಂಡ ಭಾರತೀಯ ಗಾಯಾಳು ಸೈನಿಕರನ್ನು ಭೇಟಿಯಾಗಿದ್ದಾರೆ. ಆದರೆ ಅವರ ಈ ಭೇಟಿಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಜೂನ್ 19 ರಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮೋದಿಯವರು ಯಾರೂ ನಮ್ಮ ದೇಶದ ಗಡಿಯೊಳಗೆ ಕಾಲಿಟ್ಟಿಲ್ಲ ಎಂದಿದ್ದರು. ಅಂದ ಮೇಲೆ ಇಷ್ಟೊಂದು ಸೈನಿಕರು ಗಾಯಾಳುಗಳಾಗಲು ಕಾರಣವೇನೆಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಅಲ್ಲದೇ ಮೋದಿಯವರು ಸೈನಿಕರನ್ನು 17 ದಿನಗಳ ನಂತರ ಭೇಟಿ ಮಾಡಿದ್ದಾರೆ. ಇದು ಒಳ್ಳೇಯದು. ಆದರೆ ಆ ಫೋಟೊಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕಾದ ಅಗತ್ಯವೇನಿದೆ ಎಂಬ ಪ್ರಶ್ನೆ ಎದ್ದಿದೆ.

ಚೇತರಿಸುತ್ತಿದ್ದ ಸೈನಿಕರ ವಾರ್ಡಿಗೆ ಹೋಗಿ, ಅವರ ಬಳಿ ನಿಂತು, ಅವರ ಫೊಟೋ ತೆಗೆದು ಇಡೀ ಜಗತ್ತಿಗೆ ತೋರಿಸುತ್ತಿದ್ದೀರಲ್ಲಾ, ಗಡಿ ರಕ್ಷಣೆ ಮಾಡುತ್ತಾ ಚೀನೀ ಸೈನಿಕರ ವಿರುದ್ಧ ಹೋರಾಡಿದ ಈ ಸೈನಿಕರ ಮುಖಚರ್ಯೆಯನ್ನು ವಿರೋಧಿ ದೇಶದ ಸೈನಿಕರು ನೋಡುತ್ತಾರೆ. ಭದ್ರತೆಯ ದೃಷ್ಟಿಯಿಂದ ಇದು ತೀರಾ ಅಪಾಯಕಾರಿ ಎನ್ನುವ ಕನಿಷ್ಟ ಪ್ರಜ್ಞೆಯೂ ಈ ದೇಶದ ಪ್ರಧಾನಿಯವರಿಗಿಲ್ವಾ? ಎಂದು ಕನ್ನಡದ ಯುವ ಬರಹಗಾರ ಅಲ್ಮೆಡಾ ಗ್ಲಾಡ್‌ಸನ್‌ ಪ್ರಶ್ನಿಸಿದ್ದಾರೆ.

ಇನ್ನು ಕೆಲವರು ಮೋದಿಯವರು ರಾಜಕೀಯ ಪ್ರಚಾರಕ್ಕಾಗಿ ಸೈನಿಕರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸೈನಿಕರನ್ನು ಮೋದಿ ಭೇಟಿ ಮಾಡಿದ್ದು ಆಸ್ಪತ್ರೆಯಲ್ಲಲ್ಲ, ಅದು ಪಾರ್ಟಿ ಹಾಲ್. ಹಾಗಾಗಿ ಮೋದಿ ನಡೆಸಿದ್ದು ಇವೆಂಟ್ ಮ್ಯಾನೆಜ್ಮೆಂಟ್ ಎಂಬ ಟೀಕೆ ಕೇಳಿಬಂದಿದೆ.

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿಯವರು ಲೇಹ್ ಗೆ ಭೇಟಿ ನೀಡಿದಾಗ ಅದೇ ಹಾಲ್‌ನಲ್ಲಿ ಸೈನಿಕರು ಅವರಿಗೆ ಔತಣ ನೀಡಿದ್ದರು. ಈಗ ಅದೇ ಹಾಲ್‌ನಲ್ಲಿ ಸೈನಿಕರನ್ನು ಕೂರಿಸಲಾಗಿದೆ ಎಂದು ಎರಡೂ ಫೋಟೊಗಳನ್ನು ಪೋಸ್ಟ್‌ ಮಾಡಿ ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಆರೋಪಿಸಿದ್ದಾರೆ.

#ಜಗವೇ_ನಾಟಕರಂಗ_ಅದರಲ್ಲಿ_ಮೋದಿಯವರು_ಒಬ್ಬ_ಮಹಾನ್_ಪಾತ್ರಧಾರಿ ದೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ.

Posted by ನಾಗೇಗೌಡ ಕೀಲಾರ ಶಿವಲಿಂಗಯ್ಯ on Friday, July 3, 2020

ಇದು ಆಸ್ಪತ್ರೆಯೇ? ಇದು ಕಾನ್ಫರೆನ್ಸ್ ಹಾಲ್‌ನಂತಿದೆ. ವೈಟ್‌ಬೋರ್ಡ್, ಪ್ರೊಜೆಕ್ಟರ್ ಎಲ್ಲಾ ಇವೆ! ಗಾಯಗೊಂಡ ಸೈನಿಕರಿಗೆ ಪಾಠ ಮಾಡುತ್ತಾರೆಯೆ? ಯಾವುದೇ ಆಸ್ಪತ್ರೆಯ ಬೆಡ್‌ಗಳ ಪಕ್ಕ ಔಷಧಿ ಇಡುವ ಚಿಕ್ಕ ಟೇಬಲ್ ಇರುತ್ತದೆ. ಇಲ್ಲಿ ಎಲ್ಲಿದೆ? ಬೆಡ್‌ಶೀಟ್ ಇಲ್ಲ, ಯಾರೂ ಮಲಗಿರದಂತೆ ಒಂದು ಸುಕ್ಕು ಕೂಡಾ ಇಲ್ಲದಂತೆ ನೀಟಾಗಿದೆ. “ಗಾಯ ಗೊಂಡ” ಸೈನಿಕರು ಮಲಗಿರದೆ ಒಂದೇ ಪೋಸಿನಲ್ಲಿ ಯೋಗ ಮಾಡುವ ಗೊಂಬೆಗಳಂತೆ ಕುಳಿತಿದ್ದಾರೆ. ಇದು ಮೋದಿಯವರ ಮಾರ್ಕೆಂಟಿಗ್ ತಂತ್ರವೇ ಎಂದು ಹಲವಾರು ಜನ ಪ್ರಶ್ನಿಸಿದ್ದಾರೆ.

ಟ್ವಿಟ್ಟರ್‌ನಲ್ಲಿಯೂ ಸಹ ಹಲವಾರು ಜನ ಮೋದಿ ಭೇಟಿಯನ್ನು ವಿರೋಧಿಸಿದ್ದಾರೆ. ಕಾನ್ಫರೆನ್ಸ್ ಹಾಲ್‌ ಅನ್ನು ಮೋದಿಯವರು ತಮ್ಮ ಫೋಟೊ ಶೂಟ್‌ಗಾಗಿ ಆಸ್ಪತ್ರೆಯನ್ನಾಗಿ ಬದಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿಂದೆಯು ಹಲವಾರು ಪ್ರಧಾನಿಗಳು ಗಡಿಗೆ ಭೇಟಿ ಕೊಟ್ಟು ನಮ್ಮ ಸೈನಿಕರನ್ನು ಮಾತನಾಡಿಸಿ ಧೈರ್ಯ ತುಂಬಿದ್ದರು. ಆದರೆ ಅವರ್ಯಾರು ಈ ರೀತಿ ಫೋಟೊ ತೆಗೆಸಿಕೊಂಡು ಸಾರ್ವಜನಿಕವಾಗಿ ಪ್ರದರ್ಶನ ಮಾಡಿರಲಿಲ್ಲ ಎಂದು ಹಲವಾರು ನೆಟ್ಟಿಗರು ಟೀಕಿಸಿದ್ದರೆ.


ಇದನ್ನೂ ಓದಿ: ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...