Homeಸಿನಿಮಾಕ್ರೀಡೆಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಫೀಲ್ಡಿಂಗ್ ನಿರ್ಬಂಧಗಳನ್ನು ಮೀರಿದ ಕಾರಣಕ್ಕಾಗಿಯೇ ಧೋನಿಯ ರನ್ ಔಟ್ ಆಯಿತೇ? ಇಲ್ಲಿದೆ...

ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಫೀಲ್ಡಿಂಗ್ ನಿರ್ಬಂಧಗಳನ್ನು ಮೀರಿದ ಕಾರಣಕ್ಕಾಗಿಯೇ ಧೋನಿಯ ರನ್ ಔಟ್ ಆಯಿತೇ? ಇಲ್ಲಿದೆ ಸತ್ಯ

- Advertisement -
- Advertisement -

ಮಹತ್ವದ ಸೆಮಿಫೈನಲ್ ನಲ್ಲಿ ಲೀಗ್ ಹಂತದ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಭಾರತವನ್ನು ನಾಲ್ಕನೇ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ ಮಣಿಸಿ ಫೈನಲ್ ಪ್ರವೇಶಿಸಿದ್ದು ನಿಮಗೆಲ್ಲಾ ಗೊತ್ತಿರುವ ವಿಚಾರ. ಆ ಪಂದ್ಯದ ಸೋಲಿನಲ್ಲಿ ಮಹೇಂದ್ರ ಸಿಂಗ್ ಧೋನಿಯವರ ರನ್ ಔಟ್ ಪ್ರಮುಖ ಪಾತ್ರ ವಹಿಸಿತ್ತು. ರನ್ ಔಟ್ ಆದಾಗ ಧೋನಿ ಅಂಗಳದಲ್ಲಿಯೇ ಕಣ್ಣೀರಾಕಿದ್ದನ್ನು ಅಭಿಮಾನಿಗಳು ಮರೆತಿಲ್ಲ.

ಇದೇ ಸಂದರ್ಭದಲ್ಲಿ ಅಂಪೈರ್ ಗಳ ತಪ್ಪಿನಿಂದಾಗಿ ರನ್ ಔಟ್ ಆಗಿದೆ, 48ನೇ ಓವರ್ ನಲ್ಲಿ ಲಾಕೀ ಫರ್ಗೂಸನ್ ನ ಎಸೆತವನ್ನು ಧೋನಿ ಬಾರಿಸಿದ ಹೊಡೆತದಲ್ಲಿ ಎರಡನೇ ರನ್ ಗಾಗಿ ಧೋನಿ ಓಡುತ್ತಿದ್ದಾಗ ಮಾರ್ಟಿನ್ ಗುಪ್ಟಿಲ್ ನೇರವಾಗಿ ವಿಕೆಟ್ ಗೆ ಬಾಲ್ ಎಸೆದ ಕಾರಣ ಆದ ರನ್ ಔಟ್ ನ ಬಾಲ್ ಕ್ರಮಬದ್ಧವಾಗಿಲ್ಲ ಎಂಬ ಆರೋಪ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೂರನೇ ಪವರ್ ಪ್ಲೆ (41-50 ಓವರ್) ನಲ್ಲಿ ಐದಕ್ಕಿಂತ ಹೆಚ್ಚು ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗೆ ನಿಲ್ಲುವಂತಿಲ್ಲ ಎಂಬ ಐಸಿಸಿ ನಿಯಮವಿದ್ದರೂ ಸಹ ಸೆಮಿಫೈನಲ್ ಪಂದ್ಯದಲ್ಲಿ ಧೋನಿ ಔಟಾದ 48.3ನೇ ಬಾಲ್ ನಲ್ಲಿ ಆರು ಜನ ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗಿದ್ದರು ಅಂಪೈರ್ ಗಮನಿಸಿಲ್ಲ ಎಂಬ ಸ್ಕ್ರೀನ್ ಶಾಟ್ ಎಲ್ಲಾ ಕಡೆ ಹರಿದಾಡಿದೆ.

ಸಿ.ಎನ್.ಎನ್ ನ್ಯೂಸ್18ನ ನಿರೂಪಕ ಆನಂದ್ ನರಸಿಂಹನ್ ರವರು ಆ ಸ್ಕ್ರೀನ್ ಶಾಟ್ ಅನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿ “ಮೂರನೇ ಪವರ್ ಪ್ಲೆ ನಲ್ಲಿ 6 ಜನ ಫೀಲ್ಡರ್ ಗಳು ಸರ್ಕಲ್ ನಿಂದ ಹೊರಗಿರುವುದು ಹೇಗೆ? ಅಂಪೈರ್ ಗಳ ಈ ಮಹಾ ಅಪರಾಧಕ್ಕೆ ಶಿಕ್ಷೆ ಇಲ್ಲವೇ? ಸೆಮಿ ಫೈನಲ್ ನಲ್ಲೇ ಹೀಗಾದರೆ ಹೇಗೆ ಎಂದು ಬರೆದಿದ್ದರು.

ನೂರಾರು ಜನರು ಅಂಪೈರ್ ಗಳ ತಪ್ಪು ಎಂದು  ಈ ಸ್ಕ್ರೀನ್ ಶಾಟ್ ಅನ್ನು ಷೇರ್ ಮಾಡಿದ್ದರು. ಎಂ.ಎಸ್ ಧೋನಿ ಫ್ಯಾನ್ಸ್ ಅಫೀಶಿಯಲ್ ಎನ್ನು 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಟ್ವಿಟ್ಟರ್ ಖಾತೆಯಿಂದಲೂ ಪೋಸ್ಟ ಆಗಿದ್ದಲ್ಲದೇ, ಧೋನಿ ನಾಟ್ ಔಟ್ ಆಗಿದ್ದರೆಂಬ ಯೂಟ್ಯೂಬ್ ವಿಡಿಯೋವೊಂದು ಪೋಸ್ಟ್ ಆಗಿದ್ದು ಅದನ್ನು ಬರೋಬ್ಬರಿ 1 ಕೋಟಿ 30 ಲಕ್ಷ ಜನ ವೀಕ್ಷಿಸಿದ್ದಾರೆ.

ಬಹುಮುಖ್ಯ ಮಾಧ್ಯಮ ಸಂಸ್ಥೆಗಳಾದ ದಿ ಇಂಡಿಯನ್ ಎಕ್ಸ್ ಪ್ರೆಸ್, ಇಂಡಿಯಾ ಟುಡೆ, ಆಜ್ ತಕ್ ಮುಂತಾದವುಗಳು ಸಹ ಫೀಲ್ಡಿಂಗ್ ನಿರ್ಬಂಧದ ಅಂಪೈರ್ ಗಳ ತಪ್ಪಿನಿಂದಾಗಿ ಧೋನಿ ಔಟಾಗಿರುವ ಸಾಧ್ಯತೆಯಿದೆ ಎಂಬ ವರದಿಗಳನ್ನು ಪ್ರಕಟಿಸಿದ್ದವು.

ಹಾಗಾದರೆ ಆ 48ನೇ ಓವರ್ ನಲ್ಲಿ ಆಗಿದ್ದಾದರೂ ಏನು?

ಈ ಕುರಿತು ಸ್ವತಂತ್ರ ಮಾಧ್ಯಮ ಸಂಸ್ಥೆ ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿದೆ. ಸ್ಕ್ರೀನ್ ಶಾಟ್ ನಲ್ಲಿ ಕಾಣುತ್ತಿರುವ ಫೀಲ್ಡರ್ ಗಳ ಗ್ರಾಫಿಕ್ ನಲ್ಲಿ ತಪ್ಪಾಗಿದೆಯೇ ಹೊರತು ಅಂಪೈರ್ ನಿಂದಲ್ಲ ಎಂದು ಕಂಡಬಂದಿದೆ. ಆ ಓವರ್ ನ ಮೂರು ಬಾಲ್ ಗಳಲ್ಲಿ ಏನಾಯಿತು, ಫೀಲ್ಡರ್ ಗಳು ಯಾವ ಯಾವ ಜಾಗದಲ್ಲಿ ನಿಂತಿದ್ದರು ಎಂಬುದನ್ನು ಒಂದೊಂದಾಗಿ ನೋಡೋಣ

ಮೊದಲ ಬಾಲ್ (48.1 ಓವರ್ಸ್)

ಈ ಎಸೆತದಲ್ಲಿ ಐದು ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗಿದ್ದರು. ಅಂದರೆ ಥರ್ಡ್ ಮ್ಯಾನ್, ಡೀಪ್ ಫೈನ್ ಲೆಗ್, ಡೀಪ್ ಪಾಯಿಂಟ್, ಡೀಪ್ ಸ್ಕೇರ್ ಲೆಗ್ ಮತ್ತು ಲಾಂಗ್ ಆನ್ ನಲ್ಲಿ ನಿಂತಿದ್ದರು. ಫರ್ಗೂಸನ್ ಎಸೆದ ಆ ಬಾಲ್ ಅನ್ನು ಧೋನಿ ಸಿಕ್ಸ್ ಸಿಡಿಸಿದ್ದರು.

ಎರಡನೇ ಬಾಲ್ (48.2 ಓವರ್ಸ್)

ಈ ಎಸೆತದಲ್ಲಿ ಮಿಡ್ ವಿಕೆಟ್ ನಲ್ಲಿದ್ದ ಫೀಲ್ಡರ್ ಹಿಂದಕ್ಕೆ ಚಲಿಸಿದ್ದಾರೆ ಮತ್ತು ಡೀಪ್ ಫೈನ್ ಲೆಗ್ ನಲ್ಲಿದ್ದ ಫೀಲ್ಡರ್ ಸರ್ಕಲ್ ನ ಒಳಗೆ ಬಂದಿದ್ದಾರೆ. ಈ ಬಾಲ್ ನಲ್ಲಿ ಯಾವುದೇ ರನ್ ಬಂದಿಲ್ಲ.

ಮೂರನೇ ಬಾಲ್ (48.3 ಓವರ್ಸ್)

ಈ ಎಸೆತದಲ್ಲಿಯೇ ಆರು ಜನ ಹೊರಗಿರುವಂತೆ ಮೇಲಿನ ಸ್ಕ್ರೀನ್ ಶಾಟ್ ನಲ್ಲಿ ಆರೋಪಿಸಲಾಗಿದೆ. ಡೀಪ್ ಪಾಯಿಂಟ್, ಡೀಪ್ ಫೈನ್ ಲೆಗ್, ಡೀಪ್ ಸ್ಕ್ವೇರ್ ಲೆಗ್, ಡೀಪ್ ಮಿಡ್ ವಿಕೆಟ್, ಲಾಂಗ್ ಮತ್ತು ಥರ್ಡ್ ಮ್ಯಾನ್ ಎನ್ನಲಾಗಿದೆ.  ಆದರೆ ಆನಂತರ ಥರ್ಡ್ ಮ್ಯಾನ್ ಸರ್ಕಲ್ ಒಳಗೆ ಬಂದು ಶಾರ್ಟ್ ಥರ್ಡ್ ಮ್ಯಾನ್ ಜಾಗಕ್ಕೆ ನಿಂತಿದ್ದಾರೆ.

ಆದರೆ ಗ್ರಾಫಿಕ್ ನಲ್ಲಿ ಇದು ಅಪ್ ಡೇಟ್ ಆಗಿಲ್ಲ. ಹಾಗಾಗಿ ಇದು ಗ್ರಾಫಿಕ್ ಬ್ರಾಡ್ ಕಾಸ್ಟ್ ನ ಸಮಸ್ಯೆಯೇ ಹೊರತು ಅಂಪೈರ್ ದಲ್ಲ ಎಂಬುದು ಸ್ಪಷ್ಟವಾಗಿದೆ.

ಈ ಚಿತ್ರದ ಎಡಭಾಗದ ಮೇಲುಭಾಗದಲ್ಲಿ ಶಾರ್ಟ್ ಥರ್ಡ್ ಮ್ಯಾನ್ ಜಾಗದಲ್ಲಿ ಸರ್ಕಲ್ ನ ಒಳಗೆ ಫೀಲ್ಡರ್ ಬಂದು ನಿಂತಿರುವುದನ್ನು ನೀವು ನೋಡಬಹದು. ಹಾಗಾಗಿ ಥರ್ಡ್ ಮ್ಯಾನ್ ಸರ್ಕಲ್ ಒಳಗೆ ಬಂದು ಶಾರ್ಟ್ ಥರ್ಡ್ ಮ್ಯಾನ್ ಜಾಗಕ್ಕೆ ನಿಂತಿರುವುದನ್ನು ಗ್ರಾಫಿಕ್ ಬ್ರಾಡ್ ಕಾಸ್ಟ್ ತೋರಿಸದಿರುವುದೇ ಇಷ್ಟೆಲ್ಲಾ ಅವಾಂತರಗಳಿಗೆ ಕಾರಣವಾಗಿದೆ ಅಷ್ಟೇ. ಸರ್ಕಲ್ ನಿಂದ ಹೊರಗೆ 5 ಜನರು ಮಾತ್ರ ಇರುವುದು ಖಾತ್ರಿಯಾಗಿದೆ. ಆನಂತರ ಆನಂದ್ ನರಸಿಂಹನ್ ರವರು ಇನ್ನೊಂದು ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ.

ಒಟ್ಟಿನಲ್ಲಿ ಲಕ್ಷಾಂತರ ಜನ ಸತ್ಯ ಗೊತ್ತಿಲ್ಲದೇ ಸೋಷಿಯಲ್ ಮೀಡಿಯಾದಲ್ಲಿ ಮನಸ್ಸಿಗೆ ಬಂದ ವಾಗ್ವಾದಗಳನ್ನು ನಡೆಸಿದ್ದರು ಎನ್ನುವುದು ಮಾತ್ರ ಸತ್ಯು. ಹಾಗಾಗಿ ಯಾವುದನ್ನು ಫ್ಯಾಕ್ಟ್ ಚೆಕ್ ಮಾಡದೇ ನಂಬಬಾರದು ಎಂಬುದು ಮತ್ತೆ ಸಾಬೀತಾಗಿದೆ.

ಕೃಪೆ: ಆಲ್ಟ್ ನ್ಯೂಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...