Homeಸಿನಿಮಾಕ್ರೀಡೆಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಫೀಲ್ಡಿಂಗ್ ನಿರ್ಬಂಧಗಳನ್ನು ಮೀರಿದ ಕಾರಣಕ್ಕಾಗಿಯೇ ಧೋನಿಯ ರನ್ ಔಟ್ ಆಯಿತೇ? ಇಲ್ಲಿದೆ...

ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಫೀಲ್ಡಿಂಗ್ ನಿರ್ಬಂಧಗಳನ್ನು ಮೀರಿದ ಕಾರಣಕ್ಕಾಗಿಯೇ ಧೋನಿಯ ರನ್ ಔಟ್ ಆಯಿತೇ? ಇಲ್ಲಿದೆ ಸತ್ಯ

- Advertisement -
- Advertisement -

ಮಹತ್ವದ ಸೆಮಿಫೈನಲ್ ನಲ್ಲಿ ಲೀಗ್ ಹಂತದ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಭಾರತವನ್ನು ನಾಲ್ಕನೇ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ ಮಣಿಸಿ ಫೈನಲ್ ಪ್ರವೇಶಿಸಿದ್ದು ನಿಮಗೆಲ್ಲಾ ಗೊತ್ತಿರುವ ವಿಚಾರ. ಆ ಪಂದ್ಯದ ಸೋಲಿನಲ್ಲಿ ಮಹೇಂದ್ರ ಸಿಂಗ್ ಧೋನಿಯವರ ರನ್ ಔಟ್ ಪ್ರಮುಖ ಪಾತ್ರ ವಹಿಸಿತ್ತು. ರನ್ ಔಟ್ ಆದಾಗ ಧೋನಿ ಅಂಗಳದಲ್ಲಿಯೇ ಕಣ್ಣೀರಾಕಿದ್ದನ್ನು ಅಭಿಮಾನಿಗಳು ಮರೆತಿಲ್ಲ.

ಇದೇ ಸಂದರ್ಭದಲ್ಲಿ ಅಂಪೈರ್ ಗಳ ತಪ್ಪಿನಿಂದಾಗಿ ರನ್ ಔಟ್ ಆಗಿದೆ, 48ನೇ ಓವರ್ ನಲ್ಲಿ ಲಾಕೀ ಫರ್ಗೂಸನ್ ನ ಎಸೆತವನ್ನು ಧೋನಿ ಬಾರಿಸಿದ ಹೊಡೆತದಲ್ಲಿ ಎರಡನೇ ರನ್ ಗಾಗಿ ಧೋನಿ ಓಡುತ್ತಿದ್ದಾಗ ಮಾರ್ಟಿನ್ ಗುಪ್ಟಿಲ್ ನೇರವಾಗಿ ವಿಕೆಟ್ ಗೆ ಬಾಲ್ ಎಸೆದ ಕಾರಣ ಆದ ರನ್ ಔಟ್ ನ ಬಾಲ್ ಕ್ರಮಬದ್ಧವಾಗಿಲ್ಲ ಎಂಬ ಆರೋಪ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೂರನೇ ಪವರ್ ಪ್ಲೆ (41-50 ಓವರ್) ನಲ್ಲಿ ಐದಕ್ಕಿಂತ ಹೆಚ್ಚು ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗೆ ನಿಲ್ಲುವಂತಿಲ್ಲ ಎಂಬ ಐಸಿಸಿ ನಿಯಮವಿದ್ದರೂ ಸಹ ಸೆಮಿಫೈನಲ್ ಪಂದ್ಯದಲ್ಲಿ ಧೋನಿ ಔಟಾದ 48.3ನೇ ಬಾಲ್ ನಲ್ಲಿ ಆರು ಜನ ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗಿದ್ದರು ಅಂಪೈರ್ ಗಮನಿಸಿಲ್ಲ ಎಂಬ ಸ್ಕ್ರೀನ್ ಶಾಟ್ ಎಲ್ಲಾ ಕಡೆ ಹರಿದಾಡಿದೆ.

ಸಿ.ಎನ್.ಎನ್ ನ್ಯೂಸ್18ನ ನಿರೂಪಕ ಆನಂದ್ ನರಸಿಂಹನ್ ರವರು ಆ ಸ್ಕ್ರೀನ್ ಶಾಟ್ ಅನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿ “ಮೂರನೇ ಪವರ್ ಪ್ಲೆ ನಲ್ಲಿ 6 ಜನ ಫೀಲ್ಡರ್ ಗಳು ಸರ್ಕಲ್ ನಿಂದ ಹೊರಗಿರುವುದು ಹೇಗೆ? ಅಂಪೈರ್ ಗಳ ಈ ಮಹಾ ಅಪರಾಧಕ್ಕೆ ಶಿಕ್ಷೆ ಇಲ್ಲವೇ? ಸೆಮಿ ಫೈನಲ್ ನಲ್ಲೇ ಹೀಗಾದರೆ ಹೇಗೆ ಎಂದು ಬರೆದಿದ್ದರು.

ನೂರಾರು ಜನರು ಅಂಪೈರ್ ಗಳ ತಪ್ಪು ಎಂದು  ಈ ಸ್ಕ್ರೀನ್ ಶಾಟ್ ಅನ್ನು ಷೇರ್ ಮಾಡಿದ್ದರು. ಎಂ.ಎಸ್ ಧೋನಿ ಫ್ಯಾನ್ಸ್ ಅಫೀಶಿಯಲ್ ಎನ್ನು 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಟ್ವಿಟ್ಟರ್ ಖಾತೆಯಿಂದಲೂ ಪೋಸ್ಟ ಆಗಿದ್ದಲ್ಲದೇ, ಧೋನಿ ನಾಟ್ ಔಟ್ ಆಗಿದ್ದರೆಂಬ ಯೂಟ್ಯೂಬ್ ವಿಡಿಯೋವೊಂದು ಪೋಸ್ಟ್ ಆಗಿದ್ದು ಅದನ್ನು ಬರೋಬ್ಬರಿ 1 ಕೋಟಿ 30 ಲಕ್ಷ ಜನ ವೀಕ್ಷಿಸಿದ್ದಾರೆ.

ಬಹುಮುಖ್ಯ ಮಾಧ್ಯಮ ಸಂಸ್ಥೆಗಳಾದ ದಿ ಇಂಡಿಯನ್ ಎಕ್ಸ್ ಪ್ರೆಸ್, ಇಂಡಿಯಾ ಟುಡೆ, ಆಜ್ ತಕ್ ಮುಂತಾದವುಗಳು ಸಹ ಫೀಲ್ಡಿಂಗ್ ನಿರ್ಬಂಧದ ಅಂಪೈರ್ ಗಳ ತಪ್ಪಿನಿಂದಾಗಿ ಧೋನಿ ಔಟಾಗಿರುವ ಸಾಧ್ಯತೆಯಿದೆ ಎಂಬ ವರದಿಗಳನ್ನು ಪ್ರಕಟಿಸಿದ್ದವು.

ಹಾಗಾದರೆ ಆ 48ನೇ ಓವರ್ ನಲ್ಲಿ ಆಗಿದ್ದಾದರೂ ಏನು?

ಈ ಕುರಿತು ಸ್ವತಂತ್ರ ಮಾಧ್ಯಮ ಸಂಸ್ಥೆ ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿದೆ. ಸ್ಕ್ರೀನ್ ಶಾಟ್ ನಲ್ಲಿ ಕಾಣುತ್ತಿರುವ ಫೀಲ್ಡರ್ ಗಳ ಗ್ರಾಫಿಕ್ ನಲ್ಲಿ ತಪ್ಪಾಗಿದೆಯೇ ಹೊರತು ಅಂಪೈರ್ ನಿಂದಲ್ಲ ಎಂದು ಕಂಡಬಂದಿದೆ. ಆ ಓವರ್ ನ ಮೂರು ಬಾಲ್ ಗಳಲ್ಲಿ ಏನಾಯಿತು, ಫೀಲ್ಡರ್ ಗಳು ಯಾವ ಯಾವ ಜಾಗದಲ್ಲಿ ನಿಂತಿದ್ದರು ಎಂಬುದನ್ನು ಒಂದೊಂದಾಗಿ ನೋಡೋಣ

ಮೊದಲ ಬಾಲ್ (48.1 ಓವರ್ಸ್)

ಈ ಎಸೆತದಲ್ಲಿ ಐದು ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗಿದ್ದರು. ಅಂದರೆ ಥರ್ಡ್ ಮ್ಯಾನ್, ಡೀಪ್ ಫೈನ್ ಲೆಗ್, ಡೀಪ್ ಪಾಯಿಂಟ್, ಡೀಪ್ ಸ್ಕೇರ್ ಲೆಗ್ ಮತ್ತು ಲಾಂಗ್ ಆನ್ ನಲ್ಲಿ ನಿಂತಿದ್ದರು. ಫರ್ಗೂಸನ್ ಎಸೆದ ಆ ಬಾಲ್ ಅನ್ನು ಧೋನಿ ಸಿಕ್ಸ್ ಸಿಡಿಸಿದ್ದರು.

ಎರಡನೇ ಬಾಲ್ (48.2 ಓವರ್ಸ್)

ಈ ಎಸೆತದಲ್ಲಿ ಮಿಡ್ ವಿಕೆಟ್ ನಲ್ಲಿದ್ದ ಫೀಲ್ಡರ್ ಹಿಂದಕ್ಕೆ ಚಲಿಸಿದ್ದಾರೆ ಮತ್ತು ಡೀಪ್ ಫೈನ್ ಲೆಗ್ ನಲ್ಲಿದ್ದ ಫೀಲ್ಡರ್ ಸರ್ಕಲ್ ನ ಒಳಗೆ ಬಂದಿದ್ದಾರೆ. ಈ ಬಾಲ್ ನಲ್ಲಿ ಯಾವುದೇ ರನ್ ಬಂದಿಲ್ಲ.

ಮೂರನೇ ಬಾಲ್ (48.3 ಓವರ್ಸ್)

ಈ ಎಸೆತದಲ್ಲಿಯೇ ಆರು ಜನ ಹೊರಗಿರುವಂತೆ ಮೇಲಿನ ಸ್ಕ್ರೀನ್ ಶಾಟ್ ನಲ್ಲಿ ಆರೋಪಿಸಲಾಗಿದೆ. ಡೀಪ್ ಪಾಯಿಂಟ್, ಡೀಪ್ ಫೈನ್ ಲೆಗ್, ಡೀಪ್ ಸ್ಕ್ವೇರ್ ಲೆಗ್, ಡೀಪ್ ಮಿಡ್ ವಿಕೆಟ್, ಲಾಂಗ್ ಮತ್ತು ಥರ್ಡ್ ಮ್ಯಾನ್ ಎನ್ನಲಾಗಿದೆ.  ಆದರೆ ಆನಂತರ ಥರ್ಡ್ ಮ್ಯಾನ್ ಸರ್ಕಲ್ ಒಳಗೆ ಬಂದು ಶಾರ್ಟ್ ಥರ್ಡ್ ಮ್ಯಾನ್ ಜಾಗಕ್ಕೆ ನಿಂತಿದ್ದಾರೆ.

ಆದರೆ ಗ್ರಾಫಿಕ್ ನಲ್ಲಿ ಇದು ಅಪ್ ಡೇಟ್ ಆಗಿಲ್ಲ. ಹಾಗಾಗಿ ಇದು ಗ್ರಾಫಿಕ್ ಬ್ರಾಡ್ ಕಾಸ್ಟ್ ನ ಸಮಸ್ಯೆಯೇ ಹೊರತು ಅಂಪೈರ್ ದಲ್ಲ ಎಂಬುದು ಸ್ಪಷ್ಟವಾಗಿದೆ.

ಈ ಚಿತ್ರದ ಎಡಭಾಗದ ಮೇಲುಭಾಗದಲ್ಲಿ ಶಾರ್ಟ್ ಥರ್ಡ್ ಮ್ಯಾನ್ ಜಾಗದಲ್ಲಿ ಸರ್ಕಲ್ ನ ಒಳಗೆ ಫೀಲ್ಡರ್ ಬಂದು ನಿಂತಿರುವುದನ್ನು ನೀವು ನೋಡಬಹದು. ಹಾಗಾಗಿ ಥರ್ಡ್ ಮ್ಯಾನ್ ಸರ್ಕಲ್ ಒಳಗೆ ಬಂದು ಶಾರ್ಟ್ ಥರ್ಡ್ ಮ್ಯಾನ್ ಜಾಗಕ್ಕೆ ನಿಂತಿರುವುದನ್ನು ಗ್ರಾಫಿಕ್ ಬ್ರಾಡ್ ಕಾಸ್ಟ್ ತೋರಿಸದಿರುವುದೇ ಇಷ್ಟೆಲ್ಲಾ ಅವಾಂತರಗಳಿಗೆ ಕಾರಣವಾಗಿದೆ ಅಷ್ಟೇ. ಸರ್ಕಲ್ ನಿಂದ ಹೊರಗೆ 5 ಜನರು ಮಾತ್ರ ಇರುವುದು ಖಾತ್ರಿಯಾಗಿದೆ. ಆನಂತರ ಆನಂದ್ ನರಸಿಂಹನ್ ರವರು ಇನ್ನೊಂದು ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ.

ಒಟ್ಟಿನಲ್ಲಿ ಲಕ್ಷಾಂತರ ಜನ ಸತ್ಯ ಗೊತ್ತಿಲ್ಲದೇ ಸೋಷಿಯಲ್ ಮೀಡಿಯಾದಲ್ಲಿ ಮನಸ್ಸಿಗೆ ಬಂದ ವಾಗ್ವಾದಗಳನ್ನು ನಡೆಸಿದ್ದರು ಎನ್ನುವುದು ಮಾತ್ರ ಸತ್ಯು. ಹಾಗಾಗಿ ಯಾವುದನ್ನು ಫ್ಯಾಕ್ಟ್ ಚೆಕ್ ಮಾಡದೇ ನಂಬಬಾರದು ಎಂಬುದು ಮತ್ತೆ ಸಾಬೀತಾಗಿದೆ.

ಕೃಪೆ: ಆಲ್ಟ್ ನ್ಯೂಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....