Homeಸಿನಿಮಾಕ್ರೀಡೆಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಫೀಲ್ಡಿಂಗ್ ನಿರ್ಬಂಧಗಳನ್ನು ಮೀರಿದ ಕಾರಣಕ್ಕಾಗಿಯೇ ಧೋನಿಯ ರನ್ ಔಟ್ ಆಯಿತೇ? ಇಲ್ಲಿದೆ...

ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಫೀಲ್ಡಿಂಗ್ ನಿರ್ಬಂಧಗಳನ್ನು ಮೀರಿದ ಕಾರಣಕ್ಕಾಗಿಯೇ ಧೋನಿಯ ರನ್ ಔಟ್ ಆಯಿತೇ? ಇಲ್ಲಿದೆ ಸತ್ಯ

- Advertisement -
- Advertisement -

ಮಹತ್ವದ ಸೆಮಿಫೈನಲ್ ನಲ್ಲಿ ಲೀಗ್ ಹಂತದ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಭಾರತವನ್ನು ನಾಲ್ಕನೇ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ ಮಣಿಸಿ ಫೈನಲ್ ಪ್ರವೇಶಿಸಿದ್ದು ನಿಮಗೆಲ್ಲಾ ಗೊತ್ತಿರುವ ವಿಚಾರ. ಆ ಪಂದ್ಯದ ಸೋಲಿನಲ್ಲಿ ಮಹೇಂದ್ರ ಸಿಂಗ್ ಧೋನಿಯವರ ರನ್ ಔಟ್ ಪ್ರಮುಖ ಪಾತ್ರ ವಹಿಸಿತ್ತು. ರನ್ ಔಟ್ ಆದಾಗ ಧೋನಿ ಅಂಗಳದಲ್ಲಿಯೇ ಕಣ್ಣೀರಾಕಿದ್ದನ್ನು ಅಭಿಮಾನಿಗಳು ಮರೆತಿಲ್ಲ.

ಇದೇ ಸಂದರ್ಭದಲ್ಲಿ ಅಂಪೈರ್ ಗಳ ತಪ್ಪಿನಿಂದಾಗಿ ರನ್ ಔಟ್ ಆಗಿದೆ, 48ನೇ ಓವರ್ ನಲ್ಲಿ ಲಾಕೀ ಫರ್ಗೂಸನ್ ನ ಎಸೆತವನ್ನು ಧೋನಿ ಬಾರಿಸಿದ ಹೊಡೆತದಲ್ಲಿ ಎರಡನೇ ರನ್ ಗಾಗಿ ಧೋನಿ ಓಡುತ್ತಿದ್ದಾಗ ಮಾರ್ಟಿನ್ ಗುಪ್ಟಿಲ್ ನೇರವಾಗಿ ವಿಕೆಟ್ ಗೆ ಬಾಲ್ ಎಸೆದ ಕಾರಣ ಆದ ರನ್ ಔಟ್ ನ ಬಾಲ್ ಕ್ರಮಬದ್ಧವಾಗಿಲ್ಲ ಎಂಬ ಆರೋಪ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೂರನೇ ಪವರ್ ಪ್ಲೆ (41-50 ಓವರ್) ನಲ್ಲಿ ಐದಕ್ಕಿಂತ ಹೆಚ್ಚು ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗೆ ನಿಲ್ಲುವಂತಿಲ್ಲ ಎಂಬ ಐಸಿಸಿ ನಿಯಮವಿದ್ದರೂ ಸಹ ಸೆಮಿಫೈನಲ್ ಪಂದ್ಯದಲ್ಲಿ ಧೋನಿ ಔಟಾದ 48.3ನೇ ಬಾಲ್ ನಲ್ಲಿ ಆರು ಜನ ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗಿದ್ದರು ಅಂಪೈರ್ ಗಮನಿಸಿಲ್ಲ ಎಂಬ ಸ್ಕ್ರೀನ್ ಶಾಟ್ ಎಲ್ಲಾ ಕಡೆ ಹರಿದಾಡಿದೆ.

ಸಿ.ಎನ್.ಎನ್ ನ್ಯೂಸ್18ನ ನಿರೂಪಕ ಆನಂದ್ ನರಸಿಂಹನ್ ರವರು ಆ ಸ್ಕ್ರೀನ್ ಶಾಟ್ ಅನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿ “ಮೂರನೇ ಪವರ್ ಪ್ಲೆ ನಲ್ಲಿ 6 ಜನ ಫೀಲ್ಡರ್ ಗಳು ಸರ್ಕಲ್ ನಿಂದ ಹೊರಗಿರುವುದು ಹೇಗೆ? ಅಂಪೈರ್ ಗಳ ಈ ಮಹಾ ಅಪರಾಧಕ್ಕೆ ಶಿಕ್ಷೆ ಇಲ್ಲವೇ? ಸೆಮಿ ಫೈನಲ್ ನಲ್ಲೇ ಹೀಗಾದರೆ ಹೇಗೆ ಎಂದು ಬರೆದಿದ್ದರು.

ನೂರಾರು ಜನರು ಅಂಪೈರ್ ಗಳ ತಪ್ಪು ಎಂದು  ಈ ಸ್ಕ್ರೀನ್ ಶಾಟ್ ಅನ್ನು ಷೇರ್ ಮಾಡಿದ್ದರು. ಎಂ.ಎಸ್ ಧೋನಿ ಫ್ಯಾನ್ಸ್ ಅಫೀಶಿಯಲ್ ಎನ್ನು 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಟ್ವಿಟ್ಟರ್ ಖಾತೆಯಿಂದಲೂ ಪೋಸ್ಟ ಆಗಿದ್ದಲ್ಲದೇ, ಧೋನಿ ನಾಟ್ ಔಟ್ ಆಗಿದ್ದರೆಂಬ ಯೂಟ್ಯೂಬ್ ವಿಡಿಯೋವೊಂದು ಪೋಸ್ಟ್ ಆಗಿದ್ದು ಅದನ್ನು ಬರೋಬ್ಬರಿ 1 ಕೋಟಿ 30 ಲಕ್ಷ ಜನ ವೀಕ್ಷಿಸಿದ್ದಾರೆ.

ಬಹುಮುಖ್ಯ ಮಾಧ್ಯಮ ಸಂಸ್ಥೆಗಳಾದ ದಿ ಇಂಡಿಯನ್ ಎಕ್ಸ್ ಪ್ರೆಸ್, ಇಂಡಿಯಾ ಟುಡೆ, ಆಜ್ ತಕ್ ಮುಂತಾದವುಗಳು ಸಹ ಫೀಲ್ಡಿಂಗ್ ನಿರ್ಬಂಧದ ಅಂಪೈರ್ ಗಳ ತಪ್ಪಿನಿಂದಾಗಿ ಧೋನಿ ಔಟಾಗಿರುವ ಸಾಧ್ಯತೆಯಿದೆ ಎಂಬ ವರದಿಗಳನ್ನು ಪ್ರಕಟಿಸಿದ್ದವು.

ಹಾಗಾದರೆ ಆ 48ನೇ ಓವರ್ ನಲ್ಲಿ ಆಗಿದ್ದಾದರೂ ಏನು?

ಈ ಕುರಿತು ಸ್ವತಂತ್ರ ಮಾಧ್ಯಮ ಸಂಸ್ಥೆ ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿದೆ. ಸ್ಕ್ರೀನ್ ಶಾಟ್ ನಲ್ಲಿ ಕಾಣುತ್ತಿರುವ ಫೀಲ್ಡರ್ ಗಳ ಗ್ರಾಫಿಕ್ ನಲ್ಲಿ ತಪ್ಪಾಗಿದೆಯೇ ಹೊರತು ಅಂಪೈರ್ ನಿಂದಲ್ಲ ಎಂದು ಕಂಡಬಂದಿದೆ. ಆ ಓವರ್ ನ ಮೂರು ಬಾಲ್ ಗಳಲ್ಲಿ ಏನಾಯಿತು, ಫೀಲ್ಡರ್ ಗಳು ಯಾವ ಯಾವ ಜಾಗದಲ್ಲಿ ನಿಂತಿದ್ದರು ಎಂಬುದನ್ನು ಒಂದೊಂದಾಗಿ ನೋಡೋಣ

ಮೊದಲ ಬಾಲ್ (48.1 ಓವರ್ಸ್)

ಈ ಎಸೆತದಲ್ಲಿ ಐದು ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗಿದ್ದರು. ಅಂದರೆ ಥರ್ಡ್ ಮ್ಯಾನ್, ಡೀಪ್ ಫೈನ್ ಲೆಗ್, ಡೀಪ್ ಪಾಯಿಂಟ್, ಡೀಪ್ ಸ್ಕೇರ್ ಲೆಗ್ ಮತ್ತು ಲಾಂಗ್ ಆನ್ ನಲ್ಲಿ ನಿಂತಿದ್ದರು. ಫರ್ಗೂಸನ್ ಎಸೆದ ಆ ಬಾಲ್ ಅನ್ನು ಧೋನಿ ಸಿಕ್ಸ್ ಸಿಡಿಸಿದ್ದರು.

ಎರಡನೇ ಬಾಲ್ (48.2 ಓವರ್ಸ್)

ಈ ಎಸೆತದಲ್ಲಿ ಮಿಡ್ ವಿಕೆಟ್ ನಲ್ಲಿದ್ದ ಫೀಲ್ಡರ್ ಹಿಂದಕ್ಕೆ ಚಲಿಸಿದ್ದಾರೆ ಮತ್ತು ಡೀಪ್ ಫೈನ್ ಲೆಗ್ ನಲ್ಲಿದ್ದ ಫೀಲ್ಡರ್ ಸರ್ಕಲ್ ನ ಒಳಗೆ ಬಂದಿದ್ದಾರೆ. ಈ ಬಾಲ್ ನಲ್ಲಿ ಯಾವುದೇ ರನ್ ಬಂದಿಲ್ಲ.

ಮೂರನೇ ಬಾಲ್ (48.3 ಓವರ್ಸ್)

ಈ ಎಸೆತದಲ್ಲಿಯೇ ಆರು ಜನ ಹೊರಗಿರುವಂತೆ ಮೇಲಿನ ಸ್ಕ್ರೀನ್ ಶಾಟ್ ನಲ್ಲಿ ಆರೋಪಿಸಲಾಗಿದೆ. ಡೀಪ್ ಪಾಯಿಂಟ್, ಡೀಪ್ ಫೈನ್ ಲೆಗ್, ಡೀಪ್ ಸ್ಕ್ವೇರ್ ಲೆಗ್, ಡೀಪ್ ಮಿಡ್ ವಿಕೆಟ್, ಲಾಂಗ್ ಮತ್ತು ಥರ್ಡ್ ಮ್ಯಾನ್ ಎನ್ನಲಾಗಿದೆ.  ಆದರೆ ಆನಂತರ ಥರ್ಡ್ ಮ್ಯಾನ್ ಸರ್ಕಲ್ ಒಳಗೆ ಬಂದು ಶಾರ್ಟ್ ಥರ್ಡ್ ಮ್ಯಾನ್ ಜಾಗಕ್ಕೆ ನಿಂತಿದ್ದಾರೆ.

ಆದರೆ ಗ್ರಾಫಿಕ್ ನಲ್ಲಿ ಇದು ಅಪ್ ಡೇಟ್ ಆಗಿಲ್ಲ. ಹಾಗಾಗಿ ಇದು ಗ್ರಾಫಿಕ್ ಬ್ರಾಡ್ ಕಾಸ್ಟ್ ನ ಸಮಸ್ಯೆಯೇ ಹೊರತು ಅಂಪೈರ್ ದಲ್ಲ ಎಂಬುದು ಸ್ಪಷ್ಟವಾಗಿದೆ.

ಈ ಚಿತ್ರದ ಎಡಭಾಗದ ಮೇಲುಭಾಗದಲ್ಲಿ ಶಾರ್ಟ್ ಥರ್ಡ್ ಮ್ಯಾನ್ ಜಾಗದಲ್ಲಿ ಸರ್ಕಲ್ ನ ಒಳಗೆ ಫೀಲ್ಡರ್ ಬಂದು ನಿಂತಿರುವುದನ್ನು ನೀವು ನೋಡಬಹದು. ಹಾಗಾಗಿ ಥರ್ಡ್ ಮ್ಯಾನ್ ಸರ್ಕಲ್ ಒಳಗೆ ಬಂದು ಶಾರ್ಟ್ ಥರ್ಡ್ ಮ್ಯಾನ್ ಜಾಗಕ್ಕೆ ನಿಂತಿರುವುದನ್ನು ಗ್ರಾಫಿಕ್ ಬ್ರಾಡ್ ಕಾಸ್ಟ್ ತೋರಿಸದಿರುವುದೇ ಇಷ್ಟೆಲ್ಲಾ ಅವಾಂತರಗಳಿಗೆ ಕಾರಣವಾಗಿದೆ ಅಷ್ಟೇ. ಸರ್ಕಲ್ ನಿಂದ ಹೊರಗೆ 5 ಜನರು ಮಾತ್ರ ಇರುವುದು ಖಾತ್ರಿಯಾಗಿದೆ. ಆನಂತರ ಆನಂದ್ ನರಸಿಂಹನ್ ರವರು ಇನ್ನೊಂದು ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ.

ಒಟ್ಟಿನಲ್ಲಿ ಲಕ್ಷಾಂತರ ಜನ ಸತ್ಯ ಗೊತ್ತಿಲ್ಲದೇ ಸೋಷಿಯಲ್ ಮೀಡಿಯಾದಲ್ಲಿ ಮನಸ್ಸಿಗೆ ಬಂದ ವಾಗ್ವಾದಗಳನ್ನು ನಡೆಸಿದ್ದರು ಎನ್ನುವುದು ಮಾತ್ರ ಸತ್ಯು. ಹಾಗಾಗಿ ಯಾವುದನ್ನು ಫ್ಯಾಕ್ಟ್ ಚೆಕ್ ಮಾಡದೇ ನಂಬಬಾರದು ಎಂಬುದು ಮತ್ತೆ ಸಾಬೀತಾಗಿದೆ.

ಕೃಪೆ: ಆಲ್ಟ್ ನ್ಯೂಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...