Homeಸಿನಿಮಾಕ್ರೀಡೆಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಫೀಲ್ಡಿಂಗ್ ನಿರ್ಬಂಧಗಳನ್ನು ಮೀರಿದ ಕಾರಣಕ್ಕಾಗಿಯೇ ಧೋನಿಯ ರನ್ ಔಟ್ ಆಯಿತೇ? ಇಲ್ಲಿದೆ...

ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಫೀಲ್ಡಿಂಗ್ ನಿರ್ಬಂಧಗಳನ್ನು ಮೀರಿದ ಕಾರಣಕ್ಕಾಗಿಯೇ ಧೋನಿಯ ರನ್ ಔಟ್ ಆಯಿತೇ? ಇಲ್ಲಿದೆ ಸತ್ಯ

- Advertisement -
- Advertisement -

ಮಹತ್ವದ ಸೆಮಿಫೈನಲ್ ನಲ್ಲಿ ಲೀಗ್ ಹಂತದ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಭಾರತವನ್ನು ನಾಲ್ಕನೇ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ ಮಣಿಸಿ ಫೈನಲ್ ಪ್ರವೇಶಿಸಿದ್ದು ನಿಮಗೆಲ್ಲಾ ಗೊತ್ತಿರುವ ವಿಚಾರ. ಆ ಪಂದ್ಯದ ಸೋಲಿನಲ್ಲಿ ಮಹೇಂದ್ರ ಸಿಂಗ್ ಧೋನಿಯವರ ರನ್ ಔಟ್ ಪ್ರಮುಖ ಪಾತ್ರ ವಹಿಸಿತ್ತು. ರನ್ ಔಟ್ ಆದಾಗ ಧೋನಿ ಅಂಗಳದಲ್ಲಿಯೇ ಕಣ್ಣೀರಾಕಿದ್ದನ್ನು ಅಭಿಮಾನಿಗಳು ಮರೆತಿಲ್ಲ.

ಇದೇ ಸಂದರ್ಭದಲ್ಲಿ ಅಂಪೈರ್ ಗಳ ತಪ್ಪಿನಿಂದಾಗಿ ರನ್ ಔಟ್ ಆಗಿದೆ, 48ನೇ ಓವರ್ ನಲ್ಲಿ ಲಾಕೀ ಫರ್ಗೂಸನ್ ನ ಎಸೆತವನ್ನು ಧೋನಿ ಬಾರಿಸಿದ ಹೊಡೆತದಲ್ಲಿ ಎರಡನೇ ರನ್ ಗಾಗಿ ಧೋನಿ ಓಡುತ್ತಿದ್ದಾಗ ಮಾರ್ಟಿನ್ ಗುಪ್ಟಿಲ್ ನೇರವಾಗಿ ವಿಕೆಟ್ ಗೆ ಬಾಲ್ ಎಸೆದ ಕಾರಣ ಆದ ರನ್ ಔಟ್ ನ ಬಾಲ್ ಕ್ರಮಬದ್ಧವಾಗಿಲ್ಲ ಎಂಬ ಆರೋಪ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೂರನೇ ಪವರ್ ಪ್ಲೆ (41-50 ಓವರ್) ನಲ್ಲಿ ಐದಕ್ಕಿಂತ ಹೆಚ್ಚು ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗೆ ನಿಲ್ಲುವಂತಿಲ್ಲ ಎಂಬ ಐಸಿಸಿ ನಿಯಮವಿದ್ದರೂ ಸಹ ಸೆಮಿಫೈನಲ್ ಪಂದ್ಯದಲ್ಲಿ ಧೋನಿ ಔಟಾದ 48.3ನೇ ಬಾಲ್ ನಲ್ಲಿ ಆರು ಜನ ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗಿದ್ದರು ಅಂಪೈರ್ ಗಮನಿಸಿಲ್ಲ ಎಂಬ ಸ್ಕ್ರೀನ್ ಶಾಟ್ ಎಲ್ಲಾ ಕಡೆ ಹರಿದಾಡಿದೆ.

ಸಿ.ಎನ್.ಎನ್ ನ್ಯೂಸ್18ನ ನಿರೂಪಕ ಆನಂದ್ ನರಸಿಂಹನ್ ರವರು ಆ ಸ್ಕ್ರೀನ್ ಶಾಟ್ ಅನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿ “ಮೂರನೇ ಪವರ್ ಪ್ಲೆ ನಲ್ಲಿ 6 ಜನ ಫೀಲ್ಡರ್ ಗಳು ಸರ್ಕಲ್ ನಿಂದ ಹೊರಗಿರುವುದು ಹೇಗೆ? ಅಂಪೈರ್ ಗಳ ಈ ಮಹಾ ಅಪರಾಧಕ್ಕೆ ಶಿಕ್ಷೆ ಇಲ್ಲವೇ? ಸೆಮಿ ಫೈನಲ್ ನಲ್ಲೇ ಹೀಗಾದರೆ ಹೇಗೆ ಎಂದು ಬರೆದಿದ್ದರು.

ನೂರಾರು ಜನರು ಅಂಪೈರ್ ಗಳ ತಪ್ಪು ಎಂದು  ಈ ಸ್ಕ್ರೀನ್ ಶಾಟ್ ಅನ್ನು ಷೇರ್ ಮಾಡಿದ್ದರು. ಎಂ.ಎಸ್ ಧೋನಿ ಫ್ಯಾನ್ಸ್ ಅಫೀಶಿಯಲ್ ಎನ್ನು 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಟ್ವಿಟ್ಟರ್ ಖಾತೆಯಿಂದಲೂ ಪೋಸ್ಟ ಆಗಿದ್ದಲ್ಲದೇ, ಧೋನಿ ನಾಟ್ ಔಟ್ ಆಗಿದ್ದರೆಂಬ ಯೂಟ್ಯೂಬ್ ವಿಡಿಯೋವೊಂದು ಪೋಸ್ಟ್ ಆಗಿದ್ದು ಅದನ್ನು ಬರೋಬ್ಬರಿ 1 ಕೋಟಿ 30 ಲಕ್ಷ ಜನ ವೀಕ್ಷಿಸಿದ್ದಾರೆ.

ಬಹುಮುಖ್ಯ ಮಾಧ್ಯಮ ಸಂಸ್ಥೆಗಳಾದ ದಿ ಇಂಡಿಯನ್ ಎಕ್ಸ್ ಪ್ರೆಸ್, ಇಂಡಿಯಾ ಟುಡೆ, ಆಜ್ ತಕ್ ಮುಂತಾದವುಗಳು ಸಹ ಫೀಲ್ಡಿಂಗ್ ನಿರ್ಬಂಧದ ಅಂಪೈರ್ ಗಳ ತಪ್ಪಿನಿಂದಾಗಿ ಧೋನಿ ಔಟಾಗಿರುವ ಸಾಧ್ಯತೆಯಿದೆ ಎಂಬ ವರದಿಗಳನ್ನು ಪ್ರಕಟಿಸಿದ್ದವು.

ಹಾಗಾದರೆ ಆ 48ನೇ ಓವರ್ ನಲ್ಲಿ ಆಗಿದ್ದಾದರೂ ಏನು?

ಈ ಕುರಿತು ಸ್ವತಂತ್ರ ಮಾಧ್ಯಮ ಸಂಸ್ಥೆ ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿದೆ. ಸ್ಕ್ರೀನ್ ಶಾಟ್ ನಲ್ಲಿ ಕಾಣುತ್ತಿರುವ ಫೀಲ್ಡರ್ ಗಳ ಗ್ರಾಫಿಕ್ ನಲ್ಲಿ ತಪ್ಪಾಗಿದೆಯೇ ಹೊರತು ಅಂಪೈರ್ ನಿಂದಲ್ಲ ಎಂದು ಕಂಡಬಂದಿದೆ. ಆ ಓವರ್ ನ ಮೂರು ಬಾಲ್ ಗಳಲ್ಲಿ ಏನಾಯಿತು, ಫೀಲ್ಡರ್ ಗಳು ಯಾವ ಯಾವ ಜಾಗದಲ್ಲಿ ನಿಂತಿದ್ದರು ಎಂಬುದನ್ನು ಒಂದೊಂದಾಗಿ ನೋಡೋಣ

ಮೊದಲ ಬಾಲ್ (48.1 ಓವರ್ಸ್)

ಈ ಎಸೆತದಲ್ಲಿ ಐದು ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗಿದ್ದರು. ಅಂದರೆ ಥರ್ಡ್ ಮ್ಯಾನ್, ಡೀಪ್ ಫೈನ್ ಲೆಗ್, ಡೀಪ್ ಪಾಯಿಂಟ್, ಡೀಪ್ ಸ್ಕೇರ್ ಲೆಗ್ ಮತ್ತು ಲಾಂಗ್ ಆನ್ ನಲ್ಲಿ ನಿಂತಿದ್ದರು. ಫರ್ಗೂಸನ್ ಎಸೆದ ಆ ಬಾಲ್ ಅನ್ನು ಧೋನಿ ಸಿಕ್ಸ್ ಸಿಡಿಸಿದ್ದರು.

ಎರಡನೇ ಬಾಲ್ (48.2 ಓವರ್ಸ್)

ಈ ಎಸೆತದಲ್ಲಿ ಮಿಡ್ ವಿಕೆಟ್ ನಲ್ಲಿದ್ದ ಫೀಲ್ಡರ್ ಹಿಂದಕ್ಕೆ ಚಲಿಸಿದ್ದಾರೆ ಮತ್ತು ಡೀಪ್ ಫೈನ್ ಲೆಗ್ ನಲ್ಲಿದ್ದ ಫೀಲ್ಡರ್ ಸರ್ಕಲ್ ನ ಒಳಗೆ ಬಂದಿದ್ದಾರೆ. ಈ ಬಾಲ್ ನಲ್ಲಿ ಯಾವುದೇ ರನ್ ಬಂದಿಲ್ಲ.

ಮೂರನೇ ಬಾಲ್ (48.3 ಓವರ್ಸ್)

ಈ ಎಸೆತದಲ್ಲಿಯೇ ಆರು ಜನ ಹೊರಗಿರುವಂತೆ ಮೇಲಿನ ಸ್ಕ್ರೀನ್ ಶಾಟ್ ನಲ್ಲಿ ಆರೋಪಿಸಲಾಗಿದೆ. ಡೀಪ್ ಪಾಯಿಂಟ್, ಡೀಪ್ ಫೈನ್ ಲೆಗ್, ಡೀಪ್ ಸ್ಕ್ವೇರ್ ಲೆಗ್, ಡೀಪ್ ಮಿಡ್ ವಿಕೆಟ್, ಲಾಂಗ್ ಮತ್ತು ಥರ್ಡ್ ಮ್ಯಾನ್ ಎನ್ನಲಾಗಿದೆ.  ಆದರೆ ಆನಂತರ ಥರ್ಡ್ ಮ್ಯಾನ್ ಸರ್ಕಲ್ ಒಳಗೆ ಬಂದು ಶಾರ್ಟ್ ಥರ್ಡ್ ಮ್ಯಾನ್ ಜಾಗಕ್ಕೆ ನಿಂತಿದ್ದಾರೆ.

ಆದರೆ ಗ್ರಾಫಿಕ್ ನಲ್ಲಿ ಇದು ಅಪ್ ಡೇಟ್ ಆಗಿಲ್ಲ. ಹಾಗಾಗಿ ಇದು ಗ್ರಾಫಿಕ್ ಬ್ರಾಡ್ ಕಾಸ್ಟ್ ನ ಸಮಸ್ಯೆಯೇ ಹೊರತು ಅಂಪೈರ್ ದಲ್ಲ ಎಂಬುದು ಸ್ಪಷ್ಟವಾಗಿದೆ.

ಈ ಚಿತ್ರದ ಎಡಭಾಗದ ಮೇಲುಭಾಗದಲ್ಲಿ ಶಾರ್ಟ್ ಥರ್ಡ್ ಮ್ಯಾನ್ ಜಾಗದಲ್ಲಿ ಸರ್ಕಲ್ ನ ಒಳಗೆ ಫೀಲ್ಡರ್ ಬಂದು ನಿಂತಿರುವುದನ್ನು ನೀವು ನೋಡಬಹದು. ಹಾಗಾಗಿ ಥರ್ಡ್ ಮ್ಯಾನ್ ಸರ್ಕಲ್ ಒಳಗೆ ಬಂದು ಶಾರ್ಟ್ ಥರ್ಡ್ ಮ್ಯಾನ್ ಜಾಗಕ್ಕೆ ನಿಂತಿರುವುದನ್ನು ಗ್ರಾಫಿಕ್ ಬ್ರಾಡ್ ಕಾಸ್ಟ್ ತೋರಿಸದಿರುವುದೇ ಇಷ್ಟೆಲ್ಲಾ ಅವಾಂತರಗಳಿಗೆ ಕಾರಣವಾಗಿದೆ ಅಷ್ಟೇ. ಸರ್ಕಲ್ ನಿಂದ ಹೊರಗೆ 5 ಜನರು ಮಾತ್ರ ಇರುವುದು ಖಾತ್ರಿಯಾಗಿದೆ. ಆನಂತರ ಆನಂದ್ ನರಸಿಂಹನ್ ರವರು ಇನ್ನೊಂದು ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ.

ಒಟ್ಟಿನಲ್ಲಿ ಲಕ್ಷಾಂತರ ಜನ ಸತ್ಯ ಗೊತ್ತಿಲ್ಲದೇ ಸೋಷಿಯಲ್ ಮೀಡಿಯಾದಲ್ಲಿ ಮನಸ್ಸಿಗೆ ಬಂದ ವಾಗ್ವಾದಗಳನ್ನು ನಡೆಸಿದ್ದರು ಎನ್ನುವುದು ಮಾತ್ರ ಸತ್ಯು. ಹಾಗಾಗಿ ಯಾವುದನ್ನು ಫ್ಯಾಕ್ಟ್ ಚೆಕ್ ಮಾಡದೇ ನಂಬಬಾರದು ಎಂಬುದು ಮತ್ತೆ ಸಾಬೀತಾಗಿದೆ.

ಕೃಪೆ: ಆಲ್ಟ್ ನ್ಯೂಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...