Homeಸಿನಿಮಾಕ್ರೀಡೆಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಫೀಲ್ಡಿಂಗ್ ನಿರ್ಬಂಧಗಳನ್ನು ಮೀರಿದ ಕಾರಣಕ್ಕಾಗಿಯೇ ಧೋನಿಯ ರನ್ ಔಟ್ ಆಯಿತೇ? ಇಲ್ಲಿದೆ...

ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಫೀಲ್ಡಿಂಗ್ ನಿರ್ಬಂಧಗಳನ್ನು ಮೀರಿದ ಕಾರಣಕ್ಕಾಗಿಯೇ ಧೋನಿಯ ರನ್ ಔಟ್ ಆಯಿತೇ? ಇಲ್ಲಿದೆ ಸತ್ಯ

- Advertisement -
- Advertisement -

ಮಹತ್ವದ ಸೆಮಿಫೈನಲ್ ನಲ್ಲಿ ಲೀಗ್ ಹಂತದ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಭಾರತವನ್ನು ನಾಲ್ಕನೇ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ ಮಣಿಸಿ ಫೈನಲ್ ಪ್ರವೇಶಿಸಿದ್ದು ನಿಮಗೆಲ್ಲಾ ಗೊತ್ತಿರುವ ವಿಚಾರ. ಆ ಪಂದ್ಯದ ಸೋಲಿನಲ್ಲಿ ಮಹೇಂದ್ರ ಸಿಂಗ್ ಧೋನಿಯವರ ರನ್ ಔಟ್ ಪ್ರಮುಖ ಪಾತ್ರ ವಹಿಸಿತ್ತು. ರನ್ ಔಟ್ ಆದಾಗ ಧೋನಿ ಅಂಗಳದಲ್ಲಿಯೇ ಕಣ್ಣೀರಾಕಿದ್ದನ್ನು ಅಭಿಮಾನಿಗಳು ಮರೆತಿಲ್ಲ.

ಇದೇ ಸಂದರ್ಭದಲ್ಲಿ ಅಂಪೈರ್ ಗಳ ತಪ್ಪಿನಿಂದಾಗಿ ರನ್ ಔಟ್ ಆಗಿದೆ, 48ನೇ ಓವರ್ ನಲ್ಲಿ ಲಾಕೀ ಫರ್ಗೂಸನ್ ನ ಎಸೆತವನ್ನು ಧೋನಿ ಬಾರಿಸಿದ ಹೊಡೆತದಲ್ಲಿ ಎರಡನೇ ರನ್ ಗಾಗಿ ಧೋನಿ ಓಡುತ್ತಿದ್ದಾಗ ಮಾರ್ಟಿನ್ ಗುಪ್ಟಿಲ್ ನೇರವಾಗಿ ವಿಕೆಟ್ ಗೆ ಬಾಲ್ ಎಸೆದ ಕಾರಣ ಆದ ರನ್ ಔಟ್ ನ ಬಾಲ್ ಕ್ರಮಬದ್ಧವಾಗಿಲ್ಲ ಎಂಬ ಆರೋಪ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೂರನೇ ಪವರ್ ಪ್ಲೆ (41-50 ಓವರ್) ನಲ್ಲಿ ಐದಕ್ಕಿಂತ ಹೆಚ್ಚು ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗೆ ನಿಲ್ಲುವಂತಿಲ್ಲ ಎಂಬ ಐಸಿಸಿ ನಿಯಮವಿದ್ದರೂ ಸಹ ಸೆಮಿಫೈನಲ್ ಪಂದ್ಯದಲ್ಲಿ ಧೋನಿ ಔಟಾದ 48.3ನೇ ಬಾಲ್ ನಲ್ಲಿ ಆರು ಜನ ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗಿದ್ದರು ಅಂಪೈರ್ ಗಮನಿಸಿಲ್ಲ ಎಂಬ ಸ್ಕ್ರೀನ್ ಶಾಟ್ ಎಲ್ಲಾ ಕಡೆ ಹರಿದಾಡಿದೆ.

ಸಿ.ಎನ್.ಎನ್ ನ್ಯೂಸ್18ನ ನಿರೂಪಕ ಆನಂದ್ ನರಸಿಂಹನ್ ರವರು ಆ ಸ್ಕ್ರೀನ್ ಶಾಟ್ ಅನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿ “ಮೂರನೇ ಪವರ್ ಪ್ಲೆ ನಲ್ಲಿ 6 ಜನ ಫೀಲ್ಡರ್ ಗಳು ಸರ್ಕಲ್ ನಿಂದ ಹೊರಗಿರುವುದು ಹೇಗೆ? ಅಂಪೈರ್ ಗಳ ಈ ಮಹಾ ಅಪರಾಧಕ್ಕೆ ಶಿಕ್ಷೆ ಇಲ್ಲವೇ? ಸೆಮಿ ಫೈನಲ್ ನಲ್ಲೇ ಹೀಗಾದರೆ ಹೇಗೆ ಎಂದು ಬರೆದಿದ್ದರು.

ನೂರಾರು ಜನರು ಅಂಪೈರ್ ಗಳ ತಪ್ಪು ಎಂದು  ಈ ಸ್ಕ್ರೀನ್ ಶಾಟ್ ಅನ್ನು ಷೇರ್ ಮಾಡಿದ್ದರು. ಎಂ.ಎಸ್ ಧೋನಿ ಫ್ಯಾನ್ಸ್ ಅಫೀಶಿಯಲ್ ಎನ್ನು 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಟ್ವಿಟ್ಟರ್ ಖಾತೆಯಿಂದಲೂ ಪೋಸ್ಟ ಆಗಿದ್ದಲ್ಲದೇ, ಧೋನಿ ನಾಟ್ ಔಟ್ ಆಗಿದ್ದರೆಂಬ ಯೂಟ್ಯೂಬ್ ವಿಡಿಯೋವೊಂದು ಪೋಸ್ಟ್ ಆಗಿದ್ದು ಅದನ್ನು ಬರೋಬ್ಬರಿ 1 ಕೋಟಿ 30 ಲಕ್ಷ ಜನ ವೀಕ್ಷಿಸಿದ್ದಾರೆ.

ಬಹುಮುಖ್ಯ ಮಾಧ್ಯಮ ಸಂಸ್ಥೆಗಳಾದ ದಿ ಇಂಡಿಯನ್ ಎಕ್ಸ್ ಪ್ರೆಸ್, ಇಂಡಿಯಾ ಟುಡೆ, ಆಜ್ ತಕ್ ಮುಂತಾದವುಗಳು ಸಹ ಫೀಲ್ಡಿಂಗ್ ನಿರ್ಬಂಧದ ಅಂಪೈರ್ ಗಳ ತಪ್ಪಿನಿಂದಾಗಿ ಧೋನಿ ಔಟಾಗಿರುವ ಸಾಧ್ಯತೆಯಿದೆ ಎಂಬ ವರದಿಗಳನ್ನು ಪ್ರಕಟಿಸಿದ್ದವು.

ಹಾಗಾದರೆ ಆ 48ನೇ ಓವರ್ ನಲ್ಲಿ ಆಗಿದ್ದಾದರೂ ಏನು?

ಈ ಕುರಿತು ಸ್ವತಂತ್ರ ಮಾಧ್ಯಮ ಸಂಸ್ಥೆ ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿದೆ. ಸ್ಕ್ರೀನ್ ಶಾಟ್ ನಲ್ಲಿ ಕಾಣುತ್ತಿರುವ ಫೀಲ್ಡರ್ ಗಳ ಗ್ರಾಫಿಕ್ ನಲ್ಲಿ ತಪ್ಪಾಗಿದೆಯೇ ಹೊರತು ಅಂಪೈರ್ ನಿಂದಲ್ಲ ಎಂದು ಕಂಡಬಂದಿದೆ. ಆ ಓವರ್ ನ ಮೂರು ಬಾಲ್ ಗಳಲ್ಲಿ ಏನಾಯಿತು, ಫೀಲ್ಡರ್ ಗಳು ಯಾವ ಯಾವ ಜಾಗದಲ್ಲಿ ನಿಂತಿದ್ದರು ಎಂಬುದನ್ನು ಒಂದೊಂದಾಗಿ ನೋಡೋಣ

ಮೊದಲ ಬಾಲ್ (48.1 ಓವರ್ಸ್)

ಈ ಎಸೆತದಲ್ಲಿ ಐದು ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗಿದ್ದರು. ಅಂದರೆ ಥರ್ಡ್ ಮ್ಯಾನ್, ಡೀಪ್ ಫೈನ್ ಲೆಗ್, ಡೀಪ್ ಪಾಯಿಂಟ್, ಡೀಪ್ ಸ್ಕೇರ್ ಲೆಗ್ ಮತ್ತು ಲಾಂಗ್ ಆನ್ ನಲ್ಲಿ ನಿಂತಿದ್ದರು. ಫರ್ಗೂಸನ್ ಎಸೆದ ಆ ಬಾಲ್ ಅನ್ನು ಧೋನಿ ಸಿಕ್ಸ್ ಸಿಡಿಸಿದ್ದರು.

ಎರಡನೇ ಬಾಲ್ (48.2 ಓವರ್ಸ್)

ಈ ಎಸೆತದಲ್ಲಿ ಮಿಡ್ ವಿಕೆಟ್ ನಲ್ಲಿದ್ದ ಫೀಲ್ಡರ್ ಹಿಂದಕ್ಕೆ ಚಲಿಸಿದ್ದಾರೆ ಮತ್ತು ಡೀಪ್ ಫೈನ್ ಲೆಗ್ ನಲ್ಲಿದ್ದ ಫೀಲ್ಡರ್ ಸರ್ಕಲ್ ನ ಒಳಗೆ ಬಂದಿದ್ದಾರೆ. ಈ ಬಾಲ್ ನಲ್ಲಿ ಯಾವುದೇ ರನ್ ಬಂದಿಲ್ಲ.

ಮೂರನೇ ಬಾಲ್ (48.3 ಓವರ್ಸ್)

ಈ ಎಸೆತದಲ್ಲಿಯೇ ಆರು ಜನ ಹೊರಗಿರುವಂತೆ ಮೇಲಿನ ಸ್ಕ್ರೀನ್ ಶಾಟ್ ನಲ್ಲಿ ಆರೋಪಿಸಲಾಗಿದೆ. ಡೀಪ್ ಪಾಯಿಂಟ್, ಡೀಪ್ ಫೈನ್ ಲೆಗ್, ಡೀಪ್ ಸ್ಕ್ವೇರ್ ಲೆಗ್, ಡೀಪ್ ಮಿಡ್ ವಿಕೆಟ್, ಲಾಂಗ್ ಮತ್ತು ಥರ್ಡ್ ಮ್ಯಾನ್ ಎನ್ನಲಾಗಿದೆ.  ಆದರೆ ಆನಂತರ ಥರ್ಡ್ ಮ್ಯಾನ್ ಸರ್ಕಲ್ ಒಳಗೆ ಬಂದು ಶಾರ್ಟ್ ಥರ್ಡ್ ಮ್ಯಾನ್ ಜಾಗಕ್ಕೆ ನಿಂತಿದ್ದಾರೆ.

ಆದರೆ ಗ್ರಾಫಿಕ್ ನಲ್ಲಿ ಇದು ಅಪ್ ಡೇಟ್ ಆಗಿಲ್ಲ. ಹಾಗಾಗಿ ಇದು ಗ್ರಾಫಿಕ್ ಬ್ರಾಡ್ ಕಾಸ್ಟ್ ನ ಸಮಸ್ಯೆಯೇ ಹೊರತು ಅಂಪೈರ್ ದಲ್ಲ ಎಂಬುದು ಸ್ಪಷ್ಟವಾಗಿದೆ.

ಈ ಚಿತ್ರದ ಎಡಭಾಗದ ಮೇಲುಭಾಗದಲ್ಲಿ ಶಾರ್ಟ್ ಥರ್ಡ್ ಮ್ಯಾನ್ ಜಾಗದಲ್ಲಿ ಸರ್ಕಲ್ ನ ಒಳಗೆ ಫೀಲ್ಡರ್ ಬಂದು ನಿಂತಿರುವುದನ್ನು ನೀವು ನೋಡಬಹದು. ಹಾಗಾಗಿ ಥರ್ಡ್ ಮ್ಯಾನ್ ಸರ್ಕಲ್ ಒಳಗೆ ಬಂದು ಶಾರ್ಟ್ ಥರ್ಡ್ ಮ್ಯಾನ್ ಜಾಗಕ್ಕೆ ನಿಂತಿರುವುದನ್ನು ಗ್ರಾಫಿಕ್ ಬ್ರಾಡ್ ಕಾಸ್ಟ್ ತೋರಿಸದಿರುವುದೇ ಇಷ್ಟೆಲ್ಲಾ ಅವಾಂತರಗಳಿಗೆ ಕಾರಣವಾಗಿದೆ ಅಷ್ಟೇ. ಸರ್ಕಲ್ ನಿಂದ ಹೊರಗೆ 5 ಜನರು ಮಾತ್ರ ಇರುವುದು ಖಾತ್ರಿಯಾಗಿದೆ. ಆನಂತರ ಆನಂದ್ ನರಸಿಂಹನ್ ರವರು ಇನ್ನೊಂದು ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ.

ಒಟ್ಟಿನಲ್ಲಿ ಲಕ್ಷಾಂತರ ಜನ ಸತ್ಯ ಗೊತ್ತಿಲ್ಲದೇ ಸೋಷಿಯಲ್ ಮೀಡಿಯಾದಲ್ಲಿ ಮನಸ್ಸಿಗೆ ಬಂದ ವಾಗ್ವಾದಗಳನ್ನು ನಡೆಸಿದ್ದರು ಎನ್ನುವುದು ಮಾತ್ರ ಸತ್ಯು. ಹಾಗಾಗಿ ಯಾವುದನ್ನು ಫ್ಯಾಕ್ಟ್ ಚೆಕ್ ಮಾಡದೇ ನಂಬಬಾರದು ಎಂಬುದು ಮತ್ತೆ ಸಾಬೀತಾಗಿದೆ.

ಕೃಪೆ: ಆಲ್ಟ್ ನ್ಯೂಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...