Homeಮುಖಪುಟಮಾಧ್ಯಮಗಳ ವಿರುದ್ಧ ಹರಿಹಾಯ್ದ ಧೋನಿ ಪತ್ನಿ ಸಾಕ್ಷಿ ಸಿಂಗ್‌

ಮಾಧ್ಯಮಗಳ ವಿರುದ್ಧ ಹರಿಹಾಯ್ದ ಧೋನಿ ಪತ್ನಿ ಸಾಕ್ಷಿ ಸಿಂಗ್‌

- Advertisement -
- Advertisement -

ಈ ರೀತಿಯ ಸೂಕ್ಷ್ಮ ಸಮಯಗಳಲ್ಲಿ ಸುಳ್ಳು ಸುದ್ದಿಗಳನ್ನು ನೀಡುವುದನ್ನು ನಿಲ್ಲಿಸುವಂತೆ ನಾನು ಎಲ್ಲಾ ಮಾಧ್ಯಮ ಸಂಸ್ಥೆಗಳಲ್ಲಿ ವಿನಂತಿಸುತ್ತೇನೆ! ನಿಮಗೆ ನಾಚಿಕೆಯಾಗಬೇಕು ! ಜವಾಬ್ದಾರಿಯುತ ಪತ್ರಿಕೋದ್ಯಮ ಎಲ್ಲಿ ಕಣ್ಮರೆಯಾಯಿತು ಎಂದು ನಾನು ಆಶ್ಚರ್ಯ ಪಡುತ್ತೇನೆ!

ಇದು ಭಾರತ ಕ್ರಿಕೆಟ್‌ ತಂಡ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಪತ್ನಿ ಸಾಕ್ಷಿ ಸಿಂಗ್‌ರವರ ಟ್ವೀಟ್‌. ಏಕೆ ಇವರು ಹೀಗೆ ಟ್ವೀಟ್‌ ಮಾಡಿದ್ದರು? ಇದ್ದಕ್ಕಿದ್ದಂತೆ ಮಾಧ್ಯಮಗಳ ಮೇಲೇಕೆ ಇವರಿಗೆ ಕೋಪ? ಅವರೇಕೆ ಯಾರನ್ನು ಸರಿಯಾಗಿ ಉಲ್ಲೇಖಿಸಿಲ್ಲ?

ಸಾಕ್ಷಿ ಸಿಂಗ್‌ರವರು ಯಾವ ವಿಷಯಕ್ಕೆ ಯಾರ ವಿರುದ್ಧ ಕೋಪ ತೀರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಯಬೇಕಾದರೆ ನೀವೊಮ್ಮೆ ಈ ಕೆಳಗಿನ ಟ್ವೀಟ್‌ಗಳನ್ನು ಗಮನಿಸಿ..

ಕೊರೊನಾ ವೈರಸ್‌ ವಿರುದ್ಧ ಹೋರಾಡಲು ಮಹೇಂದ್ರ ಸಿಂಗ್‌ ಧೋನಿಯವರು ಒಂದು ಲಕ್ಷ ದೇಣಿಗೆ ಕೊಟ್ಟಿದ್ದಕ್ಕೆ ಹಲವಾರು ಜನ ಶ್ಲಾಘಿಸಿದರೆ, ಅದು ಬಹಳ ಕಡಿಮೆ ಮೊತ್ತ ಎಂದು ಬಹಳಷ್ಟು ಜನ ಧೋನಿಯನ್ನು ಟ್ರೋಲ್‌ ಮಾಡಿದ್ದರು. ಹಲವು ಎಕಾನಾಮಿಕ್ಸ್‌ ಟೈಮ್ಸ್‌ ಸೇರಿದಂತೆ ಹಲವು ಮಾಧ್ಯಮಗಳು ಸಹ ಧೋನಿ ಒಂದು ಲಕ್ಷ ದೇಣಿಗೆ ನೀಡಿದ್ದಾರೆ ಎಂತಲೇ ಬರೆದಿದ್ದವು. ಹಾಗಾಗಿ ಸಾಕ್ಷಿ ಸಿಂಗ್‌ರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೂ ಸಾಕ್ಷಿ ಸಿಂಗ್‌ ಧೋನಿಯವರು ಇಷ್ಟು ದೇಣಿಗೆ ಕೊಟ್ಟಿದ್ದಾರೆ ಅಥವಾ ಕೊಟ್ಟಿಲ್ಲ ಎಂದು ಸ್ಪಷ್ಟನೆ ನೀಡಿಲ್ಲ. ಆದರೆ ಕೆಲವು ಧೋನಿ ಅಭಿಮಾನಿಗಳು ಸ್ಪಷ್ಟನೆಯನ್ನು ನೀಡಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಸಲುವಾಗಿ ಕ್ರೌಡ್ ಫಂಡಿಂಗ್ ವೆಬ್‌ಸೈಟ್ ಕೆಟ್ಟೊ ಮೂಲಕ ಪುಣೆಯ ಸಾರ್ವಜನಿಕ ಚಾರಿಟಬಲ್ ಟ್ರಸ್ಟ್‌ಗೆ ಮುಕುಲ್ ಮಾಧವ್ ಫೌಂಡೇಶನ್‌ಗೆ ಧೋನಿ ಒಂದು ಲಕ್ಷ ದೇಣಿಗೆ ನೀಡಿದ್ದಾರೆ. ಅದು ಕೇವಲ ಒಂದು ಸಂಸ್ಥೆಗೆ ಮಾತ್ರ ಅವರ ದೇಣಿಗೆಯಾಗಿದೆ. ಅದನ್ನು ಟೀಕೆ ಮಾಡುತ್ತಿರುವವರು ಎಷ್ಟು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ವಿಪರ್ಯಾಸ ಎಂದರೆ ಧೋನಿ ಮತ್ತು ಸಾಕ್ಷಿ ಸಿಂಗ್‌ 20 ಕೋಟಿ ದೇಣಿಗೆ ನೀಡಿದ್ದಾರೆಂದು ಅಭಿಮಾನಿಯೊಬ್ಬ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾನೆ. ಆದರೆ ಅದಕ್ಕೆ ಯಾವುದೇ ದಾಖಲೆಯನ್ನು ಆತ ನೀಡಿಲ್ಲ.

ಒಟ್ಟಿನಲ್ಲಿ ಕೊರೊನಾ ಕಾಲದಲ್ಲಿ ಸುಳ್ಳು ಸುದ್ದಿಗಳ ಕಾರುಬಾರು ಜೋರಾಗಿದೆ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...