Homeಮುಖಪುಟಮಾಧ್ಯಮಗಳ ವಿರುದ್ಧ ಹರಿಹಾಯ್ದ ಧೋನಿ ಪತ್ನಿ ಸಾಕ್ಷಿ ಸಿಂಗ್‌

ಮಾಧ್ಯಮಗಳ ವಿರುದ್ಧ ಹರಿಹಾಯ್ದ ಧೋನಿ ಪತ್ನಿ ಸಾಕ್ಷಿ ಸಿಂಗ್‌

- Advertisement -
- Advertisement -

ಈ ರೀತಿಯ ಸೂಕ್ಷ್ಮ ಸಮಯಗಳಲ್ಲಿ ಸುಳ್ಳು ಸುದ್ದಿಗಳನ್ನು ನೀಡುವುದನ್ನು ನಿಲ್ಲಿಸುವಂತೆ ನಾನು ಎಲ್ಲಾ ಮಾಧ್ಯಮ ಸಂಸ್ಥೆಗಳಲ್ಲಿ ವಿನಂತಿಸುತ್ತೇನೆ! ನಿಮಗೆ ನಾಚಿಕೆಯಾಗಬೇಕು ! ಜವಾಬ್ದಾರಿಯುತ ಪತ್ರಿಕೋದ್ಯಮ ಎಲ್ಲಿ ಕಣ್ಮರೆಯಾಯಿತು ಎಂದು ನಾನು ಆಶ್ಚರ್ಯ ಪಡುತ್ತೇನೆ!

ಇದು ಭಾರತ ಕ್ರಿಕೆಟ್‌ ತಂಡ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಪತ್ನಿ ಸಾಕ್ಷಿ ಸಿಂಗ್‌ರವರ ಟ್ವೀಟ್‌. ಏಕೆ ಇವರು ಹೀಗೆ ಟ್ವೀಟ್‌ ಮಾಡಿದ್ದರು? ಇದ್ದಕ್ಕಿದ್ದಂತೆ ಮಾಧ್ಯಮಗಳ ಮೇಲೇಕೆ ಇವರಿಗೆ ಕೋಪ? ಅವರೇಕೆ ಯಾರನ್ನು ಸರಿಯಾಗಿ ಉಲ್ಲೇಖಿಸಿಲ್ಲ?

ಸಾಕ್ಷಿ ಸಿಂಗ್‌ರವರು ಯಾವ ವಿಷಯಕ್ಕೆ ಯಾರ ವಿರುದ್ಧ ಕೋಪ ತೀರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಯಬೇಕಾದರೆ ನೀವೊಮ್ಮೆ ಈ ಕೆಳಗಿನ ಟ್ವೀಟ್‌ಗಳನ್ನು ಗಮನಿಸಿ..

ಕೊರೊನಾ ವೈರಸ್‌ ವಿರುದ್ಧ ಹೋರಾಡಲು ಮಹೇಂದ್ರ ಸಿಂಗ್‌ ಧೋನಿಯವರು ಒಂದು ಲಕ್ಷ ದೇಣಿಗೆ ಕೊಟ್ಟಿದ್ದಕ್ಕೆ ಹಲವಾರು ಜನ ಶ್ಲಾಘಿಸಿದರೆ, ಅದು ಬಹಳ ಕಡಿಮೆ ಮೊತ್ತ ಎಂದು ಬಹಳಷ್ಟು ಜನ ಧೋನಿಯನ್ನು ಟ್ರೋಲ್‌ ಮಾಡಿದ್ದರು. ಹಲವು ಎಕಾನಾಮಿಕ್ಸ್‌ ಟೈಮ್ಸ್‌ ಸೇರಿದಂತೆ ಹಲವು ಮಾಧ್ಯಮಗಳು ಸಹ ಧೋನಿ ಒಂದು ಲಕ್ಷ ದೇಣಿಗೆ ನೀಡಿದ್ದಾರೆ ಎಂತಲೇ ಬರೆದಿದ್ದವು. ಹಾಗಾಗಿ ಸಾಕ್ಷಿ ಸಿಂಗ್‌ರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೂ ಸಾಕ್ಷಿ ಸಿಂಗ್‌ ಧೋನಿಯವರು ಇಷ್ಟು ದೇಣಿಗೆ ಕೊಟ್ಟಿದ್ದಾರೆ ಅಥವಾ ಕೊಟ್ಟಿಲ್ಲ ಎಂದು ಸ್ಪಷ್ಟನೆ ನೀಡಿಲ್ಲ. ಆದರೆ ಕೆಲವು ಧೋನಿ ಅಭಿಮಾನಿಗಳು ಸ್ಪಷ್ಟನೆಯನ್ನು ನೀಡಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಸಲುವಾಗಿ ಕ್ರೌಡ್ ಫಂಡಿಂಗ್ ವೆಬ್‌ಸೈಟ್ ಕೆಟ್ಟೊ ಮೂಲಕ ಪುಣೆಯ ಸಾರ್ವಜನಿಕ ಚಾರಿಟಬಲ್ ಟ್ರಸ್ಟ್‌ಗೆ ಮುಕುಲ್ ಮಾಧವ್ ಫೌಂಡೇಶನ್‌ಗೆ ಧೋನಿ ಒಂದು ಲಕ್ಷ ದೇಣಿಗೆ ನೀಡಿದ್ದಾರೆ. ಅದು ಕೇವಲ ಒಂದು ಸಂಸ್ಥೆಗೆ ಮಾತ್ರ ಅವರ ದೇಣಿಗೆಯಾಗಿದೆ. ಅದನ್ನು ಟೀಕೆ ಮಾಡುತ್ತಿರುವವರು ಎಷ್ಟು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ವಿಪರ್ಯಾಸ ಎಂದರೆ ಧೋನಿ ಮತ್ತು ಸಾಕ್ಷಿ ಸಿಂಗ್‌ 20 ಕೋಟಿ ದೇಣಿಗೆ ನೀಡಿದ್ದಾರೆಂದು ಅಭಿಮಾನಿಯೊಬ್ಬ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾನೆ. ಆದರೆ ಅದಕ್ಕೆ ಯಾವುದೇ ದಾಖಲೆಯನ್ನು ಆತ ನೀಡಿಲ್ಲ.

ಒಟ್ಟಿನಲ್ಲಿ ಕೊರೊನಾ ಕಾಲದಲ್ಲಿ ಸುಳ್ಳು ಸುದ್ದಿಗಳ ಕಾರುಬಾರು ಜೋರಾಗಿದೆ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...