Homeಮುಖಪುಟಮಾಧ್ಯಮಗಳ ವಿರುದ್ಧ ಹರಿಹಾಯ್ದ ಧೋನಿ ಪತ್ನಿ ಸಾಕ್ಷಿ ಸಿಂಗ್‌

ಮಾಧ್ಯಮಗಳ ವಿರುದ್ಧ ಹರಿಹಾಯ್ದ ಧೋನಿ ಪತ್ನಿ ಸಾಕ್ಷಿ ಸಿಂಗ್‌

- Advertisement -
- Advertisement -

ಈ ರೀತಿಯ ಸೂಕ್ಷ್ಮ ಸಮಯಗಳಲ್ಲಿ ಸುಳ್ಳು ಸುದ್ದಿಗಳನ್ನು ನೀಡುವುದನ್ನು ನಿಲ್ಲಿಸುವಂತೆ ನಾನು ಎಲ್ಲಾ ಮಾಧ್ಯಮ ಸಂಸ್ಥೆಗಳಲ್ಲಿ ವಿನಂತಿಸುತ್ತೇನೆ! ನಿಮಗೆ ನಾಚಿಕೆಯಾಗಬೇಕು ! ಜವಾಬ್ದಾರಿಯುತ ಪತ್ರಿಕೋದ್ಯಮ ಎಲ್ಲಿ ಕಣ್ಮರೆಯಾಯಿತು ಎಂದು ನಾನು ಆಶ್ಚರ್ಯ ಪಡುತ್ತೇನೆ!

ಇದು ಭಾರತ ಕ್ರಿಕೆಟ್‌ ತಂಡ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಪತ್ನಿ ಸಾಕ್ಷಿ ಸಿಂಗ್‌ರವರ ಟ್ವೀಟ್‌. ಏಕೆ ಇವರು ಹೀಗೆ ಟ್ವೀಟ್‌ ಮಾಡಿದ್ದರು? ಇದ್ದಕ್ಕಿದ್ದಂತೆ ಮಾಧ್ಯಮಗಳ ಮೇಲೇಕೆ ಇವರಿಗೆ ಕೋಪ? ಅವರೇಕೆ ಯಾರನ್ನು ಸರಿಯಾಗಿ ಉಲ್ಲೇಖಿಸಿಲ್ಲ?

ಸಾಕ್ಷಿ ಸಿಂಗ್‌ರವರು ಯಾವ ವಿಷಯಕ್ಕೆ ಯಾರ ವಿರುದ್ಧ ಕೋಪ ತೀರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಯಬೇಕಾದರೆ ನೀವೊಮ್ಮೆ ಈ ಕೆಳಗಿನ ಟ್ವೀಟ್‌ಗಳನ್ನು ಗಮನಿಸಿ..

ಕೊರೊನಾ ವೈರಸ್‌ ವಿರುದ್ಧ ಹೋರಾಡಲು ಮಹೇಂದ್ರ ಸಿಂಗ್‌ ಧೋನಿಯವರು ಒಂದು ಲಕ್ಷ ದೇಣಿಗೆ ಕೊಟ್ಟಿದ್ದಕ್ಕೆ ಹಲವಾರು ಜನ ಶ್ಲಾಘಿಸಿದರೆ, ಅದು ಬಹಳ ಕಡಿಮೆ ಮೊತ್ತ ಎಂದು ಬಹಳಷ್ಟು ಜನ ಧೋನಿಯನ್ನು ಟ್ರೋಲ್‌ ಮಾಡಿದ್ದರು. ಹಲವು ಎಕಾನಾಮಿಕ್ಸ್‌ ಟೈಮ್ಸ್‌ ಸೇರಿದಂತೆ ಹಲವು ಮಾಧ್ಯಮಗಳು ಸಹ ಧೋನಿ ಒಂದು ಲಕ್ಷ ದೇಣಿಗೆ ನೀಡಿದ್ದಾರೆ ಎಂತಲೇ ಬರೆದಿದ್ದವು. ಹಾಗಾಗಿ ಸಾಕ್ಷಿ ಸಿಂಗ್‌ರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೂ ಸಾಕ್ಷಿ ಸಿಂಗ್‌ ಧೋನಿಯವರು ಇಷ್ಟು ದೇಣಿಗೆ ಕೊಟ್ಟಿದ್ದಾರೆ ಅಥವಾ ಕೊಟ್ಟಿಲ್ಲ ಎಂದು ಸ್ಪಷ್ಟನೆ ನೀಡಿಲ್ಲ. ಆದರೆ ಕೆಲವು ಧೋನಿ ಅಭಿಮಾನಿಗಳು ಸ್ಪಷ್ಟನೆಯನ್ನು ನೀಡಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಸಲುವಾಗಿ ಕ್ರೌಡ್ ಫಂಡಿಂಗ್ ವೆಬ್‌ಸೈಟ್ ಕೆಟ್ಟೊ ಮೂಲಕ ಪುಣೆಯ ಸಾರ್ವಜನಿಕ ಚಾರಿಟಬಲ್ ಟ್ರಸ್ಟ್‌ಗೆ ಮುಕುಲ್ ಮಾಧವ್ ಫೌಂಡೇಶನ್‌ಗೆ ಧೋನಿ ಒಂದು ಲಕ್ಷ ದೇಣಿಗೆ ನೀಡಿದ್ದಾರೆ. ಅದು ಕೇವಲ ಒಂದು ಸಂಸ್ಥೆಗೆ ಮಾತ್ರ ಅವರ ದೇಣಿಗೆಯಾಗಿದೆ. ಅದನ್ನು ಟೀಕೆ ಮಾಡುತ್ತಿರುವವರು ಎಷ್ಟು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ವಿಪರ್ಯಾಸ ಎಂದರೆ ಧೋನಿ ಮತ್ತು ಸಾಕ್ಷಿ ಸಿಂಗ್‌ 20 ಕೋಟಿ ದೇಣಿಗೆ ನೀಡಿದ್ದಾರೆಂದು ಅಭಿಮಾನಿಯೊಬ್ಬ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾನೆ. ಆದರೆ ಅದಕ್ಕೆ ಯಾವುದೇ ದಾಖಲೆಯನ್ನು ಆತ ನೀಡಿಲ್ಲ.

ಒಟ್ಟಿನಲ್ಲಿ ಕೊರೊನಾ ಕಾಲದಲ್ಲಿ ಸುಳ್ಳು ಸುದ್ದಿಗಳ ಕಾರುಬಾರು ಜೋರಾಗಿದೆ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...