Homeಕರ್ನಾಟಕ'ಯುವಜನ ಆಯೋಗ' ಜಾರಿಗಾಗಿ ಸಂವಾದ-ಯುವ ಮುನ್ನಡೆ, ಕರ್ನಾಟಕ ವೇದಿಕೆಯಿಂದ ಅಭಿಯಾನ

‘ಯುವಜನ ಆಯೋಗ’ ಜಾರಿಗಾಗಿ ಸಂವಾದ-ಯುವ ಮುನ್ನಡೆ, ಕರ್ನಾಟಕ ವೇದಿಕೆಯಿಂದ ಅಭಿಯಾನ

- Advertisement -
- Advertisement -

ಯುವಜನರ ಘನತೆಯ ಬದುಕಿಗಾಗಿ, ಯುವಜನ ಆಯೋಗ ಜಾರಿಯಾಗಬೇಕು ಎಂದು ಸಂವಾದ ಮತ್ತು ಯುವಮುನ್ನಡೆ – ಕರ್ನಾಟಕ ಇವುಗಳ ಜಂಟಿ ಆಶ್ರಯದಲ್ಲಿ ಅಭಿಯಾನ ಆರಂಭಿಸಿವೆ.

ಈ ಕುರಿತು ಯುವ ಮುನ್ನಡೆ, ಕರ್ನಾಟಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ”ಯುವಜನರು ಇರುವ ಸ್ಥಳಗಳಲ್ಲಿ ಅವರ ಗೌರವಕ್ಕೆ ಧಕ್ಕೆ ಬಾರದಂತೆ, ಹಕ್ಕುಗಳಿಗೆ ಚ್ಯುತಿ ಬರದಂತೆ ಶೋಷಣೆ ಮುಕ್ತ ಯುವಸಮಾಜ ಕಟ್ಟಲು ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಹಾಗೂ ಯುವಗೆಳೆಯ ಗೆಳತಿಯರ ಶಕ್ತಿಯ ಪಾಲ್ಗೊಳುವಿಕೆಯೊಂದಿಗೆ ಸಂವಿಧಾನ ಬದ್ಧ ಹಕ್ಕುಗಳನ್ನು ಪಡೆಯಲು ಮತ್ತೊಮ್ಮೆ ‘ಯುವಜನ ಆಯೋಗ ಜಾರಿಯಾಗಬೇಕೆಂದು ಆಭಿಯಾನ’ ನಡೆಯುತ್ತಿದೆ” ಎಂದು ಹೇಳಿದೆ.

ಅಭಿಯಾನದ ಭಾಗವಾಗಿ ದಿನಾಂಕ 27/09/2023ರಂದು ರಾಜ್ಯ ಮಟ್ಟದ ಯುವಾಂದೋಲನ ಪ್ರಕ್ರಿಯೆಯ ಭಾಗವಾಗಿ ವಿಧಾನಸೌದಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಛೇರಿ ಹಾಗೂ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ, ಹಣಕಾಸು ಹಾಗೂ ಆರ್ಥಿಕ ಮುಖ್ಯ ಕಾರ್ಯದರ್ಶಿ ಕೆ ಎಲ್‌ ಆಸೀಖ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮ, ಯವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ, ವಿಧಾನ ಸಭೆಯ ಸಭಾಧ್ಯಕ್ಷ ಯು ಟಿ ಖಾದರ್.ವಿಧಾನ ಪರಿಷತ್ ನ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿ ಮಾಡಿ, ಯುವಜನ ಆಯೋಗ ಜಾರಿಗೆ ಒತ್ತಾಯಿಸಿದೆ.

ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು, ಸಂವಾದ, ಯುವ ಮುನ್ನಡೆ ಮತ್ತು ಹಲವು ಯುವ ಸಂಘಟನೆಗಳ ಬೇಡಿಕೆಯನ್ನು ಮನ್ನಿಸಿ, ಯುವಜನ ಆಯೋಗ ಸ್ಥಾಪಿಸುವುದು, “ಯುವನಿಧಿ ನಿರುದ್ಯೋಗ ಭತ್ಯೆ ನೀಡುವುದು ಹಾಗೂ 17 ಕಾರ್ಮಿಕರ ಹಿತಕಾಯುವುದನ್ನು ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಅಧಿಕಾರಕ್ಕೆ ಬಂದ ಬಳಿಕ ಯುವನಿಧಿ ಮತ್ತು ಗಿಗ್: ಕಾರ್ಮಿಕರ ಹಿತರಕ್ಷಣೆಯನ್ನು ಈಡೇರಿಸಿದ್ದಕ್ಕಾಗಿ ಯುವಮುನ್ನಡೆಯು ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇವೆ. ಅದರಂತೆ ‘ಯುವಜನ ಆಯೋಗ’ದ ಜಾರಿಗಾಗಿ ಮನವಿ ಪತ್ರಗಳನ್ನು ಸಲ್ಲಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಅಭಿಯಾನದಲ್ಲಿ ಸಂವಾದ-ಯುವಮುನ್ನಡೆ ಪ್ರತಿನಿಧಿಗಳಾದ ನೀಲಾ ಸೋಮಶೇಖರ್ (ಬೆಂಗಳೂರು), ಈರಮ್ಮ (ಬೆಂಗಳೂರು), ಮಧನ್‌ಕುಮಾರ್ (ಚಿತ್ರದುರ್ಗ), ಅರ್ಪಿತ (ಬೆಂಗಳೂರು), ಕೃತಿಕ್ (ಬೆಂಗಳೂರು) ಇನ್ನೂ ಅನೇಕರು ಭಾಗಿಯಾಗಿದ್ದರು.

ಹಕ್ಕೊತ್ತಾಯ:

  • ಕರ್ನಾಟಕ ರಾಜ್ಯ ಯುವಜನ ಆಯೋಗ ಸ್ಥಾಪನೆಯಾಗಲಿ
  • ಕರ್ನಾಟಕ ಯುವನೀತಿ ಪರಿಷ್ಕರಣೆಯಾಗಲಿ
  • ಸರ್ಕಾರಿ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳಿಗೂ ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಮಧ್ಯಾಹ್ನದ ಪೌಷ್ಠಿಕ ಆಹಾರ ಸಿಗಲಿ
  • ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದೆ ಉಳಿಸಲ್ಪಟ್ಟ ಎಲ್ಲರಿಗೂ ಶಿಕ್ಷಣ ಸಿಗಲಿ, ಯಾವುದೇ ವಿದ್ಯಾರ್ಥಿ ವೇತನ ಮೊಟಕುಗೊಳಿಸದೆ ಸರಿಯಾದ ಸಮಯಕ್ಕೆ ತಲುಪಲಿ.
  •  ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ ಬರಲಿ, ಪೀಕ್ ಅವರ್‌ಗಳಲ್ಲಿ ಹೆಚ್ಚಿನ ಬಸ್‌ಗಳ ವ್ಯವಸ್ಥೆಯಾಗಬೇಕು.

ಈ ಅಭಿಯಾನದ ಚಟುವಟಿಕೆಗಾಗಿ ಬೆಂಗಳೂರು ನಗರ ಮತ್ತು ಚಿತ್ರದುರ್ಗ, ಮಂಗಳೂರು, ಕೋಲಾರಕುರ್ಗಿ ಜಿಲ್ಲೆಗಳ ಕಾಲೇಜುಗಳಲ್ಲಿ ಮತ್ತು ಹಳ್ಳಿಗಳಲ್ಲಿ ಯುವಜನರ ಸಶಕ್ತತೆಗಾಗಿ ಅರಿವು ಹಾಗೂ ಯುವಜನ ಆಯೋಗದ ಜಾರಿಗಾಗಿ ರಾಜ್ಯಮಟ್ಟದ ಯುವಾಂದೋಲನವು ಈಗಾಗಲೇ ನಡೆಸುತ್ತಿದ್ದೇವೆ ಎಂದು ಸಂವಾದ – ಯುವ ಮುನ್ನಡ, ಕರ್ನಾಟಕ ವೇದಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಯುವಜನ ಆಯೋಗ ಎಂದರೇನು? ಯುವಜನರ ಹಕ್ಕುಗಳ ರಕ್ಷಣೆಗಾಗಿ ಮತ್ತು ಯುವಜನರ ಶಿಕ್ಷಣ ಮತ್ತು ಸುಲೀಕರಣ ಕಾರ್ಯಕ್ರಮಗಳನ್ನು ರೂಪಿಸುವುದರ ಜೊತೆಗೆ ಅನುಷ್ಠಾನಗೊಳ್ಳುವಂತೆ ನೋಡಿಕೊಳ್ಳುವುದೇ ಯುವಜನ ಆಯೋಗದ ಗುರಿ ಉದ್ದೇಶ.

ಆಯೋಗದ ಸ್ಥಾಪನೆ ಹೇಗೆ?

ರಾಜ್ಯ ಯುವಜನ ಆಯೋಗವನ್ನು ಸ್ಥಾಪಿಸಬೇಕಾದರೆ ಸರಕಾರವು ”ಯುವಜನ ಆಯೋಗ ಕಾಯಿದೆ” ಕರಡು ರೂಪಿಸಿ ಅದನ್ನು ಉಭಯ ಸದನಗಳಲ್ಲಿ ಮಂಡಿಸಬೇಕು. ವಿಧಾನಸಭೆ ಮತ್ತು ವಿಧಾನ ಪರಿಷತ್‌ ಎರಡರಲ್ಲಿಯೂ ಮೂರನೇ ಎರಡು ಬಹುಮತ ಸಿಕ್ಕು, ರಾಜ್ಯಪಾಲರಿಂದ ಅಂಕಿತಗೊಂಡರೆ ಕಾಯಿದೆಯಾಗಿ ರೂಪು ಪಡೆಯುತ್ತದೆ. ನಂತರ ಸೂಕ್ತ ನಿಯಮಗಳನ್ನು ರೂಪಿಸಿ ಅದನ್ನು ಜಾರಿಗೆ ತರಬಹುದಾಗಿದೆ.

ಇದನ್ನೂ ಓದಿ: ನಾಳೆ ಕರ್ನಾಟಕ ಬಂದ್: ಜನಜೀವನ ಅಸ್ತವ್ಯಸ್ತ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...