Homeಕರ್ನಾಟಕ'ಯುವಜನ ಆಯೋಗ' ಜಾರಿಗಾಗಿ ಸಂವಾದ-ಯುವ ಮುನ್ನಡೆ, ಕರ್ನಾಟಕ ವೇದಿಕೆಯಿಂದ ಅಭಿಯಾನ

‘ಯುವಜನ ಆಯೋಗ’ ಜಾರಿಗಾಗಿ ಸಂವಾದ-ಯುವ ಮುನ್ನಡೆ, ಕರ್ನಾಟಕ ವೇದಿಕೆಯಿಂದ ಅಭಿಯಾನ

- Advertisement -
- Advertisement -

ಯುವಜನರ ಘನತೆಯ ಬದುಕಿಗಾಗಿ, ಯುವಜನ ಆಯೋಗ ಜಾರಿಯಾಗಬೇಕು ಎಂದು ಸಂವಾದ ಮತ್ತು ಯುವಮುನ್ನಡೆ – ಕರ್ನಾಟಕ ಇವುಗಳ ಜಂಟಿ ಆಶ್ರಯದಲ್ಲಿ ಅಭಿಯಾನ ಆರಂಭಿಸಿವೆ.

ಈ ಕುರಿತು ಯುವ ಮುನ್ನಡೆ, ಕರ್ನಾಟಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ”ಯುವಜನರು ಇರುವ ಸ್ಥಳಗಳಲ್ಲಿ ಅವರ ಗೌರವಕ್ಕೆ ಧಕ್ಕೆ ಬಾರದಂತೆ, ಹಕ್ಕುಗಳಿಗೆ ಚ್ಯುತಿ ಬರದಂತೆ ಶೋಷಣೆ ಮುಕ್ತ ಯುವಸಮಾಜ ಕಟ್ಟಲು ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಹಾಗೂ ಯುವಗೆಳೆಯ ಗೆಳತಿಯರ ಶಕ್ತಿಯ ಪಾಲ್ಗೊಳುವಿಕೆಯೊಂದಿಗೆ ಸಂವಿಧಾನ ಬದ್ಧ ಹಕ್ಕುಗಳನ್ನು ಪಡೆಯಲು ಮತ್ತೊಮ್ಮೆ ‘ಯುವಜನ ಆಯೋಗ ಜಾರಿಯಾಗಬೇಕೆಂದು ಆಭಿಯಾನ’ ನಡೆಯುತ್ತಿದೆ” ಎಂದು ಹೇಳಿದೆ.

ಅಭಿಯಾನದ ಭಾಗವಾಗಿ ದಿನಾಂಕ 27/09/2023ರಂದು ರಾಜ್ಯ ಮಟ್ಟದ ಯುವಾಂದೋಲನ ಪ್ರಕ್ರಿಯೆಯ ಭಾಗವಾಗಿ ವಿಧಾನಸೌದಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಛೇರಿ ಹಾಗೂ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ, ಹಣಕಾಸು ಹಾಗೂ ಆರ್ಥಿಕ ಮುಖ್ಯ ಕಾರ್ಯದರ್ಶಿ ಕೆ ಎಲ್‌ ಆಸೀಖ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮ, ಯವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ, ವಿಧಾನ ಸಭೆಯ ಸಭಾಧ್ಯಕ್ಷ ಯು ಟಿ ಖಾದರ್.ವಿಧಾನ ಪರಿಷತ್ ನ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿ ಮಾಡಿ, ಯುವಜನ ಆಯೋಗ ಜಾರಿಗೆ ಒತ್ತಾಯಿಸಿದೆ.

ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು, ಸಂವಾದ, ಯುವ ಮುನ್ನಡೆ ಮತ್ತು ಹಲವು ಯುವ ಸಂಘಟನೆಗಳ ಬೇಡಿಕೆಯನ್ನು ಮನ್ನಿಸಿ, ಯುವಜನ ಆಯೋಗ ಸ್ಥಾಪಿಸುವುದು, “ಯುವನಿಧಿ ನಿರುದ್ಯೋಗ ಭತ್ಯೆ ನೀಡುವುದು ಹಾಗೂ 17 ಕಾರ್ಮಿಕರ ಹಿತಕಾಯುವುದನ್ನು ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಅಧಿಕಾರಕ್ಕೆ ಬಂದ ಬಳಿಕ ಯುವನಿಧಿ ಮತ್ತು ಗಿಗ್: ಕಾರ್ಮಿಕರ ಹಿತರಕ್ಷಣೆಯನ್ನು ಈಡೇರಿಸಿದ್ದಕ್ಕಾಗಿ ಯುವಮುನ್ನಡೆಯು ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇವೆ. ಅದರಂತೆ ‘ಯುವಜನ ಆಯೋಗ’ದ ಜಾರಿಗಾಗಿ ಮನವಿ ಪತ್ರಗಳನ್ನು ಸಲ್ಲಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಅಭಿಯಾನದಲ್ಲಿ ಸಂವಾದ-ಯುವಮುನ್ನಡೆ ಪ್ರತಿನಿಧಿಗಳಾದ ನೀಲಾ ಸೋಮಶೇಖರ್ (ಬೆಂಗಳೂರು), ಈರಮ್ಮ (ಬೆಂಗಳೂರು), ಮಧನ್‌ಕುಮಾರ್ (ಚಿತ್ರದುರ್ಗ), ಅರ್ಪಿತ (ಬೆಂಗಳೂರು), ಕೃತಿಕ್ (ಬೆಂಗಳೂರು) ಇನ್ನೂ ಅನೇಕರು ಭಾಗಿಯಾಗಿದ್ದರು.

ಹಕ್ಕೊತ್ತಾಯ:

  • ಕರ್ನಾಟಕ ರಾಜ್ಯ ಯುವಜನ ಆಯೋಗ ಸ್ಥಾಪನೆಯಾಗಲಿ
  • ಕರ್ನಾಟಕ ಯುವನೀತಿ ಪರಿಷ್ಕರಣೆಯಾಗಲಿ
  • ಸರ್ಕಾರಿ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳಿಗೂ ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಮಧ್ಯಾಹ್ನದ ಪೌಷ್ಠಿಕ ಆಹಾರ ಸಿಗಲಿ
  • ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದೆ ಉಳಿಸಲ್ಪಟ್ಟ ಎಲ್ಲರಿಗೂ ಶಿಕ್ಷಣ ಸಿಗಲಿ, ಯಾವುದೇ ವಿದ್ಯಾರ್ಥಿ ವೇತನ ಮೊಟಕುಗೊಳಿಸದೆ ಸರಿಯಾದ ಸಮಯಕ್ಕೆ ತಲುಪಲಿ.
  •  ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ ಬರಲಿ, ಪೀಕ್ ಅವರ್‌ಗಳಲ್ಲಿ ಹೆಚ್ಚಿನ ಬಸ್‌ಗಳ ವ್ಯವಸ್ಥೆಯಾಗಬೇಕು.

ಈ ಅಭಿಯಾನದ ಚಟುವಟಿಕೆಗಾಗಿ ಬೆಂಗಳೂರು ನಗರ ಮತ್ತು ಚಿತ್ರದುರ್ಗ, ಮಂಗಳೂರು, ಕೋಲಾರಕುರ್ಗಿ ಜಿಲ್ಲೆಗಳ ಕಾಲೇಜುಗಳಲ್ಲಿ ಮತ್ತು ಹಳ್ಳಿಗಳಲ್ಲಿ ಯುವಜನರ ಸಶಕ್ತತೆಗಾಗಿ ಅರಿವು ಹಾಗೂ ಯುವಜನ ಆಯೋಗದ ಜಾರಿಗಾಗಿ ರಾಜ್ಯಮಟ್ಟದ ಯುವಾಂದೋಲನವು ಈಗಾಗಲೇ ನಡೆಸುತ್ತಿದ್ದೇವೆ ಎಂದು ಸಂವಾದ – ಯುವ ಮುನ್ನಡ, ಕರ್ನಾಟಕ ವೇದಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಯುವಜನ ಆಯೋಗ ಎಂದರೇನು? ಯುವಜನರ ಹಕ್ಕುಗಳ ರಕ್ಷಣೆಗಾಗಿ ಮತ್ತು ಯುವಜನರ ಶಿಕ್ಷಣ ಮತ್ತು ಸುಲೀಕರಣ ಕಾರ್ಯಕ್ರಮಗಳನ್ನು ರೂಪಿಸುವುದರ ಜೊತೆಗೆ ಅನುಷ್ಠಾನಗೊಳ್ಳುವಂತೆ ನೋಡಿಕೊಳ್ಳುವುದೇ ಯುವಜನ ಆಯೋಗದ ಗುರಿ ಉದ್ದೇಶ.

ಆಯೋಗದ ಸ್ಥಾಪನೆ ಹೇಗೆ?

ರಾಜ್ಯ ಯುವಜನ ಆಯೋಗವನ್ನು ಸ್ಥಾಪಿಸಬೇಕಾದರೆ ಸರಕಾರವು ”ಯುವಜನ ಆಯೋಗ ಕಾಯಿದೆ” ಕರಡು ರೂಪಿಸಿ ಅದನ್ನು ಉಭಯ ಸದನಗಳಲ್ಲಿ ಮಂಡಿಸಬೇಕು. ವಿಧಾನಸಭೆ ಮತ್ತು ವಿಧಾನ ಪರಿಷತ್‌ ಎರಡರಲ್ಲಿಯೂ ಮೂರನೇ ಎರಡು ಬಹುಮತ ಸಿಕ್ಕು, ರಾಜ್ಯಪಾಲರಿಂದ ಅಂಕಿತಗೊಂಡರೆ ಕಾಯಿದೆಯಾಗಿ ರೂಪು ಪಡೆಯುತ್ತದೆ. ನಂತರ ಸೂಕ್ತ ನಿಯಮಗಳನ್ನು ರೂಪಿಸಿ ಅದನ್ನು ಜಾರಿಗೆ ತರಬಹುದಾಗಿದೆ.

ಇದನ್ನೂ ಓದಿ: ನಾಳೆ ಕರ್ನಾಟಕ ಬಂದ್: ಜನಜೀವನ ಅಸ್ತವ್ಯಸ್ತ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...