Homeಕರ್ನಾಟಕ'ಯುವಜನ ಆಯೋಗ' ಜಾರಿಗಾಗಿ ಸಂವಾದ-ಯುವ ಮುನ್ನಡೆ, ಕರ್ನಾಟಕ ವೇದಿಕೆಯಿಂದ ಅಭಿಯಾನ

‘ಯುವಜನ ಆಯೋಗ’ ಜಾರಿಗಾಗಿ ಸಂವಾದ-ಯುವ ಮುನ್ನಡೆ, ಕರ್ನಾಟಕ ವೇದಿಕೆಯಿಂದ ಅಭಿಯಾನ

- Advertisement -
- Advertisement -

ಯುವಜನರ ಘನತೆಯ ಬದುಕಿಗಾಗಿ, ಯುವಜನ ಆಯೋಗ ಜಾರಿಯಾಗಬೇಕು ಎಂದು ಸಂವಾದ ಮತ್ತು ಯುವಮುನ್ನಡೆ – ಕರ್ನಾಟಕ ಇವುಗಳ ಜಂಟಿ ಆಶ್ರಯದಲ್ಲಿ ಅಭಿಯಾನ ಆರಂಭಿಸಿವೆ.

ಈ ಕುರಿತು ಯುವ ಮುನ್ನಡೆ, ಕರ್ನಾಟಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ”ಯುವಜನರು ಇರುವ ಸ್ಥಳಗಳಲ್ಲಿ ಅವರ ಗೌರವಕ್ಕೆ ಧಕ್ಕೆ ಬಾರದಂತೆ, ಹಕ್ಕುಗಳಿಗೆ ಚ್ಯುತಿ ಬರದಂತೆ ಶೋಷಣೆ ಮುಕ್ತ ಯುವಸಮಾಜ ಕಟ್ಟಲು ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಹಾಗೂ ಯುವಗೆಳೆಯ ಗೆಳತಿಯರ ಶಕ್ತಿಯ ಪಾಲ್ಗೊಳುವಿಕೆಯೊಂದಿಗೆ ಸಂವಿಧಾನ ಬದ್ಧ ಹಕ್ಕುಗಳನ್ನು ಪಡೆಯಲು ಮತ್ತೊಮ್ಮೆ ‘ಯುವಜನ ಆಯೋಗ ಜಾರಿಯಾಗಬೇಕೆಂದು ಆಭಿಯಾನ’ ನಡೆಯುತ್ತಿದೆ” ಎಂದು ಹೇಳಿದೆ.

ಅಭಿಯಾನದ ಭಾಗವಾಗಿ ದಿನಾಂಕ 27/09/2023ರಂದು ರಾಜ್ಯ ಮಟ್ಟದ ಯುವಾಂದೋಲನ ಪ್ರಕ್ರಿಯೆಯ ಭಾಗವಾಗಿ ವಿಧಾನಸೌದಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಛೇರಿ ಹಾಗೂ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ, ಹಣಕಾಸು ಹಾಗೂ ಆರ್ಥಿಕ ಮುಖ್ಯ ಕಾರ್ಯದರ್ಶಿ ಕೆ ಎಲ್‌ ಆಸೀಖ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮ, ಯವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ, ವಿಧಾನ ಸಭೆಯ ಸಭಾಧ್ಯಕ್ಷ ಯು ಟಿ ಖಾದರ್.ವಿಧಾನ ಪರಿಷತ್ ನ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿ ಮಾಡಿ, ಯುವಜನ ಆಯೋಗ ಜಾರಿಗೆ ಒತ್ತಾಯಿಸಿದೆ.

ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು, ಸಂವಾದ, ಯುವ ಮುನ್ನಡೆ ಮತ್ತು ಹಲವು ಯುವ ಸಂಘಟನೆಗಳ ಬೇಡಿಕೆಯನ್ನು ಮನ್ನಿಸಿ, ಯುವಜನ ಆಯೋಗ ಸ್ಥಾಪಿಸುವುದು, “ಯುವನಿಧಿ ನಿರುದ್ಯೋಗ ಭತ್ಯೆ ನೀಡುವುದು ಹಾಗೂ 17 ಕಾರ್ಮಿಕರ ಹಿತಕಾಯುವುದನ್ನು ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಅಧಿಕಾರಕ್ಕೆ ಬಂದ ಬಳಿಕ ಯುವನಿಧಿ ಮತ್ತು ಗಿಗ್: ಕಾರ್ಮಿಕರ ಹಿತರಕ್ಷಣೆಯನ್ನು ಈಡೇರಿಸಿದ್ದಕ್ಕಾಗಿ ಯುವಮುನ್ನಡೆಯು ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇವೆ. ಅದರಂತೆ ‘ಯುವಜನ ಆಯೋಗ’ದ ಜಾರಿಗಾಗಿ ಮನವಿ ಪತ್ರಗಳನ್ನು ಸಲ್ಲಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಅಭಿಯಾನದಲ್ಲಿ ಸಂವಾದ-ಯುವಮುನ್ನಡೆ ಪ್ರತಿನಿಧಿಗಳಾದ ನೀಲಾ ಸೋಮಶೇಖರ್ (ಬೆಂಗಳೂರು), ಈರಮ್ಮ (ಬೆಂಗಳೂರು), ಮಧನ್‌ಕುಮಾರ್ (ಚಿತ್ರದುರ್ಗ), ಅರ್ಪಿತ (ಬೆಂಗಳೂರು), ಕೃತಿಕ್ (ಬೆಂಗಳೂರು) ಇನ್ನೂ ಅನೇಕರು ಭಾಗಿಯಾಗಿದ್ದರು.

ಹಕ್ಕೊತ್ತಾಯ:

  • ಕರ್ನಾಟಕ ರಾಜ್ಯ ಯುವಜನ ಆಯೋಗ ಸ್ಥಾಪನೆಯಾಗಲಿ
  • ಕರ್ನಾಟಕ ಯುವನೀತಿ ಪರಿಷ್ಕರಣೆಯಾಗಲಿ
  • ಸರ್ಕಾರಿ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳಿಗೂ ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಮಧ್ಯಾಹ್ನದ ಪೌಷ್ಠಿಕ ಆಹಾರ ಸಿಗಲಿ
  • ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದೆ ಉಳಿಸಲ್ಪಟ್ಟ ಎಲ್ಲರಿಗೂ ಶಿಕ್ಷಣ ಸಿಗಲಿ, ಯಾವುದೇ ವಿದ್ಯಾರ್ಥಿ ವೇತನ ಮೊಟಕುಗೊಳಿಸದೆ ಸರಿಯಾದ ಸಮಯಕ್ಕೆ ತಲುಪಲಿ.
  •  ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ ಬರಲಿ, ಪೀಕ್ ಅವರ್‌ಗಳಲ್ಲಿ ಹೆಚ್ಚಿನ ಬಸ್‌ಗಳ ವ್ಯವಸ್ಥೆಯಾಗಬೇಕು.

ಈ ಅಭಿಯಾನದ ಚಟುವಟಿಕೆಗಾಗಿ ಬೆಂಗಳೂರು ನಗರ ಮತ್ತು ಚಿತ್ರದುರ್ಗ, ಮಂಗಳೂರು, ಕೋಲಾರಕುರ್ಗಿ ಜಿಲ್ಲೆಗಳ ಕಾಲೇಜುಗಳಲ್ಲಿ ಮತ್ತು ಹಳ್ಳಿಗಳಲ್ಲಿ ಯುವಜನರ ಸಶಕ್ತತೆಗಾಗಿ ಅರಿವು ಹಾಗೂ ಯುವಜನ ಆಯೋಗದ ಜಾರಿಗಾಗಿ ರಾಜ್ಯಮಟ್ಟದ ಯುವಾಂದೋಲನವು ಈಗಾಗಲೇ ನಡೆಸುತ್ತಿದ್ದೇವೆ ಎಂದು ಸಂವಾದ – ಯುವ ಮುನ್ನಡ, ಕರ್ನಾಟಕ ವೇದಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಯುವಜನ ಆಯೋಗ ಎಂದರೇನು? ಯುವಜನರ ಹಕ್ಕುಗಳ ರಕ್ಷಣೆಗಾಗಿ ಮತ್ತು ಯುವಜನರ ಶಿಕ್ಷಣ ಮತ್ತು ಸುಲೀಕರಣ ಕಾರ್ಯಕ್ರಮಗಳನ್ನು ರೂಪಿಸುವುದರ ಜೊತೆಗೆ ಅನುಷ್ಠಾನಗೊಳ್ಳುವಂತೆ ನೋಡಿಕೊಳ್ಳುವುದೇ ಯುವಜನ ಆಯೋಗದ ಗುರಿ ಉದ್ದೇಶ.

ಆಯೋಗದ ಸ್ಥಾಪನೆ ಹೇಗೆ?

ರಾಜ್ಯ ಯುವಜನ ಆಯೋಗವನ್ನು ಸ್ಥಾಪಿಸಬೇಕಾದರೆ ಸರಕಾರವು ”ಯುವಜನ ಆಯೋಗ ಕಾಯಿದೆ” ಕರಡು ರೂಪಿಸಿ ಅದನ್ನು ಉಭಯ ಸದನಗಳಲ್ಲಿ ಮಂಡಿಸಬೇಕು. ವಿಧಾನಸಭೆ ಮತ್ತು ವಿಧಾನ ಪರಿಷತ್‌ ಎರಡರಲ್ಲಿಯೂ ಮೂರನೇ ಎರಡು ಬಹುಮತ ಸಿಕ್ಕು, ರಾಜ್ಯಪಾಲರಿಂದ ಅಂಕಿತಗೊಂಡರೆ ಕಾಯಿದೆಯಾಗಿ ರೂಪು ಪಡೆಯುತ್ತದೆ. ನಂತರ ಸೂಕ್ತ ನಿಯಮಗಳನ್ನು ರೂಪಿಸಿ ಅದನ್ನು ಜಾರಿಗೆ ತರಬಹುದಾಗಿದೆ.

ಇದನ್ನೂ ಓದಿ: ನಾಳೆ ಕರ್ನಾಟಕ ಬಂದ್: ಜನಜೀವನ ಅಸ್ತವ್ಯಸ್ತ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...