Homeಕರ್ನಾಟಕ'ಯುವಜನ ಆಯೋಗ' ಜಾರಿಗಾಗಿ ಸಂವಾದ-ಯುವ ಮುನ್ನಡೆ, ಕರ್ನಾಟಕ ವೇದಿಕೆಯಿಂದ ಅಭಿಯಾನ

‘ಯುವಜನ ಆಯೋಗ’ ಜಾರಿಗಾಗಿ ಸಂವಾದ-ಯುವ ಮುನ್ನಡೆ, ಕರ್ನಾಟಕ ವೇದಿಕೆಯಿಂದ ಅಭಿಯಾನ

- Advertisement -
- Advertisement -

ಯುವಜನರ ಘನತೆಯ ಬದುಕಿಗಾಗಿ, ಯುವಜನ ಆಯೋಗ ಜಾರಿಯಾಗಬೇಕು ಎಂದು ಸಂವಾದ ಮತ್ತು ಯುವಮುನ್ನಡೆ – ಕರ್ನಾಟಕ ಇವುಗಳ ಜಂಟಿ ಆಶ್ರಯದಲ್ಲಿ ಅಭಿಯಾನ ಆರಂಭಿಸಿವೆ.

ಈ ಕುರಿತು ಯುವ ಮುನ್ನಡೆ, ಕರ್ನಾಟಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ”ಯುವಜನರು ಇರುವ ಸ್ಥಳಗಳಲ್ಲಿ ಅವರ ಗೌರವಕ್ಕೆ ಧಕ್ಕೆ ಬಾರದಂತೆ, ಹಕ್ಕುಗಳಿಗೆ ಚ್ಯುತಿ ಬರದಂತೆ ಶೋಷಣೆ ಮುಕ್ತ ಯುವಸಮಾಜ ಕಟ್ಟಲು ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಹಾಗೂ ಯುವಗೆಳೆಯ ಗೆಳತಿಯರ ಶಕ್ತಿಯ ಪಾಲ್ಗೊಳುವಿಕೆಯೊಂದಿಗೆ ಸಂವಿಧಾನ ಬದ್ಧ ಹಕ್ಕುಗಳನ್ನು ಪಡೆಯಲು ಮತ್ತೊಮ್ಮೆ ‘ಯುವಜನ ಆಯೋಗ ಜಾರಿಯಾಗಬೇಕೆಂದು ಆಭಿಯಾನ’ ನಡೆಯುತ್ತಿದೆ” ಎಂದು ಹೇಳಿದೆ.

ಅಭಿಯಾನದ ಭಾಗವಾಗಿ ದಿನಾಂಕ 27/09/2023ರಂದು ರಾಜ್ಯ ಮಟ್ಟದ ಯುವಾಂದೋಲನ ಪ್ರಕ್ರಿಯೆಯ ಭಾಗವಾಗಿ ವಿಧಾನಸೌದಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಛೇರಿ ಹಾಗೂ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ, ಹಣಕಾಸು ಹಾಗೂ ಆರ್ಥಿಕ ಮುಖ್ಯ ಕಾರ್ಯದರ್ಶಿ ಕೆ ಎಲ್‌ ಆಸೀಖ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮ, ಯವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ, ವಿಧಾನ ಸಭೆಯ ಸಭಾಧ್ಯಕ್ಷ ಯು ಟಿ ಖಾದರ್.ವಿಧಾನ ಪರಿಷತ್ ನ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿ ಮಾಡಿ, ಯುವಜನ ಆಯೋಗ ಜಾರಿಗೆ ಒತ್ತಾಯಿಸಿದೆ.

ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು, ಸಂವಾದ, ಯುವ ಮುನ್ನಡೆ ಮತ್ತು ಹಲವು ಯುವ ಸಂಘಟನೆಗಳ ಬೇಡಿಕೆಯನ್ನು ಮನ್ನಿಸಿ, ಯುವಜನ ಆಯೋಗ ಸ್ಥಾಪಿಸುವುದು, “ಯುವನಿಧಿ ನಿರುದ್ಯೋಗ ಭತ್ಯೆ ನೀಡುವುದು ಹಾಗೂ 17 ಕಾರ್ಮಿಕರ ಹಿತಕಾಯುವುದನ್ನು ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಅಧಿಕಾರಕ್ಕೆ ಬಂದ ಬಳಿಕ ಯುವನಿಧಿ ಮತ್ತು ಗಿಗ್: ಕಾರ್ಮಿಕರ ಹಿತರಕ್ಷಣೆಯನ್ನು ಈಡೇರಿಸಿದ್ದಕ್ಕಾಗಿ ಯುವಮುನ್ನಡೆಯು ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇವೆ. ಅದರಂತೆ ‘ಯುವಜನ ಆಯೋಗ’ದ ಜಾರಿಗಾಗಿ ಮನವಿ ಪತ್ರಗಳನ್ನು ಸಲ್ಲಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಅಭಿಯಾನದಲ್ಲಿ ಸಂವಾದ-ಯುವಮುನ್ನಡೆ ಪ್ರತಿನಿಧಿಗಳಾದ ನೀಲಾ ಸೋಮಶೇಖರ್ (ಬೆಂಗಳೂರು), ಈರಮ್ಮ (ಬೆಂಗಳೂರು), ಮಧನ್‌ಕುಮಾರ್ (ಚಿತ್ರದುರ್ಗ), ಅರ್ಪಿತ (ಬೆಂಗಳೂರು), ಕೃತಿಕ್ (ಬೆಂಗಳೂರು) ಇನ್ನೂ ಅನೇಕರು ಭಾಗಿಯಾಗಿದ್ದರು.

ಹಕ್ಕೊತ್ತಾಯ:

  • ಕರ್ನಾಟಕ ರಾಜ್ಯ ಯುವಜನ ಆಯೋಗ ಸ್ಥಾಪನೆಯಾಗಲಿ
  • ಕರ್ನಾಟಕ ಯುವನೀತಿ ಪರಿಷ್ಕರಣೆಯಾಗಲಿ
  • ಸರ್ಕಾರಿ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳಿಗೂ ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಮಧ್ಯಾಹ್ನದ ಪೌಷ್ಠಿಕ ಆಹಾರ ಸಿಗಲಿ
  • ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದೆ ಉಳಿಸಲ್ಪಟ್ಟ ಎಲ್ಲರಿಗೂ ಶಿಕ್ಷಣ ಸಿಗಲಿ, ಯಾವುದೇ ವಿದ್ಯಾರ್ಥಿ ವೇತನ ಮೊಟಕುಗೊಳಿಸದೆ ಸರಿಯಾದ ಸಮಯಕ್ಕೆ ತಲುಪಲಿ.
  •  ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ ಬರಲಿ, ಪೀಕ್ ಅವರ್‌ಗಳಲ್ಲಿ ಹೆಚ್ಚಿನ ಬಸ್‌ಗಳ ವ್ಯವಸ್ಥೆಯಾಗಬೇಕು.

ಈ ಅಭಿಯಾನದ ಚಟುವಟಿಕೆಗಾಗಿ ಬೆಂಗಳೂರು ನಗರ ಮತ್ತು ಚಿತ್ರದುರ್ಗ, ಮಂಗಳೂರು, ಕೋಲಾರಕುರ್ಗಿ ಜಿಲ್ಲೆಗಳ ಕಾಲೇಜುಗಳಲ್ಲಿ ಮತ್ತು ಹಳ್ಳಿಗಳಲ್ಲಿ ಯುವಜನರ ಸಶಕ್ತತೆಗಾಗಿ ಅರಿವು ಹಾಗೂ ಯುವಜನ ಆಯೋಗದ ಜಾರಿಗಾಗಿ ರಾಜ್ಯಮಟ್ಟದ ಯುವಾಂದೋಲನವು ಈಗಾಗಲೇ ನಡೆಸುತ್ತಿದ್ದೇವೆ ಎಂದು ಸಂವಾದ – ಯುವ ಮುನ್ನಡ, ಕರ್ನಾಟಕ ವೇದಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಯುವಜನ ಆಯೋಗ ಎಂದರೇನು? ಯುವಜನರ ಹಕ್ಕುಗಳ ರಕ್ಷಣೆಗಾಗಿ ಮತ್ತು ಯುವಜನರ ಶಿಕ್ಷಣ ಮತ್ತು ಸುಲೀಕರಣ ಕಾರ್ಯಕ್ರಮಗಳನ್ನು ರೂಪಿಸುವುದರ ಜೊತೆಗೆ ಅನುಷ್ಠಾನಗೊಳ್ಳುವಂತೆ ನೋಡಿಕೊಳ್ಳುವುದೇ ಯುವಜನ ಆಯೋಗದ ಗುರಿ ಉದ್ದೇಶ.

ಆಯೋಗದ ಸ್ಥಾಪನೆ ಹೇಗೆ?

ರಾಜ್ಯ ಯುವಜನ ಆಯೋಗವನ್ನು ಸ್ಥಾಪಿಸಬೇಕಾದರೆ ಸರಕಾರವು ”ಯುವಜನ ಆಯೋಗ ಕಾಯಿದೆ” ಕರಡು ರೂಪಿಸಿ ಅದನ್ನು ಉಭಯ ಸದನಗಳಲ್ಲಿ ಮಂಡಿಸಬೇಕು. ವಿಧಾನಸಭೆ ಮತ್ತು ವಿಧಾನ ಪರಿಷತ್‌ ಎರಡರಲ್ಲಿಯೂ ಮೂರನೇ ಎರಡು ಬಹುಮತ ಸಿಕ್ಕು, ರಾಜ್ಯಪಾಲರಿಂದ ಅಂಕಿತಗೊಂಡರೆ ಕಾಯಿದೆಯಾಗಿ ರೂಪು ಪಡೆಯುತ್ತದೆ. ನಂತರ ಸೂಕ್ತ ನಿಯಮಗಳನ್ನು ರೂಪಿಸಿ ಅದನ್ನು ಜಾರಿಗೆ ತರಬಹುದಾಗಿದೆ.

ಇದನ್ನೂ ಓದಿ: ನಾಳೆ ಕರ್ನಾಟಕ ಬಂದ್: ಜನಜೀವನ ಅಸ್ತವ್ಯಸ್ತ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...