Homeಕರ್ನಾಟಕ'ಯುವಜನ ಆಯೋಗ' ಜಾರಿಗಾಗಿ ಸಂವಾದ-ಯುವ ಮುನ್ನಡೆ, ಕರ್ನಾಟಕ ವೇದಿಕೆಯಿಂದ ಅಭಿಯಾನ

‘ಯುವಜನ ಆಯೋಗ’ ಜಾರಿಗಾಗಿ ಸಂವಾದ-ಯುವ ಮುನ್ನಡೆ, ಕರ್ನಾಟಕ ವೇದಿಕೆಯಿಂದ ಅಭಿಯಾನ

- Advertisement -
- Advertisement -

ಯುವಜನರ ಘನತೆಯ ಬದುಕಿಗಾಗಿ, ಯುವಜನ ಆಯೋಗ ಜಾರಿಯಾಗಬೇಕು ಎಂದು ಸಂವಾದ ಮತ್ತು ಯುವಮುನ್ನಡೆ – ಕರ್ನಾಟಕ ಇವುಗಳ ಜಂಟಿ ಆಶ್ರಯದಲ್ಲಿ ಅಭಿಯಾನ ಆರಂಭಿಸಿವೆ.

ಈ ಕುರಿತು ಯುವ ಮುನ್ನಡೆ, ಕರ್ನಾಟಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ”ಯುವಜನರು ಇರುವ ಸ್ಥಳಗಳಲ್ಲಿ ಅವರ ಗೌರವಕ್ಕೆ ಧಕ್ಕೆ ಬಾರದಂತೆ, ಹಕ್ಕುಗಳಿಗೆ ಚ್ಯುತಿ ಬರದಂತೆ ಶೋಷಣೆ ಮುಕ್ತ ಯುವಸಮಾಜ ಕಟ್ಟಲು ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಹಾಗೂ ಯುವಗೆಳೆಯ ಗೆಳತಿಯರ ಶಕ್ತಿಯ ಪಾಲ್ಗೊಳುವಿಕೆಯೊಂದಿಗೆ ಸಂವಿಧಾನ ಬದ್ಧ ಹಕ್ಕುಗಳನ್ನು ಪಡೆಯಲು ಮತ್ತೊಮ್ಮೆ ‘ಯುವಜನ ಆಯೋಗ ಜಾರಿಯಾಗಬೇಕೆಂದು ಆಭಿಯಾನ’ ನಡೆಯುತ್ತಿದೆ” ಎಂದು ಹೇಳಿದೆ.

ಅಭಿಯಾನದ ಭಾಗವಾಗಿ ದಿನಾಂಕ 27/09/2023ರಂದು ರಾಜ್ಯ ಮಟ್ಟದ ಯುವಾಂದೋಲನ ಪ್ರಕ್ರಿಯೆಯ ಭಾಗವಾಗಿ ವಿಧಾನಸೌದಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಛೇರಿ ಹಾಗೂ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ, ಹಣಕಾಸು ಹಾಗೂ ಆರ್ಥಿಕ ಮುಖ್ಯ ಕಾರ್ಯದರ್ಶಿ ಕೆ ಎಲ್‌ ಆಸೀಖ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮ, ಯವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ, ವಿಧಾನ ಸಭೆಯ ಸಭಾಧ್ಯಕ್ಷ ಯು ಟಿ ಖಾದರ್.ವಿಧಾನ ಪರಿಷತ್ ನ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿ ಮಾಡಿ, ಯುವಜನ ಆಯೋಗ ಜಾರಿಗೆ ಒತ್ತಾಯಿಸಿದೆ.

ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು, ಸಂವಾದ, ಯುವ ಮುನ್ನಡೆ ಮತ್ತು ಹಲವು ಯುವ ಸಂಘಟನೆಗಳ ಬೇಡಿಕೆಯನ್ನು ಮನ್ನಿಸಿ, ಯುವಜನ ಆಯೋಗ ಸ್ಥಾಪಿಸುವುದು, “ಯುವನಿಧಿ ನಿರುದ್ಯೋಗ ಭತ್ಯೆ ನೀಡುವುದು ಹಾಗೂ 17 ಕಾರ್ಮಿಕರ ಹಿತಕಾಯುವುದನ್ನು ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಅಧಿಕಾರಕ್ಕೆ ಬಂದ ಬಳಿಕ ಯುವನಿಧಿ ಮತ್ತು ಗಿಗ್: ಕಾರ್ಮಿಕರ ಹಿತರಕ್ಷಣೆಯನ್ನು ಈಡೇರಿಸಿದ್ದಕ್ಕಾಗಿ ಯುವಮುನ್ನಡೆಯು ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇವೆ. ಅದರಂತೆ ‘ಯುವಜನ ಆಯೋಗ’ದ ಜಾರಿಗಾಗಿ ಮನವಿ ಪತ್ರಗಳನ್ನು ಸಲ್ಲಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಅಭಿಯಾನದಲ್ಲಿ ಸಂವಾದ-ಯುವಮುನ್ನಡೆ ಪ್ರತಿನಿಧಿಗಳಾದ ನೀಲಾ ಸೋಮಶೇಖರ್ (ಬೆಂಗಳೂರು), ಈರಮ್ಮ (ಬೆಂಗಳೂರು), ಮಧನ್‌ಕುಮಾರ್ (ಚಿತ್ರದುರ್ಗ), ಅರ್ಪಿತ (ಬೆಂಗಳೂರು), ಕೃತಿಕ್ (ಬೆಂಗಳೂರು) ಇನ್ನೂ ಅನೇಕರು ಭಾಗಿಯಾಗಿದ್ದರು.

ಹಕ್ಕೊತ್ತಾಯ:

  • ಕರ್ನಾಟಕ ರಾಜ್ಯ ಯುವಜನ ಆಯೋಗ ಸ್ಥಾಪನೆಯಾಗಲಿ
  • ಕರ್ನಾಟಕ ಯುವನೀತಿ ಪರಿಷ್ಕರಣೆಯಾಗಲಿ
  • ಸರ್ಕಾರಿ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳಿಗೂ ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಮಧ್ಯಾಹ್ನದ ಪೌಷ್ಠಿಕ ಆಹಾರ ಸಿಗಲಿ
  • ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದೆ ಉಳಿಸಲ್ಪಟ್ಟ ಎಲ್ಲರಿಗೂ ಶಿಕ್ಷಣ ಸಿಗಲಿ, ಯಾವುದೇ ವಿದ್ಯಾರ್ಥಿ ವೇತನ ಮೊಟಕುಗೊಳಿಸದೆ ಸರಿಯಾದ ಸಮಯಕ್ಕೆ ತಲುಪಲಿ.
  •  ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ ಬರಲಿ, ಪೀಕ್ ಅವರ್‌ಗಳಲ್ಲಿ ಹೆಚ್ಚಿನ ಬಸ್‌ಗಳ ವ್ಯವಸ್ಥೆಯಾಗಬೇಕು.

ಈ ಅಭಿಯಾನದ ಚಟುವಟಿಕೆಗಾಗಿ ಬೆಂಗಳೂರು ನಗರ ಮತ್ತು ಚಿತ್ರದುರ್ಗ, ಮಂಗಳೂರು, ಕೋಲಾರಕುರ್ಗಿ ಜಿಲ್ಲೆಗಳ ಕಾಲೇಜುಗಳಲ್ಲಿ ಮತ್ತು ಹಳ್ಳಿಗಳಲ್ಲಿ ಯುವಜನರ ಸಶಕ್ತತೆಗಾಗಿ ಅರಿವು ಹಾಗೂ ಯುವಜನ ಆಯೋಗದ ಜಾರಿಗಾಗಿ ರಾಜ್ಯಮಟ್ಟದ ಯುವಾಂದೋಲನವು ಈಗಾಗಲೇ ನಡೆಸುತ್ತಿದ್ದೇವೆ ಎಂದು ಸಂವಾದ – ಯುವ ಮುನ್ನಡ, ಕರ್ನಾಟಕ ವೇದಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಯುವಜನ ಆಯೋಗ ಎಂದರೇನು? ಯುವಜನರ ಹಕ್ಕುಗಳ ರಕ್ಷಣೆಗಾಗಿ ಮತ್ತು ಯುವಜನರ ಶಿಕ್ಷಣ ಮತ್ತು ಸುಲೀಕರಣ ಕಾರ್ಯಕ್ರಮಗಳನ್ನು ರೂಪಿಸುವುದರ ಜೊತೆಗೆ ಅನುಷ್ಠಾನಗೊಳ್ಳುವಂತೆ ನೋಡಿಕೊಳ್ಳುವುದೇ ಯುವಜನ ಆಯೋಗದ ಗುರಿ ಉದ್ದೇಶ.

ಆಯೋಗದ ಸ್ಥಾಪನೆ ಹೇಗೆ?

ರಾಜ್ಯ ಯುವಜನ ಆಯೋಗವನ್ನು ಸ್ಥಾಪಿಸಬೇಕಾದರೆ ಸರಕಾರವು ”ಯುವಜನ ಆಯೋಗ ಕಾಯಿದೆ” ಕರಡು ರೂಪಿಸಿ ಅದನ್ನು ಉಭಯ ಸದನಗಳಲ್ಲಿ ಮಂಡಿಸಬೇಕು. ವಿಧಾನಸಭೆ ಮತ್ತು ವಿಧಾನ ಪರಿಷತ್‌ ಎರಡರಲ್ಲಿಯೂ ಮೂರನೇ ಎರಡು ಬಹುಮತ ಸಿಕ್ಕು, ರಾಜ್ಯಪಾಲರಿಂದ ಅಂಕಿತಗೊಂಡರೆ ಕಾಯಿದೆಯಾಗಿ ರೂಪು ಪಡೆಯುತ್ತದೆ. ನಂತರ ಸೂಕ್ತ ನಿಯಮಗಳನ್ನು ರೂಪಿಸಿ ಅದನ್ನು ಜಾರಿಗೆ ತರಬಹುದಾಗಿದೆ.

ಇದನ್ನೂ ಓದಿ: ನಾಳೆ ಕರ್ನಾಟಕ ಬಂದ್: ಜನಜೀವನ ಅಸ್ತವ್ಯಸ್ತ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...