Homeಕರೋನಾ ತಲ್ಲಣಗಂಡಾಂತರದಲ್ಲಿ ಡಯಾಲಿಸಿಸ್ ರೋಗಿಗಳು: ಆರೋಗ್ಯ ಮಂತ್ರಿ ಡಾ. ಸುಧಾಕರ್ ಸರಿ ಮಾಡಬಲ್ಲರಾ?

ಗಂಡಾಂತರದಲ್ಲಿ ಡಯಾಲಿಸಿಸ್ ರೋಗಿಗಳು: ಆರೋಗ್ಯ ಮಂತ್ರಿ ಡಾ. ಸುಧಾಕರ್ ಸರಿ ಮಾಡಬಲ್ಲರಾ?

- Advertisement -
- Advertisement -

ಕೊರೊನಾ ವೈರಾಣುಗಳ ರುದ್ರ ತಾಂಡವದ ಆರ್ಭಟದಲ್ಲಿ ಅದಕ್ಕಿಂತಲೂ ಗಂಡಾಂತರಕಾರಿಯಾದ ರೋಗಗಳಿಂದ ಆಗುತ್ತಿರುವ ಅನಾಹುತವನ್ನು ಆಳುವ ಸರ್ಕಾರ ಕಡೆಗಣಿಸಿ ಕೂತಿದೆಯಾ? ರಾಜ್ಯಾದ್ಯಂತ ಇರುವ ಸಾವಿರಾರು ಕಿಡ್ನಿವೈಫಲ್ಯದ ರೋಗಿಗಳು ಅನುಭವಿಸುತ್ತಿರುವ ಸಾವುಬದುಕಿನ ನಡುವಿನ ಸಂಕಟ ಇಂತಹ ಅನುಮಾನವನ್ನು ಹುಟ್ಟುಹಾಕಿದೆ!

ಎರಡೂ ಮೂತ್ರಪಿಂಡ ವಿಫಲವಾಗಿರುವ ಮಂದಿಯದು ತೀರಾ ನಾಜೂಕಿನ ಮತ್ತು ಅಷ್ಟೇ ಕ್ಲಿಷ್ಟಕರ ಬದುಕು. ಒಂಚೂರು ಹೆಚ್ಚು ಕಮ್ಮಿಯಾದರೂ ಜೀವಕ್ಕೇ ಕುತ್ತು. ಕೆಲವರಿಗಂತೂ ವಾರದಲ್ಲಿ 2-3 ಬಾರಿ ಡಯಾಲಿಸಿಸ್ ಅನಿವಾರ್ಯ. ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಇಂಥ ಸುಮಾರು 30-50 ಡಯಾಲಿಸಿಸ್ ರೋಗಿಗಳಿದ್ದಾರೆ. ಇವರಲ್ಲಿ ಬಹುತೇಕರು ಬಡ ಅಥವಾ ಕೆಳ ಮಧ್ಯಮವರ್ಗದ ಕುಟುಂಬದವರು; ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳುವಷ್ಟು ಚೈತನ್ಯ ಇಲ್ಲದವರು. ಇವರೆಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಮಾಡುವ ಸರ್ಕಾರಿ ಗುತ್ತಿಗೆ ಪಡೆದಿರುವ ಖಾಸಗಿ ಸಂಸ್ಥೆಗಳನ್ನು ಅವಲಂಬಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಆರೋಗ್ಯ ಮಂತ್ರಿಯಾಗಿದ್ದ ಯು.ಟಿ ಖಾದರ್‌ಗೆ ಡಯಾಲಿಸಿಸ್ ರೋಗಿಗಳ ಗೋಳು ಗೊತ್ತಾಗಿತ್ತು. ಅವರ ಐದು ವರ್ಷದ ಕಾಲಮಿತಿಯಲ್ಲಿ ರಾಜ್ಯದ ಎಲ್ಲ ತಾಲ್ಲೂಕುಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಸರ್ಕಾರವೇ ಡಯಾಲಿಸಿಸ್ ಕೇಂದ್ರ ನಡೆಸುವಂಥ ಯೋಜನೆ ಹಾಕಿಕೊಂಡಿದ್ದರು. ಖಾದರ್ ಈ ಯೋಜನೆ ಸಿದ್ಧಪಡಿಸುತ್ತಿದ್ದ ಸಮಯದಲ್ಲೇ ಅವರ ಬಳಿಯಿದ್ದ ಆರೋಗ್ಯ ಖಾತೆ ಹೋಗಿ, ಅವರು ಆಹಾರ ಸಚಿವರಾದರು. ಅವರ ನಂತರ ಬಂದ ರಮೇಶ್‌ಕುಮಾರ್ ಅವರಿಗೆ ಇದಕ್ಕಿಂತ ಖಾಸಗಿಯವರಿಗೆ ಡಯಾಲಿಸಿಸ್ ಯೋಜನೆಯ ಗುತ್ತಿಗೆ ನೀಡುವುದು ಅನುಕೂಲಕರ ಎಂದೆನಿಸಿರಬೇಕು. ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಕಡಿವಾಣ ಹಾಕಲು ಹೊರಟಿದ್ದ ಅವರು ಈ ಖಾಸಗಿ ಗುತ್ತಿಗೆಯಿಂದ ಆಗುವ ಅನಾಹುತಗಳ ಬಗ್ಗೆಯೇಕೋ ಗಮನಹರಿಸಲಿಲ್ಲ.

ರಾಜ್ಯದ 23 ತಾಲ್ಲೂಕುಗಳ 122 ತಾಲ್ಲೂಕು ಕೇಂದ್ರಗಳಲ್ಲಿ ಮೂತ್ರಪಿಂಡ ಕಾಯಿಲೆಯವರಿಗೆ ಡಯಾಲಿಸಿಸ್ ನಡೆಸುವ ಗುತ್ತಿಗೆ ಅನಿವಾಸಿ ಭಾರತೀಯ ಆರೋಗ್ಯ ಉದ್ಯಮಿ ಬಿ.ಆರ್.ಶೆಟ್ಟಿಯ ಕಂಪನಿಗೆ ರಮೇಶ್ ಕುಮಾರ್ ಕಾಲದಲ್ಲಿ ಸಲೀಸಾಗಿ ದಕ್ಕಿತ್ತು. ಪ್ರತಿ ರೋಗಿಗೆ ಒಂದೂವರೆ ಸಾವಿರ ರೂ.ನಂತೆ ಡಯಾಲಿಸಿಸ್ ನಡೆಸುವ ಗುತ್ತಿಗೆಯನ್ನು ಬಿ.ಆರ್.ಶೆಟ್ಟಿ ಕಂಪನಿ ಪಡೆದುಕೊಂಡಿದೆ. ಹಾಗೆ ನೋಡಿದರೆ ತಲಾ 500-600ರೂ ಖರ್ಚು ತಗಲುವ ಈ ಡಯಾಲಿಸಿಸ್ ದುಬಾರಿ ರೇಟಿಗೆ ಬಿ.ಆರ್.ಶೆಟ್ಟಿ ಕುದುರಿಸಿಕೊಂಡಿದ್ದಾರೆ.

ಯಡಿಯೂರಪ್ಪ ಸರ್ಕಾರದಲ್ಲಿ ಡಾ. ಸುಧಾಕರ್ ಆರೋಗ್ಯ ಮಂತ್ರಿಯಾಗುವ ತನಕ ಡಯಾಲಿಸಿಸ್ ಹೇಳುವಂಥ ತೊಂದರೆ ತೊಡಕಿಲ್ಲದೆ ನಡೆದುಕೊಂಡು ಹೋಗಿತ್ತು. ದುಬೈನಲ್ಲಿ ಬಿ.ಆರ್.ಶೆಟ್ಟರ ಉದ್ಯಮ ಸಾಮ್ರಾಜ್ಯ ಪತನವಾಗುತ್ತಿದ್ದಂತೆಯೇ ಇತ್ತ ಕರ್ನಾಟಕದಲ್ಲೂ ಆತನ ವ್ಯವಹಾರವೆಲ್ಲ ಎಡವಟ್ಟಾಗುತ್ತ ಹೋಯಿತು. ಮಂತ್ರಿ ಡಾ.ಸುಧಾಕರ್ ಮತ್ತವರ ಆರೋಗ್ಯ ಇಲಾಖೆಯ ಆಯಕಟ್ಟಿನ ಅಧಿಕಾರಿಗಳ ಮಧ್ಯೆ ಸಾಮರಸ್ಯ ಇಲ್ಲದಾಯಿತು. ಬಿಆರ್‌ಎಸ್ ಕಂಪನಿಯ ಡಯಾಲಿಸಿಸ್ ಕೇಂದ್ರಗಳಲ್ಲಿ ನಾನಾ ನಮೂನೆಯ ಅವ್ಯವಸ್ಥೆ-ಅವಾಂತರ ನಡೆಯತೊಡಗಿತು.

ರೋಗಿಗಳು ದಿಕ್ಕೆಟ್ಟು ಹೋದರು. ಸರ್ಕಾರದಿಂದ ಬರಬೇಕಾದ ಹಣ ಕಾಲ ಕಾಲಕ್ಕೆ ಪಾವತಿ ಆಗದಿರುವುದೇ ಅವ್ಯವಸ್ಥೆಗೆ ಕಾರಣವೆಂದು ಬಿಆರ್‌ಎಸ್‌ನವರು ಬಹಿರಂಗವಾಗೇ ದೂರಹತ್ತಿದರು; ಆರೋಗ್ಯ ಮಂತ್ರಿ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಅಸಹಕಾರದಿಂದಾಗಿ ಡಯಾಲಿಸಿಸ್ ಸೆಂಟರ್‌ಗಳನ್ನು ನಡೆಸಲು ಸಾಧ್ಯವಾಗದಂತಾಗಿದೆ ಎಂದು ಬಿಆರ್‌ಎಸ್ ಕಂಪನಿಯ ಕಾರ್ಯನಿರ್ವಾಹಕ ಹೇಳಿರುವ ಆಡಿಯೋ ಒಂದು ವೈರಲ್ ಆಯಿತು.

ಆರೋಗ್ಯ ಇಲಾಖೆ ಬಿಆರ್‌ಎಸ್ ಕಂಪನಿಯದೇ ತಪ್ಪೆನ್ನುತ್ತಿದೆ. ಬಿಆರ್‌ಎಸ್ ಕಂಪನಿ ಒಪ್ಪಂದ ಉಲ್ಲಂಘಿಸಿದೆ. ವಿದ್ಯುತ್ ಶಕ್ತಿ ಮತ್ತು ನೀರಿನ ಪೂರೈಕೆ ಬಿಆರ್‌ಎಸ್ ಕಂಪನಿಯೇ ಮಾಡಿಕೊಳ್ಳಬೇಕೆಂಬುದು ಒಪ್ಪಂದದ ಷರತ್ತು. ಆದರೆ ಬಿಆರ್‌ಎಸ್ ಕಂಪನಿಯವರು ಸರ್ಕಾರಿ ಆಸ್ಪತ್ರೆಗಳಲ್ಲಿನ ನೀರು ಮತ್ತು ವಿದ್ಯುತ್ ಬಳಸಿಕೊಂಡು ಅದರ ಖರ್ಚುವೆಚ್ಚ ಭರಿಸದೆ ಪಂಗನಾಮ ಹಾಕುತ್ತಿದ್ದಾರೆ. ಲೆಕ್ಕಪತ್ರ ಪರಿಶೀಲನೆಯಲ್ಲಿ ಇದು ಆಕ್ಷೇಪಕ್ಕೆ ಕಾರಣವಾಗಿದೆ. ಹೀಗಾಗಿ ಬಿಲ್ ತಡೆಹಿಡಿಯಲಾಗಿದೆ ಎಂಬುದು ಆರೋಗ್ಯ ಇಲಾಖೆಯ ಸಮಜಾಯಿಷಿ.

ಬಿಆರ್‌ಎಸ್ ಕಂಪನಿ ಹಾಗು ಆರೋಗ್ಯ ಇಲಾಖೆಯ ಮೇಲಾಟದಲ್ಲಿ ಬಲಿ ಪಶುವಾಗುತ್ತಿರುವುದು ಮಾತ್ರ ನಿಸ್ಸಹಾಯಕ-ನಿರ್ಗತಿಕ ಡಯಾಲಿಸಿಸ್ ರೋಗಿಗಳು! ಬಿಆರ್‌ಎಸ್‌ನ ಎಲ್ಲ 122 ಡಯಾಲಿಸಿಸ್ ಕೇಂದ್ರಗಳಲ್ಲಿ ಸರಿಯಾದ ಚಿಕಿತ್ಸೆ ಸಿಗದೆ ಪಾಪದ ಪೇಶೆಂಟ್‌ಗಳು ಒದ್ದಾಡುತ್ತಿದ್ದಾರೆ. ಡಯಾಲಿಸಿಸ್‌ಗೆ ಬೇಕಾದ ರಾಸಾಯನಿಕ ಔಷಧ ಡಯಲೈಸರ್ ಮುಂತಾದ ಸಲಕರಣೆ ಸೆಂಟರ್‌ಗಳಲ್ಲಿ ಇಲ್ಲದಾಗಿದೆ! ಡಯಾಲಿಸಿಸ್ ಮಾಡುವ ನರ್ಸ್, ಟೆಕ್ನಿಶಿಯನ್‌ಗಳಿಗೆ ಬೇಕಾದ ಕನಿಷ್ಟ ಕೈಗ್ಲೌಸುಗಳು, ಮಾಸ್ಕ್‌ಗಳಿಗೂ ತತ್ವಾರವಾಗಿದೆ.

ಕೆಲವು ತಾಲ್ಲೂಕಿನ ರೋಗಿಗಳು ಅಥವಾ ಅವರ ಸಂಬಂಧಿಕರು ತೀರಾ ಅಗತ್ಯವಾದ ಪರಿಕರ-ಔಷಧ-ರಾಸಾಯನಿಕ ತಂದುಕೊಟ್ಟು ಡಯಾಲಿಸಿಸ್ ಮಾಡಿಸಿಕೊಂಡು ಹೋಗುತ್ತಿದ್ದಾರೆ. ಸರಿಯಾಗಿ ಸಂಬಳ ಸಿಗದೆ ಸಿಬ್ಬಂದಿ ಒಬ್ಬೊಬ್ಬರಾಗಿ ಬಿಆರ್‌ಎಸ್ ಕಂಪನಿ ಬಿಟ್ಟು ಹೋಗುತ್ತಿರುವುದು, ರೋಗಿಗಳು ಮತ್ತವರ ಪರಿವಾರದವರನ್ನು ಚಿಂತೆಗೀಡುಮಾಡಿದೆ! ಸರ್ಕಾರದಿಂದ ಬರೋಬ್ಬರಿ 28 ಕೋಟಿ ಹಣ ಬರದಿರುವುದರಿಂದ ಡಯಾಲಿಸಿಸ್ ಸೆಂಟರ್‌ಗಳನ್ನು ನಡೆಸುವುದು ಸಾಧ್ಯವೇ ಇಲ್ಲವೆಂದು ಬಿಆರ್‌ಎಸ್ ಕಂಪನಿಯವರು ಹೇಳುತ್ತಿದ್ದಾರೆ. ಹಾಗಂತ ಸಂಬಂಧಿಸಿದ ಸಚಿವ ಅಧಿಕಾರಿಗಳಿಗೂ ಪತ್ರ ಬರೆದಿರುವುದಾಗಿ ಬಿಆರ್‌ಎಸ್ ಕಂಪನಿ ಹೇಳಿಯೂ ಆಗಿದೆ.

ಇದು ಪರ್ಸೆಂಟೇಜ್ ಪರಾಕ್ರಮದ ಅಡ್ಡ ಪರಿಣಾಮವೆಂಬ ಆರೋಪವೂ ಕೇಳಿ ಬರುತ್ತಿದೆ. ಈಗಲಾದರೂ ಆರೋಗ್ಯ ಮಂತ್ರಿ ಹಾಗು ಆ ಇಲಾಖೆಯ ಹಿರಿಯ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಇಲ್ಲದಿದ್ದರೆ ಡಯಾಲಿಸಿಸ್ ಪೇಶೆಂಟ್‌ಗಳು ಸಾಲು ಸಾಲಾಗಿ ಸಾಯುವುದು ಖಂಡಿತ! ಆರೋಗ್ಯ ಸೌಲಭ್ಯಗಳಿಲ್ಲದೆ ಜಿಲ್ಲಾ ಕೇಂದ್ರಗಳಲ್ಲಿ ಮೊದಲೇ ಹೈರಾಣಾಗಿರುವ ಡಯಾಲಿಸಿಸ್ ರೋಗಿಗಳು ದೂರದ ಖಾಸಗಿ ಆಸ್ಪತ್ರೆಗೆ ಹೋಗಿ ಡಯಾಲಿಸಿಸ್ ಮಾಡಿಸಿಕೊಳ್ಳುವುದು ತುಂಬ ಕಷ್ಟ. ಉದಾಹರಣೆಗೆ ಉತ್ತರಕನ್ನಡದ ರೋಗಿಗಳು ಉಡುಪಿ, ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ, ಪಣಜಿಗೆ ಹೋಗಬೇಕು. ಹೋಗಲಿಕ್ಕೆ ನಾಲ್ಕೈದು ತಾಸು ಬೇಕು; ಬರುವುದಕ್ಕೆ ಅಷ್ಟೇ ಸಮಯಬೇಕು. ಡಯಾಲಿಸಿಸ್‌ಗೆ 2-3 ಗಂಟೆ ಬೇಕಾಗುತ್ತದೆ. ಅಷ್ಟರಲ್ಲಿ ರೋಗಿ ಏದುಸಿರು ಬಿಡತೊಡಗುತ್ತಾನೆ/ಳೆ. ನಸೀಬ್ ಇದ್ದರಷ್ಟೇ ಬಚಾವ್!!

ತಕ್ಷಣಕ್ಕೆ ಮಂತ್ರಿ ಡಾ. ಸುಧಾಕರ್ ಬಿಆರ್‌ಎಸ್ ಕಂಪನಿಯನ್ನು ಹಳಿಗೆ ತರಲು ಗಂಭೀರ-ನಿಷ್ಠುರ ಪ್ರಯತ್ನ ಮಾಡಬೇಕಿದೆ; ಅದಾಗದಿದ್ದರೆ ಬಡ ರೋಗಿಗಳನ್ನು ಬದುಕಿಸಲು ಬದಲಿ ವ್ಯವಸ್ಥೆ ಮಾಡಬೇಕಿದೆ. ನಂತರ ನಿಧಾನಕ್ಕೆ ಪ್ರತಿ ತಾಲ್ಲೂಕಾಸ್ಪತ್ರೆಗಳಲ್ಲಿ ಸರಕಾರದ್ದೇ ಸ್ವತಂತ್ರ ಡಯಾಲಿಸಿಸ್ ಕೇಂದ್ರ ಸ್ಥಾಪಿಸಲು ಯೋಜನೆ ಹಾಕಿ ಕಾರ್ಯಗತಗೊಳಿಸಬೇಕಿದೆ.


ಇದನ್ನೂ ಓದಿ: ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...