Homeಕರೋನಾ ತಲ್ಲಣಗಂಡಾಂತರದಲ್ಲಿ ಡಯಾಲಿಸಿಸ್ ರೋಗಿಗಳು: ಆರೋಗ್ಯ ಮಂತ್ರಿ ಡಾ. ಸುಧಾಕರ್ ಸರಿ ಮಾಡಬಲ್ಲರಾ?

ಗಂಡಾಂತರದಲ್ಲಿ ಡಯಾಲಿಸಿಸ್ ರೋಗಿಗಳು: ಆರೋಗ್ಯ ಮಂತ್ರಿ ಡಾ. ಸುಧಾಕರ್ ಸರಿ ಮಾಡಬಲ್ಲರಾ?

- Advertisement -
- Advertisement -

ಕೊರೊನಾ ವೈರಾಣುಗಳ ರುದ್ರ ತಾಂಡವದ ಆರ್ಭಟದಲ್ಲಿ ಅದಕ್ಕಿಂತಲೂ ಗಂಡಾಂತರಕಾರಿಯಾದ ರೋಗಗಳಿಂದ ಆಗುತ್ತಿರುವ ಅನಾಹುತವನ್ನು ಆಳುವ ಸರ್ಕಾರ ಕಡೆಗಣಿಸಿ ಕೂತಿದೆಯಾ? ರಾಜ್ಯಾದ್ಯಂತ ಇರುವ ಸಾವಿರಾರು ಕಿಡ್ನಿವೈಫಲ್ಯದ ರೋಗಿಗಳು ಅನುಭವಿಸುತ್ತಿರುವ ಸಾವುಬದುಕಿನ ನಡುವಿನ ಸಂಕಟ ಇಂತಹ ಅನುಮಾನವನ್ನು ಹುಟ್ಟುಹಾಕಿದೆ!

ಎರಡೂ ಮೂತ್ರಪಿಂಡ ವಿಫಲವಾಗಿರುವ ಮಂದಿಯದು ತೀರಾ ನಾಜೂಕಿನ ಮತ್ತು ಅಷ್ಟೇ ಕ್ಲಿಷ್ಟಕರ ಬದುಕು. ಒಂಚೂರು ಹೆಚ್ಚು ಕಮ್ಮಿಯಾದರೂ ಜೀವಕ್ಕೇ ಕುತ್ತು. ಕೆಲವರಿಗಂತೂ ವಾರದಲ್ಲಿ 2-3 ಬಾರಿ ಡಯಾಲಿಸಿಸ್ ಅನಿವಾರ್ಯ. ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಇಂಥ ಸುಮಾರು 30-50 ಡಯಾಲಿಸಿಸ್ ರೋಗಿಗಳಿದ್ದಾರೆ. ಇವರಲ್ಲಿ ಬಹುತೇಕರು ಬಡ ಅಥವಾ ಕೆಳ ಮಧ್ಯಮವರ್ಗದ ಕುಟುಂಬದವರು; ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳುವಷ್ಟು ಚೈತನ್ಯ ಇಲ್ಲದವರು. ಇವರೆಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಮಾಡುವ ಸರ್ಕಾರಿ ಗುತ್ತಿಗೆ ಪಡೆದಿರುವ ಖಾಸಗಿ ಸಂಸ್ಥೆಗಳನ್ನು ಅವಲಂಬಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಆರೋಗ್ಯ ಮಂತ್ರಿಯಾಗಿದ್ದ ಯು.ಟಿ ಖಾದರ್‌ಗೆ ಡಯಾಲಿಸಿಸ್ ರೋಗಿಗಳ ಗೋಳು ಗೊತ್ತಾಗಿತ್ತು. ಅವರ ಐದು ವರ್ಷದ ಕಾಲಮಿತಿಯಲ್ಲಿ ರಾಜ್ಯದ ಎಲ್ಲ ತಾಲ್ಲೂಕುಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಸರ್ಕಾರವೇ ಡಯಾಲಿಸಿಸ್ ಕೇಂದ್ರ ನಡೆಸುವಂಥ ಯೋಜನೆ ಹಾಕಿಕೊಂಡಿದ್ದರು. ಖಾದರ್ ಈ ಯೋಜನೆ ಸಿದ್ಧಪಡಿಸುತ್ತಿದ್ದ ಸಮಯದಲ್ಲೇ ಅವರ ಬಳಿಯಿದ್ದ ಆರೋಗ್ಯ ಖಾತೆ ಹೋಗಿ, ಅವರು ಆಹಾರ ಸಚಿವರಾದರು. ಅವರ ನಂತರ ಬಂದ ರಮೇಶ್‌ಕುಮಾರ್ ಅವರಿಗೆ ಇದಕ್ಕಿಂತ ಖಾಸಗಿಯವರಿಗೆ ಡಯಾಲಿಸಿಸ್ ಯೋಜನೆಯ ಗುತ್ತಿಗೆ ನೀಡುವುದು ಅನುಕೂಲಕರ ಎಂದೆನಿಸಿರಬೇಕು. ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಕಡಿವಾಣ ಹಾಕಲು ಹೊರಟಿದ್ದ ಅವರು ಈ ಖಾಸಗಿ ಗುತ್ತಿಗೆಯಿಂದ ಆಗುವ ಅನಾಹುತಗಳ ಬಗ್ಗೆಯೇಕೋ ಗಮನಹರಿಸಲಿಲ್ಲ.

ರಾಜ್ಯದ 23 ತಾಲ್ಲೂಕುಗಳ 122 ತಾಲ್ಲೂಕು ಕೇಂದ್ರಗಳಲ್ಲಿ ಮೂತ್ರಪಿಂಡ ಕಾಯಿಲೆಯವರಿಗೆ ಡಯಾಲಿಸಿಸ್ ನಡೆಸುವ ಗುತ್ತಿಗೆ ಅನಿವಾಸಿ ಭಾರತೀಯ ಆರೋಗ್ಯ ಉದ್ಯಮಿ ಬಿ.ಆರ್.ಶೆಟ್ಟಿಯ ಕಂಪನಿಗೆ ರಮೇಶ್ ಕುಮಾರ್ ಕಾಲದಲ್ಲಿ ಸಲೀಸಾಗಿ ದಕ್ಕಿತ್ತು. ಪ್ರತಿ ರೋಗಿಗೆ ಒಂದೂವರೆ ಸಾವಿರ ರೂ.ನಂತೆ ಡಯಾಲಿಸಿಸ್ ನಡೆಸುವ ಗುತ್ತಿಗೆಯನ್ನು ಬಿ.ಆರ್.ಶೆಟ್ಟಿ ಕಂಪನಿ ಪಡೆದುಕೊಂಡಿದೆ. ಹಾಗೆ ನೋಡಿದರೆ ತಲಾ 500-600ರೂ ಖರ್ಚು ತಗಲುವ ಈ ಡಯಾಲಿಸಿಸ್ ದುಬಾರಿ ರೇಟಿಗೆ ಬಿ.ಆರ್.ಶೆಟ್ಟಿ ಕುದುರಿಸಿಕೊಂಡಿದ್ದಾರೆ.

ಯಡಿಯೂರಪ್ಪ ಸರ್ಕಾರದಲ್ಲಿ ಡಾ. ಸುಧಾಕರ್ ಆರೋಗ್ಯ ಮಂತ್ರಿಯಾಗುವ ತನಕ ಡಯಾಲಿಸಿಸ್ ಹೇಳುವಂಥ ತೊಂದರೆ ತೊಡಕಿಲ್ಲದೆ ನಡೆದುಕೊಂಡು ಹೋಗಿತ್ತು. ದುಬೈನಲ್ಲಿ ಬಿ.ಆರ್.ಶೆಟ್ಟರ ಉದ್ಯಮ ಸಾಮ್ರಾಜ್ಯ ಪತನವಾಗುತ್ತಿದ್ದಂತೆಯೇ ಇತ್ತ ಕರ್ನಾಟಕದಲ್ಲೂ ಆತನ ವ್ಯವಹಾರವೆಲ್ಲ ಎಡವಟ್ಟಾಗುತ್ತ ಹೋಯಿತು. ಮಂತ್ರಿ ಡಾ.ಸುಧಾಕರ್ ಮತ್ತವರ ಆರೋಗ್ಯ ಇಲಾಖೆಯ ಆಯಕಟ್ಟಿನ ಅಧಿಕಾರಿಗಳ ಮಧ್ಯೆ ಸಾಮರಸ್ಯ ಇಲ್ಲದಾಯಿತು. ಬಿಆರ್‌ಎಸ್ ಕಂಪನಿಯ ಡಯಾಲಿಸಿಸ್ ಕೇಂದ್ರಗಳಲ್ಲಿ ನಾನಾ ನಮೂನೆಯ ಅವ್ಯವಸ್ಥೆ-ಅವಾಂತರ ನಡೆಯತೊಡಗಿತು.

ರೋಗಿಗಳು ದಿಕ್ಕೆಟ್ಟು ಹೋದರು. ಸರ್ಕಾರದಿಂದ ಬರಬೇಕಾದ ಹಣ ಕಾಲ ಕಾಲಕ್ಕೆ ಪಾವತಿ ಆಗದಿರುವುದೇ ಅವ್ಯವಸ್ಥೆಗೆ ಕಾರಣವೆಂದು ಬಿಆರ್‌ಎಸ್‌ನವರು ಬಹಿರಂಗವಾಗೇ ದೂರಹತ್ತಿದರು; ಆರೋಗ್ಯ ಮಂತ್ರಿ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಅಸಹಕಾರದಿಂದಾಗಿ ಡಯಾಲಿಸಿಸ್ ಸೆಂಟರ್‌ಗಳನ್ನು ನಡೆಸಲು ಸಾಧ್ಯವಾಗದಂತಾಗಿದೆ ಎಂದು ಬಿಆರ್‌ಎಸ್ ಕಂಪನಿಯ ಕಾರ್ಯನಿರ್ವಾಹಕ ಹೇಳಿರುವ ಆಡಿಯೋ ಒಂದು ವೈರಲ್ ಆಯಿತು.

ಆರೋಗ್ಯ ಇಲಾಖೆ ಬಿಆರ್‌ಎಸ್ ಕಂಪನಿಯದೇ ತಪ್ಪೆನ್ನುತ್ತಿದೆ. ಬಿಆರ್‌ಎಸ್ ಕಂಪನಿ ಒಪ್ಪಂದ ಉಲ್ಲಂಘಿಸಿದೆ. ವಿದ್ಯುತ್ ಶಕ್ತಿ ಮತ್ತು ನೀರಿನ ಪೂರೈಕೆ ಬಿಆರ್‌ಎಸ್ ಕಂಪನಿಯೇ ಮಾಡಿಕೊಳ್ಳಬೇಕೆಂಬುದು ಒಪ್ಪಂದದ ಷರತ್ತು. ಆದರೆ ಬಿಆರ್‌ಎಸ್ ಕಂಪನಿಯವರು ಸರ್ಕಾರಿ ಆಸ್ಪತ್ರೆಗಳಲ್ಲಿನ ನೀರು ಮತ್ತು ವಿದ್ಯುತ್ ಬಳಸಿಕೊಂಡು ಅದರ ಖರ್ಚುವೆಚ್ಚ ಭರಿಸದೆ ಪಂಗನಾಮ ಹಾಕುತ್ತಿದ್ದಾರೆ. ಲೆಕ್ಕಪತ್ರ ಪರಿಶೀಲನೆಯಲ್ಲಿ ಇದು ಆಕ್ಷೇಪಕ್ಕೆ ಕಾರಣವಾಗಿದೆ. ಹೀಗಾಗಿ ಬಿಲ್ ತಡೆಹಿಡಿಯಲಾಗಿದೆ ಎಂಬುದು ಆರೋಗ್ಯ ಇಲಾಖೆಯ ಸಮಜಾಯಿಷಿ.

ಬಿಆರ್‌ಎಸ್ ಕಂಪನಿ ಹಾಗು ಆರೋಗ್ಯ ಇಲಾಖೆಯ ಮೇಲಾಟದಲ್ಲಿ ಬಲಿ ಪಶುವಾಗುತ್ತಿರುವುದು ಮಾತ್ರ ನಿಸ್ಸಹಾಯಕ-ನಿರ್ಗತಿಕ ಡಯಾಲಿಸಿಸ್ ರೋಗಿಗಳು! ಬಿಆರ್‌ಎಸ್‌ನ ಎಲ್ಲ 122 ಡಯಾಲಿಸಿಸ್ ಕೇಂದ್ರಗಳಲ್ಲಿ ಸರಿಯಾದ ಚಿಕಿತ್ಸೆ ಸಿಗದೆ ಪಾಪದ ಪೇಶೆಂಟ್‌ಗಳು ಒದ್ದಾಡುತ್ತಿದ್ದಾರೆ. ಡಯಾಲಿಸಿಸ್‌ಗೆ ಬೇಕಾದ ರಾಸಾಯನಿಕ ಔಷಧ ಡಯಲೈಸರ್ ಮುಂತಾದ ಸಲಕರಣೆ ಸೆಂಟರ್‌ಗಳಲ್ಲಿ ಇಲ್ಲದಾಗಿದೆ! ಡಯಾಲಿಸಿಸ್ ಮಾಡುವ ನರ್ಸ್, ಟೆಕ್ನಿಶಿಯನ್‌ಗಳಿಗೆ ಬೇಕಾದ ಕನಿಷ್ಟ ಕೈಗ್ಲೌಸುಗಳು, ಮಾಸ್ಕ್‌ಗಳಿಗೂ ತತ್ವಾರವಾಗಿದೆ.

ಕೆಲವು ತಾಲ್ಲೂಕಿನ ರೋಗಿಗಳು ಅಥವಾ ಅವರ ಸಂಬಂಧಿಕರು ತೀರಾ ಅಗತ್ಯವಾದ ಪರಿಕರ-ಔಷಧ-ರಾಸಾಯನಿಕ ತಂದುಕೊಟ್ಟು ಡಯಾಲಿಸಿಸ್ ಮಾಡಿಸಿಕೊಂಡು ಹೋಗುತ್ತಿದ್ದಾರೆ. ಸರಿಯಾಗಿ ಸಂಬಳ ಸಿಗದೆ ಸಿಬ್ಬಂದಿ ಒಬ್ಬೊಬ್ಬರಾಗಿ ಬಿಆರ್‌ಎಸ್ ಕಂಪನಿ ಬಿಟ್ಟು ಹೋಗುತ್ತಿರುವುದು, ರೋಗಿಗಳು ಮತ್ತವರ ಪರಿವಾರದವರನ್ನು ಚಿಂತೆಗೀಡುಮಾಡಿದೆ! ಸರ್ಕಾರದಿಂದ ಬರೋಬ್ಬರಿ 28 ಕೋಟಿ ಹಣ ಬರದಿರುವುದರಿಂದ ಡಯಾಲಿಸಿಸ್ ಸೆಂಟರ್‌ಗಳನ್ನು ನಡೆಸುವುದು ಸಾಧ್ಯವೇ ಇಲ್ಲವೆಂದು ಬಿಆರ್‌ಎಸ್ ಕಂಪನಿಯವರು ಹೇಳುತ್ತಿದ್ದಾರೆ. ಹಾಗಂತ ಸಂಬಂಧಿಸಿದ ಸಚಿವ ಅಧಿಕಾರಿಗಳಿಗೂ ಪತ್ರ ಬರೆದಿರುವುದಾಗಿ ಬಿಆರ್‌ಎಸ್ ಕಂಪನಿ ಹೇಳಿಯೂ ಆಗಿದೆ.

ಇದು ಪರ್ಸೆಂಟೇಜ್ ಪರಾಕ್ರಮದ ಅಡ್ಡ ಪರಿಣಾಮವೆಂಬ ಆರೋಪವೂ ಕೇಳಿ ಬರುತ್ತಿದೆ. ಈಗಲಾದರೂ ಆರೋಗ್ಯ ಮಂತ್ರಿ ಹಾಗು ಆ ಇಲಾಖೆಯ ಹಿರಿಯ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಇಲ್ಲದಿದ್ದರೆ ಡಯಾಲಿಸಿಸ್ ಪೇಶೆಂಟ್‌ಗಳು ಸಾಲು ಸಾಲಾಗಿ ಸಾಯುವುದು ಖಂಡಿತ! ಆರೋಗ್ಯ ಸೌಲಭ್ಯಗಳಿಲ್ಲದೆ ಜಿಲ್ಲಾ ಕೇಂದ್ರಗಳಲ್ಲಿ ಮೊದಲೇ ಹೈರಾಣಾಗಿರುವ ಡಯಾಲಿಸಿಸ್ ರೋಗಿಗಳು ದೂರದ ಖಾಸಗಿ ಆಸ್ಪತ್ರೆಗೆ ಹೋಗಿ ಡಯಾಲಿಸಿಸ್ ಮಾಡಿಸಿಕೊಳ್ಳುವುದು ತುಂಬ ಕಷ್ಟ. ಉದಾಹರಣೆಗೆ ಉತ್ತರಕನ್ನಡದ ರೋಗಿಗಳು ಉಡುಪಿ, ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ, ಪಣಜಿಗೆ ಹೋಗಬೇಕು. ಹೋಗಲಿಕ್ಕೆ ನಾಲ್ಕೈದು ತಾಸು ಬೇಕು; ಬರುವುದಕ್ಕೆ ಅಷ್ಟೇ ಸಮಯಬೇಕು. ಡಯಾಲಿಸಿಸ್‌ಗೆ 2-3 ಗಂಟೆ ಬೇಕಾಗುತ್ತದೆ. ಅಷ್ಟರಲ್ಲಿ ರೋಗಿ ಏದುಸಿರು ಬಿಡತೊಡಗುತ್ತಾನೆ/ಳೆ. ನಸೀಬ್ ಇದ್ದರಷ್ಟೇ ಬಚಾವ್!!

ತಕ್ಷಣಕ್ಕೆ ಮಂತ್ರಿ ಡಾ. ಸುಧಾಕರ್ ಬಿಆರ್‌ಎಸ್ ಕಂಪನಿಯನ್ನು ಹಳಿಗೆ ತರಲು ಗಂಭೀರ-ನಿಷ್ಠುರ ಪ್ರಯತ್ನ ಮಾಡಬೇಕಿದೆ; ಅದಾಗದಿದ್ದರೆ ಬಡ ರೋಗಿಗಳನ್ನು ಬದುಕಿಸಲು ಬದಲಿ ವ್ಯವಸ್ಥೆ ಮಾಡಬೇಕಿದೆ. ನಂತರ ನಿಧಾನಕ್ಕೆ ಪ್ರತಿ ತಾಲ್ಲೂಕಾಸ್ಪತ್ರೆಗಳಲ್ಲಿ ಸರಕಾರದ್ದೇ ಸ್ವತಂತ್ರ ಡಯಾಲಿಸಿಸ್ ಕೇಂದ್ರ ಸ್ಥಾಪಿಸಲು ಯೋಜನೆ ಹಾಕಿ ಕಾರ್ಯಗತಗೊಳಿಸಬೇಕಿದೆ.


ಇದನ್ನೂ ಓದಿ: ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...