Homeಕರೋನಾ ತಲ್ಲಣಗಂಡಾಂತರದಲ್ಲಿ ಡಯಾಲಿಸಿಸ್ ರೋಗಿಗಳು: ಆರೋಗ್ಯ ಮಂತ್ರಿ ಡಾ. ಸುಧಾಕರ್ ಸರಿ ಮಾಡಬಲ್ಲರಾ?

ಗಂಡಾಂತರದಲ್ಲಿ ಡಯಾಲಿಸಿಸ್ ರೋಗಿಗಳು: ಆರೋಗ್ಯ ಮಂತ್ರಿ ಡಾ. ಸುಧಾಕರ್ ಸರಿ ಮಾಡಬಲ್ಲರಾ?

- Advertisement -
- Advertisement -

ಕೊರೊನಾ ವೈರಾಣುಗಳ ರುದ್ರ ತಾಂಡವದ ಆರ್ಭಟದಲ್ಲಿ ಅದಕ್ಕಿಂತಲೂ ಗಂಡಾಂತರಕಾರಿಯಾದ ರೋಗಗಳಿಂದ ಆಗುತ್ತಿರುವ ಅನಾಹುತವನ್ನು ಆಳುವ ಸರ್ಕಾರ ಕಡೆಗಣಿಸಿ ಕೂತಿದೆಯಾ? ರಾಜ್ಯಾದ್ಯಂತ ಇರುವ ಸಾವಿರಾರು ಕಿಡ್ನಿವೈಫಲ್ಯದ ರೋಗಿಗಳು ಅನುಭವಿಸುತ್ತಿರುವ ಸಾವುಬದುಕಿನ ನಡುವಿನ ಸಂಕಟ ಇಂತಹ ಅನುಮಾನವನ್ನು ಹುಟ್ಟುಹಾಕಿದೆ!

ಎರಡೂ ಮೂತ್ರಪಿಂಡ ವಿಫಲವಾಗಿರುವ ಮಂದಿಯದು ತೀರಾ ನಾಜೂಕಿನ ಮತ್ತು ಅಷ್ಟೇ ಕ್ಲಿಷ್ಟಕರ ಬದುಕು. ಒಂಚೂರು ಹೆಚ್ಚು ಕಮ್ಮಿಯಾದರೂ ಜೀವಕ್ಕೇ ಕುತ್ತು. ಕೆಲವರಿಗಂತೂ ವಾರದಲ್ಲಿ 2-3 ಬಾರಿ ಡಯಾಲಿಸಿಸ್ ಅನಿವಾರ್ಯ. ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಇಂಥ ಸುಮಾರು 30-50 ಡಯಾಲಿಸಿಸ್ ರೋಗಿಗಳಿದ್ದಾರೆ. ಇವರಲ್ಲಿ ಬಹುತೇಕರು ಬಡ ಅಥವಾ ಕೆಳ ಮಧ್ಯಮವರ್ಗದ ಕುಟುಂಬದವರು; ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳುವಷ್ಟು ಚೈತನ್ಯ ಇಲ್ಲದವರು. ಇವರೆಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಮಾಡುವ ಸರ್ಕಾರಿ ಗುತ್ತಿಗೆ ಪಡೆದಿರುವ ಖಾಸಗಿ ಸಂಸ್ಥೆಗಳನ್ನು ಅವಲಂಬಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಆರೋಗ್ಯ ಮಂತ್ರಿಯಾಗಿದ್ದ ಯು.ಟಿ ಖಾದರ್‌ಗೆ ಡಯಾಲಿಸಿಸ್ ರೋಗಿಗಳ ಗೋಳು ಗೊತ್ತಾಗಿತ್ತು. ಅವರ ಐದು ವರ್ಷದ ಕಾಲಮಿತಿಯಲ್ಲಿ ರಾಜ್ಯದ ಎಲ್ಲ ತಾಲ್ಲೂಕುಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಸರ್ಕಾರವೇ ಡಯಾಲಿಸಿಸ್ ಕೇಂದ್ರ ನಡೆಸುವಂಥ ಯೋಜನೆ ಹಾಕಿಕೊಂಡಿದ್ದರು. ಖಾದರ್ ಈ ಯೋಜನೆ ಸಿದ್ಧಪಡಿಸುತ್ತಿದ್ದ ಸಮಯದಲ್ಲೇ ಅವರ ಬಳಿಯಿದ್ದ ಆರೋಗ್ಯ ಖಾತೆ ಹೋಗಿ, ಅವರು ಆಹಾರ ಸಚಿವರಾದರು. ಅವರ ನಂತರ ಬಂದ ರಮೇಶ್‌ಕುಮಾರ್ ಅವರಿಗೆ ಇದಕ್ಕಿಂತ ಖಾಸಗಿಯವರಿಗೆ ಡಯಾಲಿಸಿಸ್ ಯೋಜನೆಯ ಗುತ್ತಿಗೆ ನೀಡುವುದು ಅನುಕೂಲಕರ ಎಂದೆನಿಸಿರಬೇಕು. ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಕಡಿವಾಣ ಹಾಕಲು ಹೊರಟಿದ್ದ ಅವರು ಈ ಖಾಸಗಿ ಗುತ್ತಿಗೆಯಿಂದ ಆಗುವ ಅನಾಹುತಗಳ ಬಗ್ಗೆಯೇಕೋ ಗಮನಹರಿಸಲಿಲ್ಲ.

ರಾಜ್ಯದ 23 ತಾಲ್ಲೂಕುಗಳ 122 ತಾಲ್ಲೂಕು ಕೇಂದ್ರಗಳಲ್ಲಿ ಮೂತ್ರಪಿಂಡ ಕಾಯಿಲೆಯವರಿಗೆ ಡಯಾಲಿಸಿಸ್ ನಡೆಸುವ ಗುತ್ತಿಗೆ ಅನಿವಾಸಿ ಭಾರತೀಯ ಆರೋಗ್ಯ ಉದ್ಯಮಿ ಬಿ.ಆರ್.ಶೆಟ್ಟಿಯ ಕಂಪನಿಗೆ ರಮೇಶ್ ಕುಮಾರ್ ಕಾಲದಲ್ಲಿ ಸಲೀಸಾಗಿ ದಕ್ಕಿತ್ತು. ಪ್ರತಿ ರೋಗಿಗೆ ಒಂದೂವರೆ ಸಾವಿರ ರೂ.ನಂತೆ ಡಯಾಲಿಸಿಸ್ ನಡೆಸುವ ಗುತ್ತಿಗೆಯನ್ನು ಬಿ.ಆರ್.ಶೆಟ್ಟಿ ಕಂಪನಿ ಪಡೆದುಕೊಂಡಿದೆ. ಹಾಗೆ ನೋಡಿದರೆ ತಲಾ 500-600ರೂ ಖರ್ಚು ತಗಲುವ ಈ ಡಯಾಲಿಸಿಸ್ ದುಬಾರಿ ರೇಟಿಗೆ ಬಿ.ಆರ್.ಶೆಟ್ಟಿ ಕುದುರಿಸಿಕೊಂಡಿದ್ದಾರೆ.

ಯಡಿಯೂರಪ್ಪ ಸರ್ಕಾರದಲ್ಲಿ ಡಾ. ಸುಧಾಕರ್ ಆರೋಗ್ಯ ಮಂತ್ರಿಯಾಗುವ ತನಕ ಡಯಾಲಿಸಿಸ್ ಹೇಳುವಂಥ ತೊಂದರೆ ತೊಡಕಿಲ್ಲದೆ ನಡೆದುಕೊಂಡು ಹೋಗಿತ್ತು. ದುಬೈನಲ್ಲಿ ಬಿ.ಆರ್.ಶೆಟ್ಟರ ಉದ್ಯಮ ಸಾಮ್ರಾಜ್ಯ ಪತನವಾಗುತ್ತಿದ್ದಂತೆಯೇ ಇತ್ತ ಕರ್ನಾಟಕದಲ್ಲೂ ಆತನ ವ್ಯವಹಾರವೆಲ್ಲ ಎಡವಟ್ಟಾಗುತ್ತ ಹೋಯಿತು. ಮಂತ್ರಿ ಡಾ.ಸುಧಾಕರ್ ಮತ್ತವರ ಆರೋಗ್ಯ ಇಲಾಖೆಯ ಆಯಕಟ್ಟಿನ ಅಧಿಕಾರಿಗಳ ಮಧ್ಯೆ ಸಾಮರಸ್ಯ ಇಲ್ಲದಾಯಿತು. ಬಿಆರ್‌ಎಸ್ ಕಂಪನಿಯ ಡಯಾಲಿಸಿಸ್ ಕೇಂದ್ರಗಳಲ್ಲಿ ನಾನಾ ನಮೂನೆಯ ಅವ್ಯವಸ್ಥೆ-ಅವಾಂತರ ನಡೆಯತೊಡಗಿತು.

ರೋಗಿಗಳು ದಿಕ್ಕೆಟ್ಟು ಹೋದರು. ಸರ್ಕಾರದಿಂದ ಬರಬೇಕಾದ ಹಣ ಕಾಲ ಕಾಲಕ್ಕೆ ಪಾವತಿ ಆಗದಿರುವುದೇ ಅವ್ಯವಸ್ಥೆಗೆ ಕಾರಣವೆಂದು ಬಿಆರ್‌ಎಸ್‌ನವರು ಬಹಿರಂಗವಾಗೇ ದೂರಹತ್ತಿದರು; ಆರೋಗ್ಯ ಮಂತ್ರಿ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಅಸಹಕಾರದಿಂದಾಗಿ ಡಯಾಲಿಸಿಸ್ ಸೆಂಟರ್‌ಗಳನ್ನು ನಡೆಸಲು ಸಾಧ್ಯವಾಗದಂತಾಗಿದೆ ಎಂದು ಬಿಆರ್‌ಎಸ್ ಕಂಪನಿಯ ಕಾರ್ಯನಿರ್ವಾಹಕ ಹೇಳಿರುವ ಆಡಿಯೋ ಒಂದು ವೈರಲ್ ಆಯಿತು.

ಆರೋಗ್ಯ ಇಲಾಖೆ ಬಿಆರ್‌ಎಸ್ ಕಂಪನಿಯದೇ ತಪ್ಪೆನ್ನುತ್ತಿದೆ. ಬಿಆರ್‌ಎಸ್ ಕಂಪನಿ ಒಪ್ಪಂದ ಉಲ್ಲಂಘಿಸಿದೆ. ವಿದ್ಯುತ್ ಶಕ್ತಿ ಮತ್ತು ನೀರಿನ ಪೂರೈಕೆ ಬಿಆರ್‌ಎಸ್ ಕಂಪನಿಯೇ ಮಾಡಿಕೊಳ್ಳಬೇಕೆಂಬುದು ಒಪ್ಪಂದದ ಷರತ್ತು. ಆದರೆ ಬಿಆರ್‌ಎಸ್ ಕಂಪನಿಯವರು ಸರ್ಕಾರಿ ಆಸ್ಪತ್ರೆಗಳಲ್ಲಿನ ನೀರು ಮತ್ತು ವಿದ್ಯುತ್ ಬಳಸಿಕೊಂಡು ಅದರ ಖರ್ಚುವೆಚ್ಚ ಭರಿಸದೆ ಪಂಗನಾಮ ಹಾಕುತ್ತಿದ್ದಾರೆ. ಲೆಕ್ಕಪತ್ರ ಪರಿಶೀಲನೆಯಲ್ಲಿ ಇದು ಆಕ್ಷೇಪಕ್ಕೆ ಕಾರಣವಾಗಿದೆ. ಹೀಗಾಗಿ ಬಿಲ್ ತಡೆಹಿಡಿಯಲಾಗಿದೆ ಎಂಬುದು ಆರೋಗ್ಯ ಇಲಾಖೆಯ ಸಮಜಾಯಿಷಿ.

ಬಿಆರ್‌ಎಸ್ ಕಂಪನಿ ಹಾಗು ಆರೋಗ್ಯ ಇಲಾಖೆಯ ಮೇಲಾಟದಲ್ಲಿ ಬಲಿ ಪಶುವಾಗುತ್ತಿರುವುದು ಮಾತ್ರ ನಿಸ್ಸಹಾಯಕ-ನಿರ್ಗತಿಕ ಡಯಾಲಿಸಿಸ್ ರೋಗಿಗಳು! ಬಿಆರ್‌ಎಸ್‌ನ ಎಲ್ಲ 122 ಡಯಾಲಿಸಿಸ್ ಕೇಂದ್ರಗಳಲ್ಲಿ ಸರಿಯಾದ ಚಿಕಿತ್ಸೆ ಸಿಗದೆ ಪಾಪದ ಪೇಶೆಂಟ್‌ಗಳು ಒದ್ದಾಡುತ್ತಿದ್ದಾರೆ. ಡಯಾಲಿಸಿಸ್‌ಗೆ ಬೇಕಾದ ರಾಸಾಯನಿಕ ಔಷಧ ಡಯಲೈಸರ್ ಮುಂತಾದ ಸಲಕರಣೆ ಸೆಂಟರ್‌ಗಳಲ್ಲಿ ಇಲ್ಲದಾಗಿದೆ! ಡಯಾಲಿಸಿಸ್ ಮಾಡುವ ನರ್ಸ್, ಟೆಕ್ನಿಶಿಯನ್‌ಗಳಿಗೆ ಬೇಕಾದ ಕನಿಷ್ಟ ಕೈಗ್ಲೌಸುಗಳು, ಮಾಸ್ಕ್‌ಗಳಿಗೂ ತತ್ವಾರವಾಗಿದೆ.

ಕೆಲವು ತಾಲ್ಲೂಕಿನ ರೋಗಿಗಳು ಅಥವಾ ಅವರ ಸಂಬಂಧಿಕರು ತೀರಾ ಅಗತ್ಯವಾದ ಪರಿಕರ-ಔಷಧ-ರಾಸಾಯನಿಕ ತಂದುಕೊಟ್ಟು ಡಯಾಲಿಸಿಸ್ ಮಾಡಿಸಿಕೊಂಡು ಹೋಗುತ್ತಿದ್ದಾರೆ. ಸರಿಯಾಗಿ ಸಂಬಳ ಸಿಗದೆ ಸಿಬ್ಬಂದಿ ಒಬ್ಬೊಬ್ಬರಾಗಿ ಬಿಆರ್‌ಎಸ್ ಕಂಪನಿ ಬಿಟ್ಟು ಹೋಗುತ್ತಿರುವುದು, ರೋಗಿಗಳು ಮತ್ತವರ ಪರಿವಾರದವರನ್ನು ಚಿಂತೆಗೀಡುಮಾಡಿದೆ! ಸರ್ಕಾರದಿಂದ ಬರೋಬ್ಬರಿ 28 ಕೋಟಿ ಹಣ ಬರದಿರುವುದರಿಂದ ಡಯಾಲಿಸಿಸ್ ಸೆಂಟರ್‌ಗಳನ್ನು ನಡೆಸುವುದು ಸಾಧ್ಯವೇ ಇಲ್ಲವೆಂದು ಬಿಆರ್‌ಎಸ್ ಕಂಪನಿಯವರು ಹೇಳುತ್ತಿದ್ದಾರೆ. ಹಾಗಂತ ಸಂಬಂಧಿಸಿದ ಸಚಿವ ಅಧಿಕಾರಿಗಳಿಗೂ ಪತ್ರ ಬರೆದಿರುವುದಾಗಿ ಬಿಆರ್‌ಎಸ್ ಕಂಪನಿ ಹೇಳಿಯೂ ಆಗಿದೆ.

ಇದು ಪರ್ಸೆಂಟೇಜ್ ಪರಾಕ್ರಮದ ಅಡ್ಡ ಪರಿಣಾಮವೆಂಬ ಆರೋಪವೂ ಕೇಳಿ ಬರುತ್ತಿದೆ. ಈಗಲಾದರೂ ಆರೋಗ್ಯ ಮಂತ್ರಿ ಹಾಗು ಆ ಇಲಾಖೆಯ ಹಿರಿಯ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಇಲ್ಲದಿದ್ದರೆ ಡಯಾಲಿಸಿಸ್ ಪೇಶೆಂಟ್‌ಗಳು ಸಾಲು ಸಾಲಾಗಿ ಸಾಯುವುದು ಖಂಡಿತ! ಆರೋಗ್ಯ ಸೌಲಭ್ಯಗಳಿಲ್ಲದೆ ಜಿಲ್ಲಾ ಕೇಂದ್ರಗಳಲ್ಲಿ ಮೊದಲೇ ಹೈರಾಣಾಗಿರುವ ಡಯಾಲಿಸಿಸ್ ರೋಗಿಗಳು ದೂರದ ಖಾಸಗಿ ಆಸ್ಪತ್ರೆಗೆ ಹೋಗಿ ಡಯಾಲಿಸಿಸ್ ಮಾಡಿಸಿಕೊಳ್ಳುವುದು ತುಂಬ ಕಷ್ಟ. ಉದಾಹರಣೆಗೆ ಉತ್ತರಕನ್ನಡದ ರೋಗಿಗಳು ಉಡುಪಿ, ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ, ಪಣಜಿಗೆ ಹೋಗಬೇಕು. ಹೋಗಲಿಕ್ಕೆ ನಾಲ್ಕೈದು ತಾಸು ಬೇಕು; ಬರುವುದಕ್ಕೆ ಅಷ್ಟೇ ಸಮಯಬೇಕು. ಡಯಾಲಿಸಿಸ್‌ಗೆ 2-3 ಗಂಟೆ ಬೇಕಾಗುತ್ತದೆ. ಅಷ್ಟರಲ್ಲಿ ರೋಗಿ ಏದುಸಿರು ಬಿಡತೊಡಗುತ್ತಾನೆ/ಳೆ. ನಸೀಬ್ ಇದ್ದರಷ್ಟೇ ಬಚಾವ್!!

ತಕ್ಷಣಕ್ಕೆ ಮಂತ್ರಿ ಡಾ. ಸುಧಾಕರ್ ಬಿಆರ್‌ಎಸ್ ಕಂಪನಿಯನ್ನು ಹಳಿಗೆ ತರಲು ಗಂಭೀರ-ನಿಷ್ಠುರ ಪ್ರಯತ್ನ ಮಾಡಬೇಕಿದೆ; ಅದಾಗದಿದ್ದರೆ ಬಡ ರೋಗಿಗಳನ್ನು ಬದುಕಿಸಲು ಬದಲಿ ವ್ಯವಸ್ಥೆ ಮಾಡಬೇಕಿದೆ. ನಂತರ ನಿಧಾನಕ್ಕೆ ಪ್ರತಿ ತಾಲ್ಲೂಕಾಸ್ಪತ್ರೆಗಳಲ್ಲಿ ಸರಕಾರದ್ದೇ ಸ್ವತಂತ್ರ ಡಯಾಲಿಸಿಸ್ ಕೇಂದ್ರ ಸ್ಥಾಪಿಸಲು ಯೋಜನೆ ಹಾಕಿ ಕಾರ್ಯಗತಗೊಳಿಸಬೇಕಿದೆ.


ಇದನ್ನೂ ಓದಿ: ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...