Homeಕರೋನಾ ತಲ್ಲಣಗಂಡಾಂತರದಲ್ಲಿ ಡಯಾಲಿಸಿಸ್ ರೋಗಿಗಳು: ಆರೋಗ್ಯ ಮಂತ್ರಿ ಡಾ. ಸುಧಾಕರ್ ಸರಿ ಮಾಡಬಲ್ಲರಾ?

ಗಂಡಾಂತರದಲ್ಲಿ ಡಯಾಲಿಸಿಸ್ ರೋಗಿಗಳು: ಆರೋಗ್ಯ ಮಂತ್ರಿ ಡಾ. ಸುಧಾಕರ್ ಸರಿ ಮಾಡಬಲ್ಲರಾ?

- Advertisement -
- Advertisement -

ಕೊರೊನಾ ವೈರಾಣುಗಳ ರುದ್ರ ತಾಂಡವದ ಆರ್ಭಟದಲ್ಲಿ ಅದಕ್ಕಿಂತಲೂ ಗಂಡಾಂತರಕಾರಿಯಾದ ರೋಗಗಳಿಂದ ಆಗುತ್ತಿರುವ ಅನಾಹುತವನ್ನು ಆಳುವ ಸರ್ಕಾರ ಕಡೆಗಣಿಸಿ ಕೂತಿದೆಯಾ? ರಾಜ್ಯಾದ್ಯಂತ ಇರುವ ಸಾವಿರಾರು ಕಿಡ್ನಿವೈಫಲ್ಯದ ರೋಗಿಗಳು ಅನುಭವಿಸುತ್ತಿರುವ ಸಾವುಬದುಕಿನ ನಡುವಿನ ಸಂಕಟ ಇಂತಹ ಅನುಮಾನವನ್ನು ಹುಟ್ಟುಹಾಕಿದೆ!

ಎರಡೂ ಮೂತ್ರಪಿಂಡ ವಿಫಲವಾಗಿರುವ ಮಂದಿಯದು ತೀರಾ ನಾಜೂಕಿನ ಮತ್ತು ಅಷ್ಟೇ ಕ್ಲಿಷ್ಟಕರ ಬದುಕು. ಒಂಚೂರು ಹೆಚ್ಚು ಕಮ್ಮಿಯಾದರೂ ಜೀವಕ್ಕೇ ಕುತ್ತು. ಕೆಲವರಿಗಂತೂ ವಾರದಲ್ಲಿ 2-3 ಬಾರಿ ಡಯಾಲಿಸಿಸ್ ಅನಿವಾರ್ಯ. ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಇಂಥ ಸುಮಾರು 30-50 ಡಯಾಲಿಸಿಸ್ ರೋಗಿಗಳಿದ್ದಾರೆ. ಇವರಲ್ಲಿ ಬಹುತೇಕರು ಬಡ ಅಥವಾ ಕೆಳ ಮಧ್ಯಮವರ್ಗದ ಕುಟುಂಬದವರು; ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳುವಷ್ಟು ಚೈತನ್ಯ ಇಲ್ಲದವರು. ಇವರೆಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಮಾಡುವ ಸರ್ಕಾರಿ ಗುತ್ತಿಗೆ ಪಡೆದಿರುವ ಖಾಸಗಿ ಸಂಸ್ಥೆಗಳನ್ನು ಅವಲಂಬಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಆರೋಗ್ಯ ಮಂತ್ರಿಯಾಗಿದ್ದ ಯು.ಟಿ ಖಾದರ್‌ಗೆ ಡಯಾಲಿಸಿಸ್ ರೋಗಿಗಳ ಗೋಳು ಗೊತ್ತಾಗಿತ್ತು. ಅವರ ಐದು ವರ್ಷದ ಕಾಲಮಿತಿಯಲ್ಲಿ ರಾಜ್ಯದ ಎಲ್ಲ ತಾಲ್ಲೂಕುಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಸರ್ಕಾರವೇ ಡಯಾಲಿಸಿಸ್ ಕೇಂದ್ರ ನಡೆಸುವಂಥ ಯೋಜನೆ ಹಾಕಿಕೊಂಡಿದ್ದರು. ಖಾದರ್ ಈ ಯೋಜನೆ ಸಿದ್ಧಪಡಿಸುತ್ತಿದ್ದ ಸಮಯದಲ್ಲೇ ಅವರ ಬಳಿಯಿದ್ದ ಆರೋಗ್ಯ ಖಾತೆ ಹೋಗಿ, ಅವರು ಆಹಾರ ಸಚಿವರಾದರು. ಅವರ ನಂತರ ಬಂದ ರಮೇಶ್‌ಕುಮಾರ್ ಅವರಿಗೆ ಇದಕ್ಕಿಂತ ಖಾಸಗಿಯವರಿಗೆ ಡಯಾಲಿಸಿಸ್ ಯೋಜನೆಯ ಗುತ್ತಿಗೆ ನೀಡುವುದು ಅನುಕೂಲಕರ ಎಂದೆನಿಸಿರಬೇಕು. ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಕಡಿವಾಣ ಹಾಕಲು ಹೊರಟಿದ್ದ ಅವರು ಈ ಖಾಸಗಿ ಗುತ್ತಿಗೆಯಿಂದ ಆಗುವ ಅನಾಹುತಗಳ ಬಗ್ಗೆಯೇಕೋ ಗಮನಹರಿಸಲಿಲ್ಲ.

ರಾಜ್ಯದ 23 ತಾಲ್ಲೂಕುಗಳ 122 ತಾಲ್ಲೂಕು ಕೇಂದ್ರಗಳಲ್ಲಿ ಮೂತ್ರಪಿಂಡ ಕಾಯಿಲೆಯವರಿಗೆ ಡಯಾಲಿಸಿಸ್ ನಡೆಸುವ ಗುತ್ತಿಗೆ ಅನಿವಾಸಿ ಭಾರತೀಯ ಆರೋಗ್ಯ ಉದ್ಯಮಿ ಬಿ.ಆರ್.ಶೆಟ್ಟಿಯ ಕಂಪನಿಗೆ ರಮೇಶ್ ಕುಮಾರ್ ಕಾಲದಲ್ಲಿ ಸಲೀಸಾಗಿ ದಕ್ಕಿತ್ತು. ಪ್ರತಿ ರೋಗಿಗೆ ಒಂದೂವರೆ ಸಾವಿರ ರೂ.ನಂತೆ ಡಯಾಲಿಸಿಸ್ ನಡೆಸುವ ಗುತ್ತಿಗೆಯನ್ನು ಬಿ.ಆರ್.ಶೆಟ್ಟಿ ಕಂಪನಿ ಪಡೆದುಕೊಂಡಿದೆ. ಹಾಗೆ ನೋಡಿದರೆ ತಲಾ 500-600ರೂ ಖರ್ಚು ತಗಲುವ ಈ ಡಯಾಲಿಸಿಸ್ ದುಬಾರಿ ರೇಟಿಗೆ ಬಿ.ಆರ್.ಶೆಟ್ಟಿ ಕುದುರಿಸಿಕೊಂಡಿದ್ದಾರೆ.

ಯಡಿಯೂರಪ್ಪ ಸರ್ಕಾರದಲ್ಲಿ ಡಾ. ಸುಧಾಕರ್ ಆರೋಗ್ಯ ಮಂತ್ರಿಯಾಗುವ ತನಕ ಡಯಾಲಿಸಿಸ್ ಹೇಳುವಂಥ ತೊಂದರೆ ತೊಡಕಿಲ್ಲದೆ ನಡೆದುಕೊಂಡು ಹೋಗಿತ್ತು. ದುಬೈನಲ್ಲಿ ಬಿ.ಆರ್.ಶೆಟ್ಟರ ಉದ್ಯಮ ಸಾಮ್ರಾಜ್ಯ ಪತನವಾಗುತ್ತಿದ್ದಂತೆಯೇ ಇತ್ತ ಕರ್ನಾಟಕದಲ್ಲೂ ಆತನ ವ್ಯವಹಾರವೆಲ್ಲ ಎಡವಟ್ಟಾಗುತ್ತ ಹೋಯಿತು. ಮಂತ್ರಿ ಡಾ.ಸುಧಾಕರ್ ಮತ್ತವರ ಆರೋಗ್ಯ ಇಲಾಖೆಯ ಆಯಕಟ್ಟಿನ ಅಧಿಕಾರಿಗಳ ಮಧ್ಯೆ ಸಾಮರಸ್ಯ ಇಲ್ಲದಾಯಿತು. ಬಿಆರ್‌ಎಸ್ ಕಂಪನಿಯ ಡಯಾಲಿಸಿಸ್ ಕೇಂದ್ರಗಳಲ್ಲಿ ನಾನಾ ನಮೂನೆಯ ಅವ್ಯವಸ್ಥೆ-ಅವಾಂತರ ನಡೆಯತೊಡಗಿತು.

ರೋಗಿಗಳು ದಿಕ್ಕೆಟ್ಟು ಹೋದರು. ಸರ್ಕಾರದಿಂದ ಬರಬೇಕಾದ ಹಣ ಕಾಲ ಕಾಲಕ್ಕೆ ಪಾವತಿ ಆಗದಿರುವುದೇ ಅವ್ಯವಸ್ಥೆಗೆ ಕಾರಣವೆಂದು ಬಿಆರ್‌ಎಸ್‌ನವರು ಬಹಿರಂಗವಾಗೇ ದೂರಹತ್ತಿದರು; ಆರೋಗ್ಯ ಮಂತ್ರಿ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಅಸಹಕಾರದಿಂದಾಗಿ ಡಯಾಲಿಸಿಸ್ ಸೆಂಟರ್‌ಗಳನ್ನು ನಡೆಸಲು ಸಾಧ್ಯವಾಗದಂತಾಗಿದೆ ಎಂದು ಬಿಆರ್‌ಎಸ್ ಕಂಪನಿಯ ಕಾರ್ಯನಿರ್ವಾಹಕ ಹೇಳಿರುವ ಆಡಿಯೋ ಒಂದು ವೈರಲ್ ಆಯಿತು.

ಆರೋಗ್ಯ ಇಲಾಖೆ ಬಿಆರ್‌ಎಸ್ ಕಂಪನಿಯದೇ ತಪ್ಪೆನ್ನುತ್ತಿದೆ. ಬಿಆರ್‌ಎಸ್ ಕಂಪನಿ ಒಪ್ಪಂದ ಉಲ್ಲಂಘಿಸಿದೆ. ವಿದ್ಯುತ್ ಶಕ್ತಿ ಮತ್ತು ನೀರಿನ ಪೂರೈಕೆ ಬಿಆರ್‌ಎಸ್ ಕಂಪನಿಯೇ ಮಾಡಿಕೊಳ್ಳಬೇಕೆಂಬುದು ಒಪ್ಪಂದದ ಷರತ್ತು. ಆದರೆ ಬಿಆರ್‌ಎಸ್ ಕಂಪನಿಯವರು ಸರ್ಕಾರಿ ಆಸ್ಪತ್ರೆಗಳಲ್ಲಿನ ನೀರು ಮತ್ತು ವಿದ್ಯುತ್ ಬಳಸಿಕೊಂಡು ಅದರ ಖರ್ಚುವೆಚ್ಚ ಭರಿಸದೆ ಪಂಗನಾಮ ಹಾಕುತ್ತಿದ್ದಾರೆ. ಲೆಕ್ಕಪತ್ರ ಪರಿಶೀಲನೆಯಲ್ಲಿ ಇದು ಆಕ್ಷೇಪಕ್ಕೆ ಕಾರಣವಾಗಿದೆ. ಹೀಗಾಗಿ ಬಿಲ್ ತಡೆಹಿಡಿಯಲಾಗಿದೆ ಎಂಬುದು ಆರೋಗ್ಯ ಇಲಾಖೆಯ ಸಮಜಾಯಿಷಿ.

ಬಿಆರ್‌ಎಸ್ ಕಂಪನಿ ಹಾಗು ಆರೋಗ್ಯ ಇಲಾಖೆಯ ಮೇಲಾಟದಲ್ಲಿ ಬಲಿ ಪಶುವಾಗುತ್ತಿರುವುದು ಮಾತ್ರ ನಿಸ್ಸಹಾಯಕ-ನಿರ್ಗತಿಕ ಡಯಾಲಿಸಿಸ್ ರೋಗಿಗಳು! ಬಿಆರ್‌ಎಸ್‌ನ ಎಲ್ಲ 122 ಡಯಾಲಿಸಿಸ್ ಕೇಂದ್ರಗಳಲ್ಲಿ ಸರಿಯಾದ ಚಿಕಿತ್ಸೆ ಸಿಗದೆ ಪಾಪದ ಪೇಶೆಂಟ್‌ಗಳು ಒದ್ದಾಡುತ್ತಿದ್ದಾರೆ. ಡಯಾಲಿಸಿಸ್‌ಗೆ ಬೇಕಾದ ರಾಸಾಯನಿಕ ಔಷಧ ಡಯಲೈಸರ್ ಮುಂತಾದ ಸಲಕರಣೆ ಸೆಂಟರ್‌ಗಳಲ್ಲಿ ಇಲ್ಲದಾಗಿದೆ! ಡಯಾಲಿಸಿಸ್ ಮಾಡುವ ನರ್ಸ್, ಟೆಕ್ನಿಶಿಯನ್‌ಗಳಿಗೆ ಬೇಕಾದ ಕನಿಷ್ಟ ಕೈಗ್ಲೌಸುಗಳು, ಮಾಸ್ಕ್‌ಗಳಿಗೂ ತತ್ವಾರವಾಗಿದೆ.

ಕೆಲವು ತಾಲ್ಲೂಕಿನ ರೋಗಿಗಳು ಅಥವಾ ಅವರ ಸಂಬಂಧಿಕರು ತೀರಾ ಅಗತ್ಯವಾದ ಪರಿಕರ-ಔಷಧ-ರಾಸಾಯನಿಕ ತಂದುಕೊಟ್ಟು ಡಯಾಲಿಸಿಸ್ ಮಾಡಿಸಿಕೊಂಡು ಹೋಗುತ್ತಿದ್ದಾರೆ. ಸರಿಯಾಗಿ ಸಂಬಳ ಸಿಗದೆ ಸಿಬ್ಬಂದಿ ಒಬ್ಬೊಬ್ಬರಾಗಿ ಬಿಆರ್‌ಎಸ್ ಕಂಪನಿ ಬಿಟ್ಟು ಹೋಗುತ್ತಿರುವುದು, ರೋಗಿಗಳು ಮತ್ತವರ ಪರಿವಾರದವರನ್ನು ಚಿಂತೆಗೀಡುಮಾಡಿದೆ! ಸರ್ಕಾರದಿಂದ ಬರೋಬ್ಬರಿ 28 ಕೋಟಿ ಹಣ ಬರದಿರುವುದರಿಂದ ಡಯಾಲಿಸಿಸ್ ಸೆಂಟರ್‌ಗಳನ್ನು ನಡೆಸುವುದು ಸಾಧ್ಯವೇ ಇಲ್ಲವೆಂದು ಬಿಆರ್‌ಎಸ್ ಕಂಪನಿಯವರು ಹೇಳುತ್ತಿದ್ದಾರೆ. ಹಾಗಂತ ಸಂಬಂಧಿಸಿದ ಸಚಿವ ಅಧಿಕಾರಿಗಳಿಗೂ ಪತ್ರ ಬರೆದಿರುವುದಾಗಿ ಬಿಆರ್‌ಎಸ್ ಕಂಪನಿ ಹೇಳಿಯೂ ಆಗಿದೆ.

ಇದು ಪರ್ಸೆಂಟೇಜ್ ಪರಾಕ್ರಮದ ಅಡ್ಡ ಪರಿಣಾಮವೆಂಬ ಆರೋಪವೂ ಕೇಳಿ ಬರುತ್ತಿದೆ. ಈಗಲಾದರೂ ಆರೋಗ್ಯ ಮಂತ್ರಿ ಹಾಗು ಆ ಇಲಾಖೆಯ ಹಿರಿಯ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಇಲ್ಲದಿದ್ದರೆ ಡಯಾಲಿಸಿಸ್ ಪೇಶೆಂಟ್‌ಗಳು ಸಾಲು ಸಾಲಾಗಿ ಸಾಯುವುದು ಖಂಡಿತ! ಆರೋಗ್ಯ ಸೌಲಭ್ಯಗಳಿಲ್ಲದೆ ಜಿಲ್ಲಾ ಕೇಂದ್ರಗಳಲ್ಲಿ ಮೊದಲೇ ಹೈರಾಣಾಗಿರುವ ಡಯಾಲಿಸಿಸ್ ರೋಗಿಗಳು ದೂರದ ಖಾಸಗಿ ಆಸ್ಪತ್ರೆಗೆ ಹೋಗಿ ಡಯಾಲಿಸಿಸ್ ಮಾಡಿಸಿಕೊಳ್ಳುವುದು ತುಂಬ ಕಷ್ಟ. ಉದಾಹರಣೆಗೆ ಉತ್ತರಕನ್ನಡದ ರೋಗಿಗಳು ಉಡುಪಿ, ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ, ಪಣಜಿಗೆ ಹೋಗಬೇಕು. ಹೋಗಲಿಕ್ಕೆ ನಾಲ್ಕೈದು ತಾಸು ಬೇಕು; ಬರುವುದಕ್ಕೆ ಅಷ್ಟೇ ಸಮಯಬೇಕು. ಡಯಾಲಿಸಿಸ್‌ಗೆ 2-3 ಗಂಟೆ ಬೇಕಾಗುತ್ತದೆ. ಅಷ್ಟರಲ್ಲಿ ರೋಗಿ ಏದುಸಿರು ಬಿಡತೊಡಗುತ್ತಾನೆ/ಳೆ. ನಸೀಬ್ ಇದ್ದರಷ್ಟೇ ಬಚಾವ್!!

ತಕ್ಷಣಕ್ಕೆ ಮಂತ್ರಿ ಡಾ. ಸುಧಾಕರ್ ಬಿಆರ್‌ಎಸ್ ಕಂಪನಿಯನ್ನು ಹಳಿಗೆ ತರಲು ಗಂಭೀರ-ನಿಷ್ಠುರ ಪ್ರಯತ್ನ ಮಾಡಬೇಕಿದೆ; ಅದಾಗದಿದ್ದರೆ ಬಡ ರೋಗಿಗಳನ್ನು ಬದುಕಿಸಲು ಬದಲಿ ವ್ಯವಸ್ಥೆ ಮಾಡಬೇಕಿದೆ. ನಂತರ ನಿಧಾನಕ್ಕೆ ಪ್ರತಿ ತಾಲ್ಲೂಕಾಸ್ಪತ್ರೆಗಳಲ್ಲಿ ಸರಕಾರದ್ದೇ ಸ್ವತಂತ್ರ ಡಯಾಲಿಸಿಸ್ ಕೇಂದ್ರ ಸ್ಥಾಪಿಸಲು ಯೋಜನೆ ಹಾಕಿ ಕಾರ್ಯಗತಗೊಳಿಸಬೇಕಿದೆ.


ಇದನ್ನೂ ಓದಿ: ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...