Homeಅಂಕಣಗಳುನೀವು ತಿಳಿದುಕೊಳ್ಳಲೇಬೇಕಾದ ಡಿಸ್‍ಫೋರಿಯಾ

ನೀವು ತಿಳಿದುಕೊಳ್ಳಲೇಬೇಕಾದ ಡಿಸ್‍ಫೋರಿಯಾ

- Advertisement -
- Advertisement -

ಡಾ.ಕಾರ್ತಿಕ್ ಬಿಟ್ಟು, ಪ್ರಾಧ್ಯಾಪಕರು, ಅಶೋಕ ವಿಶ್ವವಿದ್ಯಾಲಯ, ಹರಿಯಾಣ
ಅನು: ರಾಜಶೇಖರ್ ಅಕ್ಕಿ

ಡಿಸ್‍ಫೋರಿಯಾ ಅಂದರೆ ಒಬ್ಬ ವ್ಯಕ್ತಿಗೆ ತನಗೆ ಹುಟ್ಟಿನಿಂದ ಆರೋಪಿಸಲಾದ ಜೆಂಡರ್‍ನೊಂದಿಗಿರುವ ಅಸಂತುಷ್ಟತೆ ಮತ್ತು ಬೇರ್ಪಡಿಕೆ. ಡಿಸ್‍ಫೋರಿಯಾ ಅನೇಕ ಸ್ವರೂಪಗಳನ್ನು ಪಡೆದುಕೊಳ್ಳಬಹುದು. ಒಬ್ಬ ಟ್ರಾನ್ಸ್‍ಜೆಂಡರ್ ವ್ಯಕ್ತಿಯ ಜೀವನಾನುಭವವನ್ನು ರೂಪಿಸುವುದೇ ಈ ಡಿಸ್‍ಫೋರಿಯಾ. ಆದರೆ ನಮ್ಮ ಸಮಾಜ ಆ ಅಸಂತುಷ್ಟತೆಯನ್ನು ಹೋಗಲಾಡಿಸುವಲ್ಲಿ ಸಹಾಯಕ ಪಾತ್ರ ವಹಿಸಲು ಸಾಧ್ಯ. ಆದರೆ ಅದರ ಬದಲಿಗೆ ಅವರ ಅಸಂತುಷ್ಟತೆಯನ್ನು ಉಲ್ಬಣಗೊಳಿಸುವುದೇ ಹೆಚ್ಚು. ಟ್ರಾನ್ಸ್‍ಜೆಂಡರ್ ಸಮುದಾಯಕ್ಕೆ ಹೆಚ್ಚಿನ ಸಮಸ್ಯೆಗಳನ್ನು ಸೃಷ್ಟಿಸದೇ, ಅವರ ಜೀವನವನ್ನು ನರಕಯಾತನೆಯನ್ನಾಗಿಸಿದ್ದೇ ನಮ್ಮ ಸಮಾಜ ಅವರಿಗೆ ಪೂರಕವಾಗಿ, ಅವರ ಸಂತುಷ್ಟಿಗೆ ನೆಲೆ ಹೇಗೆ ಆಗಬಲ್ಲದು ಎನ್ನುವುದನ್ನು ನಾವೆಲ್ಲರೂ ಸೇರಿ ಯೋಚಿಸಬೇಕಿದೆ. ಹಾಗಾದರೆ, ಟ್ರಾನ್ಸ್‍ಜೆಂಡರ್ ವ್ಯಕ್ತಿಗಳಿಗೆ ಪೂರಕವಾಗಬಲ್ಲ ವಾತಾವರಣವನ್ನು ಸೃಷ್ಟಿಸಲು ನಾವೇನು ಮಾಡಬಹುದು?
ಪ್ರತಿಯೊಬ್ಬರೂ ಮಾಡಬಲ್ಲ ಒಂದು ಸರಳ ವಿಷಯವೇನೆಂದರೆ, ಆ ವ್ಯಕ್ತಿಗಳು ಯಾವ ಜೆಂಡರ್‍ನೊಂದಿಗೆ ತಮ್ಮನ್ನು ತಾವು ಗುರುತಿಸಿಕೊಳ್ಳುತ್ತಾರೆ ಎಂದು ಕೇಳುವುದು ಹಾಗೂ ಅವರು ಗುರುತಿಸಿಕೊಳ್ಳುವ ಜೆಂಡರ್‍ಗೆ ಗೌರವ ನೀಡಿ ಅವರೊಂದಿಗೆ ವ್ಯವಹರಿಸುವುದು. ಒಬ್ಬ ಟ್ರಾನ್ಸ್‍ಜೆಂಡರ್ ವ್ಯಕ್ತಿಗೆ ಪೂರಕವಾಗುವಂತಹ/ ಸ್ನೇಹಿಯಾಗುವಂತಹ ಜಗತ್ತನ್ನು ಸೃಷ್ಟಿಸಲು ಇಷ್ಟು ಮಾಡಿದರೂ ಸಾಕು.
ಒಬ್ಬ ಟ್ರಾನ್ಸ್ ವ್ಯಕ್ತಿ ಡಿಸ್‍ಫೋರಿಯಾದ ಭಾವನೆಯಿಂದ ಬಳಲುತ್ತಿರುವುದನ್ನು ನೆನಪಿಟ್ಟುಕೊಳ್ಳಬೇಕು. ನಮ್ಮ ಸಂಭಾಷಣೆಗಳಲ್ಲಿ ಅವರನ್ನು ಉದ್ದೇಶಿಸುವುದಕ್ಕಿಂತ ಮುಂಚೆ ಒಬ್ಬ ವ್ಯಕ್ತಿಯ ದೇಹದ ಆಧಾರದ ಮೇಲೆ ಇರುವ ಸಾಮಾಜಿಕ ಅವಧಾರಣೆಯನ್ನು ಗಮನದಲ್ಲಿಟ್ಟುಕೊಂಡು, ಅದನ್ನು ಕಡಿಮೆ ಮಾಡುವ ಒಂದು ಸಮಾಜವನ್ನು ಸೃಷ್ಟಿಸಬೇಕಿದೆ. ಅವರು ತಮ್ಮ ದೇಹದೊಂದಿಗೆ ಸಾಮರಸ್ಯ ಸ್ಥಾಪಿಸಲು ಯಾವುದೇ ವೈದ್ಯಕೀಯ ನೆರವು ಬೇಕಿದ್ದಲ್ಲಿ ಅದಕ್ಕೆ ಬೆಂಬಲವಾಗಿ ನಿಲ್ಲಬೇಕಿದೆ.
ಇದನ್ನು ಎಲ್ಲರಿಗಿಂತ ಮೊದಲು ಮಾಡಬೇಕಾದವರು ಆ ವ್ಯಕ್ತಿಯ ಪೋಷಕರು. ಆದರೆ ಪೋಷಕರಿಗೆ ತಮ್ಮ ಮಗುವಿಗೆ ಏನು ಒಳ್ಳೆಯದು ಎನ್ನುವುದರ ಬಗ್ಗೆ ಬಲವಾದ, ಸಮಸ್ಯಾತ್ಮಕ ಭಾವನೆಗಳನ್ನು ಹೊಂದಿರುತ್ತಾರೆ. ಇದುವೆ ಹೆಚ್ಚಿನ ಟ್ರಾನ್ಸ್‍ಜೆಂಡರ್ ಮಕ್ಕಳು ಅನುಭವಿಸುವ ಮೊದಲ ನೋವು. ಮಕ್ಕಳು ತಮ್ಮ ಜೆಂಡರ್ ಅನ್ನು ಯಾವುದೇ ರೀತಿಯಲ್ಲಿ ವ್ಯಕ್ತಪಡಿಸಿದರೂ ತಂದೆತಾಯಿಗಳು ಅದನ್ನು ಅರ್ಥ ಮಾಡಿಕೊಳ್ಳುವುದಿಲ್ಲ ಹಾಗೂ ಜೆಂಡರ್ ಬಗ್ಗೆಯ ಮಕ್ಕಳ ಭಾವನೆಗಳನ್ನು ಗೌರವಿಸುವುದಿಲ್ಲ. ಒಂದು ವೇಳೆ ಹಾಗೆ ಮಾಡಿದರೂ, ತಮ್ಮ ಮಗು ತನ್ನ ದೇಹ ಬೇರೆಯಾಗಿರಬೇಕಾಗಿತ್ತು ಎಂದು ಹೇಳಿದಾಗ ನಕ್ಕುಬಿಡುವ ಪೋಷಕರೇ ಹಚ್ಚು. ಇದಕ್ಕೆ ಕಾರಣ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳೆಂದರೆ ಏನು ಎನ್ನುವುದರ ಬಗ್ಗೆ ಯಾವುದೇ ಅರಿವು ಇಲ್ಲದಿರುವುದು. ಆ ಕಾರಣಕ್ಕಾಗಿಯೇ ನಾನಿದನ್ನು ಬರೆಯುತ್ತಿದ್ದೇನೆ, ಇದನ್ನು ಓದಿ, ಒಬ್ಬ ಟ್ರಾನ್ಸ್‍ಜೆಂಡರ್ ಮಗುವನ್ನು ಬೆಳೆಸುವುದು ಹೇಗೆ, ಎನ್ನುವುದರ ಬಗ್ಗೆ ಪರಸ್ಪರ ಚರ್ಚಿಸಿ, ಟ್ರಾನ್ಸ್‍ಜೆಂಡರ್ ಮಕ್ಕಳಿಗೆ ಅನುಕೂಲವಾಗುವಂತಹ ಸಮಾಜವನ್ನು ನಿರ್ಮಿಸುವಲ್ಲಿ ಸಹಕಾರಿಯಾಗಬಲ್ಲಿರಿ ಎನ್ನುವುದು ನನ್ನ ಅಪೇಕ್ಷೆ.
ಇಂಟರ್‍ಸೆಕ್ಸ್ ಆಗಿರುವುದು ಹಾಗೂ ಟ್ರಾನ್ಸ್‍ಜೆಂಡರ್ ಆಗಿರುವುದು, ಇವರೆಡರ ಮಧ್ಯೆ ಇರುವ ಸಾಮಾಜಿಕ ಗೊಂದಲದಿಂದಲೇ ಮೊಟ್ಟಮೊದಲ ಅರಿವಿನ ಕೊರತೆ ಬರುವುದು. ಒಂದು ವೇಳೆ ಮಗುವಿನ ದೇಹ ಗಂಡು ಅಥವಾ ಹೆಣ್ಣಿನಂತಿದ್ದು ಅದರಲ್ಲಿ ಯಾವುದೇ ಗೊಂದಲಗಳಿಲ್ಲದಿದ್ದರೆ, ಆ ಮಗುವಿನ ಪೋಷಕರು ಮಗುವಿನ ಜೆಂಡರ್ ತಮಗೆ ಸ್ಪಷ್ಟವಾಗಿ ಗೊತ್ತು ಎಂದು ತಿಳಿದುಕೊಂಡಿರುತ್ತಾರೆ. ಆ ಮಗುವಿಗೆ ನೀಡಿದ ಜೆಂಡರ್‍ನೊಂದಿಗೆ ಸಂಬಂಧಿಸಿದ ನಿರ್ಬಂಧಗಳನ್ನು ಹೇರುವುದರಲ್ಲಿ ಯಾವುದೇ ಹಿಂಜರಿಕೆಯನ್ನು ತೋರುವುದಿಲ್ಲ, ಅದೂ ತುಂಬಾ ಚಿಕ್ಕ ವಯಸ್ಸಿನಿಂದಲೇ. ಒಬ್ಬ ಮಗುವಿಗೆ ಆ ಜೆಂಡರ್‍ಗೆ ಸಂಬಂಧಿಸಿದ ಅತ್ಯಂತ ಸಂಕುಚಿತವಾದ ನಿರ್ಬಂಧನೆಗಳನ್ನು ಮೀರಿ ಹಲವಾರು ಆಸಕ್ತಿ ಮತ್ತು ವರ್ತನೆಗಳನ್ನು ಹೊಂದಿದ್ದರೆ, ಆ ಮಗುವಿನ ಮೇಲೆ ಹಾಕುವ ನಿರ್ಬಂಧನೆಗಳು ಮಾನಸಿಕ ಹಿಂಸೆಯ ಒಂದು ಸ್ವರೂಪವಾಗಿಬಿಡುತ್ತವೆ. ತಮ್ಮ ಸುತ್ತಮುತ್ತಲಿನ ಚಟುವಟಿಕೆಗಳಿಗಾಗಿ ಸಹಜವಾಗಿಯೇ ಮಕ್ಕಳು ಒಂದು ಸುಂದರವಾದ ಕುತೂಹಲ ಹೊಂದಿರುತ್ತಾರೆ ಆದರೆ ಪೋಷಕರು ಸಿನೆಮಾ ಹೀರೋಯಿನ್ ತರಹ ಡಾನ್ಸ್ ಮಾಡಲು ಇಚ್ಛಿಸುವ, ಮೇಕ್-ಅಪ್ ಜೊತೆಗೆ ಆಟವಾಡಲು ಇಚ್ಛಿಸುವ ಗಂಡುಮಕ್ಕಳನ್ನು ಹದ್ದುಬಸ್ತಿನಲ್ಲಿಡಲು ಪ್ರಯತ್ನಿಸುತ್ತಾರೆ, ಹೀಗೆ ಮಾಡುವುದರಿಂದ ಆ ಮಕ್ಕಳನ್ನು ಪೋಷಕರು ಕುಂಠಿತಗೊಳಿಸುತ್ತಾರೆ – ಆ ಮಕ್ಕಳು ಟ್ರಾನ್ಸ್‍ಜೆಂಡರ್ ಆಗದಿದ್ದರೂ ಅವರ ಮೇಲೆ ಪರಿಣಾಮ ಅದೇ ಆಗುವುದು.
ಹೆಚ್ಚಿನ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳ ಕಥಾನಕಗಳು ಇದರ ಬಗ್ಗೆಯೇ ಆಗಿರುತ್ತವೆ; ಅವರು ಆಡಬಯಸುವ ಆಟಗಳು, ಅಂತಹ ಆಟವನ್ನಾಡಲು ಬಿಡದ ಪೋಷಕರು ಇತ್ಯಾದಿ. ಆದರೆ ಇದು ಟ್ರಾನ್ಸ್‍ಜೆಂಡರ್ ಆಗಿರುವುದರ ಸಾಮಾಜಿಕ ಆಯಾಮಕ್ಕೆ ಮಾತ್ರ ಸಂಬಂಧಿಸಿದ್ದಾಗಿದೆ. ಡಿಸ್‍ಫೋರಿಯಾವನ್ನು ತಿಳಿದುಕೊಳ್ಳುವಾಗ ಅದಕ್ಕೆ ಸಾಮಾಜಿಕ ಮತ್ತು ದೈಹಿಕ ಅಂಶಗಳು ಎರಡೂ ಇರುತ್ತವೆ ಎನ್ನುವುದನ್ನು ತಿಳಿದುಕೊಳ್ಳಬೇಕಿದೆ, ಹಾಗೂ ಈ ಎರಡೂ ಅಂಶಗಳು ಆ ವ್ಯಕ್ತಿಯ ಮಿದುಳಿನಿಂದ ಕಾರ್ಯನಿರ್ವಹಿಸಿ ವ್ಯಕ್ತಿಯ ವರ್ತನೆಯ ಮೇಲೆ ಪರಿಣಾಮ ಬೀರುತ್ತವೆ. ಇಲ್ಲಿ ನಾವು ಅರ್ಥ ಮಾಡಿಕೊಳ್ಳಬೇಕಾದ ಸಂಗತಿಯೊಂದಿದೆ. ಸಮಾಜವು ಮಿದುಳಿನ ರಚನೆಯಲ್ಲಿ ಬದಲಾವಣೆ ತಂದು ವ್ಯಕ್ತಿಗಳ ವರ್ತನೆಯ ಮೇಲೂ ಪರಿಣಾಮ ಬೀರುತ್ತದೆ.
ಕೆಲವು ಮಕ್ಕಳು ತಮಗೆ ನೀಡಿದ ಜೆಂಡರ್‍ನಿಂದ ಅಪೇಕ್ಷಿಸಲಾಗುವ ವರ್ತನೆಗಳಿಗಿಂತ ಭಿನ್ನವಾಗಿ ವರ್ತಿಸದೇ ಇರಬಹುದು. ಹಾಗಿದ್ದರೂ ತಮ್ಮ ದೇಹದೊಂದಿಗೆ ಆಳವಾದ ಅಸಹನೆ, ಅಸಂತುಷ್ಟಿಯನ್ನಿಟ್ಟುಕೊಂಡು ಬೆಳೆಯಬಹುದಾಗಿದೆ. ನಾವು ಮೊದಲು ಚರ್ಚಿಸಿದಂತೆ, ಜೆಂಡರ್‍ನ ವಿಷಯದಲ್ಲಿ ತಮ್ಮ ದೈಹಿಕ ಬೆಳವಣಿಗೆಗೆ ಅನುಗುಣವಾಗದೇ, ಬೇರೆ ರೀತಿಯಲ್ಲಿ ಮಿದುಳಿನ ಬೆಳವಣಿಗೆ ಆಗುವ ಮಕ್ಕಳನ್ನು ಟ್ರಾನ್ಸ್‍ಜೆಂಡರ್ ಅನ್ನಬಹುದು.
ಒಬ್ಬ ಟ್ರಾನ್ಸ್‍ಜೆಂಡರ್ ಮಗು ತನ್ನ ವಯಸ್ಕ ಜೀವನಕ್ಕೆ ಹೋಗುವಾಗ, ಯಾವ್ಯಾವ ಅನುಭವಗಳಿಂದ ಹಾದುಹೋಗಬೇಕಾಗುತ್ತದೆ ಎಂದು ತಿಳಿಯಲು ನಾವು ಈ ಡಿಸ್‍ಫೋರಿಯಾ ಅನ್ನು ಇನ್ನಷ್ಟೂ ಕೂಲಂಕಷವಾಗಿ ತಿಳಿದುಕೊಳ್ಳೋಣ. ಹರೆಯಕ್ಕೆ ಪ್ರವೇಶಿಸುವ ಸಮಯದಲ್ಲಂತೂ ಈ ಡಿಸ್‍ಫೋರಿಯಾ ಅತ್ಯಂತ ಕೆಟ್ಟಹಂತದಲ್ಲಿರುತ್ತದೆ. ಪ್ರೌಢಾವಸ್ಥೆ (ಪ್ಯೂಬರ್ಟಿ) ಹಂತಕ್ಕೆ ತಲುಪುವ ತನಕ ಭಾರತೀಯ ಸಂಸ್ಕøತಿಯಲ್ಲಿ ಹೆಚ್ಚಿನ ಮಕ್ಕಳನ್ನು ಒಂದೇ ತೆರನಾಗಿ ನೋಡಿಕೊಳ್ಳಲಾಗುತ್ತದೆ. ಹಾಗೂ ಸಾಮಾನ್ಯವಾಗಿ ಹಾಕಿಕೊಳ್ಳುವ ಬಟ್ಟೆಗಳನ್ನು ಧರಿಸಿದ ಮಕ್ಕಳಿಗೆ ಇತರ ಮಕ್ಕಳ ಜೆಂಡರ್‍ಗೆ ಇರುವ ವ್ಯತ್ಯಾಸವೂ ಕೆಲವೊಮ್ಮೆ ತಿಳಿಯುವುದಿಲ್ಲ. ಜನನಾಂಗವೊಂದನ್ನು ಬಿಟ್ಟರೆ ಚಿಕ್ಕಮಕ್ಕಳ ದೇಹದಲ್ಲಿ ಬೇರೆ ಯಾವ ವ್ಯತ್ಯಾಸವೂ ಇರುವುದಿಲ್ಲ. ಆದರೆ ಪ್ರೌಢಾವಸ್ಥೆಯ ಸಮಯದಲ್ಲಿ, ಅವರ ಮಿದುಳು ಅಪೇಕ್ಷಿಸದ ರೀತಿಯಲ್ಲಿ ಗಂಡು ಮತ್ತು ಹೆಣ್ಣುಮಕ್ಕಳ ದೇಹಗಳು ಬದಲಾಗುತ್ತವೆ. ಇದೂ ಹೇಗೂ ತುಂಬಾ ಸಂಕಷ್ಟದ ಸಮಯವೇ ಆಗಿರುತ್ತದೆ. ಅದರೊಂದಿಗೆ, ಅಲ್ಲಿಯವರೆಗೆ ಯಾವ ಜೆಂಡರ್ ಜೊತೆಗೂ ಆಟವಾಡಬಹುದಾದ ಮಕ್ಕಳು ಮೀಸೆ ಅಥವಾ ಎದೆಯನ್ನು ಬೆಳೆಸಿ ಭಿನ್ನವಾಗಿ ಕಾಣಿಸತೊಡಗುತ್ತಾರೆ. ಇದರೊಂದಿಗೆ, ಸಮಾಜವೂ ಇದೇ ಸಮಯದಲ್ಲಿ ಇವರ ಜೀವನದಲ್ಲಿ ಪ್ರವೇಶಿಸಿ, ಮಕ್ಕಳ ಸಾಮಾಜಿಕ ಪಾತ್ರಗಳಲ್ಲಿ ಹೆಚ್ಚಿನ ನಿರ್ಬಂಧನೆಗಳನ್ನು ಹಾಕತೊಡಗುತ್ತದೆ. ಪ್ರೌಢಾವಸ್ಥೆಯ ನಂತರ ಗಂಡು ಮತ್ತು ಹೆಣ್ಣು ಮಕ್ಕಳು ಪರಸ್ಪರ ಬೆರೆಯಬಾರದು ಇತ್ಯಾದಿ ಕಟ್ಟಳೆಗಳನ್ನು ವಿಧಿಸಲಾಗುತ್ತದೆ ಹಾಗು ಇವೆಲ್ಲ ಟ್ರಾನ್ಸ್‍ಜೆಂಡರ್ ಮಕ್ಕಳನ್ನು ಇನ್ನಷ್ಟು ನಿರ್ಬಂಧಿಸಿ ಅವರನ್ನು ತಾವು ಗುರುತಿಸಿಕೊಳ್ಳಲಾಗದ ಸಾಮಾಜಿಕ ಜೆಂಡರ್‍ನೊಂದಿಗೆ ಸೇರಿಸಲಾಗುತ್ತದೆ.
ಬಹುತೇಕ ಟ್ರಾನ್ಸ್‍ಜೆಂಡರ್ ಕಥಾನಕಗಳು ಅವರೆದುರಿಸುವ ಸಮಸ್ಯೆಯ ಸಾಮಾಜಿಕ ಆಯಾಮದ ಬಗ್ಗೆ ಹೇಳುತ್ತವೆ ಹಾಗೂ ತನ್ನ ದೇಹದೊಂದಿಗೆ ಇರುವ ಅಸಂತುಷ್ಟತೆಯ ದೈಹಿಕ ಆಯಾಮದ ಬಗ್ಗೆ ಹೇಳುವುದಿಲ್ಲ. ಅದಕ್ಕಿರುವ ಒಂದು ಕಾರಣವೆಂದರೆ, ಸಾಮಾಜಿಕ ಅಸಂತುಷ್ಟತೆ ಸುಲಭವಾಗಿ ಗೋಚರಿಸುತ್ತವೆ ಆದರೆ ದೈಹಿಕ ಅಂಶ ಯಾವಾಗಲೂ ಖಾಸಗಿಯಾಗಿರುತ್ತದೆ. ಹಾಗೂ ಅನೇಕ ಟ್ರಾನ್ಸ್‍ಜೆಂಡರ್ ಮಕ್ಕಳು ತಮ್ಮ ದೇಹದೊಂದಿಗೆ ಅತ್ಯಂತ ತೀವ್ರವಾದ ಮುಜುಗರವನ್ನು ಬೆಳೆಸಿಕೊಂಡಿರುತ್ತಾರೆ. ಅನೇಕ ಟ್ರಾನ್ಸ್‍ಜೆಂಡರ್ ಮಕ್ಕಳು ಆತ್ಮಹತ್ಯೆಗೂ ಪ್ರಯತ್ನಿಸುತ್ತಾರೆ. ಆದರೂ ಆ ಮಕ್ಕಳ ಪೋಷಕರಿಗೆ ಮಕ್ಕಳು ತಮ್ಮ ಭಾವನೆಗಳನ್ನು ಅವರೊಂದಿಗೆ ಏಕೆ ಹಂಚಿಕೊಳ್ಳುವುದಿಲ್ಲ ಎಂದು ಅರ್ಥವಾಗುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...