Homeಮುಖಪುಟ'ಸರ್ವಾಧಿಕಾರವು ಉತ್ತುಂಗದಲ್ಲಿದೆ ’: ಬಲವಂತವಾಗಿ ದೆಹಲಿಗೆ ಕಳಿಸಿದ್ದಕ್ಕೆ ಚಂದ್ರಶೇಖರ್ ಆಜಾದ್ ಕಿಡಿ

‘ಸರ್ವಾಧಿಕಾರವು ಉತ್ತುಂಗದಲ್ಲಿದೆ ’: ಬಲವಂತವಾಗಿ ದೆಹಲಿಗೆ ಕಳಿಸಿದ್ದಕ್ಕೆ ಚಂದ್ರಶೇಖರ್ ಆಜಾದ್ ಕಿಡಿ

- Advertisement -
- Advertisement -

ಭೀಮ್ ಆರ್ಮಿಯ ಮುಖಂಡ ಚಂದ್ರಶೇಖರ್‌ ಅಜಾದ್‌ರವರನ್ನು ನಿನ್ನೆ ಸಂಜೆ ಬಂಧಿಸಿದ್ದ ಹೈದರಾಬಾದ್‌ ಪೊಲೀಸರು ಇಂದು ಬಲವಂತವಾಗಿ ಅವರನ್ನು ದೆಹಲಿಗೆ ಕಳಿಸಿದ್ದಾರೆ.

ಅವರು ನಿನ್ನೆ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಹೈದರಾಬಾದ್‌ನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (ಟಿಐಎಸ್ಎಸ್) ವಿದ್ಯಾರ್ಥಿಗಳು ಆಯೋಜಿಸಿದ್ದ ರ್‍ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದ್ದಾಗ ಮೆಹದಿಪಟ್ನಂನ ಫಂಕ್ಷನ್ ಹಾಲ್ ಕ್ರಿಸ್ಟಲ್ ಗಾರ್ಡನ್‌ ಬಳಿ ಅವರನ್ನು ಪೊಲೀಸರು ಬಂಧಿಸಿದ್ದರು.

ಆಜಾದ್‌‌ರವರನ್ನು ಮೊದಲು ಹಬೀಬ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಹಬೀಬ್ ನಗರ ಠಾಣೆಯಲ್ಲಿ ಜನಸಮೂಹ ಸೇರಲು ಪ್ರಾರಂಭಿಸಿದ ನಂತರ ಬಲ್ಲಾರಂ ಪೊಲೀಸ್ ಠಾಣೆಗೆ ಸ್ಥಳಾಂತರಿಸಿದ್ದರು. ಅವರೊಂದಿಗೆ ಬಂಧಿತರಾದ ಎಲ್ಲರನ್ನೂ ಗೋಶಮಹಲ್ ಕ್ರೀಡಾಂಗಣಕ್ಕೆ ಕರೆದೊಯ್ಯಲಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಅಜಾದ್‌

“ತೆಲಂಗಾಣದಲ್ಲಿ ಸರ್ವಾಧಿಕಾರವು ಉತ್ತುಂಗದಲ್ಲಿದೆ. ಪ್ರತಿಭಟಿಸುವ ಜನರ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಪೊಲೀಸರು ಮೊದಲು ನಮ್ಮ ಜನರಿಗೆ ಲಾಠಿಗಳಿಂದ ಹೊಡೆದರು, ನಂತರ ನನ್ನನ್ನು ಬಂಧಿಸಲಾಯಿತು. ಈಗ ನನ್ನನ್ನು ಬಲವಂತವಾಗಿ ವಿಮಾನ ನಿಲ್ದಾಣಕ್ಕೆ ಕರೆತಂದು, ದೆಹಲಿಗೆ ಕಳುಹಿಸಲಾಗಿದೆ. ತೆಲಂಗಾಣದ ಮುಖ್ಯಮಂತ್ರಿಗಳೇ ನೆನಪಿಡಿ, ಬಹುಜನ ಸಮಾಜ ಈ ಅವಮಾನವನ್ನು ಎಂದಿಗೂ ಮರೆಯುವುದಿಲ್ಲ. ನಾನು ಶೀಘ್ರದಲ್ಲೇ ಹೈದರಾಬಾದ್‌ಗೆ ಹಿಂತಿರುಗಲಿದ್ದೇನೆ ”ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

71 ನೇ ಗಣರಾಜ್ಯೋತ್ಸವದಂದು ಟಿಐಎಸ್ಎಸ್ ಮತ್ತು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆಯೋಜಿಸಿದ್ದ ಪ್ರತಿಭಟನೆ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಜಾದ್ ಹೈದರಾಬಾದ್‌ನಲ್ಲಿದ್ದರು. ಆದಾದ ನಂತರ ಅವರು ಕರ್ನಾಟಕದ ಕಲಬುರಗಿ, ಉಡುಪಿ, ಬೆಂಗಳೂರು ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳಿಗೆ ಭಾಗವಹಿಸಲು ಒಪ್ಪಿಕೊಂಡಿದ್ದರು.

ಸಿಎಎ ವಿರೋಧಿ ಮತ್ತು ಎನ್‌ಆರ್‌ಸಿ ಪ್ರತಿಭಟನೆಗೆ ಮುಂಚಿತವಾಗಿ ಆಜಾದ್‌ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಅನುಮತಿಯಿಲ್ಲದೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂಬ ನೆಪವೊಡ್ಡಿ ಬಂಧಿಸಲಾಗಿದೆ. ಅಜಾದ್‌ ಬಂಧನವನ್ನು ಬಹುತೇಕರು ಖಂಡಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಷ್ಟ್ರ ರಾಜಧಾನಿಯ ದರಿಯಗಂಜ್ ಪ್ರದೇಶದಲ್ಲಿ ಜನಸಮೂಹವನ್ನು ಪ್ರಚೋದಿಸಿದ ಆರೋಪದ ಮೇಲೆ ಬಂಧಿಸಲ್ಪಟ್ಟ ನಂತರ ಚಂದ್ರಶೇಖರ್ ಆಜಾದ್ ಅವರನ್ನು ಜನವರಿ 16 ರಂದು ದೆಹಲಿಯ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ತಾಳ್ಮೆ ಭೀಮ ವಾದದ ನಡೆ ಸಂವಿಧಾನದ ಹಕ್ಕಿಗಾಗಿ ನಿರಂತರ ಹೋರಾಟಕ್ಕಿಳಿಯುವ ಜೈ ಭೀಮ್ ವಂದನೆಗಳು
    ಬಿಜೆಪಿಯ ಸೆಂಟ್ರಲ್ ಗೌರ್ನಮೆಂಟ್ ರವರಿಗೆ ಅಧಿಕಾರದ ಮದವೇರಿ ಜನಸಾಮಾನ್ಯರನ್ನು ನಿರಂತರವಾಗಿ ಸ್ವತಂತ್ರ ಬಂದು 71ನೇ ಗಣರಾಜ್ಯೋತ್ಸವದಲ್ಲಿ
    ಮುಂದುವರೆದಿದ್ದರೂ ಸಹ ಕೋಮುವಾದಕ್ಕೆ ಜನಸಾಮಾನ್ಯರ ಸಂವಿಧಾನದ ಹಕ್ಕುಗಳನ್ನು ದೇಶವನ್ನು ಬಲಿ ಕೊಡುವುದರಲ್ಲಿ ನಿರಂತರವಾಗಿ ಮುಂಚೂಣಿಯಲ್ಲಿದೆ ಎಂದರೆ ತಪ್ಪಾಗಲಾರದು ಜೈಭೀಮ್ ಜೈಭೀಮ್

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....