Homeಮುಖಪುಟ'ಸರ್ವಾಧಿಕಾರವು ಉತ್ತುಂಗದಲ್ಲಿದೆ ’: ಬಲವಂತವಾಗಿ ದೆಹಲಿಗೆ ಕಳಿಸಿದ್ದಕ್ಕೆ ಚಂದ್ರಶೇಖರ್ ಆಜಾದ್ ಕಿಡಿ

‘ಸರ್ವಾಧಿಕಾರವು ಉತ್ತುಂಗದಲ್ಲಿದೆ ’: ಬಲವಂತವಾಗಿ ದೆಹಲಿಗೆ ಕಳಿಸಿದ್ದಕ್ಕೆ ಚಂದ್ರಶೇಖರ್ ಆಜಾದ್ ಕಿಡಿ

- Advertisement -
- Advertisement -

ಭೀಮ್ ಆರ್ಮಿಯ ಮುಖಂಡ ಚಂದ್ರಶೇಖರ್‌ ಅಜಾದ್‌ರವರನ್ನು ನಿನ್ನೆ ಸಂಜೆ ಬಂಧಿಸಿದ್ದ ಹೈದರಾಬಾದ್‌ ಪೊಲೀಸರು ಇಂದು ಬಲವಂತವಾಗಿ ಅವರನ್ನು ದೆಹಲಿಗೆ ಕಳಿಸಿದ್ದಾರೆ.

ಅವರು ನಿನ್ನೆ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಹೈದರಾಬಾದ್‌ನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (ಟಿಐಎಸ್ಎಸ್) ವಿದ್ಯಾರ್ಥಿಗಳು ಆಯೋಜಿಸಿದ್ದ ರ್‍ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದ್ದಾಗ ಮೆಹದಿಪಟ್ನಂನ ಫಂಕ್ಷನ್ ಹಾಲ್ ಕ್ರಿಸ್ಟಲ್ ಗಾರ್ಡನ್‌ ಬಳಿ ಅವರನ್ನು ಪೊಲೀಸರು ಬಂಧಿಸಿದ್ದರು.

ಆಜಾದ್‌‌ರವರನ್ನು ಮೊದಲು ಹಬೀಬ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಹಬೀಬ್ ನಗರ ಠಾಣೆಯಲ್ಲಿ ಜನಸಮೂಹ ಸೇರಲು ಪ್ರಾರಂಭಿಸಿದ ನಂತರ ಬಲ್ಲಾರಂ ಪೊಲೀಸ್ ಠಾಣೆಗೆ ಸ್ಥಳಾಂತರಿಸಿದ್ದರು. ಅವರೊಂದಿಗೆ ಬಂಧಿತರಾದ ಎಲ್ಲರನ್ನೂ ಗೋಶಮಹಲ್ ಕ್ರೀಡಾಂಗಣಕ್ಕೆ ಕರೆದೊಯ್ಯಲಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಅಜಾದ್‌

“ತೆಲಂಗಾಣದಲ್ಲಿ ಸರ್ವಾಧಿಕಾರವು ಉತ್ತುಂಗದಲ್ಲಿದೆ. ಪ್ರತಿಭಟಿಸುವ ಜನರ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಪೊಲೀಸರು ಮೊದಲು ನಮ್ಮ ಜನರಿಗೆ ಲಾಠಿಗಳಿಂದ ಹೊಡೆದರು, ನಂತರ ನನ್ನನ್ನು ಬಂಧಿಸಲಾಯಿತು. ಈಗ ನನ್ನನ್ನು ಬಲವಂತವಾಗಿ ವಿಮಾನ ನಿಲ್ದಾಣಕ್ಕೆ ಕರೆತಂದು, ದೆಹಲಿಗೆ ಕಳುಹಿಸಲಾಗಿದೆ. ತೆಲಂಗಾಣದ ಮುಖ್ಯಮಂತ್ರಿಗಳೇ ನೆನಪಿಡಿ, ಬಹುಜನ ಸಮಾಜ ಈ ಅವಮಾನವನ್ನು ಎಂದಿಗೂ ಮರೆಯುವುದಿಲ್ಲ. ನಾನು ಶೀಘ್ರದಲ್ಲೇ ಹೈದರಾಬಾದ್‌ಗೆ ಹಿಂತಿರುಗಲಿದ್ದೇನೆ ”ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

71 ನೇ ಗಣರಾಜ್ಯೋತ್ಸವದಂದು ಟಿಐಎಸ್ಎಸ್ ಮತ್ತು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆಯೋಜಿಸಿದ್ದ ಪ್ರತಿಭಟನೆ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಜಾದ್ ಹೈದರಾಬಾದ್‌ನಲ್ಲಿದ್ದರು. ಆದಾದ ನಂತರ ಅವರು ಕರ್ನಾಟಕದ ಕಲಬುರಗಿ, ಉಡುಪಿ, ಬೆಂಗಳೂರು ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳಿಗೆ ಭಾಗವಹಿಸಲು ಒಪ್ಪಿಕೊಂಡಿದ್ದರು.

ಸಿಎಎ ವಿರೋಧಿ ಮತ್ತು ಎನ್‌ಆರ್‌ಸಿ ಪ್ರತಿಭಟನೆಗೆ ಮುಂಚಿತವಾಗಿ ಆಜಾದ್‌ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಅನುಮತಿಯಿಲ್ಲದೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂಬ ನೆಪವೊಡ್ಡಿ ಬಂಧಿಸಲಾಗಿದೆ. ಅಜಾದ್‌ ಬಂಧನವನ್ನು ಬಹುತೇಕರು ಖಂಡಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಷ್ಟ್ರ ರಾಜಧಾನಿಯ ದರಿಯಗಂಜ್ ಪ್ರದೇಶದಲ್ಲಿ ಜನಸಮೂಹವನ್ನು ಪ್ರಚೋದಿಸಿದ ಆರೋಪದ ಮೇಲೆ ಬಂಧಿಸಲ್ಪಟ್ಟ ನಂತರ ಚಂದ್ರಶೇಖರ್ ಆಜಾದ್ ಅವರನ್ನು ಜನವರಿ 16 ರಂದು ದೆಹಲಿಯ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ತಾಳ್ಮೆ ಭೀಮ ವಾದದ ನಡೆ ಸಂವಿಧಾನದ ಹಕ್ಕಿಗಾಗಿ ನಿರಂತರ ಹೋರಾಟಕ್ಕಿಳಿಯುವ ಜೈ ಭೀಮ್ ವಂದನೆಗಳು
    ಬಿಜೆಪಿಯ ಸೆಂಟ್ರಲ್ ಗೌರ್ನಮೆಂಟ್ ರವರಿಗೆ ಅಧಿಕಾರದ ಮದವೇರಿ ಜನಸಾಮಾನ್ಯರನ್ನು ನಿರಂತರವಾಗಿ ಸ್ವತಂತ್ರ ಬಂದು 71ನೇ ಗಣರಾಜ್ಯೋತ್ಸವದಲ್ಲಿ
    ಮುಂದುವರೆದಿದ್ದರೂ ಸಹ ಕೋಮುವಾದಕ್ಕೆ ಜನಸಾಮಾನ್ಯರ ಸಂವಿಧಾನದ ಹಕ್ಕುಗಳನ್ನು ದೇಶವನ್ನು ಬಲಿ ಕೊಡುವುದರಲ್ಲಿ ನಿರಂತರವಾಗಿ ಮುಂಚೂಣಿಯಲ್ಲಿದೆ ಎಂದರೆ ತಪ್ಪಾಗಲಾರದು ಜೈಭೀಮ್ ಜೈಭೀಮ್

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...