Homeಮುಖಪುಟ'ಸರ್ವಾಧಿಕಾರವು ಉತ್ತುಂಗದಲ್ಲಿದೆ ’: ಬಲವಂತವಾಗಿ ದೆಹಲಿಗೆ ಕಳಿಸಿದ್ದಕ್ಕೆ ಚಂದ್ರಶೇಖರ್ ಆಜಾದ್ ಕಿಡಿ

‘ಸರ್ವಾಧಿಕಾರವು ಉತ್ತುಂಗದಲ್ಲಿದೆ ’: ಬಲವಂತವಾಗಿ ದೆಹಲಿಗೆ ಕಳಿಸಿದ್ದಕ್ಕೆ ಚಂದ್ರಶೇಖರ್ ಆಜಾದ್ ಕಿಡಿ

- Advertisement -
- Advertisement -

ಭೀಮ್ ಆರ್ಮಿಯ ಮುಖಂಡ ಚಂದ್ರಶೇಖರ್‌ ಅಜಾದ್‌ರವರನ್ನು ನಿನ್ನೆ ಸಂಜೆ ಬಂಧಿಸಿದ್ದ ಹೈದರಾಬಾದ್‌ ಪೊಲೀಸರು ಇಂದು ಬಲವಂತವಾಗಿ ಅವರನ್ನು ದೆಹಲಿಗೆ ಕಳಿಸಿದ್ದಾರೆ.

ಅವರು ನಿನ್ನೆ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಹೈದರಾಬಾದ್‌ನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (ಟಿಐಎಸ್ಎಸ್) ವಿದ್ಯಾರ್ಥಿಗಳು ಆಯೋಜಿಸಿದ್ದ ರ್‍ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದ್ದಾಗ ಮೆಹದಿಪಟ್ನಂನ ಫಂಕ್ಷನ್ ಹಾಲ್ ಕ್ರಿಸ್ಟಲ್ ಗಾರ್ಡನ್‌ ಬಳಿ ಅವರನ್ನು ಪೊಲೀಸರು ಬಂಧಿಸಿದ್ದರು.

ಆಜಾದ್‌‌ರವರನ್ನು ಮೊದಲು ಹಬೀಬ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಹಬೀಬ್ ನಗರ ಠಾಣೆಯಲ್ಲಿ ಜನಸಮೂಹ ಸೇರಲು ಪ್ರಾರಂಭಿಸಿದ ನಂತರ ಬಲ್ಲಾರಂ ಪೊಲೀಸ್ ಠಾಣೆಗೆ ಸ್ಥಳಾಂತರಿಸಿದ್ದರು. ಅವರೊಂದಿಗೆ ಬಂಧಿತರಾದ ಎಲ್ಲರನ್ನೂ ಗೋಶಮಹಲ್ ಕ್ರೀಡಾಂಗಣಕ್ಕೆ ಕರೆದೊಯ್ಯಲಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಅಜಾದ್‌

“ತೆಲಂಗಾಣದಲ್ಲಿ ಸರ್ವಾಧಿಕಾರವು ಉತ್ತುಂಗದಲ್ಲಿದೆ. ಪ್ರತಿಭಟಿಸುವ ಜನರ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಪೊಲೀಸರು ಮೊದಲು ನಮ್ಮ ಜನರಿಗೆ ಲಾಠಿಗಳಿಂದ ಹೊಡೆದರು, ನಂತರ ನನ್ನನ್ನು ಬಂಧಿಸಲಾಯಿತು. ಈಗ ನನ್ನನ್ನು ಬಲವಂತವಾಗಿ ವಿಮಾನ ನಿಲ್ದಾಣಕ್ಕೆ ಕರೆತಂದು, ದೆಹಲಿಗೆ ಕಳುಹಿಸಲಾಗಿದೆ. ತೆಲಂಗಾಣದ ಮುಖ್ಯಮಂತ್ರಿಗಳೇ ನೆನಪಿಡಿ, ಬಹುಜನ ಸಮಾಜ ಈ ಅವಮಾನವನ್ನು ಎಂದಿಗೂ ಮರೆಯುವುದಿಲ್ಲ. ನಾನು ಶೀಘ್ರದಲ್ಲೇ ಹೈದರಾಬಾದ್‌ಗೆ ಹಿಂತಿರುಗಲಿದ್ದೇನೆ ”ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

71 ನೇ ಗಣರಾಜ್ಯೋತ್ಸವದಂದು ಟಿಐಎಸ್ಎಸ್ ಮತ್ತು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆಯೋಜಿಸಿದ್ದ ಪ್ರತಿಭಟನೆ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಜಾದ್ ಹೈದರಾಬಾದ್‌ನಲ್ಲಿದ್ದರು. ಆದಾದ ನಂತರ ಅವರು ಕರ್ನಾಟಕದ ಕಲಬುರಗಿ, ಉಡುಪಿ, ಬೆಂಗಳೂರು ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳಿಗೆ ಭಾಗವಹಿಸಲು ಒಪ್ಪಿಕೊಂಡಿದ್ದರು.

ಸಿಎಎ ವಿರೋಧಿ ಮತ್ತು ಎನ್‌ಆರ್‌ಸಿ ಪ್ರತಿಭಟನೆಗೆ ಮುಂಚಿತವಾಗಿ ಆಜಾದ್‌ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಅನುಮತಿಯಿಲ್ಲದೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂಬ ನೆಪವೊಡ್ಡಿ ಬಂಧಿಸಲಾಗಿದೆ. ಅಜಾದ್‌ ಬಂಧನವನ್ನು ಬಹುತೇಕರು ಖಂಡಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಷ್ಟ್ರ ರಾಜಧಾನಿಯ ದರಿಯಗಂಜ್ ಪ್ರದೇಶದಲ್ಲಿ ಜನಸಮೂಹವನ್ನು ಪ್ರಚೋದಿಸಿದ ಆರೋಪದ ಮೇಲೆ ಬಂಧಿಸಲ್ಪಟ್ಟ ನಂತರ ಚಂದ್ರಶೇಖರ್ ಆಜಾದ್ ಅವರನ್ನು ಜನವರಿ 16 ರಂದು ದೆಹಲಿಯ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ತಾಳ್ಮೆ ಭೀಮ ವಾದದ ನಡೆ ಸಂವಿಧಾನದ ಹಕ್ಕಿಗಾಗಿ ನಿರಂತರ ಹೋರಾಟಕ್ಕಿಳಿಯುವ ಜೈ ಭೀಮ್ ವಂದನೆಗಳು
    ಬಿಜೆಪಿಯ ಸೆಂಟ್ರಲ್ ಗೌರ್ನಮೆಂಟ್ ರವರಿಗೆ ಅಧಿಕಾರದ ಮದವೇರಿ ಜನಸಾಮಾನ್ಯರನ್ನು ನಿರಂತರವಾಗಿ ಸ್ವತಂತ್ರ ಬಂದು 71ನೇ ಗಣರಾಜ್ಯೋತ್ಸವದಲ್ಲಿ
    ಮುಂದುವರೆದಿದ್ದರೂ ಸಹ ಕೋಮುವಾದಕ್ಕೆ ಜನಸಾಮಾನ್ಯರ ಸಂವಿಧಾನದ ಹಕ್ಕುಗಳನ್ನು ದೇಶವನ್ನು ಬಲಿ ಕೊಡುವುದರಲ್ಲಿ ನಿರಂತರವಾಗಿ ಮುಂಚೂಣಿಯಲ್ಲಿದೆ ಎಂದರೆ ತಪ್ಪಾಗಲಾರದು ಜೈಭೀಮ್ ಜೈಭೀಮ್

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...