Homeಮುಖಪುಟ'ಸರ್ವಾಧಿಕಾರವು ಉತ್ತುಂಗದಲ್ಲಿದೆ ’: ಬಲವಂತವಾಗಿ ದೆಹಲಿಗೆ ಕಳಿಸಿದ್ದಕ್ಕೆ ಚಂದ್ರಶೇಖರ್ ಆಜಾದ್ ಕಿಡಿ

‘ಸರ್ವಾಧಿಕಾರವು ಉತ್ತುಂಗದಲ್ಲಿದೆ ’: ಬಲವಂತವಾಗಿ ದೆಹಲಿಗೆ ಕಳಿಸಿದ್ದಕ್ಕೆ ಚಂದ್ರಶೇಖರ್ ಆಜಾದ್ ಕಿಡಿ

- Advertisement -
- Advertisement -

ಭೀಮ್ ಆರ್ಮಿಯ ಮುಖಂಡ ಚಂದ್ರಶೇಖರ್‌ ಅಜಾದ್‌ರವರನ್ನು ನಿನ್ನೆ ಸಂಜೆ ಬಂಧಿಸಿದ್ದ ಹೈದರಾಬಾದ್‌ ಪೊಲೀಸರು ಇಂದು ಬಲವಂತವಾಗಿ ಅವರನ್ನು ದೆಹಲಿಗೆ ಕಳಿಸಿದ್ದಾರೆ.

ಅವರು ನಿನ್ನೆ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಹೈದರಾಬಾದ್‌ನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (ಟಿಐಎಸ್ಎಸ್) ವಿದ್ಯಾರ್ಥಿಗಳು ಆಯೋಜಿಸಿದ್ದ ರ್‍ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದ್ದಾಗ ಮೆಹದಿಪಟ್ನಂನ ಫಂಕ್ಷನ್ ಹಾಲ್ ಕ್ರಿಸ್ಟಲ್ ಗಾರ್ಡನ್‌ ಬಳಿ ಅವರನ್ನು ಪೊಲೀಸರು ಬಂಧಿಸಿದ್ದರು.

ಆಜಾದ್‌‌ರವರನ್ನು ಮೊದಲು ಹಬೀಬ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಹಬೀಬ್ ನಗರ ಠಾಣೆಯಲ್ಲಿ ಜನಸಮೂಹ ಸೇರಲು ಪ್ರಾರಂಭಿಸಿದ ನಂತರ ಬಲ್ಲಾರಂ ಪೊಲೀಸ್ ಠಾಣೆಗೆ ಸ್ಥಳಾಂತರಿಸಿದ್ದರು. ಅವರೊಂದಿಗೆ ಬಂಧಿತರಾದ ಎಲ್ಲರನ್ನೂ ಗೋಶಮಹಲ್ ಕ್ರೀಡಾಂಗಣಕ್ಕೆ ಕರೆದೊಯ್ಯಲಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಅಜಾದ್‌

“ತೆಲಂಗಾಣದಲ್ಲಿ ಸರ್ವಾಧಿಕಾರವು ಉತ್ತುಂಗದಲ್ಲಿದೆ. ಪ್ರತಿಭಟಿಸುವ ಜನರ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಪೊಲೀಸರು ಮೊದಲು ನಮ್ಮ ಜನರಿಗೆ ಲಾಠಿಗಳಿಂದ ಹೊಡೆದರು, ನಂತರ ನನ್ನನ್ನು ಬಂಧಿಸಲಾಯಿತು. ಈಗ ನನ್ನನ್ನು ಬಲವಂತವಾಗಿ ವಿಮಾನ ನಿಲ್ದಾಣಕ್ಕೆ ಕರೆತಂದು, ದೆಹಲಿಗೆ ಕಳುಹಿಸಲಾಗಿದೆ. ತೆಲಂಗಾಣದ ಮುಖ್ಯಮಂತ್ರಿಗಳೇ ನೆನಪಿಡಿ, ಬಹುಜನ ಸಮಾಜ ಈ ಅವಮಾನವನ್ನು ಎಂದಿಗೂ ಮರೆಯುವುದಿಲ್ಲ. ನಾನು ಶೀಘ್ರದಲ್ಲೇ ಹೈದರಾಬಾದ್‌ಗೆ ಹಿಂತಿರುಗಲಿದ್ದೇನೆ ”ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

71 ನೇ ಗಣರಾಜ್ಯೋತ್ಸವದಂದು ಟಿಐಎಸ್ಎಸ್ ಮತ್ತು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆಯೋಜಿಸಿದ್ದ ಪ್ರತಿಭಟನೆ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಜಾದ್ ಹೈದರಾಬಾದ್‌ನಲ್ಲಿದ್ದರು. ಆದಾದ ನಂತರ ಅವರು ಕರ್ನಾಟಕದ ಕಲಬುರಗಿ, ಉಡುಪಿ, ಬೆಂಗಳೂರು ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳಿಗೆ ಭಾಗವಹಿಸಲು ಒಪ್ಪಿಕೊಂಡಿದ್ದರು.

ಸಿಎಎ ವಿರೋಧಿ ಮತ್ತು ಎನ್‌ಆರ್‌ಸಿ ಪ್ರತಿಭಟನೆಗೆ ಮುಂಚಿತವಾಗಿ ಆಜಾದ್‌ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಅನುಮತಿಯಿಲ್ಲದೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂಬ ನೆಪವೊಡ್ಡಿ ಬಂಧಿಸಲಾಗಿದೆ. ಅಜಾದ್‌ ಬಂಧನವನ್ನು ಬಹುತೇಕರು ಖಂಡಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಷ್ಟ್ರ ರಾಜಧಾನಿಯ ದರಿಯಗಂಜ್ ಪ್ರದೇಶದಲ್ಲಿ ಜನಸಮೂಹವನ್ನು ಪ್ರಚೋದಿಸಿದ ಆರೋಪದ ಮೇಲೆ ಬಂಧಿಸಲ್ಪಟ್ಟ ನಂತರ ಚಂದ್ರಶೇಖರ್ ಆಜಾದ್ ಅವರನ್ನು ಜನವರಿ 16 ರಂದು ದೆಹಲಿಯ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ತಾಳ್ಮೆ ಭೀಮ ವಾದದ ನಡೆ ಸಂವಿಧಾನದ ಹಕ್ಕಿಗಾಗಿ ನಿರಂತರ ಹೋರಾಟಕ್ಕಿಳಿಯುವ ಜೈ ಭೀಮ್ ವಂದನೆಗಳು
    ಬಿಜೆಪಿಯ ಸೆಂಟ್ರಲ್ ಗೌರ್ನಮೆಂಟ್ ರವರಿಗೆ ಅಧಿಕಾರದ ಮದವೇರಿ ಜನಸಾಮಾನ್ಯರನ್ನು ನಿರಂತರವಾಗಿ ಸ್ವತಂತ್ರ ಬಂದು 71ನೇ ಗಣರಾಜ್ಯೋತ್ಸವದಲ್ಲಿ
    ಮುಂದುವರೆದಿದ್ದರೂ ಸಹ ಕೋಮುವಾದಕ್ಕೆ ಜನಸಾಮಾನ್ಯರ ಸಂವಿಧಾನದ ಹಕ್ಕುಗಳನ್ನು ದೇಶವನ್ನು ಬಲಿ ಕೊಡುವುದರಲ್ಲಿ ನಿರಂತರವಾಗಿ ಮುಂಚೂಣಿಯಲ್ಲಿದೆ ಎಂದರೆ ತಪ್ಪಾಗಲಾರದು ಜೈಭೀಮ್ ಜೈಭೀಮ್

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...