Homeಮುಖಪುಟ'ಸರ್ವಾಧಿಕಾರವು ಉತ್ತುಂಗದಲ್ಲಿದೆ ’: ಬಲವಂತವಾಗಿ ದೆಹಲಿಗೆ ಕಳಿಸಿದ್ದಕ್ಕೆ ಚಂದ್ರಶೇಖರ್ ಆಜಾದ್ ಕಿಡಿ

‘ಸರ್ವಾಧಿಕಾರವು ಉತ್ತುಂಗದಲ್ಲಿದೆ ’: ಬಲವಂತವಾಗಿ ದೆಹಲಿಗೆ ಕಳಿಸಿದ್ದಕ್ಕೆ ಚಂದ್ರಶೇಖರ್ ಆಜಾದ್ ಕಿಡಿ

- Advertisement -
- Advertisement -

ಭೀಮ್ ಆರ್ಮಿಯ ಮುಖಂಡ ಚಂದ್ರಶೇಖರ್‌ ಅಜಾದ್‌ರವರನ್ನು ನಿನ್ನೆ ಸಂಜೆ ಬಂಧಿಸಿದ್ದ ಹೈದರಾಬಾದ್‌ ಪೊಲೀಸರು ಇಂದು ಬಲವಂತವಾಗಿ ಅವರನ್ನು ದೆಹಲಿಗೆ ಕಳಿಸಿದ್ದಾರೆ.

ಅವರು ನಿನ್ನೆ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಹೈದರಾಬಾದ್‌ನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (ಟಿಐಎಸ್ಎಸ್) ವಿದ್ಯಾರ್ಥಿಗಳು ಆಯೋಜಿಸಿದ್ದ ರ್‍ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದ್ದಾಗ ಮೆಹದಿಪಟ್ನಂನ ಫಂಕ್ಷನ್ ಹಾಲ್ ಕ್ರಿಸ್ಟಲ್ ಗಾರ್ಡನ್‌ ಬಳಿ ಅವರನ್ನು ಪೊಲೀಸರು ಬಂಧಿಸಿದ್ದರು.

ಆಜಾದ್‌‌ರವರನ್ನು ಮೊದಲು ಹಬೀಬ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಹಬೀಬ್ ನಗರ ಠಾಣೆಯಲ್ಲಿ ಜನಸಮೂಹ ಸೇರಲು ಪ್ರಾರಂಭಿಸಿದ ನಂತರ ಬಲ್ಲಾರಂ ಪೊಲೀಸ್ ಠಾಣೆಗೆ ಸ್ಥಳಾಂತರಿಸಿದ್ದರು. ಅವರೊಂದಿಗೆ ಬಂಧಿತರಾದ ಎಲ್ಲರನ್ನೂ ಗೋಶಮಹಲ್ ಕ್ರೀಡಾಂಗಣಕ್ಕೆ ಕರೆದೊಯ್ಯಲಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಅಜಾದ್‌

“ತೆಲಂಗಾಣದಲ್ಲಿ ಸರ್ವಾಧಿಕಾರವು ಉತ್ತುಂಗದಲ್ಲಿದೆ. ಪ್ರತಿಭಟಿಸುವ ಜನರ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಪೊಲೀಸರು ಮೊದಲು ನಮ್ಮ ಜನರಿಗೆ ಲಾಠಿಗಳಿಂದ ಹೊಡೆದರು, ನಂತರ ನನ್ನನ್ನು ಬಂಧಿಸಲಾಯಿತು. ಈಗ ನನ್ನನ್ನು ಬಲವಂತವಾಗಿ ವಿಮಾನ ನಿಲ್ದಾಣಕ್ಕೆ ಕರೆತಂದು, ದೆಹಲಿಗೆ ಕಳುಹಿಸಲಾಗಿದೆ. ತೆಲಂಗಾಣದ ಮುಖ್ಯಮಂತ್ರಿಗಳೇ ನೆನಪಿಡಿ, ಬಹುಜನ ಸಮಾಜ ಈ ಅವಮಾನವನ್ನು ಎಂದಿಗೂ ಮರೆಯುವುದಿಲ್ಲ. ನಾನು ಶೀಘ್ರದಲ್ಲೇ ಹೈದರಾಬಾದ್‌ಗೆ ಹಿಂತಿರುಗಲಿದ್ದೇನೆ ”ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

71 ನೇ ಗಣರಾಜ್ಯೋತ್ಸವದಂದು ಟಿಐಎಸ್ಎಸ್ ಮತ್ತು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆಯೋಜಿಸಿದ್ದ ಪ್ರತಿಭಟನೆ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಜಾದ್ ಹೈದರಾಬಾದ್‌ನಲ್ಲಿದ್ದರು. ಆದಾದ ನಂತರ ಅವರು ಕರ್ನಾಟಕದ ಕಲಬುರಗಿ, ಉಡುಪಿ, ಬೆಂಗಳೂರು ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳಿಗೆ ಭಾಗವಹಿಸಲು ಒಪ್ಪಿಕೊಂಡಿದ್ದರು.

ಸಿಎಎ ವಿರೋಧಿ ಮತ್ತು ಎನ್‌ಆರ್‌ಸಿ ಪ್ರತಿಭಟನೆಗೆ ಮುಂಚಿತವಾಗಿ ಆಜಾದ್‌ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಅನುಮತಿಯಿಲ್ಲದೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂಬ ನೆಪವೊಡ್ಡಿ ಬಂಧಿಸಲಾಗಿದೆ. ಅಜಾದ್‌ ಬಂಧನವನ್ನು ಬಹುತೇಕರು ಖಂಡಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಷ್ಟ್ರ ರಾಜಧಾನಿಯ ದರಿಯಗಂಜ್ ಪ್ರದೇಶದಲ್ಲಿ ಜನಸಮೂಹವನ್ನು ಪ್ರಚೋದಿಸಿದ ಆರೋಪದ ಮೇಲೆ ಬಂಧಿಸಲ್ಪಟ್ಟ ನಂತರ ಚಂದ್ರಶೇಖರ್ ಆಜಾದ್ ಅವರನ್ನು ಜನವರಿ 16 ರಂದು ದೆಹಲಿಯ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ತಾಳ್ಮೆ ಭೀಮ ವಾದದ ನಡೆ ಸಂವಿಧಾನದ ಹಕ್ಕಿಗಾಗಿ ನಿರಂತರ ಹೋರಾಟಕ್ಕಿಳಿಯುವ ಜೈ ಭೀಮ್ ವಂದನೆಗಳು
    ಬಿಜೆಪಿಯ ಸೆಂಟ್ರಲ್ ಗೌರ್ನಮೆಂಟ್ ರವರಿಗೆ ಅಧಿಕಾರದ ಮದವೇರಿ ಜನಸಾಮಾನ್ಯರನ್ನು ನಿರಂತರವಾಗಿ ಸ್ವತಂತ್ರ ಬಂದು 71ನೇ ಗಣರಾಜ್ಯೋತ್ಸವದಲ್ಲಿ
    ಮುಂದುವರೆದಿದ್ದರೂ ಸಹ ಕೋಮುವಾದಕ್ಕೆ ಜನಸಾಮಾನ್ಯರ ಸಂವಿಧಾನದ ಹಕ್ಕುಗಳನ್ನು ದೇಶವನ್ನು ಬಲಿ ಕೊಡುವುದರಲ್ಲಿ ನಿರಂತರವಾಗಿ ಮುಂಚೂಣಿಯಲ್ಲಿದೆ ಎಂದರೆ ತಪ್ಪಾಗಲಾರದು ಜೈಭೀಮ್ ಜೈಭೀಮ್

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...