Homeಮುಖಪುಟನಾಗೇಶ್‌ರವರನ್ನು ನಾಗ್ಪುರದ RSS ದಾರಿ ತಪ್ಪಿಸಿದೆಯೇ? ದೇವನೂರ ಮಹಾದೇವ ಪ್ರಶ್ನೆ

ನಾಗೇಶ್‌ರವರನ್ನು ನಾಗ್ಪುರದ RSS ದಾರಿ ತಪ್ಪಿಸಿದೆಯೇ? ದೇವನೂರ ಮಹಾದೇವ ಪ್ರಶ್ನೆ

- Advertisement -
- Advertisement -

ನಾಗೇಶ್‌ರವರನ್ನು ನಾಗ್ಪುರದ RSS ದಾರಿ ತಪ್ಪಿಸಿದೆಯೇ ಎಂದು ಪ್ರಶ್ನಿಸಬೇಕಿದೆ. ಅಧಿಕಾರ ಅವರನ್ನು ಕುರುಡಾಗಿಸಿದೆ. ಹಾಗಾಗಿ ಎಲ್ಲಿಗೆ ಬೇಕಾದರೂ ಡಿಕ್ಕಿ ಹೊಡೆಯುತ್ತಿದ್ದಾರೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವರವರು ಅಭಿಪ್ರಾಯಪಟ್ಟಿದ್ದಾರೆ.

ಪಠ್ಯ ವಿವಾದದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ನನ್ನ ಪಾಠ ಸೇರಿಸಲು ಅನುಮತಿ ನೀಡಿಲ್ಲ ಎಂದು ಹೇಳಿದ್ದೇನೆ. ಪಠ್ಯ ಪ್ರಿಂಟ್ ಆಗಿರುವುದು ನನಗೆ ಗೊತ್ತಿಲ್ಲ. ಆಗೊಂದು ವೇಳೆ ಪ್ರಿಂಟ್ ಆಗಿದ್ದರೂ ಬೋದಿಸುವುದು ಬೇಡ ಎಂದು ಸರ್ಕಾರ ಬರೆಯಲಿ” ಎಂದರು.

ನಿಮಗೆ ಕಾಂಗ್ರೆಸ್‌ನವರು ಕುಮ್ಮಕ್ಕು ಕೊಡುತ್ತಿದ್ದಾರೆ ಎಂಬ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಅವರು, “ನನಗೆ ನನ್ನ ಕುಮ್ಮಕ್ಕನ್ನೆ ತಡೆದುಕೊಳ್ಳುತ್ತಿಲ್ಲ ಆಗುತ್ತಿಲ್ಲ.” ಎಂದಿದ್ದಾರೆ.

ನಾಗೇಶ್‌ರವರು ನಿಮ್ಮ ಮನ ಒಲಿಸುತ್ತಾರಂತೆ ಎಂಬದಕ್ಕೆ ಉತ್ತರಿಸಿದ ಅವರು, “ಬರಲಿ, ಬಹಳ ಸಂತೋಷ, ತುಂಬಾ ಸಂತೋಷ” ಎಂದರು.

“ಅವರು ಎಲ್ಲಿ ತಪ್ಪು ಮಾಡಿದ್ದಾರೋ, ಆ ತಪ್ಪು ಸರಿಪಡಿಸಿ ಪಾಠ ಬರೆಯಲು, ಕೊರತೆಯ ಪಾಠಗಳನ್ನು ತುಂಬಲು, ಸಂವಿಧಾನದ ಮುನ್ನಡಿಯ ಕುರಿತು ಹಾಡು ಕಟ್ಟಿ ಹಾಡಲು, ಸಂವಿಧಾನದ ಪ್ರತಿ ಅಂಶವನ್ನು ಸರಳವಾಗಿ ತಜ್ಞರಿಂದ ಪಾಠ ಮಾಡಿಸಲು, ಕಮ್ಮಟಗಳನ್ನು ಏರ್ಪಡಿಸಲು, ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುವಂತೆ ಮಾಡುತ್ತೇವೆ” ಎಂದು ದೇವನೂರು ತಿಳಿಸಿದರು.

ನಮ್ಮ ಮಕ್ಕಳಿಗೆ ಮಾತ್ರ ಯಾವ ರೀತಿ ತೊಂದರೆಯಾಗಬಾರದು. ಅವರು ಪ್ರಶ್ನೆ ಮಾಡುವುದನ್ನು ಉಳಿಸಿಕೊಳ್ಳಬೇಕು, ಮೂಡನಂಬಿಕೆಯಲ್ಲಿ ಬೀಳಬಾರದು, ವೈಜ್ಞಾನಿಕವಾಗಿ ಆಲೋಚಿಸುವಂತೆ ಮಾಡಬೇಕು. ಅದಕ್ಕೆ ಶ್ರಮಿಸುವ ಪ್ರಜ್ಞಾವಂತ ಮನಸ್ಸುಗಳ ಜೊತೆ ನಾನಿರುತ್ತೇನೆ ಎಂದು ಪುನರುಚ್ಚರಿಸಿದರು.

ದೇವನೂರುರವರ ಮನವೊಲಿಸುತ್ತೇನೆ: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಪಠ್ಯಗಳು ಈಗಾಗಲೇ ಆಚೆ ಬಂದಿದೆ. ಈ ಸಂದರ್ಭದಲ್ಲಿ ದೇವನೂರುರವರು ಪಠ್ಯ ಬೋಧಿಸುವುದು ಬೇಡ ಎಂದಿದ್ದಾರೆ. ಕಾಂಗ್ರೆಸ್‌ ಹುಟ್ಟುಹಾಕಿದ ಚರ್ಚೆಯಿಂದ ಅವರ ಮನಸ್ಸಿನಲ್ಲಿ ಬೇಸರವಾಗಿರಬಹುದು. ಅವರ ಜೊತೆ ಮಾತನಾಡುತ್ತೇನೆ. ಅಂತ ದೊಡ್ಡ ಸಾಹಿತಿಯ ಅಭಿಪ್ರಾಯದ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, “ದೇವನೂರುರವರು ಹಿರಿಯರು, ಹೋಗಿ ಭೇಟಿ ಮಾಡುವ ಪ್ರಯತ್ನ ಮಾಡುತ್ತೇನೆ. ಪ್ರಿಂಟ್ ಆಗಿ ಬಂದಮೇಲೆ ಈಗ ಏನು ಮಾಡಬೇಕು ಎಂದು ಕೇಳಿ ಅವರನ್ನು ಒಪ್ಪಿಸುವ ಪ್ರಯತ್ನಿಸುತ್ತೇನೆ” ಎಂದರು.

ಯಾವ ಕಾರಣಕ್ಕೆ ಅವರಿಗೆ ಅಸಮಾಧಾನವಾಗಿದೆ ಎಂಬುದನ್ನು ಕೇಳುತ್ತೇನೆ. ಅವರು ಬರೆದ ಪತ್ರವನ್ನು ಗಮನಿಸಿದ್ದೇವೆ. ಅವರು ಹೇಳುತ್ತಿರುವುದು ಸತ್ಯದ ಮಾತು ಎಂದು ಬಿ.ಸಿ ನಾಗೇಶ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...