Homeಕರ್ನಾಟಕಬಜರಂಗದಳದ ನಾಯಕರು ಮಕ್ಕಳನ್ನು ಉಗ್ರಗಾಮಿಗಳನ್ನಾಗಿ ಮಾಡಲು ಹೊರಟಿದ್ದಾರೋ?: ಕುಮಾರಸ್ವಾಮಿ ಕಿಡಿ

ಬಜರಂಗದಳದ ನಾಯಕರು ಮಕ್ಕಳನ್ನು ಉಗ್ರಗಾಮಿಗಳನ್ನಾಗಿ ಮಾಡಲು ಹೊರಟಿದ್ದಾರೋ?: ಕುಮಾರಸ್ವಾಮಿ ಕಿಡಿ

ಭಗತ್‌ಸಿಂಗ್ ಒಬ್ಬ ದೇಶಪ್ರೇಮಿ, ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದಂತ ವ್ಯಕ್ತಿಯಾಗಿದ್ದ, ಅಂತವರ ವಿಷಯಗಳನ್ನು ತೆಗೆದು ಹಾಕಿ ಹೆಡ್ಗೆವಾರ್ ಸೇರಿಸಲು ಹೊರಟಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಶಾಲೆಗಳಲ್ಲಿ ಮಕ್ಕಳಿಗೆ ಶಸ್ತ್ರಾಭ್ಯಾಸವನ್ನು ನೀಡಲು ಬಜರಂಗದಳ ಮುಖಂಡರು ಮುಂದಾಗಿದ್ದು, ಏರ್‌ಗನ್ ಶಸ್ತ್ರಾಭ್ಯಾಸ ಎಂದು ಹೇಳಿದ್ದಾರೆ. ಇವರು ಮಕ್ಕಳನ್ನು ಸಹ ಉಗ್ರಗಾಮಿಗಳ ಗುಂಪುಗಳನ್ನಾಗಿ ತಯಾರಿಸಲು ಹೊರಟಿದ್ದಾರೋ? ಅಥವಾ ಸಮಾಜದಲ್ಲಿ ಶಾಂತಿ ಮೂಡಿಸುವ ನಿಟ್ಟಿನಲ್ಲಿ ಉತ್ತೇಜಿಸಲು ಹೊರಟಿದ್ದಾರಾ? ಎನ್ನುವುದನ್ನು ಅವರೇ ತಿಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಅವರು ಹಾಸನದ ಅರಕಲಗೂಡು ತಾಲ್ಲೂಕಿನ, ಮಲ್ಲಿತಮ್ಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಒಂದು ಕಡೆ ಸಮಾಜದ ಭಾವೈಕ್ಯತೆ ಹಾಗೂ ಸಾಮರಸ್ಯವನ್ನು ಹಾಳು ಮಾಡುವ ನಿಟ್ಟಿನಲ್ಲಿ ಸಾಗಿದೆ. ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ಇದನ್ನೇ ಗಾಂಧೀಜಿ ಸಹ ಬಯಸಿದ್ದರು. ಶಸ್ತ್ರದಿಂದ ನಮ್ಮ ಹೋರಾಟ ಅಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಹೋರಾಟ ಹಾಗೂ ಜಯಗಳು ನಮ್ಮ ದೇಶದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತದ್ದಾಗಬೇಕು. ಶಾಂತಿಯುತ ಹೋರಾಟದಿಂದ ನಮ್ಮ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಬೇಕೆ ಹೊರತು ಶಸ್ತ್ರಾಭ್ಯಾಸ ಗಳನ್ನು ಮಾಡಿ ಅಥವಾ ಶಸ್ತ್ರಗಳನ್ನು ಇಟ್ಟುಕೊಂಡು ಪರಿಹಾರ ಪಡೆಯಲು ಸಾಧ್ಯವಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಕೋಮು ದಂಗೆಗಳು ಮತ್ತು ಪರಿಹಾರ ಮಾರ್ಗಗಳು: ಭಗತ್‌‌ ಸಿಂಗ್

ಪಠ್ಯಕ್ರಮದ ಬದಲಾವಣೆ ಕುರಿತು ಮಾತನಾಡಿದ ಅವರು, “ಯಾವುದೇ ವಿಚಾರವಿರಲಿ ಮಕ್ಕಳಿಗೆ ಅನುಕೂಲವಾಗುವ ವಿಚಾರಗಳನ್ನು ಪಠ್ಯಕ್ರಮದಲ್ಲಿ ಅಳವಡಿಕೆ ಮಾಡಬೇಕು. ಗುಣಾತ್ಮಕವಾದ ಶಿಕ್ಷಣ ಬೇಕು. ಮಕ್ಕಳಿಗೆ ಮೊದಲು ಕಲಿಸಬೇಕಾದ್ದು ಮನುಷ್ಯತ್ವವೇ ಹೊರತು ಯಾವುದೇ ವ್ಯಕ್ತಿಯ ಬಗ್ಗೆ ಅಲ್ಲ. ಹೃದಯ ವೈಶಾಲ್ಯತೆ ಹಾಗೂ ಬದುಕು ಕಲ್ಪಿಸಿಕೊಳ್ಳುವ ಕಲಿಕೆಯನ್ನು ನೀಡಬೇಕು ಎನ್ನುವುದು ನನ್ನ ಆಶಯ” ಎಂದು ಅವರು ಹೇಳಿದ್ದಾರೆ.

“ಭಗತ್‌ಸಿಂಗ್ ಒಬ್ಬ ದೇಶಪ್ರೇಮಿ, ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದಂತ ವ್ಯಕ್ತಿ. ಅಂತಹವರ ವಿಷಯಗಳನ್ನು ತೆಗೆದು ಹಾಕಿ ಹೆಡ್ಗೆವಾರ್ ಸೇರಿಸಲು ಹೊರಟಿದ್ದಾರೆ. ಗೋಡ್ಸೆ, ಸಾವರ್ಕರ್ ಅಂಥವರ ಪಠ್ಯವನ್ನು ತರುತ್ತಾರೋ ಎಂಬ ಬಿಜೆಪಿಯ ಅಜೆಂಡಾ ನನಗೂ ಗೊತ್ತಿಲ್ಲ. ಇದರಿಂದ ಈ ಸಮಾಜದ ಸಾಮರಸ್ಯಕ್ಕೆ ಧಕ್ಕೆ ಆಗುವ ವಾತಾವರಣ ಬಿಜೆಪಿಯವರಿಗೆ ಬೇಕಾಗಿದೆ” ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ‘ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!’- ‘ಭಗತ್‌ ಸಿಂಗ್ ಜೈಲ್ ಡೈರಿ’

“ದಿ ಕಾಶ್ಮೀರ ಪೈಲ್ಸ್ ಚಿತ್ರ ನಿರ್ಮಿಸಿದಿರಿ. ಇದರಿಂದ ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಅವಕಾಶ ನೀಡಿದ್ದೀರಾ? ಅಲ್ಲಿನ ರಾಜಕಾರಣಿಗಳು ಯಾವ ರೀತಿ ಹೇಳಿಕೆ ಕೊಟ್ಟಿದ್ದಾರೆ ಎನ್ನುವುದನ್ನು ಗಮನಿಸಿದ್ದೇನೆ. ಇಲ್ಲಿ ದ್ವೇಷದ ವಾತಾವರಣ ಬಿತ್ತುವ ಕಾರ್ಯವನ್ನು ಮಾಡಬೇಡಿ. ಪ್ರತಿಯೊಬ್ಬರಲ್ಲೂ ಸಹೋದರತ್ವ ಸಾಮರಸ್ಯ ಹಾಗೂ ಭಾವೈಕ್ಯತೆ ಹೇಗಿರಬೇಕು ಎಂಬ ಬಗ್ಗೆ ಗಮನ ನೀಡಿ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...